Headlines

ಬಾವಿಯಲ್ಲಿ ಪೌರಕಾರ್ಮಿಕನ ಮೃತದೇಹ ಪತ್ತೆ|dead body found in

ಬಾವಿಯಲ್ಲಿ ಶವವೊಂದು ಪತ್ತೆಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗದ KSRTC ಬಸ್ ನಿಲ್ದಾಣದ ಪಕ್ಕವಿರುವ ಬಿಎಂವಿ ಪಾರ್ಕಿಂಗ್ ಮತ್ತು ಎಸ್ ಡಿಪಿ ಪಾರ್ಕಿಂಗ್ ಮಧ್ಯ ಇರುವ ಬಾವಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಬಾವಿಯಲ್ಲಿ ಪತ್ತೆಯಾದ ಮೃತ ದೇಹವನ್ನ ಮಾರ್ನಮಿಬೈಲು ನಿವಾಸಿ ದಿಬ್ಬಯ್ಯ (52) ಎಂದು ಗುರುತಿಸಲಾಗಿದೆ. ಬಾವಿಗೆ ಬಿದ್ದ ದಿಬ್ಬಯ್ಯ ಕಳೆದ ಐದು ದಿನಗಳಿಂದ ಮನೆಗೆ ಹೋಗಿರಲಿಲ್ಲ ಎಂದು ಕುಟುಂಬ ತಿಳಿಸಿದೆ. ನಾಪತ್ತೆಯಾಗಿದ್ದ ಮನೆಯವರೂ ಹುಡುಕಾಡುತ್ತಿದ್ದರು. ಆದರೆ ಪಾರ್ಕಿಂಗ್ ಸ್ಥಳದಲ್ಲಿರುವ ಬಾವಿಯಲ್ಲಿ ಆತನ ಮೃತ ದೇಹ ಪತ್ತೆಯಾಗಿದೆ. ಪಾರ್ಕಿಂಗ್ ನೋಡಿಕೊಳ್ಳುವ…

Read More

ಹೊಸನಗರ : ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಅಗ್ನಿ ಅವಘಡ – ಬೆಂಕಿ ರಿಂಗ್ ಜಿಗಿತ ಪ್ರದರ್ಶನದ ವೇಳೆ ವಿದ್ಯಾರ್ಥಿಗೆ ಗಂಭೀರ ಗಾಯ|Fire

ಹೊಸನಗರ : ಶಾಲಾ ವಾರ್ಷಿಕೋತ್ಸವ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಯಿಂದ ಓರ್ವ ವಿದ್ಯಾರ್ಥಿಗೆ ಸುಟ್ಟಗಾಯಗಳಾಗಿರುವ ಘಟನೆ ಪಟ್ಟಣದ ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆಯಲ್ಲಿ ಶನಿವಾರ ರಾತ್ರಿ ಜರುಗಿದೆ. ಮೂರು ದಿನಗಳ ಶಾಲಾ ವಾರ್ಷಿಕೋತ್ಸವ ಸಂದರ್ಭದಲ್ಲಿ ಕೊನೆ ದಿನವಾದ ಶನಿವಾರ ರಾತ್ರಿ ವಿದ್ಯಾರ್ಥಿಗಳಿಂದ ಪಿರಮಿಡ್ ನಿರ್ಮಾಣ ಹಾಗೂ ಬೆಂಕಿಯ ರಿಂಗ್ ಒಳಗಿನ ಜಿಗಿತದ ವೇಳೆ ಘಟನೆ ಸಂಭವಿಸಿದೆ. ಮೂಲತಃ ಬೆಂಗಳೂರಿನ ಬನಶಂಕರಿ ಬಡಾವಣೆಯ ವಾಸಿಯಾದ ಅದೇ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಸಿಂಹಾದ್ರಿಗೆ ಘಟನೆಯಿಂದ ಮುಖ, ಕಣ್ಣು, ಕಿವಿಗಳಿಗೆ ಸುಟ್ಟಗಾಯಗಳಾಗಿದೆ….

