ಕ್ರೈಂ ಸುದ್ದಿ:
ಬಸ್ ಹಾಗೂ ಸ್ಕೂಟರ್ ನಡುವೆ ಡಿಕ್ಕಿ – ಚಕ್ರದಡಿ ಸಿಲುಕಿಕೊಂಡ ಸ್ಕೂಟರ್ : ಸ್ಥಳದಲ್ಲಿಯೇ ಓರ್ವ ಸಾವು|accident
ಶಿವಮೊಗ್ಗ : ಮಲ್ಲಿಗೇನಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ ಬಳಿ ಬೈಕ್ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಖಾಸಗಿ ಸಂಸ್ಥೆಗೆ ಸೇರಿದ ಬಸ್ ಹಾಗೂ ಸ್ಕೂಟರ್ ನಡುವೆ ಡಿಕ್ಕಿಯಾದ ರಭಸಕ್ಕೆ ಸ್ಕೂಟರ್ ಬಸ್ ಚಕ್ರದಡಿ ಸಿಲುಕಿಕೊಂಡಿದ್ದು, ಸಂಪೂರ್ಣ ನುಜ್ಜುಗುಜ್ಜಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೃತನನ್ನು ಜಾರ್ಖಂಡ್ ಮೂಲದ ಯುವಕ ಅನ್ಸಾರಿ ಎನ್ನಲಾಗುತ್ತಿದೆ. ಸ್ಥಳಕ್ಕೆ ಸಂಚಾರಿ ಪಶ್ಚಿಮ ಪೊಲೀಸರು ಭೇಟಿ ನೀಡಿದ್ದಾರೆ. ಮೃತ ದೇಹವನ್ನು ಮರಣೋತ್ತರ…
ಚೋರಡಿ ಬಳಿ ಸರಣಿ ಅಪಘಾತ – ಟ್ರಾಫಿಕ್ ಜಾಮ್|accident
ಶಿವಮೊಗ್ಗ ಜಿಲ್ಲೆಯ ಚೋರಡಿಯಲ್ಲಿ ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತವಾಗಿದ್ದು,ಅರ್ಧ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಆದ ಘಟನೆ ನಡೆದಿದೆ. ಖಾಸಗಿ ಬಸ್, ಗೂಡ್ಸ್ ವಾಹನ, ಲಾರಿ ಮತ್ತು ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದೆ. ವಾಹನಗಳಿಗೆ ಹಾನಿ ಉಂಟಾಗಿದೆ. ಆದರೆ ಯಾವುದೆ ವಾಹನದಲ್ಲಿರುವವರಿಗು ಸಮಸ್ಯೆಯಾಗಿಲ್ಲ. ಅದೃಷ್ಟವಶಾತ್ ಎಲ್ಲರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸಾಗರ ಕಡೆಯಿಂದ ಬಂದ ಖಾಸಗಿ ಬಸ್, ಚೋರಡಿ ಗ್ರಾಮದಲ್ಲಿ ಪ್ರಯಾಣಿಕರು ಇಳಿಯಲು ನಿಲ್ಲಿಸಲಾಗಿತ್ತು. ಈ ವೇಳೆ ಹಿಂಬದಿಯಿಂದ ಗೂಡ್ಸ್ ಆಟೋ ಬಂದಿದೆ. ಅದರ…
ಜೂಜಾಟದ ವೇಳೆ ಹಣಕಾಸಿನ ವಿಚಾರದಲ್ಲಿ ಗಲಾಟೆ – ಕೊಲೆಯಲ್ಲಿ ಅಂತ್ಯ|murder
ಭದ್ರಾವತಿ : ಹಣಕಾಸಿನ ವಿಚಾರದಲ್ಲಿ ಹುಟ್ಟಿಕೊಂಡ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅಂತರಗಂಗೆಯ ರಂಗನಾಥಪುರ ಗ್ರಾಮದಲ್ಲಿ ಸಂಭವಿಸಿದ ಈ ಜಗಳದಲ್ಲಿ ವೆಂಕಟೇಶ್ ಎಂಬವರ ಕೊಲೆಯಾಗಿದೆ. ರಂಗನಾಥ ಪುರ ಗ್ರಾಮದಲ್ಲಿ ಗಣಪತಿ ಪೆಂಡಾಲ್ ಬಳಿ ಚೌಕಾಬಾರ ಆಡುತ್ತಿದ್ದ ವೇಳೆ ಆಟವನ್ನ ನೋಡುತ್ತಿದ್ದ ವೆಂಕಟೇಶ್ ಗೆ ಅದೇ ಗ್ರಾಮದ ಪ್ರದೀಪ್ ಕಳೆದ 15 ದಿನಗಳ ಹಿಂದೆ ಹಣಕಾಸಿನ ವಿಚಾರದಲ್ಲಿ ನಡೆದ ಗಲಾಟೆ ವಿಚಾರವನ್ನು ಪ್ರಸ್ತಾಪಿಸಿ ಗಲಾಟೆ ಪ್ರಾರಂಭಿಸಿದ್ದಾನೆ. ಹಣಕಾಸಿನ ವಿಚಾರದಲ್ಲಿ ಗಲಾಟೆ ಶುರುವಾಗಿ ಪ್ರದೀಪ…
