Headlines

ವಿದ್ಯುತ್ ಸ್ಪರ್ಶದಿಂದ ಯುವಕ ಸಾವು|electric shock

ಮನೆಯಲ್ಲಿ ಹೋಲ್ಡರ್‌ಗೆ ಬಲ್ಪ್ ಹಾಕಲು ಹೋಗಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸಾಗರ ನಗರದ ಶಾಂತಿನಗರದಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಾಂತಿನಗರದ ನಿವಾಸಿ ರೂಪ್ ಸಿಂಗ್ (33) ಮೃತ ದುರ್ದೈವಿ. ಮನೆಯಲ್ಲಿ ಬಲ್ಬ್‌ ಬದಲಾವಣೆ ಮಾಡುವ ಸಂದರ್ಭದಲ್ಲಿ ಇವರಿಗೆ ಕರೆಂಟ್‌ ಶಾಕ್‌ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದರೂ, ಅದಾಗಲೇ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಸಾಗರ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ…

Read More

ಆಗುಂಬೆ ಘಾಟಿಯಲ್ಲಿ ಲಾರಿ ಟೈರ್ ಸ್ಪೋಟ – ಟ್ರಾಫಿಕ್ ಜಾಮ್ ಗೆ ತತ್ತರಿಸಿದ ಪ್ರಯಾಣಿಕರು|Agumbe

ಆಗುಂಬೆಘಾಟಿಯಲ್ಲಿ ಲಾರಿ ಟೈರ್ ಸ್ಪೋಟಗೊಂಡ ಹಿನ್ನಲೆಯಲ್ಲಿ ಘಾಟಿಯಲ್ಲಿ ಕೆಲವು ಹೊತ್ತು ವಾಹನ ಸಂಚಾರ ಸ್ಥಗಿತವಾಗಿತ್ತು. ಘಾಟಿಯ 8ನೇ ತಿರುವಿನಲ್ಲಿ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಕ್ಯಾಂಟರ್ ಲಾರಿಯ ಹಿಂಬದಿ ಟೈರ್ ಸ್ಪೋಟಗೊಂಡಿದೆ. ತಿರುವಿನಲ್ಲೇ ಲಾರಿ ನಿಂತಿದ್ದರಿಂದ ಇತರೆ ವಾಹನಗಳ ಸಂಚಾರಕ್ಕೆ ಕಷ್ಟವಾಗಿತ್ತು. ಪೊಲೀಸರು ಕ್ರೇನ್ ತರಿಸಿ ಲಾರಿಯನ್ನು ಪಕಕ್ಕೆ ಸರಿಸಿದ್ದಾರೆ. ಬಸ್ಸುಗಳು ಕೂಡ ಸುಗಮವಾಗಿ ಸಂಚರಿಸಲು ಅವಕಾಶ ಕಲ್ಪಿಸಲಾಯಿತು. ಇದರಿಂದ ವಾಹನಗಳು ನಿಧಾನವಾಗಿ ಸಂಚರಿಸುತ್ತಿವೆ. ತಿರುವಿನಲ್ಲಿ ಲಾರಿ ನಿಂತಿದ್ದರಿಂದ ಹಿಂಬದಿಯಲ್ಲಿ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು….

Read More

ರಿಪ್ಪನ್‌ಪೇಟೆ : ಅಕ್ರಮ ಮರ ಕಡಿತಲೆ – ಲಾರಿ ಸಹಿತ ಮರದ ತುಂಡುಗಳು ವಶಕ್ಕೆ|Illegal tree felling

ರಿಪ್ಪನ್‌ಪೇಟೆ : ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಹಾಗೂ ಅರಣ್ಯ ವಿಚಕ್ಷಣದಳದ ಪೊಲೀಸರು ಜಂಟಿ ದಾಳಿ ಮಾಡಿ ಲಾರಿ ಸಹಿತ ಅಕ್ರಮ ಕಡತಲೆ ಮಾಡಿದ್ದ ಅಕೇಶಿಯ ತುಂಡುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹುಂಚ ಹೋಬಳಿ ಹುಳಿಗದ್ದೆ ಗ್ರಾಮದ ಸ.ನಂ. 43ರ ಪೋಡಿ ಕಾಣದ ಜಮೀನಿನಲ್ಲಿ ಬೆಳೆದಿದ್ದ ಅಕೇಶಿಯ ಪಲ್ಪ್ ತುಂಡುಗಳನ್ನು ಅಕ್ರಮವಾಗಿ ಕಡತಲೆ ಮಾಡಿ ಲಾರಿ ಮೂಲಕ ಸಾಗಾಟಕ್ಕೆ ಯತ್ನಿಸುತ್ತಿದ್ದ ವೇಳೆ ದಾಳಿ ನಡೆದಿದೆ. ಅರಣ್ಯ ಗುತ್ತಿಗೆದಾರ ರವಿ…