Read More

ರಿಪ್ಪನ್‌ಪೇಟೆ : ವರಾನಹೊಂಡದ ಭೂತರಾಯ ದೇವಸ್ಥಾನದಲ್ಲಿ ಹುಂಡಿ ಒಡೆದು ಕಳ್ಳತನ|Theft

ರಿಪ್ಪನ್ ಪೇಟೆ :  ಇಲ್ಲಿನ ಸಮೀಪದ ವರಾನಹೊಂಡದ  ಭೂತರಾಯನ ಗುಡಿಯಲ್ಲಿ ಹುಂಡಿ ಒಡೆದು ಕಳ್ಳತನ ಮಾಡಿರುವ ಘಟನೆ ನಡೆದಿದೆ. ಪಟ್ಟಣದ ತೀರ್ಥಹಳ್ಳಿ ರಸ್ತೆಯ ವರಾನಹೊಂಡದ ಶ್ರೀ ಭೂತರಾಯ ಸ್ವಾಮಿ ದೇವಸ್ಥಾನದ ಕಾಣಿಕೆ ಹುಂಡಿಯನ್ನು ಒಡೆದು ಕಳ್ಳತನ ಮಾಡಿದ್ದಾರೆ.ಭಾನುವಾರ ರಾತ್ರಿ ಕಳ್ಳತನ ನಡೆದಿರುವ ಸಾಧ್ಯತೆ ಇದೆ. ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಜನರಿಗೆ ವರಾನಹೊಂಡದ ಭೂತರಾಯ ದೇವಸ್ಥಾನವೆಂದರೆ ಅಪಾರ ಭಕ್ತಿ ಹಾಗೂ ಭಯ, ನಂಬಿಕೆ ಇರುವ ಸ್ಥಳವಾಗಿದ್ದು ಈ ಕ್ಷೇತ್ರದಲ್ಲಿ ಕಳ್ಳರು ಕೈಚಳಕ ತೋರಿಸಿರುವುದು ಅವರ ಅವನತಿಗೆ ದಾರಿಯಾಗಿದೆ ಎಂದು…

Read More

ವರದಕ್ಷಿಣೆ ಕಿರುಕುಳದಿಂದ ಬೇಸತ್ತು ನವವಿವಾಹಿತೆ ಆತ್ಮಹತ್ಯೆ – ಪ್ರಕರಣ ದಾಖಲು|Dowry case

ನೂರಾರು ಕನಸು ಹೊತ್ತು ಮದುವೆಯಾಗಿದ್ದ ನವ ವಿವಾಹಿತೆ ವರದಕ್ಷಿಣೆ ಭೂತಕ್ಕೆ ಬಲಿಯಾಗಿರುವ ಘಟನೆ ಶಿವಮೊಗ್ಗ ಶಿಕಾರಿಪುರದ ಶಿರಾಳಕೊಪ್ಪದ ಉಡುಗುಣಿ ಗ್ರಾಮದಲ್ಲಿ ನಡೆದಿದೆ. ನವವಿವಾಹಿತೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕಳೆದ ವರ್ಷವಷ್ಟೇ ಮದುವೆಯಾಗಿದ್ದ ಸಂಗೀತಾ ಅನುಮಾನಸ್ಪದವಾಗಿ ಸಾವನಪ್ಪಿದ್ದು, ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಡ, ಅತ್ತೆ ಮಾವನ ಕಿರುಕುಳಕ್ಕೆ ಅಮಾಯಕ ಜೀವ ಬಲಿಯಾಗಿದ್ದು, ಸಂಗೀತಾ ನೂರಾರು ಕನಸು ಹೊತ್ತು ಹರೀಶ್ ಎಂಬಾತನ ಜೊತೆ ಮದುವೆಯಾಗಿದ್ದರು. ಸಂಗೀತಾ ಪೋಷಕರು ಚಿನ್ನ, ಹಣ ಕೊಟ್ಟು ಅದ್ದೂರಿಯಾಗಿ ಮದುವೆ ಮಾಡಿದ್ದರು. ಮದುವೆಯಾದ ಆರು ತಿಂಗಳಿಗೆ…

Read More

ಸಾಗರದ ಬಳಿ ಹೊಸನಗರದ ಓಮಿನಿ‌ ಕಾರು ಅಪಘಾತ – ಜಖಂಗೊಂಡ ಕಾರಿನಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿಯ ಜೀವ ಉಳಿಸಿದ 112 ಸಿಬ್ಬಂದಿ|Accident

ಹೊಸನಗರದಿಂದ ಕುಮುಟಾ ಕಡೆಗೆ ತೆರಳುತಿದ್ದ ಮಾರುತಿ ಓಮಿನಿ ಕಾರು  ಆಕ್ಸಿಡೆಂಟ್​ ಆಗಿ, ಜಖಂ ಆದ ವಾಹನದಲ್ಲಿ ಸಿಲುಕಿ ನರಳುತ್ತಿದ್ದ ವ್ಯಕ್ತಿಯನ್ನು 112 ಸಿಬ್ಬಂದಿ ಕಾಪಾಡಿದ್ಧಾರೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.  ನಿನ್ನೆ ಬೆಳಗ್ಗಿನ ಜಾವ ಸಾಗರ ತಾಲ್ಲೂಕಿನ ಶಿರವಂತೆ ಬಳಿ ಅಪಘಾತವೊಂದು ಸಂಭವಿಸಿತ್ತು. ಹೊಸನಗರ ಮೂಲದ ಪ್ರವೀಣ್ ಓಮಿನಿ ಕಾರಿನಲ್ಲಿ  ಕುಮಟಾಕ್ಕೆ ಹೋಗುತ್ತಿದ್ದ ಸಂಧರ್ಭದಲ್ಲಿ ಅಪಘಾತವಾಗಿತ್ತು. ತಕ್ಷಣ ಸ್ಥಳೀಯರು 112 ಸಿಬ್ಬಂದಿ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ವಿಚಾರ ಕೇಳಿ ತಕ್ಷಣ…

