Headlines

ಅಕ್ರಮ ಜಾನುವಾರು ಸಾಗಾಟ – ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ |bajarangdal

ಮಾರಾಟದ ಉದ್ದೇಶಕ್ಕಾಗಿ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಬಜರಂಗದಳದ ಕಾರ್ಯಕರ್ತರು ರಕ್ಷಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಪ ಗ್ರಾಮದಲ್ಲಿ ಇಂದು ನಡೆದಿದೆ.  ಹೊಸನಗರ ಕಡೆಯಿಂದ ಶಿರಾಳಕೊಪ್ಪದ ಕಡೆಗೆ ಅಶೋಕ್ ಲೈಲೆಂಡ್ ದೋಸ್ತ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಆರು ಎತ್ತಿನ ಹೋರಿ ಹಾಗೂ ಒಂದು ಎಮ್ಮೆ ಕರುವನ್ನು ಭಜರಂಗದಳದ ಕಾರ್ಯಕರ್ತರು ರಸ್ತೆಗೆ ಅಡ್ಡಗಟ್ಟಿ ವಶಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇಂದು ಬೆಳಿಗ್ಗೆ ಕೆಎ 17 ಎಎ 0196 ವಾಹನದಲ್ಲಿ ಸುಮಾರು ಆರು ಎತ್ತಿನಹೋರಿ ಹಾಗೂ ಒಂದು ಎಮ್ಮೆ…

Read More

ಅಕ್ಕನ ಬಾಣಂತನಕ್ಕೆ ಹೋದ ಯುವತಿ ಭಾವನಿಂದ ಗರ್ಭಿಣಿ – ಮದುವೆಗೆ ಒಲ್ಲೆ ಎಂದಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ |suicide

 ಶಿವಮೊಗ್ಗ ಜಿಲ್ಲೆ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 21 ವರ್ಷದ ಯುವತಿ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಕ್ಕನ ಬಾಣಂತನಕ್ಕೆ ಹೋಗಿದ್ದ ವೇಳೆ ಅಕ್ಕನ ಗಂಡ ಪುಸಲಾಯಿಸಿ ಬಲವಂತದಿಂದ ದೈಹಿಕ ಸಂಪರ್ಕ ಬೆಳೆಸಿದ್ದ.ನಂತರ ಎಲ್ಲಾರಿಗೂ ಗೊತ್ತಾದ ನಂತರ ಉಡಾಫೆ ಮಾತನಾಡಿದ ಕಾರಣ ಯುವತಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.           [     ಆರೋಪಿ ಪ್ರಶಾಂತ್  ] ಚೋರಡಿಯ ಮರಾಠೀ ಕ್ಯಾಂಪ್ ನಿವಾಸಿಯಾದ ಯುವತಿ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾಳೆ.ಅದೇ ಮರಾಠಿ…

Read More

ರಿಪ್ಪನ್‌ಪೇಟೆ : ಮಹಿಳೆಯೊಬ್ಬರ ಅಸ್ಥಿಪಂಜರ ಪತ್ತೆ – ಕಳೆದ ವರ್ಷ ನಾಪತ್ತೆಯಾಗಿದ್ದ ಮಹಿಳೆ ಎಂಬ ಶಂಕೆ | Human skeleton

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹಾರಂಬಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಮಹಿಳೆಯೊಬ್ಬರ  ಅಸ್ಥಿಪಂಜರ ಆಕೆ ಧರಿಸಿದ್ದ ವಸ್ತ್ರದ ಜೊತೆಗೆ ಪತ್ತೆಯಾಗಿರುವ ಘಟನೆ ನಡೆದಿದೆ. ವರ್ಷದ ಹಿಂದೆ ನಾಪತ್ತೆಯಾಗಿದ್ದ ವೃದ್ದೆ ಎಂಬ ಶಂಕೆ : ಹಾರಂಬಳ್ಳಿ ಗ್ರಾಮದ ಮಹಿಳೆ ಗಿಡ್ಡಮ್ಮ (80) ಕಳೆದ 12-07-2021ರಂದು ನಾಪತ್ತೆಯಾಗಿದ್ದರು.ಕೂಡಲೇ ಗಿಡ್ಡಮ್ಮ ಅವರ ಮಕ್ಕಳು ರಿಪ್ಪನ್‌ಪೇಟೆ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ನಾಪತ್ತೆ  ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.ಆದರೆ ವೃದ್ದೆ ಎಲ್ಲೂ ಪತ್ತೆಯಾಗಿರಲಿಲ್ಲ. ನಾಪತ್ತೆಯಾಗಿ ಒಂದು ವರ್ಷ ಎರಡು ತಿಂಗಳ ನಂತರ…

