Headlines

ರಿಪ್ಪನ್‌ಪೇಟೆ : ನುಗ್ಗೆಕಾಯಿ ಕಿತ್ತ ವಿಚಾರದಲ್ಲಿ ಗಲಾಟೆ – ಒಬ್ಬನಿಗೆ ಮೂವರಿಂದ ಹಲ್ಲೆ,ಜೀವಬೆದರಿಕೆ|Assault

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕೆಂಚನಾಲ ಗ್ರಾಮದಲ್ಲಿ ನುಗ್ಗೆಕಾಯಿ ವಿಚಾರಕ್ಕೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆಯೊಂದು ನಡೆದಿದೆ.  ಸೋಮವಾರ ಸಂಜೆ ಕೆಂಚನಾಲ ಗ್ರಾಮದ ರಾಮ್ ಕುಮಾರ್  ರಿಪ್ಪನ್​ಪೇಟೆಗೆ ಹೋಗಿ ವಾಪಸ್​ ಮನೆಗೆ ಬರುವಾಗ, ಅದೇ ಗ್ರಾಮದ ನಿವಾಸಿ  ನಾಗೇಶ್ ತನ್ನ ಮನೆ ಹಿತ್ತಲಿನಲ್ಲಿ  ಬೆಳೆದಿದ್ದ ನುಗ್ಗೆಕಾಯಿಯನ್ನು ಕೀಳುತ್ತಿರುವುದು ಕಾಣಿಸಿದೆ. ಸಹಜವಾಗಿಯೇ ನಮ್ಮನೆಯ ಹಿತ್ಲಿಂದ ಯಾಕೆ ನುಗ್ಗೆಕಾಯಿ ಕಿತ್ಕೊಂಡು ಹೋಗ್ತಿದ್ದಿಯಾ, ಹೇಳೋದು ಕೇಳೋದು ಏನು ಇಲ್ವಾ ಎಂದು ಪ್ರಶ್ನಿಸಿದ್ದಾರೆ. ಇಷ್ಟಕ್ಕೆ ಸಿಟ್ಟಾದ ವ್ಯಕ್ತಿ ಅದು ನಿನ್ನ…

Read More

ಮಾರಕಾಸ್ತ್ರಗಳೊಂದಿಗೆ ದರೋಡೆಗೆ ಹೊಂಚು ಹಾಕಿದ್ದ ನಾಲ್ವರ ಹೆಡೆಮುರಿ ಕಟ್ಟಿದ ಪೊಲೀಸರು|robbery

ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಶಿವಮೊಗ್ಗ ನಗರದ ವಿನೋಬನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಮಾರಕಾಸ್ತ್ರಗಳೊಂದಿಗೆ ಒಬ್ಬಂಟಿಯಾಗಿ ಬರುವ ವ್ಯಕ್ತಿಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಖತರ್ ನಾಕ್ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಬಸವನ ಗಂಗೂರು ಚಾನೆಲ್ ಮೇಲೆ ಬೊಮ್ಮನ್ ಕಟ್ಟೆಯ ಅನಿಲ್ ಕುಮಾರ್(42), ಕೋಹಳ್ಳಿಯ ಶಿವನಾಯ್ಕ (34), ಆಯನೂರಿನ ಶಿವಕುಮಾರ್ (45) ಮತ್ತು ಸಿರಿಗೆರೆಯ ಖಲೀಂ ಬಂಧಿತ ಆರೋಪಿಗಳು. ಈ ದರೋಡೆ ಸಂಚಿನ ಬಗ್ಗೆ ಮಾಹಿತಿ ತಿಳಿದ ವಿನೋಬನಗರ ಪಿಎಸ್ಐ ಸಾಗರ್ಕರ್ ನೇತೃತ್ವದಲ್ಲಿ ಪೊಲೀಸರ ತಂಡ…

