Headlines

ಗರ್ತಿಕೆರೆ ಬಳಿ ಭೀಕರ ಅಪಘಾತ – ಮೀನು ವ್ಯಾಪಾರಿ ಸ್ಥಳದಲ್ಲೇ ಸಾವು|accident

ರಿಪ್ಪನ್‌ಪೇಟೆ : ಗರ್ತಿಕೆರೆ ಕಾಲೇಜು ಸಮೀಪದಲ್ಲಿ ಬೆಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗರ್ತಿಕೆರೆ ನಿವಾಸಿ ಮೀನು ವ್ಯಾಪಾರಿ ಕಬೀರ್ ಸಾಬ್ (72) ಎಂಬುವವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ತೀರ್ಥಹಳ್ಳಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಎಕ್ಸ್ಎಲ್ ಸೂಪರ್ ಬೈಕ್ ನಲ್ಲಿ ಹೊರಟು ನಿಂತಿದ್ದ ಕಬೀರ್ ಸಾಬ್ ಎಂಬುವವರಿಗೆ ಹಿಂಬದಿಯಿಂದ ವೇಗವಾಗಿ ಬಂದ ಬೊಲೆರೋ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಭೀಕರ ಅಪಘಾತದಲ್ಲಿ ಬೊಲೆರೋ ವಾಹನ ಸಹ ಪಲ್ಟಿಯಾಗಿದ್ದು ಸಂಪೂರ್ಣ ನಜ್ಜುಗುಜ್ಜಾಗಿದೆ….

Read More

ಅಂಬಲಿಗೋಳ ಡ್ಯಾಮ್ ನಲ್ಲಿ ಕಾಲು ತೊಳೆಯಲು ಇಳಿದ ವ್ಯಕ್ತಿ ನೀರುಪಾಲು – ತೀವ್ರ ಶೋಧ ಕಾರ್ಯಾಚರಣೆ|dam

ಕಾಲು ತೊಳೆಯಲು ಹೋಗಿ ಅಂಬಲಿಗೋಳ ಡ್ಯಾಮ್ ನಲ್ಲಿ ಜಾರಿ ಬಿದ್ದ ವ್ಯಕ್ತಿ : ಅಗ್ನಿಶಾಮಕ ದಳದಿಂದ ತೀವ್ರ ಶೋಧ…!!! ಶಿಕಾರಿಪುರ ತಾಲೂಕಿನ ಅಂಬಲಿಗೋಳ ಡ್ಯಾಮ್ ನಲ್ಲಿ ಯುವಕ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರು ಪಾಲಾಗಿರುವ ಘಟನೆ ನಡೆದಿದೆ. ಕಪ್ಪನಹಳ್ಳಿ ಗ್ರಾಮದ ನಿವಾಸಿ ಜಗದೀಶ್ ಎಂಬ ವ್ಯಕ್ತಿ ತಮ್ಮ ಸ್ನೇಹಿತರೊಂದಿಗೆ ವಿಹಾರಕ್ಕೆ ಆಗಮಿಸಿದಾಗ ಅಂಬಲಿಗೋಳ ಡ್ಯಾಮ್ ಮೇಲಿನ ರಸ್ತೆಯಲ್ಲಿ ತಿರುಗಾಡಿದ್ದಾರೆ.ನಂತರ ಅಂಬಲಿಗೋಳ ಡ್ಯಾಮ್ ನಲ್ಲಿ ಇಳಿದು ಕಾಲು ತೊಳೆಯುವಾಗ ಆಕಸ್ಮಿಕವಾಗಿ ಜಾರಿ ಬಿದ್ದು ನೀರುಪಾಲಾಗಿರುವ ಘಟನೆ ಇಂದು…