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗದ ಆಮಿಷ – ಯುವಕನಿಗೆ 72 ಸಾವಿರ ವಂಚನೆ|fraud
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗದ ಆಮಿಷವೊಡ್ಡಿ ಯುವಕನೊಬ್ಬನಿಗೆ 72 ಸಾವಿರ ರೂ. ವಂಚನೆ ಮಾಡಿರುವ ಬಗ್ಗೆ ಶಿವಮೊಗ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಳಲೂರಿನ ಯುವಕನೊಬ್ಬ ಈ ರೀತಿ ವಂಚನೆಗೊಳಗಾಗಿದ್ದಾನೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಗ್ರೌಂಡ್ ಸ್ಟಾಫ್ ಆಗಿ ನೇಮಕವಾಗಿದ್ದೀರಿ ಎಂದು ಕರೆ ಮಾಡಿ, ನೋಂದಣಿ ಹೆಸರಲ್ಲಿ ಸಾವಿರಾರು ರೂ. ಪಡೆದು ವಂಚಿಸಲಾಗಿದೆ. ಹೊಳಲೂರಿನ ಯುವಕ ಮೊಬೈಲ್ ಫೋನ್ ನಲ್ಲಿ ಏರ್ ಪೋರ್ಟ್ ಅಥಾರಿಟಿ ಅಪ್ಲಿಕೇಶನ್ ತೆರೆದು ತನ್ನ ಆಧಾರ್ ಕಾರ್ಡ್, ಮೊಬೈಲ್ ನಂಬರ್, ಹೆಸರು ದಾಖಲಿಸಿದ್ದರು….
ಅಂಗವಿಕಲ ಯುವತಿಯ ಮೇಲೆ ಅತ್ಯಾಚಾರ – ಆರೋಪಿಗೆ 10 ವರ್ಷ ಜೈಲು,40 ಸಾವಿರ ದಂಡ ವಿಧಿಸಿ ಕೋರ್ಟ್ ಆದೇಶ
ಶಿವಮೊಗ್ಗ ಜಿಲ್ಲೆಯಲ್ಲಿ ಅಂಗವಿಕಲೆ ಯುವತಿಯ ಕೈಕಾಲು ಕಟ್ಟಿ ಹಾಕಿ, ಬಾಯಿಗೆ ಬಟ್ಟೆ ತುರುಕಿ, ಬಲತ್ಕಾರದಿಂದ ಅತ್ಯಾಚಾರ ಎಸಗಿದಂತ ಆರೋಪಿಗೆ, ಇಂದು ನ್ಯಾಯಾಲಯವು 10 ವರ್ಷ ಜೈಲು ಶಿಕ್ಷೆ, 40 ಸಾವಿರ ದಂಡವನ್ನು ವಿಧಿಸಿ ಆದೇಶಿಸಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗಾರ್ಡರಗದ್ದೆ, ಹುರಳಿ ಗ್ರಾಮದ ಕೃಷ್ಣಯ್ಯ ಶೆಟ್ಟಿ ಎಂಬುವರ ಅಂಗವಿಕಲೆ ಮಗಳ ಮೇಲೆ, ಶಿವರಾಜಪುರ, ಸುರಳಿ ಬಾಳೆ ಬೈಲು ಗ್ರಾಮದ ಸತೀಶ್ ಎಂಬಾತ ಎಂಬಾತ, ತಮ್ಮ ಮನೆಯ ಪಕ್ಕದಲ್ಲಿಯೇ ಇದ್ದಂತ ಅಂಗವಿಕಲೆ ಯುವತಿಯನ್ನು ಕೈಕಾಲು ಕಟ್ಟಿ ಹಾಕಿ,…
ನವ ವಿವಾಹಿತ ಮಹಿಳೆ ಅನುಮಾನಸ್ಪದವಾಗಿ ಸಾವು|crimenews
