Headlines

ಹುಂಚ : ಬೈಕ್‌ ನಿಲ್ಲಿಸಿ ಕೆರೆಗೆ ಹಾರಿದ ಯುವಕ – ಅಗ್ನಿಶಾಮಕ ದಳ ಸಿಬ್ಬಂದಿಗಳಿಂದ ಕಾರ್ಯಾಚರಣೆ – ಶವ ಪತ್ತೆ|Crime news

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಮುತ್ತಿನಕೆರೆಯ ಬಳಿ ಯುವಕನೊಬ್ಬ ಬೈಕ್ ನಿಲ್ಲಿಸಿ ಕೆರೆಗೆ ಹಾರಿ ಮೃತಪಟ್ಟಿರುವ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ಹುಂಚ ಸಮೀಪದ ಮುತ್ತಿನಕೆರೆ ಬಳಿ ಯುವಕನೊಬ್ಬ ತನ್ನ ಬೈಕ್ ಹಾಗೂ ಪಾದರಕ್ಷೆಗಳನ್ನು ಬಿಟ್ಟು ಕೆರೆಗೆ ಹಾರಿದ ಘಟನೆ ನಡೆದಿತ್ತು ಬೆಳಿಗ್ಗೆ ಬೈಕ್ ಹಾಗೂ ಪಾದರಕ್ಷೆಗಳನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದರು. ಕೆರೆಯಲ್ಲಿ ಇಂದು ಬೆಳಿಗ್ಗೆಯಿಂದ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಶವ ಪತ್ತೆ ಹಚ್ಚಿದ್ದಾರೆ. ಮೃತ…

Read More

ಕಾಲೇಜು ವಿದ್ಯಾರ್ಥಿನಿಯರ ಮೇಲೆ ಹರಿದ ಟಿಪ್ಪರ್ ಲಾರಿ – ಅಪಘಾತದ ಸಿಸಿಟಿವಿ ದೃಶ್ಯಾವಳಿ ಇಲ್ಲಿದೆ|CCTV

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಣ್ಣಮನೆ ಸೇತುವೆ ಬಳಿ ಜೋಗದ ರಸ್ತೆಯಲ್ಲಿ ನಿನ್ನೆ ಬೆಳಗ್ಗೆಯೇ ಭೀಕರ ಅಪಘಾತದ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದೆ. ಈ ಅಪಘಾತದಲ್ಲಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಅವರಿಗೆ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಪ್ರತಿಮಾ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.  ಇದೀಗ ಘಟನೆಯ ಸಿಸಿ ಟಿವಿ ದೃಶ್ಯವೊಂದು ಲಭ್ಯವಾಗಿದ್ದು, ದೃಶ್ಯದಲ್ಲಿ ಟ್ರಾಫಿಕ್​ನ ನಡುವೆ ಎಡಬದಿಯಲ್ಲಿ ನುಗ್ಗಿ ಬಂದ ಲಾರಿ, ತಮ್ಮ ಪಾಡಿಗೆ ರಸ್ತೆ ಬದಿಯಲ್ಲಿ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿರುವ ದೃಶ್ಯ …

Read More

ರಿಪ್ಪನ್‌ಪೇಟೆ : ಚಿರತೆ ಇದೆ ಹುಷಾರ್…. ಎಂದು ಬುದ್ದಿವಾದ ಹೇಳಿದ್ದಕ್ಕೆ ವ್ಯಕ್ತಿಯ ಮೇಲೆ ಬಿಯರ್ ಬಾಟಲ್ ನಿಂದ ಮಾರಣಾಂತಿಕ ಹಲ್ಲೆ|assault

ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊನ್ನಕೊಪ್ಪ ಗ್ರಾಮದಲ್ಲಿ ಚಿರತೆ ಇದೆ ಹುಷಾರು ಎಂದು ಹೇಳಿದ್ದಕ್ಕೆ ಬಿಯರ್ ಬಾಟಲ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊನ್ನಕೊಪ್ಪ ಗ್ರಾಮದ ದಿನೇಶ್ (42) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಇವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾತ್ರಿ 10-00 ಗಂಟೆ ಸುಮಾರಿಗೆ ತನ್ನ ಮಗನನ್ನು ಶಾಲಾ ಪ್ರವಾಸಕ್ಕೆ ಕಳುಹಿಸಲು ಅರಸಾಳು ಶಾಲೆಗೆ ಬಿಟ್ಟು ವಾಪಾಸ್ ಹಿಂದಿರುಗುತಿದ್ದ…

Read More

ವಿದ್ಯಾರ್ಥಿನಿಯರ ಮೇಲೆ ಟಿಪ್ಪರ್ ಲಾರಿ ಹರಿದ ಪ್ರಕರಣ -ಚಿಕಿತ್ಸೆ ಫಲಕಾರಿಯಾಗದೇ ಓರ್ವ ವಿದ್ಯಾರ್ಥಿನಿ ಸಾವು|Accident death