Read More

ಎರಡು ಕಾರುಗಳು,ಬಸ್ ಮತ್ತು ಬೈಕ್ ನಡುವೆ ಸರಣಿ ಅಪಘಾತ : ನಾಲ್ವರಿಗೆ ತೀವ್ರ ಗಾಯ-ಮೆಗ್ಗನ್ ಗೆ ದಾಖಲು |Accident

ಎರಡು ಕಾರುಗಳು, ಬಸ್ಸು ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿ, ನಾಲ್ವರು ಗಾಯಗೊಂಡಿರುವ ಘಟನೆ ಸಾಗರ ತಾಲೂಕಿನ ಕುಗ್ವೆ ಕ್ರಾಸ್ ಬಳಿ ಸಂಜೆ ಸಂಭವಿಸಿದೆ.  ಕುಗ್ವೆ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ವ್ಯಾಗನಾರ್ ಕಾರು, ಬೈಕ್, ಕಾರು ಮತ್ತು ಬಸ್ಸಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಜೋಗ ನಿವಾಸಿಗಳಾದ ಕೃಷ್ಣಮೂರ್ತಿ, ಬಾಲಕೃಷ್ಣ, ಮಧು ಮತ್ತು ಶ್ರೀಧರ್ ಎಂಬುವವರಿಗೆ ತೀವ್ರ ಗಾಯವಾಗಿದೆ. ಅವರನ್ನು ಕೂಡಲೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ…

Read More

ಕೆ ಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸಾವು

ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಭದ್ರಾವತಿ ನಗರದ ಉಂಬ್ಳೆಬೈಲು ರಸ್ತೆಯಲ್ಲಿ ಕೆಎಸ್ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಆಂಜನೇಯ ಅಗ್ರಹಾರದ ಮೂರನೇ ತಿರುವಿನ ನಿವಾಸಿ ಲೋಕೇಶ್ ಎಂಬಾತನು ಬೈಕ್ ನಲ್ಲಿ ಹೋಗುತ್ತಿದ್ದಾಗ ನ್ಯೂಟೌನ್ ಪೊಲೀಸ್ ಠಾಣೆಯ ಸಮೀಪ ಕೆಎಸ್ ಆರ್ ಟಿ ಸಿ ಬಸ್ ಗೆ ಡಿಕ್ಕಿ ಹೊಡೆದಿದ್ದಾರೆ. ಬೈಕ್ ಸವಾರ…

Read More

ಖಾಸಗಿ ಈಜುಕೊಳದಲ್ಲಿ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು :

ಖಾಸಗಿ ಈಜುಕೊಳದಲ್ಲಿ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ತನ್ನ ಸ್ನೇಹಿತರೊಂದಿಗೆ ಶಿವಮೊಗ್ಗದ ಶಕ್ತಿಧಾಮದ ಖಾಸಗಿ‌ ಈಜುಕೊಳಕ್ಕೆ ತೆರಳಿದ್ದ ಜೋಸೆಫ್ ನಗರದ ಯುವಕ ರಾಕೇಶ್ ಎಂಬ 18 ವರ್ಷದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಡಿವಿಎಸ್ ಕಾಮರ್ಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ರಾಕೇಶ್ ಎರಡು ಮೂರು ದಿನಗಳಿಂದ ಸ್ನೇಹಿತರೊಂದಿಗೆ ಈಜುಕೊಳದಲ್ಲಿ ತೆರಳಿ ಈಜು ಹೊಡೆಯಲು ಯೋಜನೆ ಹಾಕಿಕೊಂಡಿದ್ದ. ಇಂದು ಮಧ್ಯಾಹ್ನ ಈಜುಕೊಳಕ್ಕೆ ತೆರಳಿದ್ದ ಯುವಕ ಮನೆಗೆ ಹೊರಡುವ ವೇಳೆ ನೀರಿನಿಂದ…

