Headlines

ಹುಂಚಾ – ಮಾನಸಿಕ ಖಿನ್ನತೆಯಿಂದ ವ್ಯಕ್ತಿ ಆತ್ಮಹತ್ಯೆ|sucide

ಹುಂಚಾ : ಮಾನಸಿಕ ಖಿನ್ನತೆಯಿಂದ ಬಳಲುತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದಲ್ಲಿ ನಡೆದಿದೆ.  ತಿಮ್ಮಪ್ಪ ಜಿ ಡಿ (54) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಕಳೆದ ಹಲವಾರು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತಿದ್ದ ಇವರು ಮಾನಸಿಕ ಖಿನ್ನತೆಗೊಳಗಾಗಿದ್ದರು, ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಶೌಚಗೃಹದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕೊಂಡೊಯ್ಯಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ…

Read More

ನೀರುಪಾಲಾಗಿದ್ದ ಹೊಸನಗರದ ಯುವಕ ಪ್ರಸನ್ನ ಭಟ್ ಮೃತದೇಹ ಪತ್ತೆ|death

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಾವತಿತೂರು ಕೆರೆಯಲ್ಲಿ ಈಜು ಹೊಡೆಯಲು ಹೋಗಿ ನೀರುಪಾಲಾಗಿದ್ದ ಪ್ರಸನ್ನ ಭಟ್ (26) ಮೃತ ದೇಹ ಪತ್ತೆಯಾಗಿದೆ. ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಆಗಿದ್ದ ಪ್ರಸನ್ನ ಭಟ್ ಹೊಸನಗರ ಪಟ್ಟಣದ ಗಣಪತಿ ದೇವಸ್ಥಾನದ ಅರ್ಚಕ ರೇಣುಭಟ್ ರವರ ಪುತ್ರ. ಸಂಜೆ ಕಾರಿನಲ್ಲಿ ಸ್ನೇಹಿತರ ಜೊತೆ ಬಂದಿದ್ದ ಪ್ರಸನ್ನ ಭಟ್ ಕೆರೆಗೆ ಈಜಲು ತೆರಳಿ ನೀರುಪಾಲಾಗಿದ್ದ.ರಾಮೇಶ್ವರಕ್ಕೆ ಹೊರಟಿದ್ದ ಪ್ರಸನ್ನ ಸಮಯವಿದ್ದ ಕಾರಣ ಸಹೋದರನ ಮನೆ ರಾಮನಗರದ ಕನಕಗಿರಿಗೆ ಹೋಗಿದ್ದರು. ಕನಕಪುರ…

Read More

ಹೊಸನಗರದ ಯುವಕ ಪ್ರಸನ್ನ ರಾಮನಗರದಲ್ಲಿ ನೀರುಪಾಲು – ತೀವ್ರ ಶೋಧ ಕಾರ್ಯಾಚರಣೆ|prasanna

ಹೊಸನಗರ ಮೂಲದ ಯುವಕನೊಬ್ಬ ರಾಮನಗರ ಜಿಲ್ಲೆಯ ಕನಕಗಿರಿ ಬಳಿಯ ಕೆರೆಯಲ್ಲಿ ನೀರುಪಾಲಾಗಿರುವ ಘಟನೆ ನಡೆದಿದೆ. ಹೊಸನಗರ ಟೌನ್ ನಿವಾಸಿ ಪ್ರಸನ್ನ ಭಟ್ ನೀರುಪಾಲಾಗಿರುವ ವ್ಯಕ್ತಿಯಾಗಿದ್ದಾರೆ. ಇಂದು ರಾಮಗನಗರದ ಜಿಲ್ಲೆಯ ಕನಕಗಿರಿಯ ಕೆರೆಗೆ ಸಹೋದರ ಕೌಶಿಕ್ ಜೊತೆ ಈಜಲು ತೆರಳಿದ್ದರು.ಈ ಸಂಧರ್ಭದಲ್ಲಿ ಈ ಅವಘಡ ನಡೆದಿದೆ. ಅಗ್ನಿಶಾಮಕ ದಳದಿಂದ ತೀವ್ರ ಶೋಧಕಾರ್ಯ ಮುಂದುವರೆದಿದೆ. ಶಿವಮೊಗ್ಗ ಜಿಲ್ಲಾ ಸಂಸದರಾದ ಬಿ ವೈ ರಾಘವೇಂದ್ರ ರವರ ನೆಚ್ಚಿನ ಫೋಟೋಗ್ರಾಫರ್ ಆಗಿದ್ದ ಪ್ರಸನ್ನ ಸಂಸದರು ಸಂಸತ್ ಇರುವ ಕಾರಣ ಕ್ಷೇತ್ರದಲ್ಲಿ ಇಲ್ಲದೇ ಇರುವುದರಿಂದ…

