Headlines

ರಿಪ್ಪನ್ ಪೇಟೆ ಸುತ್ತಮುತ್ತಲಿನ ದೇವಸ್ಥಾನಗಳಲ್ಲಿ ಕಳ್ಳತನ ಪ್ರಕರಣ – ಸರ್ಕಾರಿ ಶಾಲೆ ಶಿಕ್ಷಕ ಸೇರಿ ಇಬ್ಬರ ಬಂಧನ

ರಿಪ್ಪನ್‌ಪೇಟೆ : ಇತ್ತೀಚಿಗೆ ರಿಪ್ಪನ್ ಪೇಟೆ ಸುತ್ತಮುತ್ತಲಿನ ಮೂರು ದೇವಸ್ಥಾನಗಳಲ್ಲಿ ಬೀಗ ಒಡೆದು ಕಳ್ಳತನ ಮಾಡಿದ್ದ ಆರೋಪಿಗಳನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಲಿಂಗದೇವರಕೊಪ್ಪ ಸರ್ಕಾರಿ ಶಾಲೆಯ ಶಿಕ್ಷಕ ವಸಂತ್ ಕುಮಾರ್ ಹಾಗೂ ಗುಡ್ಡದೇವರನಳ್ಳಿ ಗ್ರಾಮದ ಸಲೀಂ ಎಂಬಾತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶೋಕಿ ಜೀವನ ನಡೆಸಲು ಕಳೆದ ಮೂರು ವರ್ಷಗಳಿಂದ ಕಳ್ಳತನ ನಡೆಸುತಿದ್ದ ಇವರು ಒಮ್ಮೆಯು ಸಿಕ್ಕಿಬಿದ್ದಿರಲಿಲ್ಲ. ಆರೋಪಿತರು ಕಳೆದ 3-4 ವರ್ಷಗಳಿಂದ ಈ ರೀತಿಯ ಕಳ್ಳತನ ಪ್ರಕರಣದಲ್ಲಿ ಬಾಗಿಯಾಗಿದ್ದು…

Read More

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಟೊಯೋಟಾ ಫಾರ್ಚ್ಯೂನರ್ ಕಾರು ಪಲ್ಟಿ|Accident

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಸೂಡುರೂ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಟೊಯೋಟಾ ಫಾರ್ಚುನರ್ ಕಾರು ಪಲ್ಟಿಯಾದ ಘಟನೆ ನಡೆದಿದೆ. ಸೂಡೂರು ಗೇಟ್ ಬಳಿ ಚಾಲಕನು ಅತಿ ವೇಗ ಹಾಗೂ ಅಜಾಗರುಕತೆಯಿಂದ ವಾಹನ ಚಲಾಯಿಸಿದ ಪರಿಣಾಮ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕುಂದಾಪುರ ಮೂಲದವರಾದ ಉದಯ್ ಕುಮಾರ್ ಕುಟುಂಬ ಬೆಂಗಳೂರಿನಲ್ಲಿ ವಾಸಿಸುತಿದ್ದು ಮದುವೆ ಕಾರ್ಯಕ್ರಮದ ನಿಮಿತ್ತ ಕುಂದಾಪುರಕ್ಕೆ ಬಂದು ವಾಪಾಸ್ ತೆರಳುವಾಗ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,ಒಬ್ಬರಿಗೆ ಗಂಭೀರ ಗಾಯವಾಗಿದೆ.ಗಾಯಾಳುಗಳನ್ನು ಶಿವಮೊಗ್ಗದ…

Read More

ಆಸ್ತಿಯಲ್ಲಿ ಪಾಲು ಕೊಡದೇ ಎರಡನೇ ಮದುವೆಯಾದ ಅಪ್ಪ – ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಮಕ್ಕಳು|Murder mystery