Read More

ತುಂಗಾ ನದಿಯಲ್ಲಿ ಯುವಕನ ಶವ ಪತ್ತೆ – ಆತ್ಮಹತ್ಯೆ ಶಂಕೆ|TUNGA

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊನ್ನಾನಿ ಬಳಿಯ ಹಿಂಭಾಗದ ತುಂಗಾ ನದಿಯಲ್ಲಿ ಭಾನುವಾರ ತೆಂಗಿನ ಕೊಪ್ಪದ ಯುವಕನ ಶವ ಪತ್ತೆಯಾಗಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಪ್ರಜತ್(26) ಮೃತಪಟ್ಟ ಯುವಕ. ಸಾಲೂರು ಹೊಸಮನೆ ತೆಂಗಿನಕೊಪ್ಪದ ಪ್ರಜತ್  4 ವರ್ಷದ ಹಿಂದೆ ಹಾವು ಕಚ್ಚಿದ ಕಾರಣ ತಾಯಿಯನ್ನು ಕಳೆದುಕೊಂಡಿದ್ದರು ಹಾಗೂ ತಂದೆ ಕೂಡ ಕ್ಯಾನ್ಸರ್ ರೋಗಕ್ಕೆ ಇತ್ತೀಚಿಗೆ ಬಲಿಯಾಗಿದ್ದರು. ಪ್ರಜತ್ ಸಾಲದ ಕಾರಣ ಹಾಗೂ ಒಳ್ಳೆಯ ಉದ್ಯೋಗ ಇಲ್ಲದ ಕಾರಣ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎನ್ನಲಾಗುತ್ತಿದೆ….

Read More

ಈಜಲು ಹೋದ ಎಂಬಿಬಿಎಸ್ ವಿದ್ಯಾರ್ಥಿ ಶವವಾಗಿ ಪತ್ತೆ|death

ಶಿವರಾತ್ರಿಯ ನಿಮಿತ್ತ ಜಾಲಿ ಮೂಡ್ ನಲ್ಲಿದ್ದ ವಿದ್ಯಾರ್ಥಿಗಳ ಗುಂಪೊಂದಕ್ಕೆ ಆಘಾತವಾಗಿದೆ ಶಿವಮೊಗ್ಗ ಜಿಲ್ಲೆಯ ಭದ್ರಾ ಚೆಕ್ ಡ್ಯಾಂ ನ ನೀರಿನಲ್ಲಿ ಈಜಲು ಹೋಗಿದ್ದ ಸಿಮ್ಸ್ ನ ವಿದ್ಯಾರ್ಥಿ ನೀರುಪಾಲಾಗಿ ಶವವಾಗಿ ಪತ್ತೆಯಾಗಿರುವ ಘಟನೆ ಇಂದು ನಡೆದಿದೆ. ಭದ್ರಾ ನದಿಯ ಗೋಂದಿ ಚೆಕ್ ಡ್ಯಾಂಗೆ ಶಿವಮೊಗ್ಗದ ಸಿಮ್ಸ್ ನ ವಿದ್ಯಾರ್ಥಿ ಜಗತ್ ಮತ್ತು ಇತರೆ ಐವರು ಸ್ನೇಹಿತರು ಈಜಲು ತೆರಳಿದ್ದಾರೆ. ಜಗತ್(21) ಜೊತೆಗೆ  ಓರ್ವ ನೀರಿಗೆ ಇಳಿದಿದ್ದಾನೆ. ಜಗತ್ ನೀರಿನಲ್ಲಿ ಮುಂದೆ ಹೋಗಿದ್ದು ಆಳವಿದ್ದುದ್ದರಿಂದ ನೀರಿನಲ್ಲಿ ಮುಳುಗಿದವನು ಮೇಲೆ…

Read More

ಚಲಿಸುತಿದ್ದ ರೈಲಿನಿಂದ ಕೆಳಗೆ ಬಿದ್ದು ರಿಪ್ಪನ್‌ಪೇಟೆಯ ಸರ್ಕಾರಿ ವೈದ್ಯ ಸಾವು|accident

ರಿಪ್ಪನ್‌ಪೇಟೆ : ತುಮಕೂರು ಜಿಲ್ಲೆಯ ಕ್ಯಾತಸಂದ್ರ ಬಳಿ ಚಲಿಸುತಿದ್ದ ರೈಲಿನಿಂದ ಬಿದ್ದು ಪಟ್ಟಣದ ಶಬರೀಶನಗರದ ವೈದ್ಯರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಶಬರೀಶನಗರದ ಡಾ. ಗುರುರಾಜ್ ((46) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಶುಕ್ರವಾರ ಬೆಂಗಳೂರಿನಿಂದ – ಶಿವಮೊಗ್ಗಕ್ಕೆ ರೈಲಿನಲ್ಲಿ ಸಂಚರಿಸುತಿದ್ದಾಗ ಕ್ಯಾತಸಂದ್ರದ ಬಳಿ ರೈಲಿನ ಬಾಗಿಲು ತಾಗಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ಹೇಳಲಾಗುತಿದೆ. ಡಾ. ಗುರುರಾಜ್ ರಿಪ್ಪನ್‌ಪೇಟೆ,ಹೊಸನಗರ ಮತ್ತು ಗೌತಮಪುರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು.ಪ್ರಸ್ತುತ ಸಂಪೆಕಟ್ಟೆ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕಾರ್ಯ ನಿರ್ವಹಿಸುತಿದ್ದರು.ಇತ್ತೀಚಿಗೆ ಕೊಡಗು ಜಿಲ್ಲೆಯಲ್ಲಿ…