Read More

ಮಿಸ್ ಪೈರಿಂಗ್ ಪ್ರಕರಣ : ಗುಂಡು ತಗುಲಿದ್ದ ಯುವಕ ಸಾವು|miss fire

ಶಿವಮೊಗ್ಗ : ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಬಂದೂಕಿನಿಂದ ಹಾರಿದ ಗುಂಡು ತಗಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಮೃತಪಟ್ಟಿದ್ದಾನೆ.  ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಆತ ಕೊನೆಯುಸಿರೆಳೆದಿದ್ದಾನೆ. ವಿದ್ಯಾನಗರದಲ್ಲಿ ಮಂಜುನಾಥ ಓಲೇಕಾರ್ ಅವರ ಮನೆಯಲ್ಲಿ ಘಟನೆ ಸಂಭವಿಸಿದೆ. 12 ಗಂಟೆಗೆ ಸಂಭ್ರಮಾಚರಣೆ ವೇಳೆ ಮಂಜುನಾಥ ಓಲೇಕರ್ ತಮ್ಮ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಆದರೆ ಆ ಗುಂಡು ಮಂಜುನಾಥ ಓಲೇಕಾರ್ ಅವರ ಮಗನ ಸ್ನೇಹಿತ ವಿನಯ್ ಗೆ ತಗುಲಿತ್ತು. ಗಂಭೀರವಾಗಿ ಗಾಯಗೊಂಡಿದ್ದ ವಿನಯ್ ನನ್ನು ಮ್ಯಾಕ್ಸ್…

Read More

ಹೊಸವರ್ಷದ ಪಾರ್ಟಿಯಲ್ಲಿ ಗನ್ ಫೈರ್ – ಯುವಕನಿಗೆ ಗಾಯ : ಗುಂಡು ಹಾರಿಸಿದ ವ್ಯಕ್ತಿ ಸಾವು|miss fire

ಶಿವಮೊಗ್ಗ : ಹೊಸ ವರ್ಷದ ಪಾರ್ಟಿ ವೇಳೆ ಗುಂಡು ತಗುಲಿ ಯುವಕನೊಬ್ಬ ಗಾಯಗೊಂಡಿದ್ದಾನೆ. ಗುಂಡು ಹಾರಿಸಿದ ವ್ಯಕ್ತಿಗೆ ಹೃದಯಾಘಾತ ಸಂಭವಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಗರದ ವಿದ್ಯಾನಗರದಲ್ಲಿರುವ ಮಂಜುನಾಥ ಓಲೇಕರ್ ಎಂಬುವವರ ಮನೆಯಲ್ಲಿ ಪಾರ್ಟಿ ನಡೆಯುತ್ತಿದ್ದಾಗ ಘಟನೆ ಸಂಭವಿಸಿದೆ. ಕುಟುಂಬದವರೊಂದಿಗೆ ಹೊಸ ವರ್ಷಾಚರಣೆ ಮಾಡುತ್ತಿದ್ದರು.  ಸರಿಯಾಗಿ 12 ಗಂಟೆಗೆ ಮಂಜುನಾಥ ಓಲೇಕರ್ ಅವರು ತಮ್ಮ ಮನೆಯಲ್ಲಿದ್ದ ಗನ್ ತೆಗೆದುಕೊಂಡು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಮಂಜುನಾಥ ಓಲೇಕರ್ ಅವರು ಹಾರಿಸಿದ ಗುಂಡು ಮಿಸ್ ಫೈರ್ ಆಗಿದೆ. ಪಾರ್ಟಿ ಮಾಡುತ್ತಿದ್ದ ಯುವಕನಿಗೆ…