Read More

ಹೊಸನಗರ : ಭತ್ತದ ಒಕ್ಕಲು ಯಂತ್ರಕ್ಕೆ ಸಿಲುಕಿ ರೈತನ ಕೈ ಕಟ್|Hosanagar

ಹೊಸನಗರ : ಒಕ್ಕಲು ಮಾಡುವಾಗ ಮಿಷನ್ ಗೆ ಸಿಲುಕಿ ರೈತನ ಕೈ ತುಂಡಾಗಿದೆ. ಕೂಡಲೆ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.  ಹೊಸನಗರ ತಾಲೂಕು ದೇವಗಂಗೆ ಗ್ರಾಮದ ರೈತ ವಿಶ್ವಾನಾಥ್ ಅವರ ಬಲಗೈ ತುಂಡಾಗಿದೆ. ಗ್ರಾಮದ ಮಹೇಶ ಗೌಡ ಎಂಬುವವರ ಜಮೀನಿನಲ್ಲಿ ಭತ್ತದ ಒಕ್ಕಲು ಮಾಡಲಾಗುತ್ತಿತ್ತು. ಈ ವೇಳೆ ವಿಶ್ವನಾಥ್ ಅವರ ಬಲಗೈ ಒಕ್ಕಲು ಯಂತ್ರಕ್ಕೆ ಸಿಲುಕಿ ತುಂಡಾಗಿದೆ. ತಕ್ಷಣ ವಿಶ್ವನಾಥ್ ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ…

Read More

ರಿಪ್ಪನ್‌ಪೇಟೆ : ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಟಿಪ್ಪರ್ ವಶಕ್ಕೆ|sandmafia

ರಿಪ್ಪನ್‌ಪೇಟೆ : ಮಲೆನಾಡು ಭಾಗದಲ್ಲಿ ಅಕ್ರಮ ಮರಳು ಮಾಫ಼ಿಯಾದ ಹೆಡೆಮುರಿ ಕಟ್ಟುವಲ್ಲಿ ಪಟ್ಟಣದ ಪೊಲೀಸ್ ಪಿಎಸ್ ಐ ಶಿವಾನಂದ ಕೆ ನೇತ್ರತ್ವದ ತಂಡ ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಮಂಗಳವಾರ ಬೆಳಿಗ್ಗೆ ಪಟ್ಟಣದ ಪಿಎಸ್ ಐ ಶಿವಾನಂದ ಕೆ ನೇತ್ರತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಹರತಾಳು ಗ್ರಾಮದ ಬಳಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮ ಮರಳು…

Read More

ಬಾವಿಯಲ್ಲಿ ಪೌರಕಾರ್ಮಿಕನ ಮೃತದೇಹ ಪತ್ತೆ|dead body found in

ಬಾವಿಯಲ್ಲಿ ಶವವೊಂದು ಪತ್ತೆಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗದ KSRTC ಬಸ್ ನಿಲ್ದಾಣದ ಪಕ್ಕವಿರುವ ಬಿಎಂವಿ ಪಾರ್ಕಿಂಗ್ ಮತ್ತು ಎಸ್ ಡಿಪಿ ಪಾರ್ಕಿಂಗ್ ಮಧ್ಯ ಇರುವ ಬಾವಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಬಾವಿಯಲ್ಲಿ ಪತ್ತೆಯಾದ ಮೃತ ದೇಹವನ್ನ ಮಾರ್ನಮಿಬೈಲು ನಿವಾಸಿ ದಿಬ್ಬಯ್ಯ (52) ಎಂದು ಗುರುತಿಸಲಾಗಿದೆ. ಬಾವಿಗೆ ಬಿದ್ದ ದಿಬ್ಬಯ್ಯ ಕಳೆದ ಐದು ದಿನಗಳಿಂದ ಮನೆಗೆ ಹೋಗಿರಲಿಲ್ಲ ಎಂದು ಕುಟುಂಬ ತಿಳಿಸಿದೆ. ನಾಪತ್ತೆಯಾಗಿದ್ದ ಮನೆಯವರೂ ಹುಡುಕಾಡುತ್ತಿದ್ದರು. ಆದರೆ ಪಾರ್ಕಿಂಗ್ ಸ್ಥಳದಲ್ಲಿರುವ ಬಾವಿಯಲ್ಲಿ ಆತನ ಮೃತ ದೇಹ ಪತ್ತೆಯಾಗಿದೆ. ಪಾರ್ಕಿಂಗ್ ನೋಡಿಕೊಳ್ಳುವ…

