ಕ್ರೈಂ ಸುದ್ದಿ:
ರಿಪ್ಪನ್ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಮದೀನಾ ಕಾಲೋನಿಯ ಯುವಕನ ಬಂಧನ|Ripponpet
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಸಮೀಪದ ಸಂತೆ ಮಾರ್ಕೆಟ್ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ಮದೀನಾ ಕಾಲೋನಿ ನಿವಾಸಿ ತನ್ವೀರ್ ಬಂಧಿತ ಆರೋಪಿಯಾಗಿದ್ದಾನೆ.ಈತನಿಗೆ ಇತ್ತೀಚೆಗೆ ಗಾಂಜಾ ಸೇವನೆ ಆರೋಪದಡಿಯಲ್ಲಿ ಬಂಧಿಸಲಾಗಿದ್ದ ಸಿದ್ದಪ್ಪನಗುಡಿ ನಿವಾಸಿ ಸಿದ್ದೇಶ್ ಗಾಂಜಾ ನೀಡಿರುವುದಾಗಿ ತನಿಖೆ ವೇಳೆಯಲ್ಲಿ ಆರೋಪಿ ಒಪ್ಪಿಕೊಂಡಿರುವ ಹಿನ್ನಲೆಯಲ್ಲಿ ಸಿದ್ದೇಶ್ ಮೇಲೆ ಪ್ರಕರಣ ದಾಖಲಾಗಿದೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು…
ಗಾಜನೂರಿನ ಫಿಶ್ ಹೊಟೇಲ್ ಗಳ ಮೇಲೆ ಅಬಕಾರಿ ಇಲಾಖೆ ದಾಳಿ – ಅಪಾರ ಪ್ರಮಾಣದ ಮದ್ಯ ವಶ|gajanoor
ಗಾಜನೂರಿನಲ್ಲಿರುವ ಫಿಶ್ ಹೋಟೆಲ್ ಗಳ ಮೇಲೆ ಅಬಕಾರಿ ಇಲಾಖೆ ದಾಳಿ ನಡೆಸಿದೆ. ಯಾವುದೇ ಪರವಾನಗಿ ಇಲ್ಲದೆ ಫಿಶ್ ಹೋಟೆಲ್ ಗಳು ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ಹಿನ್ನಲೆಯಲ್ಲಿ ದಾಳಿ ನಡೆದಿದೆ. ಮಂಗಳವಾರ ಅಬಕಾರಿ ಉಪ ಆಯುಕ್ತರು ಕ್ಯಾಪ್ಟನ್ ಅಜೀತ್ ಕುಮಾರ್ ಮಾರ್ಗದರ್ಶನ ಹಾಗೂ ನಿರ್ದೇಶನದಲ್ಲಿ ಶಿವಮೊಗ್ಗ ತಾಲ್ಲೂಕಿನ ಗಾಜನೂರು ವ್ಯಾಪ್ತಿಯಲ್ಲಿನ ರೆಸ್ಟೋರೆಂಟ್ ಗಳು ಯಾವುದೇ ಅಬಕಾರಿ ಲೈಸೆನ್ಸ್ ಹೊಂದಿಲ್ಲದೆ ಸಾರ್ವಜನಿಕರಿಗೆ ಹೋಟೆಲ್ ನಲ್ಲಿ ಮದ್ಯ ಸರಬರಾಜು ಮಾಡಿ ಸೇವಿಸಲು ಸ್ಥಳಾವಕಾಶ ಮಾಡಿಕೊಟ್ಟಿರುವ 7 ಹೋಟೆಲ್ ಗಳ ಮೇಲೆ…
ತೀರ್ಥಹಳ್ಳಿ : ಹಣದಾಸೆಗೆ ಸ್ನೇಹಿತನನ್ನು ಗುಂಡಿಕ್ಕಿ ಕೊಂದಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ |POSTMAN NEWS
ತೀರ್ಥಹಳ್ಳಿ : ಸ್ನೇಹಿತನನ್ನು ಹಣದ ಆಸೆಗೆ ಗುಡ್ಡಕ್ಕೆ ಕರೆಯಿಸಿ ಗುಂಡಿಕ್ಕಿ ಕೊಂದ ತೀರ್ಥಹಳ್ಳಿ ತಾಲೂಕಿನ ವಾಟಗಾರು ಗ್ರಾಮದ ಭುಜಂಗ (45) ಎಂಬುವರಿಗೆ ಶಿವಮೊಗ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಭುಜಂಗ ತಮ್ಮ ಪಕ್ಕದ ಗ್ರಾಮದ ಮಳಲಿಮಕ್ಕಿ ಗ್ರಾಮದ ನಾಗರಾಜ್ (35) ನನ್ನು ಕೆಸಿನಮನೆ ಗ್ರಾಮದ ಅಭಯಾರಣ್ಯದ ಗುಡ್ಡಕ್ಕೆ ಕರೆಯಿಸಿ ತನ್ನ ಬಳಿ ಇದ್ದ ನಾಡ ಬಂದೂಕುನಿಂದ ಗುಂಡಿಕ್ಕಿ ಕೊಂದಿದ್ದರು. ಬಳಿಕ ನಾಗರಾಜ್ ಬಳಿ ಇದ್ದ ಬೈಕ್, ಹಣ, ಬಂಗಾರದ ಚೈನ್…
