ಕ್ರೈಂ ಸುದ್ದಿ:
ಹುಂಚ ಸಮೀಪದ ಸರ್ಕಾರಿ ಶಾಲೆಯ ಇಬ್ಬರು ಶಿಕ್ಷಕರ ವಿರುದ್ದ ಪೋಕ್ಸೋ ಪ್ರಕರಣ ದಾಖಲು|pocso
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಸಮೀಪದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಇಬ್ಬರು ಶಿಕ್ಷಕರ ವಿರುದ್ಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಕಳೆದೊಂದು ತಿಂಗಳ ಹಿಂದೆ 5ನೇ ತರಗತಿ ವಿದ್ಯಾರ್ಥಿನಿಯೊಂದಿಗೆ ಶಿಕ್ಷಕ ಅಸಭ್ಯವರ್ತನೆ ತೋರಿದ್ದು ನೊಂದ ಬಾಲಕಿ ತಾಯಿಯ ಬಳಿ ಘಟನೆಯ ವಿವರವನ್ನು ತಿಳಿಸಿದ್ದಾಳೆ. ಆಗ ಬಾಲಕಿಯ ತಾಯಿ ಶಾಲೆಯ ಶಿಕ್ಷಕಿಯಲ್ಲಿ ಶಿಕ್ಷಕನಿಗೆ ಬುದ್ದಿ ಹೇಳಲು ಹೇಳಿದ್ದಾರೆ. ಆದರೆ ಆದರೆ ಶಿಕ್ಷಕಿ ಘಟನೆಯ ಬಗ್ಗೆ ಪಾಲಕರಿಗೆ ಯಾವುದೇ ಮಾಹಿತಿ ನೀಡಿಲ್ಲ. ಬಾಲಕಿಯ…
ಆಗುಂಬೆ ಘಾಟಿಯಲ್ಲಿ ಕ್ಯಾಂಟರ್ ಲಾರಿ ಅಪಘಾತ – ಟ್ರಾಫಿಕ್ ಜಾಮ್ ನಿಂದ ಪರದಾಡಿದ ಪ್ರಯಾಣಿಕರು|agumbe
ಆಗುಂಬೆ ಘಾಟಿಯಲ್ಲಿ ಕ್ಯಾಂಟರ್ ಅಪಘಾತ – ಟ್ರಾಫಿಕ್ ಜಾಮ್ ತೀರ್ಥಹಳ್ಳಿ: ತಾಲೂಕಿನ ಆಗುಂಬೆ ಘಾಟಿಯಲ್ಲಿ ಕ್ಯಾಂಟರ್ ಲಾರಿ ಅಪಘಾತಕ್ಕಿಡಾಗಿದ್ದು ಘಾಟಿ ಸಂಚಾರದಲ್ಲಿ ಕಿ.ಮಿ.ಗಟ್ಟಲೇ ವಾಹನಗಳು ಗಂಟೆಗಟ್ಟಲೇ ನಿಂತು ಭಾರೀ ಸಮಸ್ಯೆಗೆ ಕಾರಣವಾಯಿತು. ಘಾಟಿಯ 9ನೇ ತಿರುವಿನಲ್ಲಿ ಘಾಟಿ ಇಳಿಯುತ್ತಿದ್ದ ವೇಳೆ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಲಾರಿ ಡಿಕ್ಕಿ ಹೊಡೆದಿದೆ. ಯಾವುದೇ ಅನಾಹುತ ಸಂಭವಿಸಿಲ್ಲ. ಆದರೆ ಉಡುಪಿ ಭಾಗದಿಂದ ಹಾಗೂ ತೀರ್ಥಹಳ್ಳಿ ಮಾರ್ಗದಿಂದ ಹೋಗಿ ಬರುತಿದ್ದ ವಾಹನ ಸವಾರರು ಮತ್ತು ಪ್ರಯಾಣಿಕರು ಗಂಟೆಗಟ್ಟಲೆ ಪರದಾಟ ನಡೆಸಿದರು.
ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಇಬ್ಬರು ಯುವಕರ ಬಂಧನ|arrest
ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯ ಮಾರಿಗುಡ್ಡದ ಹೆಲಿಪ್ಯಾಡ್ ಬಳಿ ಇಬ್ಬರು ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದು ಈ ಆರೋಪಿಗಳನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಟ್ಟೆಮಲ್ಲಪ ಗ್ರಾಮದ ಫಯಾಜ್ ಬಿನ್ ಕರೀಂ ಸಾಬ್ ಹಾಗೂ ಮೊಹಮ್ಮದ್ ತಾಯಿಜ್ ಬಿನ್ ಮೊಹಮ್ಮದ್ ಎಂಬುವವರನ್ನು ಬಂಧಿಸಲಾಗಿದೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ನೀರರಾಜ್ ನರಲಾರರವರ ಆದೇಶದ ಮೇರೆಗೆ ಪೊಲೀಸ್ ಸಿಬ್ಬಂದಿಗಳು ಕೇಸ್ ದಾಖಲಿಸಿಕೊಂಡು ತನಿಖೆ ಕಾರ್ಯ ಕೈಗೊಂಡಿದ್ದಾರೆ.
ರಿಪ್ಪನ್ಪೇಟೆ – ಕೊಳೆತ ಸ್ಥಿತಿಯಲ್ಲಿ ಪುರುಷನ ಶವ ಪತ್ತೆ|deadbody
ರಿಪ್ಪನ್ಪೇಟೆ – ಕೊಳೆತ ಸ್ಥಿತಿಯಲ್ಲಿ ಪುರುಷನ ಶವ ಪತ್ತೆ ರಿಪ್ಪನ್ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ಬೆಟ್ಟಿನಕೆರೆ ಗ್ರಾಮದ ಮನೆಯೊಂದರಲ್ಲಿ ಪುರುಷನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೆಟ್ಟಿನಕೆರೆ ನಿವಾಸಿ ಜೋಸ್ (ಆಲುವ) ಎಂಬ ವ್ಯಕ್ತಿ ಮೃತಪಟ್ಟಿದ್ದಾನೆ ಎನ್ನಲಾಗುತಿದೆ. ಈತನು ಮನೆಯಲ್ಲಿ ಒಬ್ಬನೇ ವಾಸ ಮಾಡುತಿದ್ದು ಪತ್ನಿ ಮತ್ತು ಮಕ್ಕಳು ಹಲವು ವರ್ಷಗಳ ಹಿಂದೆಯೇ ಈತನನ್ನು ಬಿಟ್ಟು ಹೋಗಿದ್ದರು. ಮನೆಯಲ್ಲಿ ಒಬ್ಬನೇ ವಾಸ ಮಾಡುತಿದ್ದ ಈತನು ನಾಲ್ಕು ದಿನಗಳ ಹಿಂದೆ ಈತ ಮೃತಪಟ್ಟಿರಬಹುದು ಎನ್ನಲಾಗುತ್ತಿದೆ. ಈತ ಮನೆಮನೆಗೆ…
ಡೆತ್ ನೋಟ್ ಬರೆದಿಟ್ಟು ಯಡಗುಡ್ಡೆ ಬೆಟ್ಟದ ಮೇಲೆ ಅಗ್ನಿಸ್ಪರ್ಶ ಮಾಡಿಕೊಂಡ ಮಹಿಳೆ…!!!! ಜ್ಯೋತಿಷಿ ಮಾತು ಕೇಳಿ ಮೋಕ್ಷ ಪ್ರಾಪ್ತಿಗೆ ಆತ್ಮಹತ್ಯೆ ಮಾಡಿಕೊಂಡರಾ ಜಯಶ್ರೀ…????ಈ ಸುದ್ದಿ ನೋಡಿ|sucide
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಯಡಗುಡ್ಡೆ ಗ್ರಾಮದಲ್ಲಿ ನಾಪತ್ತೆಯಾಗಿದ್ದ ಮಹಿಳೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕಳೆದ ಸೋಮವಾರದಿಂದ ಹೊದಲ ಗ್ರಾಪಂ ವ್ಯಾಪ್ತಿಯ ಯಡಗುಡ್ಡೆ ಸಮೀಪದ ಹೊಸಳ್ಳಿ ಗ್ರಾಮದ ಜಯಶ್ರೀ (52) ಎಂಬುವರು ನಾಪತ್ತೆಯಾಗಿದ್ದರು. ಜ. 23 ರಂದು ಸಂಜೆ ವಾಕಿಂಗ್ ಹೋದವರು ಮನೆಗೆ ಹಿಂದಿರುಗಿಲ್ಲ. ಎಂದು ದೂರು ದಾಖಲಾಗಿತ್ತು. ಜ. 27ರಂದು ಯಡಗುಡ್ಡೆ ಗ್ರಾಮದ ಗುಡ್ಡದ ಮೇಲೆ ಜಯಶ್ರೀ ಅವರ ಶವ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ….