Read More

ರಿಪ್ಪನ್‌ಪೇಟೆ : ಮನೆ ಬೀಗ ಮುರಿದು ಕಳ್ಳತನ ನಡೆಸಿ – ಮನೆ ಮುಂಭಾಗವಿದ್ದ ಕಾರನ್ನು ಕದ್ದೊಯ್ದ ಕಳ್ಳರು|theft

ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂದಿರದ ಸಮೀಪ ತಡರಾತ್ರಿ ಮನೆ ಬಾಗಿಲು ಮುರಿದು ಕಳ್ಳತನ ನಡೆಸಿ ಮನೆ ಮುಂದೆ ನಿಲ್ಲಿಸಿದ್ದ ಕಾರು ಕದ್ದೊಯ್ದಿರುವ ಘಟನೆ ನಡೆದಿದೆ. ಜ್ಯೋತಿ ಮಾಂಗಲ್ಯ ಮಂದಿರ ಸಮೀಪದ ಕೋಳಿ ಫಾರಂ ಪಕ್ಕದಲ್ಲಿರುವ ಹರೀಶ್ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದೇ ಇರುವುದನ್ನು ಗಮನಿಸಿದ ಕಳ್ಳರು ಶುಕ್ರವಾರ ತಡರಾತ್ರಿ ಮನೆ ಮುಂದಿನ ಗೇಟ್ ಬೀಗ ಒಡೆದು ನಂತರ ಮನೆಯ ಬಾಗಿಲು ಮುರಿದು ಕಳ್ಳತನ ನಡೆಸುವುದರ ಜೊತೆಗೆ…

Read More

ಸಾಗರದಲ್ಲಿ ವಿದ್ಯಾರ್ಥಿನಿಯರ ಮೇಲೆ ಟಿಪ್ಪರ್ ಹರಿದ ಘಟನೆ | ಟಿಪ್ಪರ್ ಚಾಲಕನಾಗಿದ್ದ ಕೃಷ್ಣಾಚಾರಿ ಸಾವು|sagara

ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ನಲ್ಲಿ ಸಂಭವಿಸಿದ್ದ ಭೀಕರ ಅಪಘಾತದಲ್ಲಿ, ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿದ್ದರು.ಆ ಅಪಘಾತದಲ್ಲಿ ಟಿಪ್ಪರ್ ಚಾಲಕನಾಗಿದ್ದ ಕೃಷ್ಣಾಚಾರಿಯವರು ಸಾವನ್ನಪ್ಪಿದ್ಧಾರೆ.  ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಣ್ಣಮನೆ ಸೇತುವೆ ಬಳಿ ಜೋಗದ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿತ್ತು. ಈ ಆಕ್ಸಿಡೆಂಟ್​ನಲ್ಲಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಅವರಿಗೆ ತಕ್ಷಣವೇ ಚಿಕಿತ್ಸೆ ನೀಡಲಾಯ್ತಾದರೂ, ಈ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ಓರ್ವ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.  ಈ ಘಟನೆಯ ಬೆನ್ನಲ್ಲೆ ಸಾರ್ವಜನಿಕರು ಚಾಲಕನ ವಿರುದ್ಧ ಆಕ್ರೋಶ ಹೊರಹಾಕಿದ್ದರು.  ಇದರ ಬೆನ್ನಲ್ಲೆ ನಿನ್ನೆ ಅನಾರೋಗ್ಯ…

Read More

ಹೆದ್ದಾರಿ ಅಗಲೀಕರಣ ಅಧಿಕಾರಿಗಳ ಎಡವಟ್ಟು – ಎರಡು ಪ್ರತ್ಯೇಕ ರಸ್ತೆ ಅಪಘಾತ ಪ್ರಕರಣ : ಓರ್ವ ಗಂಭೀರ|accident

