ಕ್ರೈಂ ಸುದ್ದಿ:
ಕೊಡಚಾದ್ರಿ ಬೆಟ್ಟವೇರಿದ್ದ ಕೇರಳ ಮೂಲದ ವ್ಯಕ್ತಿ ಹೃದಯಾಘಾತದಿಂದ ಸಾವು|Kodachadri
ಕೊಡಚಾದ್ರಿ ಗಿರಿ ಹತ್ತಿದ ವ್ಯಕ್ತಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಕೇರಳದ ಕನ್ನೂರು ಜಿಲ್ಲೆಯ ವಾಲಪ್ಪಿಲ್ ಸಮೀಪದ ಕೊಟ್ಟಾರತು ಗ್ರಾಮದ ನಿವಾಸಿ ಗೋವಿಂದನ್ ಕುನ್ನಪ್ಪ (72) ಮೃತ ವ್ಯಕ್ತಿ ಶುಕ್ರವಾರದಂದು ಕೇರಳದಿಂದ ಕೊಲ್ಲೂರು ಶ್ರೀ ಮೂಕಾಂಬಿಕ ದರ್ಶನಕ್ಕೆ ಬಂದಿದ್ದ ಗೋವಿಂದನ್ ಕುಟುಂಬ ಕೊಲ್ಲೂರಿನಲ್ಲಿ ವಾಸ್ತವ್ಯ ಹೂಡಿ ಇಂದು ಬೆಳಿಗ್ಗೆ ಕೊಡಚಾದ್ರಿ ಗಿರಿಗೆ ಹೋಗಿದ್ದು ಪ್ರವಾಸಿಮಂದಿರದಿಂದ ಗಿರಿ ತುದಿಯ ಸರ್ವಜ್ಞ ಪೀಠಕ್ಕೆ ಕಾಲ್ನಡಿಗೆಯಲ್ಲಿ ತೆರಳಿದ್ದರು. ಸರ್ವಜ್ಞ ಪೀಠ ತಲುಪಿದ ನಂತರ ಅಲ್ಲೇ ಗೋವಿಂದನ್ ಕುನ್ನಪ್ಪ ಕುಸಿದು…
ರಿಪ್ಪನ್ಪೇಟೆ : ಧರ್ಮಸ್ಥಳಕ್ಕೆ ಹೋಗಿ ಕೇಶ ಮುಂಡನೇ ಮಾಡಿಸಿಕೊಂಡು ಬಂದಿದ್ದ ವ್ಯಕ್ತಿ ಆತ್ಮಹತ್ಯೆ|Sucide
ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಮದ ಇಂದಿರಾನಗರ ನಿವಾಸಿ ಸತೀಶ್ (35) ತನ್ನ ಮನೆಯಲ್ಲಿಯೇ ಇಂದು ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಗಾರೆ ಕೆಲಸ ಮಾಡಿಕೊಂಡಿದ್ದ ಈತ ಮಾನಸಿಕವಾಗಿ ನೊಂದಿದ್ದ. ಕಳೆದ ಮೂರು ದಿನಗಳ ಹಿಂದಷ್ಟೇ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದು ಪೂಜೆ ಸಲ್ಲಿಸಿ ಕೇಶ ಮುಂಡನ ಮಾಡಿಸಿಕೊಂಡು ಬಂದಿದ್ದ ಎಂದು ತಿಳಿದುಬಂದಿದೆ. ಪತ್ನಿ, ಇಬ್ಬರು (ಪುತ್ರಿ, ಪುತ್ರ) ಚಿಕ್ಕ ಮಕ್ಕಳನ್ನು ಹಾಗೂ ಸಹೋದರ ಸೇರಿದಂತೆ ಅಪಾರ…
ಗರ್ತಿಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಳ್ಳತನ| ಕೋಣಂದೂರಿನ ಎರಡು ಶಾಲೆಗಳಲ್ಲಿ ಕಳ್ಳತನ|theft
ಗರ್ತಿಕೆರೆ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಬೀಗಗಳನ್ನು ತುಂಡರಿಸಿ ಒಳ ನುಗ್ಗಿದ ದುಷ್ಕರ್ಮಿಗಳು ಗಾಡ್ರೇಜ್ ಬೀರುಗಳನ್ನು ಮುರಿದು ಕಡತಗಳನ್ನು ಚೆಲ್ಲಾಪಿಲ್ಲಿ ಮಾಡಿ ಗಾಡ್ರೇಜ್ ಬೀರುನಲ್ಲಿದ್ದ ಅಂದಾಜು 20 ಸಾವಿರ ಕ್ಕೂ ಹೆಚ್ಚು ಹಣವನ್ನು ದೋಚಿಕೊಂಡು ಹೋಗಿರುವ ಘಟನೆ ತಡರಾತ್ರಿ ನಡೆದಿದೆ. ಇಂದು ಬೆಳಿಗ್ಗೆ ಕಾಲೇಜು ಸಿಬ್ಬಂದಿಗಳು ಕಾಲೇಜಿಗೆ ಬಂದಾಗ ಬೀಗ ಮುರಿದ ಪರಿಸ್ಥಿತಿ ನೋಡಿ ಕಾಲೇಜಿನ ಕಡತಗಳು ಚೆಲ್ಲಾಪಿಲ್ಲಿಯಾಗಿ ಇರುವುದನ್ನು ಕಂಡು ದಂಗಾಗಿ ಕಾಲೇಜಿನ ಪ್ರಾಚಾರ್ಯರಿಗೆ ಹಾಗೂ ಪೊಲೀಸರಿಗೆ ಘಟನೆ ಬಗ್ಗೆ ತಿಳಿಸಿದ್ದಾರೆ. ಸ್ಥಳಕ್ಕೆ ಶ್ವಾನ…