ಆಸ್ತಿಯಲ್ಲಿ ಪಾಲು ಕೊಡದೆ, ಎರಡನೇ ಮದುವೆಯಾಗಿ ಮಗು ಮಾಡಿಕೊಂಡ ಅಪ್ಪನನ್ನು ಮೂವರು ಮಕ್ಕಳೇ ಸುಪಾರಿ ಕೊಟ್ಟು ಕೊಲ್ಲಿಸಿದ ಘಟನೆ ಶಿಕಾರಿಪುರದಲ್ಲಿ ನಡೆದಿದೆ.  ತಾಲೂಕಿನ ಶಿರಾಳಕೊಪ್ಪದಲ್ಲಿ ನಡೆದ ಘಟನೆಯನ್ನು ಪೊಲೀಸರು ಭೇದಿಸಿದ್ದಾರೆ. ನ. 29ರಂದು ಕೆಎಸ್‌ಆರ್‌ಪಿಯ ನಿವೃತ್ತ ಎಸ್‌ಐ ನಾಗೇಂದ್ರಪ್ಪ ಎಂಬವರ ಶವ ಚರಂಡಿಯಲ್ಲಿ ಸಿಕ್ಕಿತ್ತು. ಇವರು ಶಿರಾಳಕೊಪ್ಪದ ಬೋವಿ ಗ್ರಾಮದವರು. ಆಸ್ತಿ ವಿಚಾರದಲ್ಲಿ ಕೊಲೆ ಶಂಕಿಸಿದ್ದ ಪೊಲೀಸರು ಆ ದಿಕ್ಕಿನಲ್ಲಿ ತನಿಖೆ ನಡೆಸಿ ಆರೋಪಿಗಳನ್ನು ಕಂಬಿ ಎಣಿಸುವಂತೆ ಮಾಡಿದ್ದಾರೆ. ಬೋವಿ ಗ್ರಾಮದ ರಿಜ್ವಾನ್, ಹಬೀಬುಲ್ಲಾ, ಸುಹೇಲ್ ಎಂಬವರಿಂದ…

Read More

ವಿದ್ಯುತ್ ಸ್ಪರ್ಶದಿಂದ ಪತ್ನಿಯನ್ನು ರಕ್ಷಿಸಲು ಹೋದ ಪತಿ ಸಾವು – ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯಕ್ಕೆ ರೈತನೊಬ್ಬನ ದುರ್ಮರಣ|Electric shock

ರಿಪ್ಪನ್‌ಪೇಟೆ : ವಿದ್ಯುತ್ ತಂತಿ ತುಳಿದು ರೈತನೋರ್ವ ಸಾವನ್ನಪ್ಪಿರುವ ಘಟನೆ ಇಲ್ಲಿನ ಸಮೀಪದ ನಂಜವಳ್ಳಿ ಗ್ರಾಮದಲ್ಲಿ  ನಡೆದಿದೆ. ಹರತಾಳು ಗ್ರಾಪಂ ವ್ಯಾಪ್ತಿಯ ಹರತಾಳು ಗ್ರಾಮದ ರೈತ ಶೇಷಗಿರಿ(45) ಮೃತ ದುರ್ದೈವಿಯಾಗಿದ್ದಾರೆ. ಇಂದು ಬೆಳಗ್ಗೆ ಮನೆಯ ಬಳಿ ಶೇಷಗಿರಿ ರವರ ಪತ್ನಿ ಹೂ ಕೀಳಲು ಹೋದಾಗ ಅವರಿಗೆ ವಿದ್ಯುತ್ ಸ್ಪರ್ಶಿಸಿ ಕೂಗಿದ್ದಾರೆ ಕೂಡಲೇ ಅವರನ್ನು ರಕ್ಷಿಸಲು ಹೋದ ಶೇಷಗಿರಿ ರವರು ಪಾದರಕ್ಷೆ ಧರಿಸದೆ ವಿದ್ಯುತ್ ತಂತಿಯನ್ನು ತುಳಿದಿದ್ದಾರೆ. ಮೂಲತಃ ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿ ಗ್ರಾಮದ ಒಡ್ಡಿನಬೈಲು ನಿವಾಸಿಯಾದ ಇವರು…