ಸಾಗರ ಟೌನ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಈ ಪೈಕಿ ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿತ್ತು. ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿತ್ತು. ಈ ಸಂದರ್ಭದಲ್ಲಿಯೇ ಆಕೆ ಸಾವನ್ನಪ್ಪಿದ್ದಾರೆ. ಮೃತಪಟ್ಟ ವಿದ್ಯಾರ್ಥಿನಿಯನ್ನು ಶಿಕಾರಿಪುರ ಮೂಲದ ಪ್ರತಿಮಾ(19) ಎಂದು ಗುರುತಿಸಲಾಗಿದೆ. ಬಿಸಿಎಂ ಹಾಸ್ಟೆಲ್​ನ ವಿದ್ಯಾರ್ಥಿನಿಯರು ಶಿಕಾರಿಪುರ ಹಾಗೂ ಸೊರಬ ಮೂಲದವರು ಎನ್ನಲಾಗಿದ್ದು, ಬೆಳಗ್ಗೆ ಕಾಲೇಜಿಗೆ ಅಂತಾ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.  ಸಾಗರ…

Read More

ಭೀಕರ ಲಾರಿ ಅಪಘಾತ – ಮೂವರು ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಹರಿದ ಲಾರಿ|Accident

ಕಾಲೇಜಿಗೆ ನಡೆದುಕೊಂಡು ಹೋಗುತಿದ್ದ ಮೂವರು ವಿದ್ಯಾರ್ಥಿನಿಯರಿಗೆ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ಸಾಗರ ಟೌನ್ ನಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಮೀಪದ ಸಣ್ಣಮನೆ ಸೇತುವೆ ಬಳಿಯಲ್ಲಿ ಭೀಕರ ಆಪಘಾತವೊಂದು ಸಂಭವಿಸಿದೆ. ಜಲ್ಲಿ ತುಂಬಿದ್ದ ಲಾರಿಯೊಂದು ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ.   ಚಾಲಕನ ಅಜಾಗರೂಕತೆಯಿಂದ ಘಟನೆ ನಡೆದಿದೆ ಎನ್ನಲಾಗುತ್ತಿಗೆ, ಹಿಂದಿನಿಂದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದ್ದಾನೆ. ಆಗಷ್ಟೆ ಕಾಲೇಜಿಗೆ ಹೊರಟಿದ್ದ ಹಾಸ್ಟೆಲ್​ವೊಂದರ ವಿದ್ಯಾರ್ಥಿನಿಯರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ಧಾರೆ.  ಮೂವರನ್ನು ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ,…

Read More

ರಿಪ್ಪನ್‌ಪೇಟೆ ಸಮೀಪದ ಬಿಳಿಕಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಕಾರು|Accident

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗವಟೂರು ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಉರುಳಿ ಬಿದ್ದ ಘಟನೆ ಇಂದು ಸಂಜೆ ನಡೆದಿದೆ.  ದಾವಣೆಗೆರೆ ಮೂಲದವರು ಕೊಲ್ಲೂರು ಮೂಕಾಂಬಿಕಾ ದೇವರ ದರ್ಶನ ಮುಗಿಸಿಕೊಂಡು ವಾಪಾಸು ದಾವಣಗೆರೆಗೆ ತೆರಳುತಿದ್ದಾಗ ಪಟ್ಟಣದ ಗವಟೂರು ಹೊಳೆಯ ಸಮೀಪದ ತಿರುವಿನಲ್ಲಿ ಕಿಯಾ (Ka 05 MF 7205) ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ.ಕಾರಿನಲ್ಲಿ ಇಬ್ಬರು ಪ್ರಯಾಣಿಸುತಿದ್ದರು. ಅದೃಷ್ಟವಶಾತ್ ಕಾರಿನಲ್ಲಿ ಪ್ರಯಾಣಿಸುತಿದ್ದವರಿಗೆ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ಮಳಲಿ ಮಠದ ಸೇತುವೆ ಬಳಿ ಬೈಕ್ ಅಪಘಾತ – ಶೆಟ್ಟಿಕೊಪ್ಪದ ಪ್ರದೀಪ್ ಸಾವು|Accident

ಮಳಲಿ‌ ಮಠದ ಸೇತುವೆ ಬಳಿ ಬೈಕ್ ಅಪಘಾತವಾಗಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ತಡರಾತ್ರಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಮಳಲಿ ಮಠದ ಸೇತುವೆ ಬಳಿ ಸೋಮವಾರ ರಾತ್ರಿ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಶೆಟ್ಟಿ ಕೊಪ್ಪದ ಪ್ರದೀಪ್ ಎಂಬುವರು ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ. ಚಲಿಸುತಿದ್ದ ಬೈಕ್ ಮಳಲಿ ಮಠದ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ದುರ್ಘಟನೆ ಜರುಗಿದೆ ಎಂದು ಹೇಳಲಾಗುತ್ತಿದೆ. ಕೋಣಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಪೊಲೀಸ್ ದಾಳಿ – ಗಾಂಜಾ ಮಾರಾಟ ಮಾಡುತಿದ್ದ ಇಬ್ಬರ ಬಂಧನ|Arrested

ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ ಗಾಂಜಾ, ನಗದು ಮತ್ತು ಮೊಬೈಲ್ ಫೋನುಗಳನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗದ ಗಾರ್ಡನ್ ಏರಿಯಾದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.  ಈ ವೇಳೆ ನಿಖಿಲ್ ಮತ್ತು ಭರತ್ ಎಂಬುವವರನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಯಿತು. ಅವರ ಬಳಿ ಇದ್ದ ಪ್ಲಾಸ್ಟಿಕ್ ಕವರ್ ನಲ್ಲಿ ಸುಮಾರು 450 ಗ್ರಾಂ ಗಾಂಜಾ ಪತ್ತೆಯಾಗಿದೆ. ಮಾರಾಟ ಮಾಡುವ…

Read More

24 ಗಂಟೆಯಲ್ಲಿ ಕಿಡ್ನಾಪ್ ಪ್ರಕರಣ ಬೇಧಿಸಿದ ಪೊಲೀಸರು : ಭದ್ರಾವತಿಯಲ್ಲಿ ಅಪಹರಣ – ಸಾಗರದಲ್ಲಿ ಆರೋಪಿಗಳು|crime news

ಅಪ್ರಾಪ್ತ ಬಾಲಕನನ್ನ ಅಪಹರಿಸಿ ಹಣದ ಬೇಡಿಕೆ ಇಟ್ಟ ಪ್ರಕರಣವನ್ನ 24 ಗಂಟೆಯಲ್ಲಿ ಬೇಧಿಸಿದ ಭದ್ರಾವತಿ ನ್ಯೂ ಟೌನ್ ಪೊಲೀಸರು ಐವರು ಆರೋಪಿಯನ್ನ ಬಂಧಿಸಿದ್ದಾರೆ. ಓರ್ವನ ಬಂಧನಕ್ಕಾಗಿ ಭರ್ಜರಿ ಬಲೆಯನ್ನೇ ಹೆಣೆದಿದ್ದಾರೆ. ಘಟನೆಯ ಹಿನ್ನಲೆ: ಭದ್ರಾವತಿ ಅಂಡರ್ ಬ್ರಿಡ್ಜ್ ಬಳಿಯಿರುವ ಎಲ್ಐಸಿ ಕಚೇರಿ ಬಳಿ ಎಳನೀರು ಮಾರಾಟ ಮಾಡುತ್ತಿದ್ದ ಅಪ್ರಾಪ್ತ ಬಾಲಕನ ಬಳಿ ಬಂದ ಅಪರಿಚತನೋರ್ವ ನನ್ನ ಬಳಿ ಹಣ ಖಾಲಿಯಾಗಿದೆ. ಫೋನ್ ಪೇ ನೂ ಇಲ್ಲ. ನಾಲ್ಕು ಎಳನೀರು ಕೊಚ್ಚಿಕೊಂಡು 100 ಮೀಟರ್ ದೂರದಲ್ಲಿರುವ ವ್ಯಾನ್ ನಲ್ಲಿರುವ ಸ್ನೇಹಿತನ…

Read More

ಬೈಕ್ ಹಾಗೂ ಕಾರಿನ ನಡುವೆ ಅಪಘಾತ – ಬೈಕ್ ಸವಾರನ ಕಾಲು ಮುರಿತ..!!!!|accident

ಕಾರು ಹಾಗೂ ಬೈಕ್ ನಡುವೆ ಅಪಘಾತ ನಡೆದು ವ್ಯಕ್ತಿಯೊಬ್ಬನ ಕಾಲು ಮುರಿತವಾದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಐಗಿನಬೈಲು ತಿರುವಿನನಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರನ ಕಾಲು ಮುರಿದಿದೆ ಎಂಬ ಮಾಹಿತಿ ಲಭ್ಯವಾಗಿದೆ.ಶಿರಸಿಯಿಂದ ಶಿವಮೊಗ್ಗದ ಕಡೆಗೆ ತೆರಳುತಿದ್ದ ಬೈಕ್ ಹಾಗೂ ಶಿವಮೊಗ್ಗದಿಂದ ಸಾಗರದ ಕಡೆ ಸಾಗುತ್ತಿದ್ದ ಕಾರಿನ ನಡುವೆ ಐಗಿನ ಬೈಲ್ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಗಾಯಾಳು ಬೈಕ್ ಸವಾರನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು,ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ. ಸಾಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ…

Read More