Headlines

ಆನಂದಪುರದಲ್ಲಿ ಶಾಲಾ ವಿದ್ಯಾರ್ಥಿನಿಯರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಪ್ರಕರಣ – ಚಿಕಿತ್ಸೆ ಫಲಕಾರಿಯಾಗದೇ ಓರ್ವ ವಿದ್ಯಾರ್ಥಿನಿ ಸಾವು|crime

ಆನಂದಪುರ : ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿಳು ಗಾಯಗೊಂಡ ಪ್ರಕರಣದಲ್ಲಿ ಓರ್ವ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ನಡೆದಿದೆ. ಮೊದ್ಲೆಸರ ಗ್ರಾಮದ  ಕೀರ್ತನಾ(15) ಮೃತಪಟ್ಟ ದುರ್ಧೈವಿಯಾದ್ದಾರೆ. ಆನಂದಪುರ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 9 ನೇ ತರಗತಿ ವ್ಯಾಸಾಂಗ ಮಾಡುತಿದ್ದ ಕೀರ್ತನಾ ಶನಿವಾರ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ತೀವ್ರ ಗಾಯಗೊಂದು ಶಿವಮೊಗ್ಗದ ಆಸ್ಪತ್ರೆಗೆ ದಾಖಾಲಾಗಿದ್ದಳು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಶನಿವಾರ ವಿದ್ಯಾರ್ಥಿನಿಯರಿಬ್ಬರು…

Read More

ಗರ್ತಿಕೆರೆ ಬೈಕ್ ಹಾಗೂ ಕಾರಿನ ನಡುವೆ ಅಪಘಾತ : ಅಪಘಾತದ ಸಿಸಿಟಿವಿ ದೃಶ್ಯಾವಳಿ ಇಲ್ಲಿ ವೀಕ್ಷಿಸಿ👇|cctv

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದ ಕಾರು ಹಾಗು ಬೈಕ್ ನಡುವೆ ಅಪಘಾತದ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದೆ. ಗರ್ತಿಕೆರೆ ಪೆಟ್ರೋಲ್ ಬಂಕ್ ಮುಂಭಾಗ ಬೈಕ್ ಚಾಲಕನ ಅಜಾಗರೂಕತೆಯಿಂದ ಹಿಂಬದಿ ಗಮನಿಸದೆ ಬಲಕ್ಕೆ ತಿರುಗಿಸಿದ್ದಾನೆ ಆ ಸಂಧರ್ಭದಲ್ಲಿ ಅತೀ ವೇಗವಾಗಿ ಬಂದ ಕಾರು ಬೈಕ್ ನ್ನು ತಪ್ಪಿಸಲು ಬಲಕ್ಕೆ ತಿರುಗಿಸಿದ್ದರೂ ಬೈಕ್ ಗೆ ಕಾರು ತಗುಲಿದ ಪರಿಣಾಮ ಬೈಕ್ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ರಿಪ್ಪನ್‌ಪೇಟೆ ಮೂಲದ ಮಾರುತಿ…

Read More

ಗರ್ತಿಕೆರೆ ಬಳಿ ಕಾರು ಹಾಗೂ ಬೈಕ್‌ ನಡುವೆ ಅಪಘಾತ – ಬೈಕ್ ಸವಾರನ ಸ್ಥಿತಿ ಗಂಭೀರ,ಮೆಗ್ಗಾನ್ ಗೆ ದಾಖಲು|accident

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದಲ್ಲಿ ಕಾರು ಹಾಗು ಬೈಕ್ ನಡುವೆ ಅಪಘಾತ ನಡೆದಿದೆ. ಪೆಟ್ರೋಲ್ ಬಂಕ್ ಮುಂಭಾಗ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ರಿಪ್ಪನ್‌ಪೇಟೆ ಮೂಲದ ಮಾರುತಿ ಬ್ರೀಜಾ(KA 15 N 8990) ಕಾರು ತೀರ್ಥಹಳ್ಳಿ ಕಡೆಗೆ ಸಂಚರಿಸುತ್ತಿದ್ದು ಈ ವೇಳೆ ರಸ್ತೆಗೆ ಅಡ್ಡ ಬಂದ ಬೈಕ್ ತಪ್ಪಿಸಲು ಹೋಗಿ ಕಾರು ರಸ್ತೆ ಬದಿಯ ಚರಂಡಿಗೆ ಉರುಳಿದ್ದು ಈ ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ…