ಶಿವಮೊಗ್ಗ : ಒಂದು ವರ್ಷ 2 ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು ಇದು ಆತ್ಮಹತ್ಯೆ ಎಂದು ಗಂಡನ ಮನೆಯ ಕಡೆಯವರು ಹೇಳಿದರೆ ಯುವತಿಯ ತವರು ಮನೆಯವರು ಇದು ಕೊಲೆ ಎಂದು ಆರೋಪಿಸಿದ್ದಾರೆ. ಸೋಮವಾರ ಸಂಜೆ ನಗರದ ಪ್ರತಿಷ್ಠಿತ ದೇವಸ್ಥಾನಕ್ಕೆ ವಾಲಗ ಊದಲು ಪತಿ ಚಂದ್ರಶೇಖರ್ ಸಿದ್ದರಾಗುತ್ತಿದ್ದು ಆ ವೇಳೆ ಯಾವುದೊ ವಿಚಾರದಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ. ಸ್ನಾನದ ಮನೆಗೆ ಪತಿ ಹೋದಾಗ ಪತ್ನಿ ಧನ್ಯಶ್ರೀ ನೇಣು ಹಾಕಿಕೊಂಡಿದ್ದಾರೆ ಎಂದು ಗಂಡನ ಮನೆಯವರು ಹೇಳಿದ್ದಾರೆ. ಧನ್ಯಶ್ರೀ(23)…
ಅಪರೂಪದ ವನ್ಯಜೀವಿ ಪ್ಲಾಪ್ ಶೆಲ್ ಆಮೆ ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಓರ್ವನ ಬಂಧನ|arrested
ರಿಪ್ಪನ್ಪೇಟೆ : ಅಪರೂಪದ ವನ್ಯಜೀವಿ ಪ್ಲಾಪ್ ಶೆಲ್ ಆಮೆಯನ್ನು ಅಕ್ರಮವಾಗಿ ಮಾರಾಟ ಮಾಡಲು ಪ್ರಯತ್ನಿಸುತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಅಪರೂಪದ ವನ್ಯ ಜೀವಿಯಾದ ಭಾರತೀಯ ಫ್ಲಾಪ್ಶೆಲ್ ಆಮೆ( ಲಿಸ್ಸೆಮಿಸ್ ಪಂಕ್ಟೇಟ್) ಸರೀಸೃಪವನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಆರೋಪಿ ಚಂದ್ರಹಾಸ್ ಎಂಬಾತನನ್ನು ಆಯನೂರು – ಹಾರನಹಳ್ಳಿ ರಾಜ್ಯ ಹೆದ್ದಾರಿ ಸಮೀಪದಲ್ಲಿ ಬಂಧಿಸಿ ವನ್ಯಜೀವಿಯನ್ನು ರಕ್ಷಿಸಲಾಗಿದೆ. ಭಾರತೀಯ ಫ್ಲಾಪ್ಶೆಲ್ ಆಮೆಯನ್ನು ರಕ್ಷಣೆ (ಲಿಸ್ಸೆಮಿಸ್ ಪಂಕ್ಟೇಟ್)ಮಾಡಿ ವನ್ಯಜೀವಿ ಸಂರಕ್ಷಣಾ…
ಆನಂದಪುರ : ಅಕ್ರಮ ಕಲ್ಲು ಕ್ವಾರೆ ಮೇಲೆ ದಿಡೀರ್ ದಾಳಿ – ಎರಡು ಲಾರಿ,ಜೆಸಿಬಿ ಮತ್ತು ಟ್ರಾಕ್ಟರ್ ವಶಕ್ಕೆ|mining
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಅಕ್ರಮ ಗಣಿಗಾರಿಕೆಯ ಮೇಲೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವತಿಯಿಂದ ದಾಳಿ ನಡೆಸಿ ಅಕ್ರಮ ಗಣಿಗಾರಿಕೆಗೆ ಬಳಸುತಿದ್ದ ಹಲವು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಆನಂದಪುರದಲ್ಲಿ ಪರವಾನಿಗೆ ಇಲ್ಲದ ಗಣಿಗಾರಿಕೆ ಪ್ರದೇಶಗಳಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಾದ ಶಶಿಕಲಾ ರವರ ನೇತೃತ್ವದ ತಂಡ ದಾಳಿ ನಡೆಸಿ ಅಕ್ರಮ ಗಣಿಗಾರಿಕೆ ನಡೆಸುವವರ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕಾರ್ಯಚರಣೆಯಲ್ಲಿ ಎರಡು ಲಾರಿ, ಕಲ್ಲು ಡ್ರೆಸ್ಸಿಂಗ್ ಮಾಡುವ ಎರಡು…