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಸದ್ಯ ರಸ್ತೆ ಅಗಲೀಕರಣ ಕಾಮಗಾರಿ ಜೋರಾಗಿ ನಡೆಯುತ್ತಿದೆ.ಶಾಸಕ ಹರತಾಳು ಹಾಲಪ್ಪ ರವರ ಅಣತಿಯಂತೆ ಕಾಮಗಾರಿಯು ವೇಗವಾಗಿ ನಡೆಯುತ್ತಿದ್ದೆಯಾದರೂ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿಗಳು ನಡೆಯುತ್ತಿರುವ ಸ್ಥಳಗಳಲ್ಲಿ ಅಪಘಾತಗಳು ಹೆಚ್ಚಾಗುತ್ತಿದೆ. ಇಂದು ರಸ್ತೆ ಅಗಲೀಕರಣ ಅವಾಂತರ ದಿಂದ ಎರಡು ಅಪಘಾತಗಳಾಗಿದೆ. ಒಂದು ಘಟನೆ ಗಣಪತಿ ಕೆರೆಯ ಬಳಿಯಲ್ಲಿ ಸಂಭವಿಸಿದರೆ, ಇನ್ನೊಂದು ಘಟನೆ ಬಸವನ ಹೊಳೆ ಬಳಿ ಸಂಭವಿಸಿದೆ.  ಬೈಕ್ ಅಪಘಾತ : ಇಂದು ಬೆಳಿಗ್ಗೆ ಟಿವಿಎಸ್​ ಎಕ್ಸ್​ಲ್ ಹಾಗೂ ಇನ್ನೊಂದು ಬೈಕ್​ನ ನಡುವೆ…

Read More

ವರದಕ್ಷಿಣೆ ಕಿರುಕುಳ : ನವವಿವಾಹಿತೆ ಆತ್ಮಹತ್ಯೆ|sucide

ವರದಕ್ಷಿಣೆ ಕಿರುಕುಳದಿಂದ ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ದಿಗಟೆಕೊಪ್ಪ ಗ್ರಾಮದಲ್ಲಿ ನಡೆದಿದೆ. ದಿಗಟೆಕೊಪ್ಪ ಗ್ರಾಮದ  23ವರ್ಷದ ಸುಶ್ಮಿತಾ ನೇಣಿಗೆ ಶರಣಾದ ಗೃಹಿಣಿಯಾಗಿದ್ದಾರೆ.ಕಳೆದ ಏಳು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದರು ಎಂದು ತಿಳಿದು ಬಂದಿದೆ. ಮೃತ ಸುಷ್ಮಿತಾ ಮನೆಯ ಶೌಚಗೃಹದಲ್ಲಿ ವೇಲ್ ನಿಂದ ನೇಣಿಗೆ ಶರಣಾಗಿದ್ದು, ಈ ಸಂಬಂಧ ಪತಿ ಹಾಗೂ ಅತ್ತೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ತನ್ನ ಮಗಳಿಗೆ ವರದಕ್ಷಿಣೆ ತರುವಂತೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಮೃತಳ ತಂದೆ…

Read More

ಆನಂದಪುರ ಸುತ್ತಮುತ್ತ ಪ್ರತ್ಯೇಕ ಮೂರು ರಸ್ತೆ ಅಪಘಾತ ಪ್ರಕರಣ – ಓರ್ವ ಸಾವು|accident

ಘಟನೆ 1: ಆನಂದಪುರ ಸಮೀಪ ಕೆ ಎಸ್ಆರ್ ಟಿ ಸಿ ಬಸ್ ಹಾಗೂ ಟೂರಿಸ್ಟ್ ಬಸ್ ನಡುವೆ ಮುಖಾಮುಖಿ ಡಿಕ್ಕಿ…!!! ಸಾಗರ ತಾಲೂಕಿನ ಆನಂದಪುರ ಸಮೀಪದ ಚೆನ್ನಕೊಪ್ಪದ ಬಳಿ  ಬೆಳ್ಳಂ ಬೆಳಗ್ಗೆ ಕೆ ಎಸ್ ಆರ್ ಟಿ ಸಿ ಹಾಗೂ ಟೂರಿಸ್ಟ್ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಬೆಂಗಳೂರಿನಿಂದ ಪ್ರವಾಸಕ್ಕೆಂದು ಜೋಗ ವೀಕ್ಷಣೆಗೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ…

Read More