ಕೆಂಚನಾಲ : ಯುವಕನಿಗೆ PFI ಸಂಘಟನೆ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ – ದೂರು ದಾಖಲು|Kenchanal
ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಯುವಕನೊಬ್ಬ ನಿಗೆ ಪಿಎಫ಼್ ಐ ಸಂಘಟನೆ ಹೆಸರಿನಲ್ಲಿ ಸಾಮಾಜಿಕ ಜಾಲತಾಣವಾದ instragram ನಲ್ಲಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಕೆಂಚನಾಲ ಗ್ರಾಮದ ಸುಮಂತ್ ಎಂಬ ಯುವಕನಿಗೆ ಸಾಮಾಜಿಕ ಜಾಲತಾಣವಾದ ಇನ್ಸ್ಟ್ರಾಗ್ರಾಮ್ ನಲ್ಲಿ only____pfi ಎಂಬ ಖಾತೆಯಿಂದ ಜೀವ ಬೆದರಿಕೆ ಬಂದಿದೆ ಎಂದು ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆಯ ಹಿನ್ನಲೆ : ಸಾಮಾಜಿಕ ಜಾಲತಾಣವಾದ Instagram ನ ಸಕ್ರೀಯ ಸದಸ್ಯನಾಗಿರುವ ಸುಮಂತ್ ಗೆ only___pfi ಎಂಬ…
ಭದ್ರಾವತಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಕೋಮುಗಳ ಗುಂಪಿನ ನಡುವೆ ಗಲಾಟೆ – ಓರ್ವನಿಗೆ ಚೂರಿ ಇರಿತ : ವದಂತಿಗಳಿಗೆ ಕಿವಿಗೊಡದಂತೆ ಪೊಲೀಸ್ ಇಲಾಖೆ ಮನವಿ|bhadravathi
ಕ್ಷುಲ್ಲಕ ಕಾರಣಕ್ಕೆ ಎರಡು ಕೋಮಿನ ಯುವಕರ ನಡುವೆ ಗಲಾಟೆ ನಡೆದಿರುವ ಘಟನೆ ಭದ್ರಾವತಿಯ ಗಾಂಧಿ ವೃತ್ತದಲ್ಲಿ ನಡೆದಿದೆ. ಗಲಾಟೆಯಲ್ಲಿ ಅರವಿಂದ್ ಮತ್ತು ಗೌತಮ್ ಎಂಬುವವರಿಗೆ ಗಾಯವಾಗಿದೆ. ಇಬ್ಬರನ್ನು ಭದ್ರವತಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೆ ಆಸ್ಪತ್ರೆ ಬಳಿಯೂ ಎರಡು ಕೋಮಿನ ಯುವಕರ ನಡುವೆ ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ರಿಜ್ವಾನ್ ಎಂಬುವರಿಗೆ ಚಾಕು ಇರಿಯಲಾಗಿದ್ದು, ಹರೀಶ್ ಎಂಬುವವರಿಗೆ ಗಾಯವಾಗಿದೆ. ಚಾಕು ಇರಿತಕ್ಕೊಳಗಾದ ರಿಜ್ವಾನ್ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭದ್ರಾವತಿ ಹಳೇ ನಗರ ಪೊಲೀಸ್…