ತೀರ್ಥಹಳ್ಳಿ : ಶಾಲಾ ಬಾಲಕಿಯನ್ನು ಅಪಹರಣ ಮಾಡಲು ಯತ್ನಿಸಿದ ದುಷ್ಕರ್ಮಿಗಳು !!!Thirthahalli
ತೀರ್ಥಹಳ್ಳಿ : ತಾಲೂಕಿನ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಮೇಲಿನಕುರುವಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಬಳಿ ಸಂಜೆ 4.30 ರ ಶಾಲೆ ಬಿಡುವ ವೇಳೆಗೆ ಓಮಿನಿ ಕಾರಿನಲ್ಲಿ ಬಂದ ನಾಲ್ಕರಿಂದ ಐದು ಜನರ ತಂಡ ಶಾಲೆಯ ಸಮೀಪದಲ್ಲೇ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಓಮಿನಿ ಕಾರಿನಲ್ಲಿ ಬಲವಂತವಾಗಿ ಹೊತ್ತೊಯ್ಯಲು ಪ್ರಯತ್ನಿಸಿರುವ ದುರ್ಘಟನೆ ಗುರುವಾರ ಸಂಜೆಯ ವೇಳೆ ನೆಡೆದಿದೆ. ವಿದ್ಯಾರ್ಥಿನಿಯನ್ನು ಕಾಪಾಡಿದ ವಿದ್ಯಾರ್ಥಿ: ಇದನ್ನು ನೋಡಿದ ಶಾಲಾ ವಿದ್ಯಾರ್ಥಿ ಅಕುಲ್ ಎಂಬಾತ ವಿದ್ಯಾರ್ಥಿನಿಯನ್ನು ಹೊತ್ತೊಯ್ಯಲು ಬಂದಿದ್ದ ತಂಡದವರ ಮೇಲೆ ಕಲ್ಲು ಎಸೆದು…
ಆನಂದಪುರ : ಕುಟುಂಬದವರೊಂದಿಗೆ ಬಟ್ಟೆ ತೊಳೆಯಲು ಹೋದಾಗ ಕೆರೆಯಲ್ಲಿ ಮುಳುಗಿ ಯುವಕ ಸಾವು|ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ|Crimenews
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಗಿಳಾಲಗುಂಡಿ ಗ್ರಾಮದ ಅಮ್ಮನಕೆರೆಯಲ್ಲಿ ಯುವಕನೊಬ್ಬ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಗಿಳಾಲಗುಂಡಿಯಲ್ಲಿ ತಮ್ಮ ಸಂಬಂಧಿಕರ ಮನೆಯ ಮದುವೆಗೆಂದು ಆಗಮಿಸಿದ್ದ ಚಿಕ್ಕಮಗಳೂರಿನ ಸಮೀಪದ ಹಾಂದಿ ಗ್ರಾಮದ ಯುವಕ ಅಮಿನ್ (19 ) ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಅಮ್ಮನಕೆರೆಯಲ್ಲಿ ಕುಟುಂಬದವರ ಜೊತೆ ಬಟ್ಟೆ ತೊಳೆಯಲು ಬಂದಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಘಟನೆ ತಿಳಿಯುತ್ತಿದ್ದಂತೆ ಕುಟುಂಬದವರು ಅಗ್ನಿಶಾಮಕ ದಳಕ್ಕೆ ಮಾಹಿತಿ ತಿಳಿಸಿದ್ದಾರೆ.ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಕಾರ್ಯಾಚರಣೆಯ ಮೂಲಕ ಯುವಕನ…