Read More

ರಿಪ್ಪನ್‌ಪೇಟೆ : ಚಲಿಸುತಿದ್ದ ಟಾಟಾ ಏಸ್ ವಾಹನದಿಂದ ಕೆಳಗೆ ಬಿದ್ದು ವ್ಯಕ್ತಿ ಸಾವು|accident

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕಣಬಂದೂರು ಶಾಲೆಯ ಬಳಿ ಟಾಟಾ ಏಸ್ ವಾಹನದಲ್ಲಿ ಹಿಂಬದಿ ಕುಳಿತಿದ್ದ ವ್ಯಕ್ತಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕಣಬಂದೂರು ಗ್ರಾಮದ ರಾಘವೇಂದ್ರ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಟಾಟಾ ಏಸ್(tata ace) ವಾಹನದಲ್ಲಿ  ತೋಟಕ್ಕೆ ದರಗಲು ತರುತ್ತಿರುವಾಗ ಕಣಬಂದೂರು ಶಾಲೆಯ(school) ಸಮೀಪದಲ್ಲಿ ಹಿಂಬದಿ ಕುಳಿತಿದ್ದ ರಾಘವೇಂದ್ರ ಆಯ ತಪ್ಪಿ ಕೆಳಗಿನ ಸಿಮೆಂಟ್ ರಸ್ತೆಯ ಮೇಲೆ ಬಿದ್ದು ತೀವ್ರತರವಾಗಿ ಗಾಯಗೊಂಡಿದ್ದನು. ಕೂಡಲೇ ಸ್ಥಳೀಯರು ಹಾಗೂ ಸಂಬಂಧಿಕರು ಗಾಯಾಳುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ(hospital) ದಾಖಲಿಸಿದ್ದಾರೆ ಆದರೆ…

Read More

ತೀರ್ಥಹಳ್ಳಿ : ಚಾಕಲೇಟ್ ಎಂದು ಇಲಿ ಪಾಷಾಣ ತಿಂದ ಐದು ವರ್ಷದ ಮಗು – ಚಿಕಿತ್ಸೆ ಫಲಿಸದೇ ಸಾವು|rat poison

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿಯ ಮೇಲಿನಕೊಪ್ಪದ ಬಳಿಯಲ್ಲಿ ಮಗುವೊಂದು ಇಲಿ ಪಾಷಾಣದ ಪೇಸ್ಟ್ ತಿಂದು ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಕೂಲಿ ಕಾರ್ಮಿಕ ಚಂದ್ರಪ್ಪ ಮತ್ತು ಗೀತಾ ದಂಪತಿಯ ಎಂಬುವವರ ಪುತ್ರ ಪ್ರೀತಮ್ (5) ಮೃತ ಬಾಲಕ.  ಇಲಿಗೆ ಅಂತಾ ಇಟ್ಟಿದ್ದ ಪಾಷಾಣವನ್ನು ಮಗು ಚಾಕೊಲೆಟ್ ಎಂದು ಭಾವಿಸಿ ಬಾಯಿಗೆ ಹಾಕಿಕೊಂಡಿದೆ. ನಿನ್ನೆ ರಾತ್ರಿ ಮಗು ಅಸ್ಥಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಇಂದು ಸಾವನ್ನಪ್ಪಿದೆ.  ಮಗುವನ್ನು ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ…

Read More

ವಿದ್ಯುತ್ ಟ್ರಾನ್ಸ್ ಫಾರ್ಮ್ ದುರಸ್ತಿ ವೇಳೆ ವಿದ್ಯುತ್ ತಗುಲಿ ಪವರ್ ಮ್ಯಾನ್ ಸಾವು – ಜಿಲ್ಲೆಯಲ್ಲಿ ವಾರದಲ್ಲಿ ಎರಡು ದುರಂತ ಘಟನೆ|mescom

ಶಿಕಾರಿಪುರ : ಇಲ್ಲಿನ ಕಪ್ಪನಹಳ್ಳಿ ಗ್ರಾಮದಲ್ಲಿ ಟ್ರಾನ್ಸಪಾರ್ಮ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್​  ಸಾವನ್ನಪ್ಪಿರುವ ಘಟನೆ ನಡೆದಿದೆ. ದುರ್ಘಟನೆಯಲ್ಲಿ ಶ್ರೀಶೈಲಾ ಎನ್ನುವವರು ಮೃತಪಟ್ಟಿದ್ದಾರೆ. ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿ ಟ್ರಾನ್ಸಫಾರಮ್​ನಲ್ಲಿ ದೋಷ ಕಾಣಿಸಿಕೊಂಡಿತ್ತು ಆ ಹಿನ್ನಲೆಯಲ್ಲಿ ಲೈನ್​ ಮ್ಯಾನ್​ ಶ್ರೀಶೈಲ ಸ್ಥಳಕ್ಕೆ ತೆರಳಿ ಸಂಬಂಧಿಸಿದ ಸ್ಟೇಷನ್ ನಿಂದ ಲೈನ್ ಕ್ಲಿಯರೆನ್ಸ್ ಪಡೆದು ದುರಸ್ತಿ ಕಾರ್ಯ ಕೈಗೊಂಡಿದ್ದರು. ಆದರೆ ಏಕಾಏಕಿ ಆಫ಼್ ಆಗಿದ್ದ ವಿದ್ಯುತ್ ಲೈನ್ ನಲ್ಲಿ ವಿದ್ಯುತ್ ಪ್ರವಹಿಸಿದ್ದರಿಂದ ಶ್ರೀಶೈಲಾ ಮೃತಪಟ್ಟಿದ್ದಾರೆ. ಲೈನ್​ ಮ್ಯಾನ್​…