ಹುಲಿಕಲ್ ಘಾಟ್ ಭೀಕರ ಅಪಘಾತ ಪ್ರಕರಣ : ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು – ಮೃತರ ಸಂಖ್ಯೆ ಮೂರಕ್ಕೆ ಏರಿಕೆ|Hulikal accident
ಹೊಸನಗರ ತಾಲೂಕಿನ ಹುಲಿಕಲ್ ನಲ್ಲಿ ನಡೆದ ಅಪಘಾತ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯು ಮೃತಪಟ್ಟಿದ್ದಾರೆ. ಗುರುವಾರ ತಡರಾತ್ರಿ ನಡೆದಿದ್ದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿತ್ತು ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ನಂತರ ಚಂದ್ರಗಿರಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದ ಕಂಪದ ಕೈ ರವಿ ರವರ ಪತ್ನಿ ಶಾಲಿನಿ ಮೃತಪಟ್ಟಿದ್ದಾರೆ. ಘಟನೆಯ ಹಿನ್ನಲೆ: ಗುರುವಾರ ರಾತ್ರಿ ಹುಲಿಕಲ್ ಘಾಟ್ ನಲ್ಲಿ ಬೈಕ್ ನಲ್ಲಿ ತೆರಳುತ್ತಿರುವವರ ಮೇಲೆ…
ಉದ್ಯೋಗ ಕೊಡಿಸುವುದಾಗಿ ನಂಬಿಸಿ ನಾಲ್ವರು ಮಹಿಳೆಯರಿಗೆ ವಂಚನೆ : ಪ್ರಕರಣ ದಾಖಲು|Cheating
ಹಾಸ್ಟೆಲ್ ನ ವಾರ್ಡನ್ ಎಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ ತನ್ನ ಪ್ರಭಾವದಿಂದ ಕೆಲಸ ಕೊಡಿಸುವುದಾಗಿ ನಂಬಿಸಿ ನಾಲ್ವರು ಮಹಿಳೆಯರಿಗೆ ವಂಚಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದೆ. ಶಿವಮೊಗ್ಗದ ನಿವಾಸಿಯಾದ ಸುನಿಲ್,ಸಾಗರದ ಶಾಹಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಮಹಿಳೆಯರಿಗೆ ಪರಿಚಿತನಾಗಿದ್ದಾನೆ. ಸುನಿಲ್ ಅವರಿಗೆ ಸುಳ್ಳು ಹೇಳಿ, “ನಾನು ಆನಂದಪುರದ ಯಡೇಹಳ್ಳಿಯ ಇಂದಿರಾ ಗಾಂಧಿ ವಸತಿ ಸಂಸ್ಥೆಯಲ್ಲಿ ಹಾಸ್ಟೆಲ್ ವಾರ್ಡನ್ ಆಗಿದ್ದೇನೆ. ಅವರು ಅದೇ ಸಂಸ್ಥೆಯಲ್ಲಿ ಕಂಪ್ಯೂಟರ್ ಆಪರೇಟರ್, ಹೌಸ್ ಕೀಪಿಂಗ್ ಸಿಬ್ಬಂದಿ ಮತ್ತು ಅಡುಗೆಯವರಾಗಿ…
ಶಿವಮೊಗ್ಗ : ಜಾಗದ ವಿಚಾರದಲ್ಲಿ ಗುಂಪು ಘರ್ಷಣೆ – ಉದ್ವಿಗ್ನ ವಾತವಾರಣ : ಒಂಬತ್ತು ಮಂದಿ ಪೊಲೀಸ್ ವಶಕ್ಕೆ|Group conflict
ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಶಿವಮೊಗ್ಗ ತಾಲೂಕಿನ ಹಾರೊ ಬೆನವಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ. ಈ ಗ್ರಾಮದಲ್ಲಿ ಇರುವ ಜಾಗದ ವಿಚಾರದಲ್ಲಿ ಒಂದು ಗುಂಪು ಇನ್ನೊಂದು ಗುಂಪಿನ ಮೇಲೆ ಹಲ್ಲೆಗೆ ಮುಂದಾಗಿದ್ದರು ಎಂಬ ಆರೋಪ ಕೇಳಿಬಂದಿದೆ. ಗ್ರಾಮಸ್ಥರು ಯುವಕರಿಗೆ ಈ ರೀತಿ ಮಾಡುವುದು ತಪ್ಪು ಎಂದು ಹೇಳಲು ಹೋದಾಗ ಮಾತಿಗೆ ಮಾತು ಬೆಳೆದು ಘರ್ಷಣೆ ಆಗಿದೆ ಎಂದು ತಿಳಿದುಬಂದಿದೆ. ಈ ವೇಳೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಹೊಳೆ…
ಎಂಎಸ್ ಐಎಲ್ ಗೋಡೆ ಕೊರೆದು ಲಕ್ಷಾಂತರ ರೂ ಮೌಲ್ಯದ ಮದ್ಯ ಕಳ್ಳತನ|MSIL
ಗೋಡೆ ಕೊರೆದು ಎಂಎಸ್ ಐಎಲ್ ಮದ್ಯದ ಅಂಗಡಿಯಿಂದ ಮಧ್ಯ ಕಳ್ಳತನ ಮಾಡಿರುವ ಘಟನೆ ಸಾಗರ ತಾಲೂಕಿನ ಬೆಳ್ಳಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ msil ಮದ್ಯದ ಮಳಿಗೆಯ ಮಾಲಿಕರು ಎಂದಿನಂತೆ ರಾತ್ರಿ ಮಳಿಗೆಗೆ ಬೀಗ ಹಾಕಿಕೊಂಡು ಹೋಗಿದ್ದರು.ಮರುದಿನ ತೋಟಕ್ಕೆ ಕೆಲಸಕ್ಕೆ ಹೋಗುವವರು ಗಮನಿಸಿ,ಮಾಲಿಕರಿಗೆ ದೂರವಾಣಿ ಮೂಲಕ ಮದ್ಯದ ಮಳಿಗೆ ಕಳ್ಳತನವಾಗಿದ್ದನ್ನು ತಿಳಿಸಿದ್ದಾರೆ. ಮಾಲಿಕ ರವಿಯವರು ಮಳಿಗೆಗೆ ಬಂದು ಪರಿಶೀಲಿಸಿದಾಗ ಕಳ್ಳರು ಬಾಗಿಲು ಮುರಿಯಲು ಸಾಧ್ಯವಾಗದೇ ಇದ್ದಾಗ ಗೋಡೆ ಕೊರೆದು ಒಳ ಪ್ರವೇಶಿಸಿ ಲಕ್ಷಾಂತರ ರೂ ಮೌಲ್ಯದ ಮದ್ಯವನ್ನು ಕಳ್ಳತನ ಮಾಡಿದ್ದಾರೆ….
ತೀರ್ಥಹಳ್ಳಿ : ತುಂಗಾ ನದಿಯಲ್ಲಿ ಅನಾಮಧೇಯ ಶವ ಪತ್ತೆ|Thirthahalli
ತುಂಗಾ ನದಿಯಲ್ಲಿ ಅನಾಮಧೇಯ ಶವವೊಂದು ಪತ್ತೆಯಾಗಿದ್ದು,ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ತೂದೂರು ಬಳಿಯಲ್ಲಿ ಹರಿಯುವ ತುಂಗಾ ನದಿಯಲ್ಲಿ ಅನಾಮಧೇಯ ಶವವೊಂದು ಪತ್ತೆಯಾಗಿದೆ. ತೂದೂರು ಗ್ರಾಮದ ಸರ್ಕಾರಿ ಶಾಲೆ ಹಿಂಬಾಗ ನದಿಯಲ್ಲಿ ಮೃತದೇಹ ತೇಲುತ್ತಿರುವುದನ್ನು ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಈಜುಗಾರರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸಹಾಯದಿಂದ ಉಕ್ಕಡದಲ್ಲಿ ಶವವನ್ನು ಮೇಲಕ್ಕೆತ್ತಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.