Read More

ಪೋಟೋ ಕ್ಲಿಕ್‌ ಮಾಡುವಾಗ ಹೃದಯಾಘಾತದಿಂದ ಫೋಟೋಗ್ರಾಫರ್ ಸಾವು|photographer

ಸಾಗರ ನಗರದ ವೃತ್ತಿನಿರತ ಫೋಟೊಗ್ರಾಫರ್ ಒಬ್ಬರು ಕಾರ್ಯಕ್ರಮವೊಂದರಲ್ಲಿ ಫೋಟೊ ತೆಗೆಯುತ್ತಿರುವಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ. ತಾಲೂಕಿನ ಹೆಗ್ಗೋಡು ಸಮೀಪದ ಹೆಬ್ಬೈಲಿನ ಸೋಮೇಶ್ವರ ದೇವಸ್ಥಾನದಲ್ಲಿ ಇಂದು ಸಂಜೆ ಈ ಘಟನೆ ನಡೆದಿದ್ದು ಇಲ್ಲಿನ ರಾಮನಗರದ ನಿವಾಸಿ ಚಂದ್ರು (42) ಮೃತ ದುರ್ದೈವಿ. ಕಾರ್ಯಕ್ರಮದಲ್ಲಿ ಫೋಟೊ ತೆಗೆಯುವ ವೇಳೆ ಚಂದ್ರು ಕುಸಿದು ಬಿದ್ದರು. ತಕ್ಷಣ ಅವರನ್ನು ನಗರದ ಉಪವಿಭಾಗೀಯ ಆಸ್ಪತ್ರೆಗೆ ಸೇರಿಸುವ ಪ್ರಯತ್ನ ನಡೆಯಿತಾದರೂ ಆ ವೇಳೆಗೆ ಕೊನೆಯುಸಿರೆಳೆದಿದ್ದರು. ನಗರದ ಶಿಲ್ಪ ಸ್ಟುಡಿಯೋ ಮಾಲೀಕರಾಗಿದ್ದ…

Read More

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವು,ಓರ್ವ ಗಂಬೀರ|Accident

ಲಾರಿ ಮತ್ತು ಬೊಲೇನೋ ಕಾರಿನ ನಡುವೆ ಉಂಟಾದ ರಸ್ತೆ ಅಪಘಾತದಲ್ಲಿ ಬೊಲೆನೋ ವಾಹನದಲ್ಲಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ. ಮೂವರು ದಾವಣಗೆರೆಯ ಬಿಐಟಿ ಕಾಲೇಜಿನ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.   ಶಿವಮೊಗ್ಗದ ಸವಳಂಗ ರಸ್ತೆಯ ಕಲ್ಲಾಪುರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಶಿವಮೊಗ್ಗದಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದ ಕಾರು ಮತ್ತು ಶಿವಮೊಗ್ಗ ಕಡೆಗೆ ಬರುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಸಾವು ಕಂಡವರನ್ನ ಕಾರ್ತಿಕ್, ಮೋಹನ್ ಮತ್ತು ವಿವೇಕ್ ಎಂದು ಗುರುತಿಸಲಾಗಿದೆ. ಕಾರ್ತಿಕ್ ಬೊಲೆನೋ ವಾಹನವನ್ನು ಚಲಾಯಿಸುತ್ತಿದ್ದನು ಎಂದು…

Read More

ಲಂಚ ಸ್ವೀಕರಿಸುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಭೂಮಾಪಕ|surveyor arrested

ಜಮೀನು ಸರ್ವೆ ಮಾಡಲು ಲಂಚ ಪಡೆಯುತ್ತಿದ್ದ ವೇಳೆ ಭೂಮಾಪಕರೊಬ್ಬರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಂಗನಾಥ್ ಲೋಕಾಯುಕ್ತದ ಬಲೆಗೆ ಬಿದ್ದ ಭೂಮಾಪಕ ಎಂದು ತಿಳಿದು ಬಂದಿದೆ. ಸಾಗರ ತಾಲೂಕಿನ ತ್ಯಾಗರ್ತಿಯ ಎಡಿಎಲ್ಆರ್ ಕಚೇರಿಯಲ್ಲಿ ಭೂಮಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಂಗನಾಥ್, ಸಾಗರದ ನಿವಾಸಿ ಉಮೇಶ್ ಎಂಬುವವರ  ಜಮೀನು ಸರ್ವೆ ಮಾಡಲು  ಮೂರು ಸಾವಿರ ರೂ ಹಣದ ಬೇಡಿಕೆ ಇಟ್ಟಿದ್ದಾರೆ. ಮುಂಗಡವಾಗಿ 1500 ರೂ  ಪಡೆದುಕೊಂಡಿದ್ದರು. ಉಳಿದ ಹಣವನ್ನು ಪಡೆಯುವಾಗ  ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ…