ಕ್ಯಾಂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರಿಗೆ ತೀವ್ರ ಗಾಯ|accident
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪ ಕ್ಯಾಂಟರ್ ಹಾಗೂ ಕಾರಿನ ನಡುವೆ ಡಿಕ್ಕಿ…!!! ಸಾಗರ ತಾಲೂಕಿನ ಆನಂದಪುರ ಪೊಲೀಸ್ ಸ್ಟೇಷನ್ ಸಮೀಪದಲ್ಲಿ ಕ್ಯಾಂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಆನಂದಪುರದಿಂದ ಸಾಗರದ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ಹಾಗೂ ಸಿದ್ದೇಶ್ವರ ಕಾಲೋನಿಯಿಂದ ಆನಂದಪುರದ ಕಡೆಗೆ ಸಾಗುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿನ(KA 17 M 9578) ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಈ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ತೀವ್ರವಾದ ಗಾಯವಾಗಿದ್ದು…
ಆಸ್ಪತ್ರೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ತೀರ್ಥಹಳ್ಳಿ ಮೂಲದ ರೋಗಿ|sucide
ಶಿವಮೊಗ್ಗ : ನಗರದ ಪ್ರತಿಷ್ಠಿತ ಮಾನಸಿಕ ಚಿಕಿತ್ಸಾ ಆಸ್ಪತ್ರೆಯಲ್ಲೇ ಮಾನಸಿಕ ಅಸ್ವಸ್ಥ ರೋಗಿಯೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕಳೆದ 20 ವರ್ಷದಿಂದ ಮಾನಸಿಕ ಅಸ್ವಸ್ಥರಾಗಿದ್ದ ತೀರ್ಥಹಳ್ಳಿ ತಾಲೂಕಿನ ಸಿಂಗನ ಬಿದರಿ ಗ್ರಾಮದ ಶ್ರೀನಿವಾಸ್ ರವರನ್ನು ವಾರದ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಹೋದರ ತಿಂಡಿ ತರಲು ಹೊರಗೆ ಹೋದಾಗ ಶ್ರೀನಿವಾಸ್ ಮೇಲೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜ.29 ರಂದು ಆಸ್ಪತ್ರೆಗೆ ದಾಖಲಾದ ಶ್ರೀನಿವಾಸ್ ಆಸ್ಪತ್ರೆಯ ಖಾಲಿ ರೂಂ ಗೆ ಹೋಗಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ….
ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ನವಜಾತ ಶಿಶು ಸಾವು – ಆಸ್ಪತ್ರೆಯ ಗಾಜು ಒಡೆದು ಕುಟುಂಬಸ್ಥರ ಆಕ್ರೋಶ|hospital
ಶಿವಮೊಗ್ಗ: ನಗರದ ಸುಬ್ಬಯ್ಯ ಆಸ್ಪತ್ರೆಯಲ್ಲಿ ಹೆರಿಗೆಯಾದ ಕೆಲವೇ ಗಂಟೆಯಲ್ಲಿ ನವಜಾತ ಶಿಶು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಸಾವಿಗೀಡಾಗಿದೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಪೂಜಿ ನಗರದ ಭಾಗ್ಯ ಮತ್ತು ನಾಗರಾಜ್ ದಂಪತಿಗಳಿಗೆ ಚೊಚ್ಚಲ ಗಂಡು ಮಗುವಿಗೆ ನಿನ್ನೆ ಜನ್ಮ ನೀಡಿದ್ದಾರೆ. ಮಗು ಹುಟ್ಟಿದ ತಕ್ಷಣ ತೂಕಹಾಕಿಲ್ಲ ಮಗುವಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡದೆ ವೈದ್ಯರೇ ಸಾವಿಗೆ ಕಾರಣವಾಗಿದ್ದಾರೆ ಎಂದು ಪೋಷಕರು ಮತ್ತು ಪೋಷಕರ ಕಡೆಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗು ಸಾವಿಗೆ ಮುಂಚೆ ವೈದ್ಯರು ಉಸಿರಾಟ ತೊಂದರೆ…
ಬಸ್ ಮತ್ತು ಬೈಕ್ ನಡುವೆ ಅಪಘಾತ – ಇಬ್ಬರು ಯುವಕರು ಸ್ಥಳದಲ್ಲೇ ಸಾವು|accident
ಶಿವಮೊಗ್ಗದ ಕುಂಸಿ ಬಳಿಯ ಕೆರೆ ಎರಿ ಮೇಲೆ ಶ್ರೀನಿವಾಸ್ ಬಸ್ ಹಾಗೂ ಬೈಕ್ ನಡುವೆ ರಸ್ತೆ ಅಪಘಾತ ವಾಗಿದ್ದು ಬೈಕ್ ಸವಾರರಿಬ್ಬರು ಸ್ಥಳದಲ್ಲೆ ಮೃತಪಟ್ಟ ಘಟನೆ ವರದಿಯಾಗಿದೆ. ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಹೋಗುತ್ತಿದ್ದ ಶ್ರೀನಿವಾಸ್ ಬಸ್ ಹಾಗೂ ಹೊಸನಗರ ದಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಬೈಕ್ ಗಳ ನಡುವೆ ಈ ಘಟನೆ ನಡೆದಿದೆ. ಮೃತಪಟ್ಟ ಯುವಕರು ಶಿವಮೊಗ್ಗದ ಗುರುಪುರ ಮತ್ತು ಇಂದಿರಾ ನಗರದ ನಿವಾಸಿಗಳು ಎಂದು ತಿಳಿದು ಬಂದಿದೆ. ಮೃತದೇಹವನ್ನು ಶಿವಮೊಗ್ಗದ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಕುಂಸಿ ಠಾಣೆ…
ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಯ ಮೇಲೆ ದಾಳಿ – ಓರ್ವನ ಬಂಧನ|arrest
ಶಿವಮೊಗ್ಗ : ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಯ ಮೇಲೆ ವಿನೋಬ ನಗರ ಪೊಲೀಸರು ದಾಳಿ ನಡೆಸಿ ಎರಡು ಡೊಮೆಸ್ಟಿಕ್ ಗ್ಯಾಸ್ ಸಿಲಿಂಡರ್, ಎರಡು 3 ಕೆಜಿಯ ಸಿಲಿಂಡರ್, ರೀಫಿಲ್ಲಿಂಗ್ ರಾಡು ಪೈಪ್ ಗಳನ್ನ ವಶಪಡಿಸಿಕೊಳ್ಳಲಾಗಿದೆ ಓರ್ವನನ್ನ ಬಂಧಿಸಲಾಗಿದೆ. ವಿನೋಬ ನಗರದ 5 ನೇ ತಿರುವಿನಲ್ಲಿ ಬಸವೇಶ್ವರ ಎಂಟರ್ ಪ್ರೈಸಸ್ ನಲ್ಲಿ ಪರವಾನಗಿ ಇಲ್ಲದೆ ಸಾರ್ವಜನಿಕವಾಗಿ ಗ್ಯಾಸ್ ರೀಫಿಲಿಂಗ್ ಮಾಡುತ್ತಿದ್ದ ಜಾಗದ ಮೇಲೆ ಪಿಐ ರವಿಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಸಣ್ಣ ಪೈಪ್ ಮೂಲಕ ದೊಡ್ಡ ಸಿಲಿಂಡರ್ ನಿಂದ…