ಕ್ರೈಂ ಸುದ್ದಿ:
20 ಸಾವಿರ ಸಾಲ ಪಡೆದ ಪತಿ ಆತ್ಮಹತ್ಯೆ! ಪತ್ನಿಗೆ ಶುರುವಾಯ್ತು ಮಾನಸಿಕ & ಲೈಂಗಿಕ ಕಿರುಕುಳ! ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ
ಶಿವಮೊಗ್ಗ : ಇಲ್ಲಿನ ಮೆಗ್ಗಾನ್ ಆಸ್ಪತ್ರೆ ಹೊರಗುತ್ತಿಗೆ ಉದ್ಯೋಗಿಯೊಬ್ಬರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷ ಸೇವಿಸಿದ ಮಹಿಳೆಗೆ, ಸಾಲದ ಹಣಕ್ಕಾಗಿ ನಾಲ್ವರು ಇನ್ನಿಲ್ಲದ ಕಿರುಕುಳ ನೀಡುತ್ತಿದ್ದರಂತೆ. ಈ ಮಾನಸಿಕ ಕಿರುಕುಳ ಹಾಗೂ ತಮ್ಮ ಮೇಲಿನ ಲೈಂಗಿಕ ಕಿರುಕಳ ತಾಳಲಾರದೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ವಿಷ ಸೇವಿಸಿದ ಪತಿ ಬಳಿಯಲ್ಲಿ 20 ಸಾವಿರ ರೂಪಾಯಿ ಪಡೆದಿದ್ದರಂತೆ. ಅದು ಕೂಡ 10 ಪರ್ಸೆಂಟ್ ಬಡ್ಡಿಗೆ! ಆದರೆ ಈ ಸಾಲವನ್ನು ಕಟ್ಟಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಲಿವರೆಗೂ ಪತಿಗೆ ಎದುರಾಗಿದ್ದ ಕಿರುಕುಳ ಅವರ…
ಹುಂಚದಕಟ್ಟೆಯಲ್ಲಿ ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು : ಅಪಘಾತವೆಸಗಿ ಪರಾರಿಯಾಗಿದ್ದ ಕಾರು ಹಾದಿಗಲ್ಲು ಸಮೀಪ ಪಲ್ಟಿ
ಹುಂಚದ ಕಟ್ಟೆ : ಇಲ್ಲಿನ ಈಶ್ವರ ದೇವಸ್ಥಾನದ ಮುಂಭಾಗ ನಡೆದುಕೊಂಡು ಹೋಗುತಿದ್ದ ಪಾದಚಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ವೃದ್ದರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹುಂಚದ ಕಟ್ಟೆ ನಿವಾಸಿ ಪುಟ್ಟಸ್ವಾಮಿ ಗೌಡ (70) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಯ ಹಿನ್ನಲೆ : ಪುಟ್ಟಸ್ವಾಮಿ ಗೌಡ ಹುಂಚದಕಟ್ಟೆ ಈಶ್ವರ ದೇವಸ್ಥಾನದ ಎದುರು ನಡೆದುಕೊಂಡು ಹೋಗುತಿದ್ದಾಗ ಹಿಂಬದಿಯಿಂದ ಬಂದ ಮಾರುತಿ ಆಲ್ಟೋ ಕಾರು ವೃದ್ದನಿಗೆ ಡಿಕ್ಕಿ ಹೊಡೆದು ವಾಹನವನ್ನು ನಿಲ್ಲಿಸದೇ ಅಲ್ಲಿಂದ …
ಹೊಸನಗರ : ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತರ ನಡುವೆ ಜಗಳ – ಸ್ನೇಹಿತನ ತಲೆಗೆ ಬಿಯರ್ ಬಾಟಲ್ ನಿಂದ ಹಲ್ಲೆ :