Read More

ಕೋಳಿ ಕದಿಯುತ್ತಿದ್ದ ಎನ್ನುವ ಕಾರಣಕ್ಕೆ ಮೃಗವಧೆ ರಾಜು ಎಂಬಾತನನ್ನು ಬಡಿದು ಕೊಂದು ಬಿಟ್ರಾ ದುಷ್ಕರ್ಮಿಗಳು..!!!!!!!????

ಅಂಗಡಿಗಳಲ್ಲಿ ಕೋಳಿ ಕದಿಯುತ್ತಿದ್ದ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಬಡಿದು ಕೊಂದಿರುವಂತಹ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಮೃಗವಧೆಯಲ್ಲಿ ನಡೆದಿದೆ ಎನ್ನಲಾಗುತ್ತಿದೆ.  ಮೃಗವಧೆಯ ರಾಜು ಹೇಗೆ ಸಾವನ್ನಪ್ಪಿರುವ ವಿಚಾರ ಇದೀಗ ಹೊರಕ್ಕೆ ಬಂದಿದೆ. ಆ ಊರು ಹಾಗೂ ಅಲ್ಲಿನ ಸ್ಥಳಿಯರು ಹೇಳುವ ಪ್ರಕಾರ ಆತ ಅಡಿಕೆ ಗೊನೆ ತೆಗೆಯುವವನಾಗಿದ್ದು ಹಾಗೂ ಮದ್ಯ ವ್ಯಸನಿಯಾಗಿದ್ದ. ಕಳೆದ ಮೂರು ದಿನಗಳಿಂದ ರಾಜು ಮನೆಯಲ್ಲಿರಲಿಲ್ಲ.  ಕೋಳಿಯಂಗಡಿಗಳಲ್ಲಿ ಕೋಳಿ ಕದಿಯುತ್ತಿದ್ದ ಎಂಬ ಕಾರಣಕ್ಕೆ ಆತನ ಮೇಲೆ ಶಿಶಿರ, ಶಿವು ಮತ್ತು ವಿಜಯೇಂದ್ರ ಎಂಬ ಆರೋಪಿಗಳು ಹಲ್ಲೆ…

Read More

ಗೃಹ ಸಚಿವರ ಸ್ವಕ್ಷೇತ್ರದಲ್ಲಿಯೇ ವ್ಯಕ್ತಿಯೊಬ್ಬನ ಭೀಕರ ಹತ್ಯೆ!!!!!!!!

ತೀರ್ಥಹಳ್ಳಿ : ತಾಲೂಕಿನ ಶೇಡ್ಗಾರ್  ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೃಗಾವಧೆಯ ಬೆಳ್ಳಿಕೊಡಿಗೆ ವಾಸಿ ರಾಜು (45) ಬೆಳ್ಳಂಬೆಳಗ್ಗೆ ಮನೆ ಮುಂಭಾಗದಲ್ಲಿ ಹೆಣವಾಗಿದ್ದಾರೆ. ಸಾಯುವ ಮುನ್ನ ರಾಜು ಮಾರಾಮಾರಿ ವಿಚಾರ ಕುಟುಂಬದ ಸದಸ್ಯರೊಂದಿಗೆ ಹಂಚಿಕೊಂಡಿದ್ದು, ಪೊಲೀಸರ ತನಿಖೆಯಿಂದ ಹೆಚ್ಚಿನ ಮಾಹಿತಿ ಬಹಿರಂಗವಾಗಬೇಕಾಗಿದೆ. ರಾಜು ಮೂರು ದಿನಗಳಿಂದ ಮನೆಗೆ ಬಂದಿರಲ್ಲಿಲ್ಲ. ಸೋಮವಾರ ಬೆಳಿಗ್ಗೆ 6.30ರ ಸುಮಾರಿಗೆ ಮೂವರು ದುಷ್ಕರ್ಮಿಗಳು ಯದ್ವತದ್ವ ಹಲ್ಲೆ ಮಾಡಿ ಬೈಕಿನಲ್ಲಿ ಮನೆ ಮುಂಭಾಗ ತಂದು ಎಸೆದಿದ್ದಾರೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಗಂಭೀರವಾಗಿ ಗಾಯಗೊಂಡ ರಾಜು ಜೋರಾಗಿ…