Read More

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 19 ವರ್ಷದ ಯುವಕನಿಗೆ 20 ವರ್ಷ ಜೈಲು,1ಲಕ್ಷ ದಂಡ ವಿಧಿಸಿದ ಕೋರ್ಟ್|POCSO

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ ಶಿವಮೊಗ್ಗ  ನ್ಯಾಯಾಲಯ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಭದ್ರಾವತಿ ತಾಲೂಕಿನ 19 ವರ್ಷದ ಯುವಕನೊಬ್ಬ 6 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಇನ್ಸ್ ಪೆಕ್ಟರ್ ಲಕ್ಷ್ಮೀಪತಿ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯದ (ಪೋಕ್ಸೋ ವಿಭಾಗ) ನ್ಯಾಯಾಧೀಶರಾದ ನ್ಯಾ….

Read More

ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿ ಹೊಸನಗರದ ಲಾಡ್ಜ್ ನಲ್ಲಿ ಸಾವು|real

ಹೊಸನಗರ : ಬೆಂಗಳೂರು ಜಿಲ್ಲೆಯ ಆಡುಗೋಡಿ ಆನೆಪಾಳ್ಯದ ರಿಯಲ್ ಎಸ್ಟೇಟ್ ಉದ್ಯಮಿ ಹೊಸನಗರದ ಖಾಸಗಿ ಲಾಡ್ಜ್ ನಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ಮುನಿರಾಜು (48) ಬೆಂಗಳೂರು ಮೂಲದವರಾಗಿದ್ದು ಕುಟುಂಬ ಸಮೇತ ದೇವರ ದರ್ಶನಕ್ಕೆ ಬಂದಿದ್ದರು. ಜನವರಿ 4ರಂದು ಪುಣ್ಯಕ್ಷೇತ್ರಗಳ ಭೇಟಿಗೆ ಎಂದು ಪತ್ನಿ ಹಾಗೂ ಮಕ್ಕಳೊಂದಿಗೆ ಕಾರಿನಲ್ಲಿ ಬೆಂಗಳೂರಿನಿಂದ ಬೆಳಿಗ್ಗೆ ಹೊರಟು ಹೊರನಾಡು ಶೃಂಗೇರಿ ಕ್ಷೇತ್ರದ ದರ್ಶನ ಮಾಡಿ ಹೊಸನಗರ ಬರುವಾಗ ರಾತ್ರಿ ಆಗಿದ್ದ ಕಾರಣ ಪಟ್ಟಣದ ಖಾಸಗಿ ಲಾಡ್ಜ್ ನಲ್ಲಿ ರೂಮ್…

Read More

ವಿದ್ಯುತ್ ಕಂಬದಿಂದ ಬಿದ್ದು ಲೈನ್ ಮೆನ್ ಸಾವು !!! – ಸಕಾಲಕ್ಕೆ ಸಿಗದ ಆಂಬುಲೆನ್ಸ್ – ವ್ಯಾಪಕ ಆಕ್ರೋಶ..!!!