ಹೊಸನಗರ : ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತರು ಜಗಳವಾಡಿಕೊಂಡು ಒಬ್ಬನ ತಲೆಗೆ ಬಿಯರ್ ಬಾಟಲ್ ನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ನಾಗರಾಜ್ ಎಂಬ ಯುವಕನ ಮೇಲೆ ಬಿಯರ್ ಬಾಟಲಿಯಿಂದ ಹೊಡೆದು ಹಲ್ಲೆ ನಡೆಸಲಾಗಿದೆ. ಕ್ಷುಲ್ಲಕ ಕಾರಣಕ್ಕೆ ತಮ್ಮ ತಮ್ಮಲ್ಲಿಯೇ ಜಗಳವಾಡಿಕೊಂಡು ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಲಾಗಿದೆ.ಗಾಯಾಳುವನ್ನು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಗರಾಜ್ ಹೊಸನಗರ ಬಸ್ ನಿಲ್ದಾಣದ ಬಳಿಯಿರುವ ಕೋರಿಯರ್ ಕಚೇರಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿರುತ್ತಾನೆ. ಆ. 24 ರಂದು ಹೊಸನಗರ ಟೌನ್…
ಡಕಾಯಿತಿಗೆ ಹೊಂಚು ಹಾಕಿದ್ದ ಯುವಕರ ಹೆಡೆಮುರಿ ಕಟ್ಟಿದ ಪೊಲೀಸರು :
ಶಿವಮೊಗ್ಗ : ವಿನೋಬಾನಗರದ ಪೊಲೀಸರು ಖಡಕ್ ಕಾರ್ಯಾಚರಣೆ ನಡೆಸಿ ಡಕಾಯಿತಿ ನಡೆಸಲು ಹೊಂಚು ಹಾಕಿ ಕುಳಿತಿದ್ದ ಯುವಕರನ್ನು ಬಂಧಿಸಿದ್ದಾರೆ. ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಹೋಗುವ ಚಾನೆಲ್ ಬಳಿ ಡಕಾಯಿತಿ ನಡೆಸಲು ಹೊಂಚು ಹಾಕಿ ಕುಳಿತಿದ್ದ ಐವರು ಹುಡುಗರು ಮಾರಕಾಸ್ತ್ರಗಳನ್ನ ಹಿಡಿದು ಕಾದುಕುಳಿತಿದ್ದರು. ಈ ಮಾಹಿತಿ ಪಡೆದ ವಿನೋಬ ನಗರ ಪೊಲೀಸರ ತಂಡ ಖಡಕ್ ದಾಳಿ ನಡೆಸಿದೆ. ವಿನೋಬ ನಗರ ಪೊಲೀಸ್ ಠಾಣೆಯ ಪಿಎಸ್ಐ ಮಂಜುನಾಥ್ ಕುರಿ ನೇತೃತ್ವದಲ್ಲಿ , ಸಿಬ್ಬಂದಿಗಳಾದ ಧನಂಜಯ್ ಹೆಚ್ ಸಿ, ಮಲ್ಲಪ್ಪ ಸಿಪಿಸಿ,…
ಬೆಳ್ಳೂರು ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ರೈತ ಸಾವು :
ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತಿದ್ದ ರೈತ ವಿದ್ಯುತ್ ಅವಘಡದಿಂದ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಇಂದು ಬೆಳಿಗ್ಗೆ ಕೃಷಿ ಚಟುವಟಿಕೆ ನಿಮಿತ್ತ ತೋಟಕ್ಕೆ ಹೋದಾಗ ಈ ಅವಘಡ ಸಂಭವಿಸಿದ್ದು,ಬೆಳ್ಳೂರು ಗ್ರಾಮದ ಹಿರಿಯಣ್ಣ (58) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಮೃತ ಹಿರಿಯಣ್ಣ ಬೆಳ್ಳೂರು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಗಿರಿಜಮ್ಮ ರವರ ಪತಿಯಾಗಿದ್ದಾರೆ. ರಿಪ್ಪನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು ದೂರು ದಾಖಲಾಗಿದೆ. ಸಂತಾಪ…