ರಿಪ್ಪನ್ಪೇಟೆ : ಕೌಟುಂಬಿಕ ಕಲಹಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ|Sucide
ರಿಪ್ಪನ್ಪೇಟೆ : ಕೌಟುಂಬಿಕ ಕಲಹದಿಂದ ಬೇಸತ್ತು ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಸಮೀಪದ ನೇರಲಮನೆ ಗ್ರಾಮದಲ್ಲಿ ನಡೆದಿದೆ. ನೇರಲೆಮನೆ ಗ್ರಾಮದ ಬೀರಪ್ಪ (50) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ನೇರಲಮನೆ ಗ್ರಾಮದ ಬೀರಪ್ಪ ರವರ ಪತ್ನಿ ತನ್ನ ಇಬ್ಬರು ಮಕ್ಕಳೊಂದಿಗೆ ಗಂಡನನ್ನು ಬಿಟ್ಟು ಬೆಂಗಳೂರಿನಲ್ಲಿ ನೆಲೆಸಿದ್ದು, ಕಳೆದ ಒಂದು ವರ್ಷದ ಹಿಂದೆ ತನ್ನ ಗಂಡನ ವಿರುದ್ಧ ಹೊಸನಗರ ನ್ಯಾಯಾಲಯದಲ್ಲಿ ವಿಚ್ಛೇಧನ ಹಾಗೂ ಜೀವನಾಂಶಕ್ಕಾಗಿ ಧಾವೆ ಹೂಡಿರುತ್ತಾರೆ.ಸಂಸಾರದ ವಿಚಾರವಾಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಬೀರಪ್ಪ ಮದ್ಯಪಾನ ಮಾಡುವ…
ರಿಪ್ಪನ್ಪೇಟೆ : ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ನ ಹ್ಯಾಂಡ್ ಲಾಕ್ ಮುರಿದು ಕಳ್ಳತನ|BikeTheft
ರಿಪ್ಪನ್ಪೇಟೆ : ಇಲ್ಲಿನ ಸಾಗರ ರಸ್ತೆಯ ಕಾಲೇಜಿನ ಮುಂಭಾಗದಲ್ಲಿರುವ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿರುವ ಘಟನೆ ನಡೆದಿದೆ. ಕಾಲೇಜಿನ ಮುಂಭಾಗದಲ್ಲಿರುವ ಸಂತೋಷ್ ಎಂಬುವವರು ತಮ್ಮ ಮನೆ ಮುಂದೆ ಭಾನುವಾರ ರಾತ್ರಿ ನಿಲ್ಲಿಸಿದ್ದ ಮಹೀಂದ್ರಾ ಸೆಂಚುರೊ (ka 26 X 0533) ಬೈಕ್ ಬೆಳಗಾಗುವುದರೊಳಗೆ ಕಳ್ಳತನವಾಗಿದೆ. ಭಾನುವಾರ ರಾತ್ರಿ ಸಂತೋಷ್ ಕಲಾಲ್ ತಮ್ಮ ಮನೆಯ ಮುಂದಿನ ಜಗುಲಿಯಲ್ಲಿ ಬೈಕ್ ನ್ನು ಹ್ಯಾಂಡ್ ಲಾಕ್ ಮಾಡಿ ನಿಲ್ಲಿಸಿದ್ದರು.ಆದರೆ ಬೆಳಿಗ್ಗೆ ಬಂದು ನೋಡುವಾಗ ಬೈಕ್ ನಾಪತ್ತೆಯಾಗಿದೆ. ಈ ಬಗ್ಗೆ ಬೈಕ್…
ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ತಮ್ಮ ಕಾರಿನಲ್ಲಿ ಕರೆದೊಯ್ದ ಶಿವಮೊಗ್ಗ ಹೆಚ್ಚುವರಿ ಎಸ್ ಪಿ : ವಿಧಿಯಾಟಕ್ಕೆ ವ್ಯಕ್ತಿ ಸಾವು|shivamogga
