ಕ್ರೈಂ ಸುದ್ದಿ:
ಪ್ರಿಯಕರನನ್ನು ಕತ್ತು ಸೀಳಿ ಹತ್ಯೆಗೈದ ಪ್ರೇಯಸಿ..!!! ಭದ್ರಾವತಿಯ ಖಾಸಗಿ ಲಾಡ್ಜ್ ನಲ್ಲಿ ನಡೆದ ಘಟನೆmurder
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಹೆರಿಟೇಜ್ ಲಾಡ್ಜ್ ನಲ್ಲಿ ಪ್ರೇಯಸಿಯೇ ಪ್ರಿಯಕರನನ್ನು ಹತ್ಯೆಗೈದಿರುವ ಘಟನೆ ನಡೆದಿದೆ. ಹಾಸನ ಮೂಲದ ಪರ್ವೇಜ್ ಖಾನ್ ಎಂಬ ವ್ಯಕ್ತಿಯ ಕೊಲೆಯಾಗಿದೆ. ಪ್ರೇಯಸಿಯೇ ಈ ಕೊಲೆ ಮಾಡಿದ್ದಾಳೆ ಎಂದು ಆರೋಪಿಸಲಾಗುತಿದ್ದು ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ. ಹಾಸನದ ಚನ್ನರಾಯಪಟ್ಟಣದ ಮೂಲದ ಆಯಿಷಾ ಮತ್ತು ಜಾವಗಲ್ ಮೂಲದ ಪರ್ವೇಜ್ ಖಾನ್ ಇಬ್ಬರು ಕಳೆದ ಮೂರು ನಾಲ್ಕು ವರ್ಷಗಳಿಂದ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಇವರಿಬ್ಬರ ಸಂಬಂಧದ ವಿಚಾರಕ್ಕೆ ಮನನೊಂದಿದ್ದ ಆಯಿಷಾ ಳ ಪತಿ ಇವಳನ್ನು…
ಅಕ್ರಮ ಕಸಾಯಿಖಾನೆ ಮೇಲೆ ದಾಳಿ : 8 ಗೋವುಗಳ ರಕ್ಷಣೆ – 7 ಗೋವುಗಳ ದಾರುಣ ಹತ್ಯೆ
ಶಿವಮೊಗ್ಗ ನಗರದ ಸೂಳೆಬೈಲ್ನ ಸಮೀಪ ಇವತ್ತು ತುಂಗಾನಗರ ಪೊಲೀಸರು ಹಾಗೂ ನಗರಸಭೆ ಅಧಿಕಾರಿಗಳು ಕಸಾಯಿಖಾನೆಯ ಮೇಲೆ ದಾಳಿ ನಡೆಸಿದ್ದಾರೆ. ಗೋಹತ್ಯೆ ನಿಷೇಧದ ನಡುವೆಯು, ಗೋವುಗಳನ್ನು ಮಾಂಸಕ್ಕಾಗಿ ಕೊಂದು ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದ ಬೆನ್ನಲ್ಲೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಸೂಳೆಬೈಲಿನ ಕಸಾಯಿ ಖಾನೆಯೊಂದ ಮೇಲೆ ತುಂಗನಗರ ಪೊಲೀಸರು ಬೆಳ್ಳಂಬೆಳಿಗ್ಗೆನೇ ದಾಳಿ ನಡೆಸಿ 8 ಗೋವುಗಳನ್ನ ರಕ್ಷಿಸಿದ್ದಾರೆ. ಆದರೆ 7 ಗೋವುಗಳ ಕತ್ತು ಸೀಳಿ ಹತ್ಯೆ ಮಾಡಿರುವ ದೃಶ್ಯಗಳು ಲಭ್ಯವಾಗಿವೆ. ಸೂಳೆಬೈಲಿನ ಅಜೀಜ್ ಮನೆಯ ಹಿಂಭಾಗದ…
ಸಾಲಭಾದೆಗೆ ತತ್ತರಿಸಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ|sucide
ಸಾಲಭಾದೆಗೆ ಹೆದರಿ ಶಿವಮೊಗ್ಗ ದ ಮಿಳಘಟ್ಟದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪರಂದಯ್ಯ(70), ದಾನಮ್ಮ (60)ಮತ್ತು ಮಂಜುನಾಥ್(25) ಮನೆಯಲ್ಲಿ ವಿಷ ಸೇವಿಸಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಮಿಳಘಟ್ಟ ಮೊದಲನೇ ತಿರುವಿನಲ್ಲಿ ಪರಂದಯ್ಯ, ದಾನಮ್ಮ, ಮಂಜುನಾಥ್ ನಿನ್ನೆ ಸಾಲಕ್ಕೆ ಬೆದರಿ ವಿಷ ಸೇವಿಸಿದ್ದರು. ವೃದ್ಧರಿಬ್ಬರೂ ನಿನ್ನೆನೇ ಸಾವನ್ನಪ್ಪಿದರು. ಶಿವಮೊಗ್ಗದ ಆನಂದರಾವ್ ಬಡಾವಣೆ ಹತ್ತಿರದ ಮಿಳಗಟ್ಟ ಕೆರೆಅಂಗಳದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪರಂದಯ್ಯ ಕೂಲಿ ಕೆಲಸ ಮಾಡಿಕೊಂಡಿದ್ದು, ದಾನಮ್ಮ ಕಲ್ಲೂರು ಮಂಡ್ಲಿ ಪೇಪರ್ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಹೋಗುತಿದ್ದರು. ಅವರಿಗೆ ಮಕ್ಕಳಿರಲಿಲ್ಲ…
ಬರ್ತ್ ಡೇ ಪಾರ್ಟಿಯಲ್ಲಿ ನಾಲ್ವರು ಯುವಕರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ – ಪ್ರಕರಣ ದಾಖಲು|assault
ಭದ್ರಾವತಿಯಲ್ಲಿ ಹುಟ್ಟುಹಬ್ಬದ ಪಾರ್ಟಿ ವೇಳೆ ಯುವಕರ ಗುಂಪಿನ ಮೇಲೆ ಬಿಯರ್ ಬಾಟಲಿಯಿಂದ ದಾಳಿ ನಡೆಸಲಾಗಿದೆ. ಗಾಯಗೊಂಡಿರುವ ನಾಲ್ವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಭದ್ರಾವತಿಯ ಸಾಗರ, ನಾಗ ಪವನ್, ತೇಜಸ್, ಚೇತನ್ ಕುಮಾರ್ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ತೇಜಸ್ ಎಂಬುವವರ ಸ್ನೇಹಿತರೊಬ್ಬರ ಪತ್ನಿಯ ಹುಟ್ಟುಹಬ್ಬದ ಪಾರ್ಟಿಯನ್ನು ಶಿವಮೊಗ್ಗದ ಸೋಷಿಯಲ್ ಹಾರ್ಬರ್ ಕ್ಲಬ್ ನಲ್ಲಿ ಆಯೋಜಿಸಲಾಗಿತ್ತು. ರಾತ್ರಿ 11.30ರ ಹೊತ್ತಿಗೆ ಪಾರ್ಟಿಯಲ್ಲಿ ಮದ್ಯ ಸೇವಿಸಿದ್ದ ಗುಂಪೊಂದು ಏಕಾಏಕಿ ಚೇತನ್ ಎಂಬಾತನ ಮೇಲೆ ಹಲ್ಲೆ ನಡೆಸಲು…
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ – ಹೊಸನಗರದ 27 ವರ್ಷದ ಯುವಕನಿಗೆ 01 ವರ್ಷ ಶಿಕ್ಷೆ ಪ್ರಕಟ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಕಳೆದ ವರ್ಷ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಹಿನ್ನಲೆಯ ಪ್ರಕರಣದಲ್ಲಿ ಆರೋಪಿ 27 ವರ್ಷದ ಯುವಕನಿಗೆ 01 ವರ್ಷ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ. 2022ನೇ ಸಾಲಿನಲ್ಲಿ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ನೊಂದ ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ. ಆಗಿನ ತನಿಖಾಧಿಕಾರಿಗಳಾದ ಮಧುಸೂದನ್ ಜಿ.ಕೆ. ಸಿಪಿಐ ಹೊಸನಗರ ವೃತ್ತರವರು ಪ್ರಕರಣದ ತನಿಖೆ…
10ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಸಾವು
10ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಸಾವು ಸೊರಬ : ಹೃದಯಾಘಾತದಿಂದ 10ನೇ ತರಗತಿಯ ವಿದ್ಯಾರ್ಥಿ ಮೃತಪಟ್ಟ ಘಟನೆ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ನಡೆದಿದೆ. 10ನೇ ತರಗತಿ ವಿದ್ಯಾರ್ಥಿ ಜಯಂತ್ ರಜತಾದ್ರಯ್ಯ ಮೃತ ದುರ್ದೈವಿ. ಆನವಟ್ಟಿ ಜೂನಿಯರ್ ಕಾಲೇಜಿನಲ್ಲಿ ಓದುತ್ತಿದ್ದ ಜಯಂತ್ ಬೆಳಗ್ಗೆ ಶಾಲೆಗೆ ತೆರಳುವ ಸಂದರ್ಭದಲ್ಲಿ ಮೃತಪಟ್ಟಿದ್ದಾನೆ. ಜಯಂತ್ ಎಂದಿನಂತೆ ಬೆಳಗ್ಗೆ ಎದ್ದು ಶಾಲೆಗೆ ಹೋಗಲು ಮನೆಯಲ್ಲಿ ರೆಡಿಯಾಗುತ್ತಿದ್ದ ವೇಳೆಯಲ್ಲಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಜಯಂತ್ನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಆದರೆ ಅಷ್ಟೊತ್ತಿಗಾಗಲೇ…
ರಿಪ್ಪನ್ಪೇಟೆ – ಶಾಲಾ ಮಕ್ಕಳ ಪ್ರವಾಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ|Ripponpet
ರಿಪ್ಪನ್ಪೇಟೆ – ಶಾಲಾ ಮಕ್ಕಳ ಪ್ರವಾಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ರಿಪ್ಪನ್ಪೇಟೆ : ಇಲ್ಲಿನ ಬೆನವಳ್ಳಿ ಗ್ರಾಮದಲ್ಲಿ ಶಾಲಾ ಮಕ್ಕಳ ಪ್ರವಾಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಬೆನವಳ್ಳಿ ಗ್ರಾಮದಲ್ಲಿ ಬೆಂಗಳೂರಿನ ಶಾಲಾ ಮಕ್ಕಳನ್ನು ಕೊಡಚಾದ್ರಿ ಬೆಟ್ಟಕ್ಕೆ ಪ್ರವಾಸ ಕರೆದೊಯ್ದು ವಾಪಾಸ್ ಶಿವಮೊಗ್ಗ ಕಡೆಗೆ ತೆರಳುತಿದ್ದ ವಿಜಯಲಕ್ಷ್ಮಿ ಬಸ್ ಹಾಗೂ ಶಿವಮೊಗ್ಗದಿಂದ ಹೊಂಬುಜ ದೇವಸ್ಥಾನಕ್ಕೆ ಹೊರಟಿದ್ದ ಮಾರುತಿ ಬಲೆನೋ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ರಸ್ತೆ…
ತ್ಯಾಗರ್ತಿ ಬಳಿ ಭೀಕರ ರಸ್ತೆ ಅಪಘಾತ – ಸಾಗರ ನಗರಸಭೆ ಮಾಜಿ ಅಧ್ಯಕ್ಷ ಸೇರಿದಂತೆ ಮೂವರಿಗೆ ಗಂಭೀರ ಗಾಯ|Accident
ಸಾಗರ ತಾಲ್ಲೂಕಿನ ತ್ಯಾಗರ್ತಿ ಸಮೀಪದಲ್ಲಿ ಮಾರುತಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಮೂರು ಜನರಿಗೆ ಗಂಭೀರ ಗಾಯಾಗಳಾಗಿರುವ ಘಟನೆ ನಡೆದಿದೆ. ತ್ಯಾಗರ್ತಿ ಸಮೀಪದ ಅಬಸೆ ಬಳಿಯಲ್ಲಿ ಮಾರುತಿ ಓಮಿನಿ ಕಾರಿನಲ್ಲಿ ಮೂರು ಜನರು ಸಂಚರಿಸುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಈ ಅಪಘಾತದಲ್ಲಿ ಸಾಗರ ನಗರಸಭೆ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ ಸೇರಿದಂತೆ ಇನ್ನಿಬ್ಬರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.