ಮಂಡಘಟ್ಟ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ : ಆನಂದಪುರದ ಸಮೀಪ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ|accident
ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಮಂಡಘಟ್ಟ ಗ್ರಾಪಂ ವ್ಯಾಪ್ತಿಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ನಡೆದಿದೆ. ರಿಪ್ಪನ್ ಪೇಟೆಯಿಂದ ಶಿವಮೊಗ್ಗದ ಕಡೆ ಹೋಗುವಾಗ ಐ20 ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಿಪ್ಪನ್ಪೇಟೆಗೆ ಟೈಲ್ಸ್ ಕೆಲಸಕ್ಕೆಂದು ಬಂದು ಹಿಂದಿರುಗುತ್ತಿರುವಾಗ ಈ ಘಟನೆ ನಡೆದಿದೆ. ಚಾಲಕ ದಸ್ತಗಿರಿ ಮತ್ತು ಜೊತೆಯಲ್ಲಿದ್ದ ಆರೀಫ್ ಗೆ ಸಣ್ಣಪುಟ್ಟಗಾಯಗಳಾಗಿದ್ದು ಮೆಗ್ಗಾನ್ ನಲ್ಲಿ ಹೊರರೋಗಿಯಾಗಿ ದಾಖಲಾಗಿ ಡಿಸ್ಚಾರ್ಜ್ ಆಗಿದ್ದಾರೆ. ಕುಂಸಿ ಪೊಲೀಸ್…
ಪ್ರೀತಿಸುವಂತೆ ಮಧ್ಯ ರಸ್ತೆಯಲ್ಲಿ ವಿದ್ಯಾರ್ಥಿನಿಗೆ ಪಾಗಲ್ ಪ್ರೇಮಿಯಿಂದ ಕಿರುಕುಳ – ಆಸಿಡ್ ದಾಳಿಯ ಬೆದರಿಕೆ |ಪ್ರಕರಣ ದಾಖಲು|crime
ಶಿವಮೊಗ್ಗ ಜಿಲ್ಲೆಯ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ ಪ್ರೀತಿಸಬೇಕು ಎಂದು ಪಾಗಲ್ ಪ್ರೇಮಿಯೊಬ್ಬ ಹಿಂಸೆ ನೀಡಿದ ಹಿನ್ನಲೆಯಲ್ಲಿ ಶಿವಮೊಗ್ಗ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ವಿದ್ಯಾರ್ಥಿನಿ ಕಾಲೇಜಿನ ಬಳಿಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ, ಆಕೆಯನ್ನು ಅಡ್ಡಗಟ್ಟಿದ ಯುವಕ ಆಕೆಗೆ ಪ್ರೀತಿಸಬೇಕು ಎಂದು ಹಿಂಸೆ ನೀಡಿದ್ದಾನೆ. ಅಲ್ಲದೆ ಪ್ರೀತಿಸದಿದ್ದರೇ ಆಸಿಡ್ ಹಾಕುವುದಾಗಿ ಬೆದರಿಕೆಯನ್ನು ಸಹ ಒಡ್ಡಿದ್ದಾನೆ ಎನ್ನಲಾಗಿದೆ. ಆಕೆಯ ಮೇಲೆ ಚಾಕುವಿನಿಂದ ಹಲ್ಲೆಗೆ ಮುಂದಾಗಿದ್ದಾನೆ. ತಕ್ಷಣ ಅಲ್ಲಿದ್ದ ಸ್ಥಳೀಯರು ಸ್ಥಳಕ್ಕೆ ಬಂದು ಆಕೆಯನ್ನು ರಕ್ಷಿಸಿದ್ದಾರೆ. ಜನ ಸೇರುತ್ತಲೇ ಎಸ್ಕೇಪ್…