ಶಿವಮೊಗ್ಗ: ರಸ್ತೆ ಅಪಘಾತದಲ್ಲಿ ಗಾಯಗೊಂಡ ಓರ್ವರನ್ನು ಶಿವಮೊಗ್ಗ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ವಿಕ್ರಂ ಆಮ್ಟೆ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗ ನಗರದ ಹೊರವಲಯದ ಹರಿಗೆ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಇರ್ಫಾನ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದರು. ಸಾರ್ವಜನಿಕರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ಆಂಬ್ಯುಲೆನ್ಸ್ಗಾಗಿ ಕಾಯುತ್ತಿದ್ದರು. ಕಾರ್ಯ ನಿಮಿತ್ತ ಭದ್ರಾವತಿಗೆ ತೆರಳಿ ಅದೇ ಮಾರ್ಗವಾಗಿ ಶಿವಮೊಗ್ಗಕ್ಕೆ ಹಿಂದಿರುಗುತ್ತಿದ್ದ ಹೆಚ್ಚುವರಿ ಎಎಸ್ಪಿ ವಿಕ್ರಂ ಆಮ್ಟೆ…
ಗೃಹಸಚಿವರ ತವರಿನಲ್ಲೇ ಅಕ್ರಮ ಮದ್ಯಕ್ಕೆ ವ್ಯಕ್ತಿ ಬಲಿ !!!!!!!?|Guddekoppa
ತೀರ್ಥಹಳ್ಳಿ : ಗೃಹಸಚಿವ ಆರಗ ಜ್ಞಾನೇಂದ್ರ ಅವರ ತವರೂರು ಹೊದಲ ಗ್ರಾಮಪಂಚಾಯಿತಿ ವ್ಯಾಪ್ತಿಯ ಗುಡ್ಡೆಕೊಪ್ಪ ಸಮೀಪದ ತಲವಡ್ಕದ ಕುಟ್ರ ಎಂಬ ಹಳ್ಳಿಯಲ್ಲಿ ಅಕ್ರಮ ಮದ್ಯಕ್ಕೆ ವ್ಯಕ್ತಿ ಬಲಿಯಾದ ಘಟನೆ ಶನಿವಾರ ರಾತ್ರಿ ನೆಡೆದಿದೆ. ಕೆಲವು ದಿನಗಳ ಹಿಂದೆ ಊರಿನ ಗ್ರಾಮಸ್ಥರೆಲ್ಲರೂ ಸೇರಿ ದೈವ ಸಾನಿಧ್ಯದಲ್ಲಿ ನಮ್ಮ ಊರಿನ ಯಾವುದೇ ಅಂಗಡಿ, ಮಳಿಗೆ, ಮನೆ, ಕೈಚೀಲ, ಮತ್ತು ಹೊರ ಊರಿನಿಂದ ಅಥವಾ ಬೇರೆ ಯಾವ ವ್ಯಕ್ತಿಯೂ ಹೊರಗಡೆಯಿಂದ ಮದ್ಯವನ್ನು ತಂದು ಈ ಊರಿನಲ್ಲಿ ಮಾರಾಟ ಮಾಡಬಾರದೆಂದು ದೈವ ನ…
ಭೀಕರ ಕಾರು ಅಪಘಾತ : ಹೊಸನಗರ ಮೂಲದ ಮಾಜಿ ಯೋಧ ಸಾವು – ಇಬ್ಬರ ಸ್ಥಿತಿ ಗಂಭೀರ|accident
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮಾವಿನಹೊಳೆ ನಿವಾಸಿ ಪ್ರಗತಿಪರ ರೈತ ಹಾಗೂ ಮಾಜಿ ಸೈನಿಕ ಚನ್ನಪ್ಪ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತರಾಗಿದ್ದಾರೆ. ಬೆಂಗಳೂರಿನಿಂದ ಮನೆಗೆ ವಾಪಸ್ಸಾಗುವಾಗ ಶಿವಮೊಗ್ಗ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮರಣ ಹೊಂದಿರುವುದಾಗಿ ಎಂದು ತಿಳಿದು ಬಂದಿದೆ. ಈ ಅಪಘಾತದಲ್ಲಿ ಮೃತರ ಪತ್ನಿ ಮತ್ತು ಪುತ್ರಿಗೂ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಪುತ್ರಿಯನ್ನು ಬೆಂಗಳೂರಿಗೆ ತನ್ನ ಮಾರುತಿ ಆಲ್ಟೊ 800 ಕಾರಿನಲ್ಲಿ ಕರೆದುಕೊಂಡು ಹೋಗಿ…