Read More

ಗಡಿಪಾರು ಆದೇಶಕ್ಕೆ ಹೆದರಿ ವಿಷ ಸೇವಿಸಿದ್ದ ತೀರ್ಥಹಳ್ಳಿಯ ರೌಡಿ ಶೀಟರ್ ಕೋಬ್ರಾ ಸುಹೈಲ್ ಸಾವು|cobra suhail

ತೀರ್ಥಹಳ್ಳಿ : ಹಲವಾರು ಕ್ರಿಮಿನಲ್‌ ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸ್‌ ಇಲಾಖೆಯಿಂದ ಗಡಿಪಾರು ಆದೇಶ ಪಡೆದಿದ್ದ ತೀರ್ಥಹಳ್ಳಿಯ ಸುಹೇಲ್ ಕೋಬ್ರಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಸುಹೇಲ್ ವಿರುದ್ದ ತೀರ್ಥಹಳ್ಳಿ ಹಾಗು ಮಾಳೂರು ಠಾಣೆಯಲ್ಲಿ ಹಲವು ಕ್ರಿಮಿನಲ್ ‌ಪ್ರಕರಣ ದಾಖಲಾಗಿದ್ದವು. ಈತನ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಇಲಾಖೆ ಎರಡು ವರ್ಷಗಳ ಅವಧಿಗೆ ಜಿಲ್ಲೆಯಿಂದ ಗಡಿಪಾರು ಮಾಡಿತ್ತು. ನವೆಂಬರ್‌ 25 ರಂದು ಗಡಿಪಾರು ಆದೇಶವನ್ನು ಜಾರಿ ಮಾಡಿ ಆತನ ಮನೆಗೆ ನೋಟಿಸ್‌ ಕಳುಹಿಸಲಾಗಿತ್ತು. ಈ ಗಡಿಪಾರು ಆದೇಶಕ್ಕೆ ಬೆದರಿದ್ದ ಸುಹೇಲ್‌ ಅಂದೇ…

Read More

ಅರಣ್ಯ ಪ್ರದೇಶದಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತಿದ್ದ ತಂಡವನ್ನು ದರೋಡೆ ಮಾಡಿದ ಖತರ್ ನಾಕ್‌ ಗ್ಯಾಂಗ್ – ಆರೋಪಿಗಳನ್ನು ಬಂಧಿಸಿದ ಪೊಲೀಸರು|Robbery

ಸ್ನೇಹಿತರೊಂದಿಗೆ ಅರಣ್ಯ ಪ್ರದೇಶದಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತಿದ್ದ ಸ್ಥಳಕ್ಕೆ ಮುಖಕ್ಕೆ ಮಾಸ್ಕ್ ಕಟ್ಟಿಕೊಂಡು ಬಂದ 12 ಜನರ ಖತರ್ ನಾಕ್ ಗ್ಯಾಂಗ್ ಆ ದಿನ ಹುಟ್ಟುಹಬ್ಬ ಸಂಭ್ರಮದಲ್ಲಿ ನೆರೆದಿದ್ದವರನ್ನೆಲ್ಲಾ ಲೂಟಿ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಈ ಹಿನ್ನಲೆಯಲ್ಲಿ ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ಆರು ಜನ ಆರೋಪಿಗಳನ್ನು ಪತ್ತೆಹಚ್ಚಿ ಹೆಡೆಮುರಿ‌ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ಸಾರಾಂಶ : 13-11-2022 ರಂದು ಸಂಜೆ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ವೀರಣ್ಣ ಬೆನವಳ್ಳಿ ಗ್ರಾಮದ…

Read More

ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ – ಓರ್ವ ಆಸ್ಪತ್ರೆಗೆ ದಾಖಲು|Accident

