ಕೊಲೆ ಮಾಡಿ ಶವವನ್ನು ಬೈಕಿನಲ್ಲಿ ಕೂರಿಸಿಕೊಂಡು ಬಂದು ಸರ್ಕಲ್ ನಲ್ಲಿ ಮಲಗಿಸಿ ಹೋದ ಆರೋಪಿಗಳು – ಅನೈತಿಕ ಸಂಬಂಧದ ಶಂಕೆ|crime news
ದ್ವಿಚಕ್ರ ವಾಹನದಲ್ಲಿ ವ್ಯಕ್ತಿಯ ಶವವನ್ನು ಕೂರಿಸಿಕೊಂಡು ಬಂದು ಊರಿನ ಸರ್ಕಲ್ ನಲ್ಲಿ ಮಲಗಿಸಿ ಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ತಾಲೂಕಿನ ಮುತ್ತಳ್ಳಿ ಗ್ರಾಮದಲ್ಲಿ ನಡೆದಿದೆ.ಇದು ಕೊಲೆ ಎಂದು ಕುಟುಂಬ ಆರೋಪಿಸಿದೆ. ಘಟನೆಯ ಹಿನ್ನಲೆ : ಶಿರಾಳಕೊಪ್ಪ ಪೊಲೀಸ್ ಠಾಣೆಯ ಮುತ್ತಳ್ಳಿ ಗ್ರಾಮದಲ್ಲಿ ಕೃಷಿ ಕಾರ್ಮಿಕನಾಗಿರುವ ಸೋಮಪ್ಪ(30) ಈತನಿಗೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಗಂಗಮ್ಮ ಎಂಬ ಮಹಿಳೆಯೊಂದಿಗೆ ಸ್ನೇಹವಿದ್ದು, ಆಕೆಯೇ ಕರೆಯಿಸಿ ಸೋಮಪ್ಪನನ್ನ ಕೊಲೆ ಮಾಡಿ ಕಳುಹಿಸಿರುವುದಾಗಿ ಮೃತನ ಕುಟುಂಬ ಆರೋಪಿಸಿದೆ. ಸೋಮಪ್ಪ ಈ ಹಿಂದೆ ಕೆಲಸದ…