Read More

ಶಿವಮೊಗ್ಗ ಜೈಲಿನಲ್ಲಿ ಮಾರಾಮಾರಿ : ಒಬ್ಬನಿಗೆ ಆರು ಜನರಿಂದ ಥಳಿತ|jail

ಶಿವಮೊಗ್ಗ : ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಮೇಲೆ ಹಳೇ ದ್ವೇಷದಿಂದ ಇತರ ಆರು ಕೈದಿಗಳು ಹಲ್ಲೆ ನಡೆಸಿದ್ದಾರೆ. ನಾಗರಾಜ್ ಎಂಬ ವಿಚಾರಣಾಧೀನ ಕೈದಿ ಮೇಲೆ ಸಚಿನ್ ಅಲಿಯಾಸ್ ಸ್ಯಾಡೋ, ದರ್ಶನ್, ಪರಶುರಾಮ, ಅನಿಲ್‌ಕುಮಾರ್, ವಿಶ್ವನಾಥ, ವಿಶಾಲ್ ಎಂಬುವರು ಹಲ್ಲೆ ಮಾಡಿದ್ದಾರೆ. ನಾಗರಾಜ್ ಭದ್ರಾವತಿಯ ಎರಡನೇ ಅಪರ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರಾಗಲು ಜೈಲಿನಲ್ಲಿರುವ ವಿಡಿಯೋ ಕಾನ್ಫರೆನ್ಸ್ ಕೊಠಡಿಗೆ ತೆರಳುವಾಗ ಆರು ಕೈದಿಗಳು ಹಲ್ಲೆ ನಡೆಸಿದ್ದಾರೆ. ಸ್ಥಳದಲ್ಲಿದ್ದ ಜೈಲು ನಿರೀಕ್ಷಕ ಆತ್ಮಾನಂದ ಕುದರಿ ಮತ್ತು…

Read More

ಸಾಗರ : ಐಗಿನಬೈಲ್ ಬಳಿ ದ್ವಿಚಕ್ರ ಹಾಗೂ ಕಾರಿನ ನಡುವೆ ಡಿಕ್ಕಿ – ಯುವತಿ ಸ್ಥಳದಲ್ಲೇ ಸಾವು|accident

ಕಾರು ಮತ್ತು ಸ್ಕೂಟಿ ನಡುವೆ ಭೀಕರ ರಸ್ತೆ ಅಪಘಾತ ನಡೆದು ಸ್ಥಳದಲ್ಲೇ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಸಾಗರ ತಾಲೂಕಿನ ಉಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐಗಿನಬೈಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ 24 ವರ್ಷದ ಯುವತಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಿವಾಸಿ ಶೃತಿ(24) ಮೃತಪಟ್ಟಿರುವ ಯುವತಿಯಾಗಿದ್ದು  ಶಿವಮೊಗ್ಗದ ಸಿಟಿ ಸೆಂಟರ್ ನಲ್ಲಿ ಸೆಕ್ಯೂರಿಟಿ ಗಾರ್ಡಾಗಿ…

Read More

ರಿಪ್ಪನ್‌ಪೇಟೆ : KSRTC ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ – ಗಂಭಿರ ಗಾಯಗೊಂಡಿದ್ದ ಬೈಕ್ ಸವಾರ ಮೆಗ್ಗಾನ್ ಗೆ ರವಾನೆ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗವಟೂರು ಬಳಿ ಚಲಿಸುತಿದ್ದ ಕೆ ಎಸ್ ಆರ್ ಟಿಸಿ ಬಸ್ ಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದು ಓರ್ವ ವ್ಯಕ್ತಿಗೆ ಗಂಭೀರ ಪೆಟ್ಟಾಗಿರುವ ಘಟನೆ ನಡೆದಿದೆ. ಬೈಕ್ ಸವಾರ ದಾನಪ್ಪ(68) ಗಂಭೀರ ಗಾಯಗೊಂಡಿದ್ದಾರೆ. ಭಟ್ಕಳ – ಬೆಂಗಳೂರು ಮಾರ್ಗದ ಕೆ ಎಸ್ ಆರ್ ಟಿಸಿ ಬಸ್ ಚಾಲಕ ಗವಟೂರು ಬಳಿ ಎದುರುಗಡೆ ವಾಹನ ಬಂದ ಹಿನ್ನಲೆಯಲ್ಲಿ ಬ್ರೇಕ್ ಹಾಕಿದ್ದಾನೆ ಹಿಂಬದಿ ಟಿವಿಎಸ್ ಎಕ್ಸೆಲ್ ಬೈಕ್ ನಲ್ಲಿ ಬರುತಿದ್ದ ಚಾಲಕ ಬಸ್ ಗೆ…