Read More

ಹಸುವಿಗೆ ನೀರು ಕುಡಿಸಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು

 ಹಸುವಿಗೆ ನೀರು ಕುಡಿಸಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಬೀರನಕೆರೆ ಗ್ರಾಮದಲ್ಲಿ‌ ನಡೆದಿದೆ. ಬೀರನಕೆರೆ ಗ್ರಾಮದ ರವಿ ನಾಯ್ಕ(18) ಮೃತ ಯುವಕ. ರವಿನಾಯ್ಕ ಭಾನುವಾರ ಮಧ್ಯಾಹ್ನ ಹಸುವಿಗೆ ನೀರು ಕುಡಿಸಲು ಗ್ರಾಮದ ಎಂಪಿಎಂ ಕಟ್ಟೆಯ ಬಳಿ‌ ಹೋದಾಗ, ಹಸು ನೀರಿಗೆ ಇಳಿದಿದೆ. ಈ ವೇಳೆ ಹಸು‌ ನೀರಿನ ಆಳಕ್ಕೆ ಹೋದಾಗ ಹಸುವನ್ನು ಕರೆದುಕೊಂಡು ಬರಲು ಹೋಗಿ ಆತ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಹಸು ಮನೆಗೆ ಬಂದಿದೆ. ಆದರೆ ರವಿ ಮನೆಗೆ ಬಾರದೆ…

Read More

ನೀರಿನ ತೊಟ್ಟಿಗೆ ಬಿದ್ದು 11 ತಿಂಗಳ ಮಗು ಸಾವು : ಹೃದಯ ಹಿಂಡುತ್ತಿರುವ ಕುಟುಂಬಸ್ಥರ ಆಕ್ರಂದನ

ಮನೆಯ ಮುಂದಿನ ನೀರಿನ ತೊಟ್ಟಿಗೆ ಬಿದ್ದು 11 ತಿಂಗಳ ಮಗುವೊಂದು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದ ಛಾಯಾಗ್ರಾಹಕ ದೇವರಾಜ್ ಹಾಗೂ ಅನುಷಾ ದಂಪತಿಯ ೧೧ ತಿಂಗಳ ಮಗು ಅಕ್ಷಯ್ ಮನೆಯ ಮುಂದಿನ ತೊಟ್ಟಿಯಲ್ಲಿ ಬಿದ್ದು ಸಾವನ್ನಪ್ಪಿದೆ. ಮುಂದಿನ ವಾರ ಒಂದನೇ ವರ್ಷಕ್ಕೆ ಕಾಲಿಡುತ್ತಿದ್ದು ಮಗುವಿನ ಜನ್ಮ ದಿನವನ್ನು ಅದ್ಧೂರಿಯಾಗಿ ಆಚರಿಸಲು ಯೋಚಿಸಿದ್ದ ಮನೆಯಲ್ಲೀಗ ಸ್ಮಶಾನ ಮೌನ ಆವರಿಸಿದೆ. ಮಹಾಲಯ ಅಮವಾಸ್ಯೆ ದಿನವಾದ ಭಾನುವಾರ ಮನೆಯವರು ವಾಹನ ತೊಳೆಯುವುದು, ಪೂಜೆ ಪುನಸ್ಕಾರದ ಕಡೆ ಗಮನ…

Read More