ರಿಪ್ಪನ್ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಅಪಘಾತ – ಚಾಲಕ ಸಾವು
ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯ ಅಂಚೆ ಕಚೇರಿ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಅಪಘಾತವಾಗಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ. ಪಟ್ಟಣದ ಶಬರೀಶನಗರದ ನಿವಾಸಿ ಶ್ರೀನಿವಾಸ್(36) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಸಾಗರ ರಸ್ತೆಯಿಂದ ರಿಪ್ಪನ್ ಪೇಟೆ ಕಡೆಗೆ ಬರುತ್ತಿದ್ದ ಗೂಡ್ಸ್ ಆಟೊ ಅಂಚೆ ಕಚೇರಿ ಮುಂಭಾಗದಲ್ಲಿ ಇರುವ ದೊಡ್ಡ ಗುಂಡಿಯನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಅಲ್ಲಿಯೇ ನಿಂತಿದ್ದ ಬೈಕಿಗೆ ಡಿಕ್ಕಿ ಹೊಡೆದಿದೆ.ಈ ಅಪಘಾತದಲ್ಲಿ ಗೂಡ್ಸ್ ಆಟೊ ಸ್ಟೇರಿಂಗ್ ಚಾಲಕನ ಹೊಟ್ಟೆಗೆ…
ಹಣದ ವಿಚಾರಕ್ಕೆ ಗುತ್ತಿಗೆದಾರನಿಂದ ತಂದೆ ಮತ್ತು ಮಗನಿಗೆ ಚಾಕು ಇರಿತ : ತಂದೆ ಸಾವು
ಹಣದ ವಿಚಾರದಲ್ಲಿ ಅಪ್ಪ ಮತ್ತು ಮಗನಿಗೆ ಕಟ್ಟಡದ ಕಂಟ್ರ್ಯಾಕ್ಟರ್ ಚಾಕುವಿನಿಂದ ಇರಿದ ಘಟನೆ ಶಿರಾಳಕೊಪ್ಪದಲ್ಲಿ ನಡೆದಿದೆ. ಚಾಕು ಇರಿತಕ್ಕೆ ಒಳಗಾದ ತಂದೆ ದಯಾನಂದ್(69) ಮೃತಪಟ್ಟಿದ್ದಾರೆ. ದಯಾನಂದ್ ಮತ್ತು ರಾಘವೇಂದ್ರ ಎಂಬುವರು ಶಿರಾಳಕೊಪ್ಪದಲ್ಲಿ ಹಾರ್ಡ್ ವೇರ್ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದು ಇವರ ನಿವೇಶನದ ಜಾಗದಲ್ಲಿ ಕಟ್ಟಡ ಕಟ್ಟಲು ಕಂಟ್ರ್ಯಾಕ್ಟರ್ ಕೋಟೇಶ್ ಎಂಬುವರಿಗೆ ಗುತ್ತಿಗೆ ನೀಡಲಾಗಿತ್ತು. ಕಟ್ಟಡ ಸರಿ ಕಟ್ಟುತ್ತಿಲ್ಲವೆಂದು ಅಪ್ಪ ದಯಾನಂದ್ ಮತ್ತು ಮಗ ರಾಘವೇಂದ್ರ ಬೇರೆಯವರಿಗೆ ಕಟ್ಟಡದ ಗುತ್ತಿಗೆಯನ್ನ ನೀಡಿದ್ದರು. ಕಟ್ಟಡ ನಿರ್ಮಾಣದ ಬಾಕಿ ಹಾಣ…
ಬೆಂಗಳೂರು ಪೊಲೀಸರಿಗೆ ತೀರ್ಥಹಳ್ಳಿಯ ಗಾಂಧಿಚೌಕದಲ್ಲಿ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದ ನಟೋರಿಯಸ್ ಕ್ರಿಮಿನಲ್ ಮೋಹಿತ್ ಬಂಧನ :