Read More

ಶಿವಮೊಗ್ಗ-ಆಯನೂರು ಹೆದ್ದಾರಿಯಲ್ಲಿ ಹಾಡಹಗಲೇ ಕಾರು ಅಡ್ಡಗಟ್ಟಿ ಯುವಕನ ಕುತ್ತಿಗೆಗೆ ಮಚ್ಚು ಇಟ್ಟು ದರೋಡೆ|Robbery

ಮಾರಿ ಜಾತ್ರೆಗೆ ಕಾರಿನಲ್ಲಿ ತೆರಳುತ್ತಿದ್ದ ಯುವಕನ ಕುತ್ತಿಗೆಗೆ ಮಚ್ಚು ಇಟ್ಟು ಹಾಡಹಗಲೇ ನಗ – ನಗದು ಅಪಹರಿಸಿರುವ ಆಘಾತಕಾರಿ ಘಟನೆ ಶಿವಮೊಗ್ಗ ಸಮೀಪ ನಡೆದಿದೆ. ಶಿವವಮೊಗ್ಗ-ಸಾಗರ ಹೆದ್ದಾರಿಯಲ್ಲಿ ಬರುವ ಟ್ರೀಪಾರ್ಕ್​ನ ಸಮೀಪ ದರೋಡೆಯೊಂದು (Dacoity) ನಡೆದಿರುವ ಬಗ್ಗೆ ವರದಿಯಾಗಿದೆ. ತರಿಕೆರೆಯ ವಸಂತ್ ಎಂಬವರು ಕಾರಿನಲ್ಲಿ ಮಾರಿಜಾತ್ರೆಗೆ ಹೋಗುತ್ತಿದ್ದ  ವೇಳೆ ಅವರನ್ನು ಟ್ರೀಪಾರ್ಕ್​ ಬಳಿ ಅಡ್ಡಗಟ್ಟಲಾಗಿದೆ. ಕಾರಿನಲ್ಲಿ ಹೋಗುತ್ತಿದ್ದವರನ್ನ ತಡೆದು ಕುತ್ತಿಗೆಗೆ ಮಚ್ಚು ಹಿಡಿದು ಕ್ಯಾಶ್ ಹಾಗೂ ಚಿನ್ನವನ್ನು ದೋಚಿ ಹೋಗಿದ್ದಾರೆ.  ಮೂತ್ರ ವಿಸರ್ಜನೆಗೆ ಎಂದು ಕಾರು ನಿಲ್ಲಿಸಿದ್ದ…

Read More

ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲಿಯೇ ಸಾವು|accident

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಮಾವಲಿ ಮತ್ತು ಶಿವಪುರ ಗ್ರಾಮದ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಟಿಪ್ಪರ್ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೆದವಟ್ಟಿ ಗ್ರಾಮದ ಲೋಹೀತ್ ಫಕೀರಪ್ಪ( ಸುಮಾರು 25 ವರ್ಷ) ಹಾಗೂ ಶಿವಪುರ ಗ್ರಾಮದ ಶ್ರೀನಿವಾಸ ಮಾರುತಿ ( ಸುಮಾರು 25 ವರ್ಷ) ಮೃತ ದುರ್ಧೈವಿಗಳು.   ಶಿರಾಳಕೊಪ್ಪದಿಂದ ಸೊರಬ ಮಾರ್ಗವಾಗಿ ಬರುತ್ತಿದ್ದ ಟಿಪ್ಪರ್ ಸೊರಬದಿಂದ ಶಿರಾಳಕೊಪ್ಪ ಮಾರ್ಗವಾಗಿ ತೆರಳುತಿದ್ದ…

Read More