Read More

ಆನಂದಪುರದಲ್ಲಿ ನಡೆದುಕೊಂಡು ಹೋಗುತಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ – ಮೆಗ್ಗಾನ್ ಗೆ ದಾಖಲು

ಆನಂದಪುರ : ರಸ್ತೆಯಲ್ಲಿ ನಡೆದುಕೊಂಡು ಹೋಗಿತಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿಳು ಗಾಯಗೊಂಡ ಘಟನೆ ನೂತನ ಪೊಲೀಸ್ ಠಾಣೆಯ ಮುಂಭಾಗದ ತಿರುವಿನಲ್ಲಿ ನಡೆದಿದೆ. ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿಯರಿಬ್ಬರು ಶಾಲೆ ಮುಗಿಸಿ ತಮ್ಮ ಊರಾದ ಮೊದ್ಲೇಸರ ಕಡೆಗೆ ನಡೆದುಕೊಂಡು ಹೋಗುತಿದ್ದ ಸಂಧರ್ಭದಲ್ಲಿ ಪೊಲೀಸ್ ಠಾಣೆ ಮುಂಭಾಗದ ತಿರುವಿನಲ್ಲಿ ಸಾಗರ ಕಡೆಯಿಂದ ಆನಂದಪುರ ಕಡೆಗೆ ಬರುತಿದ್ದ ಫೋರ್ಡ್ ಕಾರು(Ka 18 N 5812) ಮುಂಭಾಗದಿಂದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ವಿದ್ಯಾರ್ಥಿಗಳಿಗೆ ತೀವ್ರ…

Read More

ದೇವಸ್ಥಾನಗಳ ಹುಂಡಿ ಕಳ್ಳತನ ಮಾಡುತಿದ್ದ ಕಳ್ಳರ ಬಂಧನ|theft

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಕಳೆದ ವರ್ಷ ನಡೆದ ನಾಲ್ಕು ದೇವಸ್ಥಾನಗಳ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಸಾಗರ ಗ್ರಾಮಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ವರ್ಷ ಫೆಬ್ರುವರಿ 17ಕ್ಕೆ ತಾಲೂಕಿನ ಸಿರಿವಂತೆ ಗ್ರಾಮದ ವೀರಭದ್ರೇಶ್ವರ ದೇವಸ್ಥಾನ ,ಮೇ 5ಕ್ಕೆ ಬಿಳಿಸಿರಿ ಗ್ರಾಮದ ಕೊರಳಿಕೊಪ್ಪದ ಶನೇಶ್ವರ ದೇವಾಸ್ಥಾನ, ಮೇ 27ರಂದು ಕಳೆದಿ ಹೋಬಳಿಯ ತೆರವಿನಕೊಪ್ಪ ಗ್ರಾಮದ ಅಕ್ಕ ನಾಗಮ್ಮ ದೇವಸ್ಥಾನ ಹಾಗೂ ಅಕ್ಟೋಬರ್ 21ರಂದು ಮಲ್ಲ ಗ್ರಾಮದ ಪಂಚಲಿಂಗೇಶ್ವರ ಹಾಗೂ ಸಿದ್ದೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಪ್ರಕರಣ ಸಾಗರ…

Read More

ಪ್ರಿಯಕರನನ್ನು ಕತ್ತು ಸೀಳಿ ಹತ್ಯೆಗೈದ ಪ್ರೇಯಸಿ..!!! ಭದ್ರಾವತಿಯ ಖಾಸಗಿ ಲಾಡ್ಜ್ ನಲ್ಲಿ ನಡೆದ ಘಟನೆmurder