ತ್ಯಾಗರ್ತಿ ಯಿಂದ ಸಾಗರ ಕಡೆಗೆ ತೆರಳುತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಓರ್ವನ ಕಾಲು ಮುರಿದಿದ್ದು,…
ರಿಪ್ಪನ್ಪೇಟೆ : ಬೆನವಳ್ಳಿಯಲ್ಲಿ ಜಿಂಕೆ ಬೇಟೆ – ಮಾಂಸ ಸಮೇತ ಓರ್ವನ ಬಂಧನ|arrested
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಬೆನವಳ್ಳಿ ಗ್ರಾಮದಲ್ಲಿ ಜಿಂಕೆ ಭೇಟೆಯಾಡಿ ಮಾಂಸವನ್ನು ಬಳಸಿಕೊಳ್ಳುತಿದ್ದ ಆರೋಪದಲ್ಲಿ ಓರ್ವನನ್ನು ಬಂಧಿಸಿದ್ದಾರೆ. ಬೆನವಳ್ಳಿ ಗ್ರಾಮದ ಮನೋಹರ್ (34) ಬಂಧಿತ ಆರೋಪಿ.ಇನ್ನೋರ್ವ ಆರೋಪಿ ಬೆನವಳ್ಳಿ ಗ್ರಾಮದ ವಿನಯ್ (26) ಪರಾರಿಯಾಗಿದ್ದಾನೆ. ಮಾಂಸ ಮಾಡುವ ಉದ್ದೇಶದಿಂದ ಜಿಂಕೆಯನ್ನು ಭೇಟೆ ಮಾಡಿರುವ ಮಾಹಿತಿಯ ಹಿನ್ನಲೆಯಲ್ಲಿ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಬೆನವಳ್ಳಿ ಗ್ರಾಮದ ಸನಂ 10|06 ರಲ್ಲಿ ಜಿಂಕೆ ಮಾಂಸ ಪತ್ತೆಯಾಗಿದೆ.ಈ ಹಿನ್ನಲೆಯಲ್ಲಿ ಆರೋಪಿ ಮನೋಹರ್ ನನ್ನು ವಶಕ್ಕೆ ಪಡೆದಿದ್ದು ಇನ್ನೋರ್ವ ಆರೋಪಿ ವಿನಯ್ ಬಂಧನಕ್ಕೆ…
ಸಾಗರದಲ್ಲಿ ಬಜರಂಗ ದಳ ಕಾರ್ಯಕರ್ತನ ಮೇಲೆ ಹಲ್ಲೆಗೆ ಯತ್ನ – ಸಂಘಟನೆಗಳಿಂದ ಪ್ರತಿಭಟನೆ|sagara
ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ, ಈ ಘಟನೆಯಲ್ಲಿ ಸ್ವಲ್ಪದರಲ್ಲಿಯೆ ಸುನೀಲ್ ಎಂಬಾತ ತಪ್ಪಿಸಿಕೊಂಡಿದ್ದಾರೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಾಗರ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ನಡೆದ ಘಟನೆ ಇದಾಗಿದ್ದು, ಬೆಳಗ್ಗೆ ೯ ಗಂಟೆ ಸುಮಾರಿಗೆ ನಡೆದಿದೆ. ಬೈಕ್ನಲ್ಲಿ ಬರುತ್ತಿದ್ದ ಸುನೀಲ್ ಮೇಲೆ ಸಮೀರ್ ಎಂಬಾತ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ್ದಾರೆ. ಜಿಯೋ ಫೈಬರ್ ಕಚೇರಿಯ ಬಳಿ ಬೈಕ್ ನಲ್ಲಿ ಬರುತ್ತಿದ್ದಾಗ ಘಟನೆ ನಡೆದಿದೆ. ಅಲ್ಲಿಯೇ ಇದ್ದ ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ. ಸುನೀಲ್…