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೆದ್ದೂರಿನಲ್ಲಿ ವಿದ್ಯುತ್ ಕಂಬದ ಮೇಲೆ ಕೆಲಸ ಮಾಡುತ್ತಿದ್ದ ಲೈನ್ ಮೆನ್ ಕಂಬದಿಂದ ಬಿದ್ದು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟ ಘಟನೆ ಗುರುವಾರ ನಡೆದಿದೆ.  ಘಟನೆಯಲ್ಲಿ ಮೃತಪಟ್ಟವರನ್ನು ರವಿ ನಾಯಕ(37) ಎಂದು  ಗುರುತಿಸಲಾಗಿದೆ. ಹೆದ್ದೂರು ಬಳಿ ಕೆಲಸ ಮಾಡುತ್ತಿರುವಾಗ ಕಂಬದಿಂದ ಬಿದ್ದಿದ್ದು ಗಂಭೀರ ಗಾಯಗೊಂಡ ಇವರನ್ನು ಸ್ಥಳೀಯರು ಕಾರಿನಲ್ಲಿ ಕಟ್ಟೆಹಕ್ಕಲು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.  ಅಲ್ಲಿಂದ ತೀರ್ಥಹಳ್ಳಿ ಆಸ್ಪತ್ರೆಗೆ ರವಾನಿಸಲು ಆಂಬುಲೆನ್ಸ್ ಸರಿಯಾದ ಸಮಯಕ್ಕೆ ಸಿಗದ ಕಾರಣ ಕಾರಿನಲ್ಲಿ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ಸಾಗಿಸುವಾಗ…

Read More

ಆನಂದಪುರ ಸಮೀಪದಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ – ಇಬ್ಬರು ಯುವಕರು ಸ್ಥಳದಲ್ಲೇ ಸಾವು|accident

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕಣ್ಣೂರು ಬಳಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಭೀಕರ ಘಟನೆ ನಡೆದಿದೆ. ಗೌತಮಪುರ ನಿವಾಸಿಗಳಾದ ಪ್ರದೀಪ್ (25) ಹಾಗೂ ದಯಾನಂದ್ (30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆನಂದಪುರದಿಂದ ಸಂತೆ ಮುಗಿಸಿಕೊಂಡು ತರಕಾರಿ ತೆಗೆದುಕೊಂಡು ಹೋಗುತ್ತಿದ್ದ ವೇಳೆ  ಕಣ್ಣೂರು ಸಮೀಪ ನಿಂತಿದ್ದ ಲಾರಿಗೆ ಹಿಂಬದಿಯಿಂದಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ನೂರಾರು ಜನ ಜಮಾಯಿಸಿದ್ದುಸೂಕ್ತ ಸೂಚನಾ ಫಲಕವಿಲ್ಲದೆ ಲಾರಿ ನಿಲ್ಲಿಸಿರುವುದಕ್ಕೆ ಆಕ್ರೋಶ…

Read More

ಯಡೂರು ಅಬ್ಬಿ ಫಾಲ್ಸ್ ನಲ್ಲಿ ಈಜಲು ತೆರಳಿದ್ದ ತೀರ್ಥಹಳ್ಳಿಯ ಯುವಕ ನೀರಲ್ಲಿ ಮುಳುಗಿ ಸಾವು|death

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಯಡೂರು ಗ್ರಾಮದ ಅಬ್ಬಿ‌ಫಾಲ್ಸ್ ನಲ್ಲಿ ಈಜಲು ಹೋದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ಶಬರಿ ಹೋಟೆಲ್ ಮಾಲೀಕರ ಮಗ ರಿಷಬ್ (20) ಮೃತಪಟ್ಟ ಯುವಕನೆಂದು ತಿಳಿದುಬಂದಿದೆ. ಸಹ್ಯಾದ್ರಿ ಪಾಲಿಟೇಕ್ನಿಕ್ ನಲ್ಲಿ ಓದುತ್ತಿದ್ದ ರಿಷಬ್ ಇಂದು ಪರೀಕ್ಷೆ ಮುಗಿಸಿಕೊಂಡು ತನ್ನ ಇಬ್ಬರು ಸ್ನೇಹಿತರೊಂದಿಗೆ ಅಬ್ಬಿ ಫಾಲ್ಸ್ ಗೆ ಈಜಲು ತೆರಳಿದ್ದಾರೆ. ಬಂಡೆಗಳ ನಡುವೆ ಸಿಲುಕಿಕೊಂಡಿದ್ದ ಮೃತದೇಹವನ್ನು ಶೋಧ ಕಾರ್ಯಾಚರಣೆ ನಡೆಸಿ ಹೊರತೆಗೆಯಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹ…

Read More