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಹೆರಿಟೇಜ್ ಲಾಡ್ಜ್ ನಲ್ಲಿ ಪ್ರೇಯಸಿಯೇ ಪ್ರಿಯಕರನನ್ನು ಹತ್ಯೆಗೈದಿರುವ ಘಟನೆ ನಡೆದಿದೆ. ಹಾಸನ ಮೂಲದ ಪರ್ವೇಜ್ ಖಾನ್​ ಎಂಬ ವ್ಯಕ್ತಿಯ ಕೊಲೆಯಾಗಿದೆ. ಪ್ರೇಯಸಿಯೇ ಈ ಕೊಲೆ ಮಾಡಿದ್ದಾಳೆ ಎಂದು ಆರೋಪಿಸಲಾಗುತಿದ್ದು ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ. ಹಾಸನದ ಚನ್ನರಾಯಪಟ್ಟಣದ ಮೂಲದ ಆಯಿಷಾ ಮತ್ತು ಜಾವಗಲ್​ ಮೂಲದ ಪರ್ವೇಜ್ ಖಾನ್ ಇಬ್ಬರು ಕಳೆದ ಮೂರು ನಾಲ್ಕು ವರ್ಷಗಳಿಂದ ಸಂಬಂಧ ಹೊಂದಿದ್ದರು ಎನ್ನಲಾಗಿದೆ.  ಇವರಿಬ್ಬರ ಸಂಬಂಧದ ವಿಚಾರಕ್ಕೆ ಮನನೊಂದಿದ್ದ ಆಯಿಷಾ ಳ ಪತಿ ಇವಳನ್ನು…

Read More

ಅಕ್ರಮ ಕಸಾಯಿಖಾನೆ ಮೇಲೆ ದಾಳಿ : 8 ಗೋವುಗಳ ರಕ್ಷಣೆ – 7 ಗೋವುಗಳ ದಾರುಣ ಹತ್ಯೆ

ಶಿವಮೊಗ್ಗ ನಗರದ ಸೂಳೆಬೈಲ್​ನ ಸಮೀಪ ಇವತ್ತು ತುಂಗಾನಗರ ಪೊಲೀಸರು ಹಾಗೂ ನಗರಸಭೆ ಅಧಿಕಾರಿಗಳು ಕಸಾಯಿಖಾನೆಯ ಮೇಲೆ ದಾಳಿ ನಡೆಸಿದ್ದಾರೆ. ಗೋಹತ್ಯೆ ನಿಷೇಧದ ನಡುವೆಯು, ಗೋವುಗಳನ್ನು ಮಾಂಸಕ್ಕಾಗಿ ಕೊಂದು ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದ ಬೆನ್ನಲ್ಲೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.  ಸೂಳೆಬೈಲಿನ ಕಸಾಯಿ ಖಾನೆಯೊಂದ ಮೇಲೆ ತುಂಗನಗರ ಪೊಲೀಸರು ಬೆಳ್ಳಂಬೆಳಿಗ್ಗೆನೇ ದಾಳಿ ನಡೆಸಿ 8 ಗೋವುಗಳನ್ನ ರಕ್ಷಿಸಿದ್ದಾರೆ. ಆದರೆ 7 ಗೋವುಗಳ ಕತ್ತು ಸೀಳಿ ಹತ್ಯೆ ಮಾಡಿರುವ ದೃಶ್ಯಗಳು ಲಭ್ಯವಾಗಿವೆ. ಸೂಳೆಬೈಲಿನ ಅಜೀಜ್ ಮನೆಯ ಹಿಂಭಾಗದ…