Read More

ವಿದ್ಯುತ್ ಸ್ಪರ್ಶದಿಂದ ಯುವಕ ಸಾವು|electric shock

ಮನೆಯಲ್ಲಿ ಹೋಲ್ಡರ್‌ಗೆ ಬಲ್ಪ್ ಹಾಕಲು ಹೋಗಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸಾಗರ ನಗರದ ಶಾಂತಿನಗರದಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಾಂತಿನಗರದ ನಿವಾಸಿ ರೂಪ್ ಸಿಂಗ್ (33) ಮೃತ ದುರ್ದೈವಿ. ಮನೆಯಲ್ಲಿ ಬಲ್ಬ್‌ ಬದಲಾವಣೆ ಮಾಡುವ ಸಂದರ್ಭದಲ್ಲಿ ಇವರಿಗೆ ಕರೆಂಟ್‌ ಶಾಕ್‌ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದರೂ, ಅದಾಗಲೇ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಸಾಗರ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ…

Read More

ಆಗುಂಬೆ ಘಾಟಿಯಲ್ಲಿ ಲಾರಿ ಟೈರ್ ಸ್ಪೋಟ – ಟ್ರಾಫಿಕ್ ಜಾಮ್ ಗೆ ತತ್ತರಿಸಿದ ಪ್ರಯಾಣಿಕರು|Agumbe

ಆಗುಂಬೆಘಾಟಿಯಲ್ಲಿ ಲಾರಿ ಟೈರ್ ಸ್ಪೋಟಗೊಂಡ ಹಿನ್ನಲೆಯಲ್ಲಿ ಘಾಟಿಯಲ್ಲಿ ಕೆಲವು ಹೊತ್ತು ವಾಹನ ಸಂಚಾರ ಸ್ಥಗಿತವಾಗಿತ್ತು. ಘಾಟಿಯ 8ನೇ ತಿರುವಿನಲ್ಲಿ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಕ್ಯಾಂಟರ್ ಲಾರಿಯ ಹಿಂಬದಿ ಟೈರ್ ಸ್ಪೋಟಗೊಂಡಿದೆ. ತಿರುವಿನಲ್ಲೇ ಲಾರಿ ನಿಂತಿದ್ದರಿಂದ ಇತರೆ ವಾಹನಗಳ ಸಂಚಾರಕ್ಕೆ ಕಷ್ಟವಾಗಿತ್ತು. ಪೊಲೀಸರು ಕ್ರೇನ್ ತರಿಸಿ ಲಾರಿಯನ್ನು ಪಕಕ್ಕೆ ಸರಿಸಿದ್ದಾರೆ. ಬಸ್ಸುಗಳು ಕೂಡ ಸುಗಮವಾಗಿ ಸಂಚರಿಸಲು ಅವಕಾಶ ಕಲ್ಪಿಸಲಾಯಿತು. ಇದರಿಂದ ವಾಹನಗಳು ನಿಧಾನವಾಗಿ ಸಂಚರಿಸುತ್ತಿವೆ. ತಿರುವಿನಲ್ಲಿ ಲಾರಿ ನಿಂತಿದ್ದರಿಂದ ಹಿಂಬದಿಯಲ್ಲಿ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು….

Read More

ರಿಪ್ಪನ್‌ಪೇಟೆ : ಅಕ್ರಮ ಮರ ಕಡಿತಲೆ – ಲಾರಿ ಸಹಿತ ಮರದ ತುಂಡುಗಳು ವಶಕ್ಕೆ|Illegal tree felling

ರಿಪ್ಪನ್‌ಪೇಟೆ : ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಹಾಗೂ ಅರಣ್ಯ ವಿಚಕ್ಷಣದಳದ ಪೊಲೀಸರು ಜಂಟಿ ದಾಳಿ ಮಾಡಿ ಲಾರಿ ಸಹಿತ ಅಕ್ರಮ ಕಡತಲೆ ಮಾಡಿದ್ದ ಅಕೇಶಿಯ ತುಂಡುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹುಂಚ ಹೋಬಳಿ ಹುಳಿಗದ್ದೆ ಗ್ರಾಮದ ಸ.ನಂ. 43ರ ಪೋಡಿ ಕಾಣದ ಜಮೀನಿನಲ್ಲಿ ಬೆಳೆದಿದ್ದ ಅಕೇಶಿಯ ಪಲ್ಪ್ ತುಂಡುಗಳನ್ನು ಅಕ್ರಮವಾಗಿ ಕಡತಲೆ ಮಾಡಿ ಲಾರಿ ಮೂಲಕ ಸಾಗಾಟಕ್ಕೆ ಯತ್ನಿಸುತ್ತಿದ್ದ ವೇಳೆ ದಾಳಿ ನಡೆದಿದೆ. ಅರಣ್ಯ ಗುತ್ತಿಗೆದಾರ ರವಿ…

Read More