ಕುಂಸಿ ಸಮೀಪದ ತುಪ್ಪೂರು ಬಳಿ ಬಸ್ಸು ಹಾಗೂ ಕಾರಿನ ನಡುವೆ ಭೀಕರ ಅಪಘಾತ ನಡೆದಿದ್ದು ಅಪಘಾತದಲ್ಲಿ ಒಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಕುಂಸಿ ಸಮೀಪದ ತುಪ್ಪೂರು ತಿರುವಿನಲ್ಲಿ ಶಿವಮೊಗ್ಗದಿಂದ ಸಾಗರದ ಕಡೆಗೆ ಬರುತಿದ್ದ ಪ್ರಕಾಶ್ ಟ್ರಾವೆಲ್ಸ್ (KA 51 AB 0913) ಹಾಗೂ ಸಾಗರದಿಂದ ಶಿವಮೊಗ್ಗದ ಕಡೆಗೆ ತೆರಳುತಿದ್ದ ಮಾರುತಿ ಸ್ವಿಫ್ಟ್ (KA 18 Z 0329) ಕಾರಿನ ನಡುವೆ ಅಪಘಾತ ನಡೆದಿದ್ದು ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ವ್ಯಕ್ತಿಗೆ ತಲೆಗೆ ತೀವ್ರತರವಾದ ಪೆಟ್ಟಾಗಿದ್ದು ಶಿವಮೊಗ್ಗ ಆಸ್ಪತ್ರೆಗೆ…

Read More

ಚಾಲಕನ ಜೊತೆ ಮಕ್ಕಳನ್ನು ಕರೆದುಕೊಂಡು ಮಹಿಳೆ ಪರಾರಿ : ಮಕ್ಕಳನ್ನು ಹುಡುಕಿಕೊಡುವಂತೆ ಪತಿಯಿಂದ ಕಣ್ಣೀರು|missing

ಪತಿಯನ್ನು ಬಿಟ್ಟು ತಾನು ಕೆಲಸ ನಿರ್ವಹಿಸುತಿದ್ದ ಸಂಸ್ಥೆಯ ಚಾಲಕನೊಂದಿಗೆ ಗೃಹಿಣಿಯೊಬ್ಬರು ನಾಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನಲ್ಲಿ ನಡೆದಿದೆ. ಈ ಸಂಬಂಧ ದೂರು ದಾಖಲಾಗಿದ್ದು, ಘಟನೆಯಿಂದ ನೊಂದು ಪತಿ ಕಣ್ಣೀರು ಹಾಕುತ್ತಿದ್ದಾರೆ.  ಶಿಕಾರಿಪುರ ತಾಲೂಕಿನ ಪುಣೇದಹಳ್ಳೀ ಗ್ರಾಮದಲ್ಲಿ ಪರಶುರಾಮ್ ಮತ್ತು ಶಾರದಾ ದಂಪತಿ ವಾಸವಾಗಿದ್ದರು. ಕಳೆದ 13 ವರ್ಷದ ಹಿಂದೆ  ಮದುವೆಯಾಗಿದ್ದ ಇವರಿಗೆ ಇಬ್ಬರು ಮಕ್ಕಳಿದ್ದು ಪತ್ನಿ ಖಾಸಗಿ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಈ ಮಧ್ಯೆ ಮಕ್ಕಳ ದಾಖಲಾತಿಗಳನ್ನು ತೆಗೆದುಕೊಂಡು ಶಾಲೆಗೆ ಹೋಗಿದ್ದ ಮಹಿಳೆ ಅಲ್ಲಿಂದ…

Read More

ಖಾಸಗಿ ಆಸ್ಪತ್ರೆಯ ವೈದ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ|sucide

ಶಿವಮೊಗ್ಗ ನಗರದ ಪ್ರಸಿದ್ಧ ಖಾಸಗಿ ಆಸ್ಪತ್ರೆಯಲ್ಲಿ ಮೂಳೆ ತಜ್ಞರಾಗಿ ಕೆಲಸ ನಿರ್ವಹಿಸುತ್ತಿದ್ದ ಡಾ.ಲೋಲಿತ್ (40) ನೇಣು ಬಿಗಿದ ಸ್ಥಿತಿಯಲ್ಲಿ ತಮ್ಮ ಕೊಠಡಿಯಲ್ಲಿ ಪತ್ತೆಯಾಗಿದ್ದಾರೆ. ಗೋಪಾಳದಲ್ಲಿರುವ ಅವರ ನಿವಾಸದಲ್ಲಿ ಲೋಲಿತ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲಗಳ ಪ್ರಕಾರ ಅವರ ಸಾವಿಗೆ ಅನಾರೋಗ್ಯದ ಕಾರಣ ತಿಳಿದು ಬಂದಿದೆ. ಹೃದಯ ಸಂಬಂಧಿ ಖಾಯಿಲೆಯಿಂದ ವೈದ್ಯರು ಬಳಲುತ್ತಿದ್ದರು ಎನ್ನಲಾಗುತಿದ್ದು ಪೊಲೀಸರ ತನಿಖೆಯ ನಂತರ ಕಾರಣ ತಿಳಿದುಬರಬೇಕಾಗಿದೆ. ತುಂಗನಗರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Read More