Read More

ಸಾಲಭಾದೆಗೆ ತತ್ತರಿಸಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ|sucide

ಸಾಲಭಾದೆಗೆ ಹೆದರಿ ಶಿವಮೊಗ್ಗ ದ ಮಿಳಘಟ್ಟದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಪರಂದಯ್ಯ(70), ದಾನಮ್ಮ (60)ಮತ್ತು ಮಂಜುನಾಥ್(25) ಮನೆಯಲ್ಲಿ ವಿಷ ಸೇವಿಸಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಮಿಳಘಟ್ಟ ಮೊದಲನೇ ತಿರುವಿನಲ್ಲಿ ಪರಂದಯ್ಯ, ದಾನಮ್ಮ, ಮಂಜುನಾಥ್ ನಿನ್ನೆ ಸಾಲಕ್ಕೆ ಬೆದರಿ ವಿಷ ಸೇವಿಸಿದ್ದರು. ವೃದ್ಧರಿಬ್ಬರೂ ನಿನ್ನೆನೇ ಸಾವನ್ನಪ್ಪಿದರು.  ಶಿವಮೊಗ್ಗದ ಆನಂದರಾವ್ ಬಡಾವಣೆ   ಹತ್ತಿರದ ಮಿಳಗಟ್ಟ ಕೆರೆಅಂಗಳದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪರಂದಯ್ಯ ಕೂಲಿ ಕೆಲಸ ಮಾಡಿಕೊಂಡಿದ್ದು, ದಾನಮ್ಮ ಕಲ್ಲೂರು ಮಂಡ್ಲಿ ಪೇಪರ್ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಹೋಗುತಿದ್ದರು. ಅವರಿಗೆ ಮಕ್ಕಳಿರಲಿಲ್ಲ…

Read More

ಬರ್ತ್ ಡೇ ಪಾರ್ಟಿಯಲ್ಲಿ ನಾಲ್ವರು ಯುವಕರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ – ಪ್ರಕರಣ ದಾಖಲು|assault

ಭದ್ರಾವತಿಯಲ್ಲಿ  ಹುಟ್ಟುಹಬ್ಬದ ಪಾರ್ಟಿ ವೇಳೆ ಯುವಕರ ಗುಂಪಿನ ಮೇಲೆ ಬಿಯರ್ ಬಾಟಲಿಯಿಂದ ದಾಳಿ ನಡೆಸಲಾಗಿದೆ. ಗಾಯಗೊಂಡಿರುವ ನಾಲ್ವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಭದ್ರಾವತಿಯ ಸಾಗರ, ನಾಗ ಪವನ್, ತೇಜಸ್, ಚೇತನ್ ಕುಮಾರ್ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ತೇಜಸ್ ಎಂಬುವವರ ಸ್ನೇಹಿತರೊಬ್ಬರ ಪತ್ನಿಯ ಹುಟ್ಟುಹಬ್ಬದ ಪಾರ್ಟಿಯನ್ನು ಶಿವಮೊಗ್ಗದ ಸೋಷಿಯಲ್ ಹಾರ್ಬರ್ ಕ್ಲಬ್ ನಲ್ಲಿ ಆಯೋಜಿಸಲಾಗಿತ್ತು. ರಾತ್ರಿ 11.30ರ ಹೊತ್ತಿಗೆ ಪಾರ್ಟಿಯಲ್ಲಿ ಮದ್ಯ ಸೇವಿಸಿದ್ದ ಗುಂಪೊಂದು ಏಕಾಏಕಿ ಚೇತನ್ ಎಂಬಾತನ ಮೇಲೆ ಹಲ್ಲೆ ನಡೆಸಲು…

Read More

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ – ಹೊಸನಗರದ 27 ವರ್ಷದ ಯುವಕನಿಗೆ 01 ವರ್ಷ ಶಿಕ್ಷೆ ಪ್ರಕಟ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಕಳೆದ ವರ್ಷ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಹಿನ್ನಲೆಯ ಪ್ರಕರಣದಲ್ಲಿ ಆರೋಪಿ 27 ವರ್ಷದ ಯುವಕನಿಗೆ 01 ವರ್ಷ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ. 2022ನೇ ಸಾಲಿನಲ್ಲಿ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ನೊಂದ ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.  ಆಗಿನ ತನಿಖಾಧಿಕಾರಿಗಳಾದ ಮಧುಸೂದನ್ ಜಿ.ಕೆ. ಸಿಪಿಐ ಹೊಸನಗರ ವೃತ್ತರವರು ಪ್ರಕರಣದ ತನಿಖೆ…

Read More