ತೀರ್ಥಹಳ್ಳಿ : ಕೆಲವು ದಿನಗಳ ಹಿಂದೆ ತೀರ್ಥಹಳ್ಳಿ ಪಟ್ಟಣದ ಗಾಂಧಿ ಚೌಕದಲ್ಲಿ ಬೆಂಗಳೂರು ಪೊಲೀಸರಿಂದ ತಪ್ಪಿಸಿಕೊಂಡಿದ್ದ ಕೈಮರ ಮೋಹಿತ್ ಎಂಬುವ ನಟೋರಿಯಸ್ ನನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದಾರೆ. ತೀರ್ಥಹಳ್ಳಿ ತುಂಗಾ ಕಾಲೇಜು ಸಮೀಪ ಬದನೇ ಹಿತ್ಲು ನಿವಾಸಿ ಸಕೇಶ್ ಬಿನ್ ಕೃಷ್ಣ ಶೆಟ್ಟಿ ರವರನ್ನು .ಮೋಹಿತ್ ಮತ್ತು ಆತನ ಸಹಚರರಾದ ಉದಯ ಹಾಗೂ ಅನ್ಸರ್ ಎಂಬುವರು ಅಡ್ಡಗಟ್ಟಿ ದರೋಡೆಗೆ ಪ್ರಯತ್ನಿಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ಸಕೇಶ್ ನೀಡಿದ ದೂರಿನ ಮೇರೆಗೆ ತೀರ್ಥಹಳ್ಳಿ ಪೊಲೀಸರು…
ಆಯನೂರು ಬಳಿ ಮರಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್ : ಹಲವರಿಗೆ ಗಂಭೀರ ಗಾಯ
ಆಯನೂರು : ಇಲ್ಲಿನ ಸಮೀಪದ ಕದಂಬ ರೆಸ್ಟೋರೆಂಟ್ ಬಳಿ ಖಾಸಗಿ ಬಸ್ ಮರಕ್ಕೆ ಗುದ್ದಿ ಹಲವರಿಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ. ಚಾಮೇನಹಳ್ಳಿಯಿಂದ ಶಿವಮೊಗ್ಗ ಕಡೆಗೆ ತೆರಳುತಿದ್ದ ಮಂಜುನಾಥ್ ಬಸ್ ವಾಹನವೊಂದನ್ನು ಹಿಂದಿಕ್ಕಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಅಪಘಾತದಲ್ಲಿ ಚಾಮೇನಹಳ್ಳಿ ನಿವಾಸಿಗಳಾದ ಶಿಲ್ಪ(33) ಕೀರ್ತಿ(21) ಭೂಮಿಕಾ(21) ಮತ್ತು ಕಾವ್ಯಾ(21) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಮೂವರು ಶಿವಮೊಗ್ಗದ ಎಟಿ ಎನ್ ಸಿಸಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಕುಂಸಿ ಪೊಲೀಸ್ ಠಾಣೆ…
ಲಾರಿ ಚಕ್ರ ತಲೆಯ ಮೇಲೆ ಹರಿದು ಅಪರಿಚಿತ ವ್ಯಕ್ತಿ ಸಾವು :
ಆನಂದಪುರ : ಪಟ್ಟಣದ ಸಂತೋಷ್ ರೈಸ್ ಮಿಲ್ ಮುಂಭಾಗದಲ್ಲಿ ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ವ್ಯಕ್ತಿಯ ತಲೆಯ ಮೇಲೆ ಲಾರಿ ಹರಿದು ಸಾವನ್ನಪ್ಪಿರುವ ಘಟನೆ ನಡೆದಿದ್ದು,ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಆನಂದಪುರದಿಂದ ಕೊಪ್ಪಳಕ್ಕೆ ಭತ್ತದ ಹೊಟ್ಟನ್ನು ತುಂಬಿಕೊಂಡು ಹೊರಡಲು ಸಿದ್ಧವಾಗಿದ್ದ ಲಾರಿ ಅಪರಿಚಿತ ವ್ಯಕ್ತಿಯ ತಲೆ ಮೇಲೆ ಹತ್ತಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳೀಯರ ಮಾಹಿತಿಯ ಪ್ರಕಾರ ಭತ್ತದ ಹೊಟ್ಟು ತುಂಬಿಕೊಂಡು ಲಾರಿ ಹೊರಟ್ಟಿತ್ತು ಆದರೆ ಆಗ ಅಪರಿಚಿತ ವ್ಯಕ್ತಿ ಲಾರಿಯ ಕೆಳಗೆ…