Read More

ಹೊಸನಗರ : ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಅಗ್ನಿ ಅವಘಡ – ಬೆಂಕಿ ರಿಂಗ್ ಜಿಗಿತ ಪ್ರದರ್ಶನದ ವೇಳೆ ವಿದ್ಯಾರ್ಥಿಗೆ ಗಂಭೀರ ಗಾಯ|Fire

ಹೊಸನಗರ : ಶಾಲಾ ವಾರ್ಷಿಕೋತ್ಸವ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಯಿಂದ ಓರ್ವ ವಿದ್ಯಾರ್ಥಿಗೆ ಸುಟ್ಟಗಾಯಗಳಾಗಿರುವ ಘಟನೆ ಪಟ್ಟಣದ ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆಯಲ್ಲಿ ಶನಿವಾರ ರಾತ್ರಿ ಜರುಗಿದೆ. ಮೂರು ದಿನಗಳ ಶಾಲಾ ವಾರ್ಷಿಕೋತ್ಸವ ಸಂದರ್ಭದಲ್ಲಿ ಕೊನೆ ದಿನವಾದ ಶನಿವಾರ ರಾತ್ರಿ ವಿದ್ಯಾರ್ಥಿಗಳಿಂದ ಪಿರಮಿಡ್ ನಿರ್ಮಾಣ ಹಾಗೂ ಬೆಂಕಿಯ ರಿಂಗ್ ಒಳಗಿನ ಜಿಗಿತದ ವೇಳೆ ಘಟನೆ ಸಂಭವಿಸಿದೆ. ಮೂಲತಃ ಬೆಂಗಳೂರಿನ ಬನಶಂಕರಿ ಬಡಾವಣೆಯ ವಾಸಿಯಾದ ಅದೇ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಸಿಂಹಾದ್ರಿಗೆ ಘಟನೆಯಿಂದ ಮುಖ, ಕಣ್ಣು, ಕಿವಿಗಳಿಗೆ ಸುಟ್ಟಗಾಯಗಳಾಗಿದೆ….

Read More

ರಿಪ್ಪನ್‌ಪೇಟೆ : ವರಾನಹೊಂಡದ ಭೂತರಾಯ ದೇವಸ್ಥಾನದಲ್ಲಿ ಹುಂಡಿ ಒಡೆದು ಕಳ್ಳತನ|Theft

ರಿಪ್ಪನ್ ಪೇಟೆ :  ಇಲ್ಲಿನ ಸಮೀಪದ ವರಾನಹೊಂಡದ  ಭೂತರಾಯನ ಗುಡಿಯಲ್ಲಿ ಹುಂಡಿ ಒಡೆದು ಕಳ್ಳತನ ಮಾಡಿರುವ ಘಟನೆ ನಡೆದಿದೆ. ಪಟ್ಟಣದ ತೀರ್ಥಹಳ್ಳಿ ರಸ್ತೆಯ ವರಾನಹೊಂಡದ ಶ್ರೀ ಭೂತರಾಯ ಸ್ವಾಮಿ ದೇವಸ್ಥಾನದ ಕಾಣಿಕೆ ಹುಂಡಿಯನ್ನು ಒಡೆದು ಕಳ್ಳತನ ಮಾಡಿದ್ದಾರೆ.ಭಾನುವಾರ ರಾತ್ರಿ ಕಳ್ಳತನ ನಡೆದಿರುವ ಸಾಧ್ಯತೆ ಇದೆ. ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಜನರಿಗೆ ವರಾನಹೊಂಡದ ಭೂತರಾಯ ದೇವಸ್ಥಾನವೆಂದರೆ ಅಪಾರ ಭಕ್ತಿ ಹಾಗೂ ಭಯ, ನಂಬಿಕೆ ಇರುವ ಸ್ಥಳವಾಗಿದ್ದು ಈ ಕ್ಷೇತ್ರದಲ್ಲಿ ಕಳ್ಳರು ಕೈಚಳಕ ತೋರಿಸಿರುವುದು ಅವರ ಅವನತಿಗೆ ದಾರಿಯಾಗಿದೆ ಎಂದು…

Read More

ವರದಕ್ಷಿಣೆ ಕಿರುಕುಳದಿಂದ ಬೇಸತ್ತು ನವವಿವಾಹಿತೆ ಆತ್ಮಹತ್ಯೆ – ಪ್ರಕರಣ ದಾಖಲು|Dowry case

ನೂರಾರು ಕನಸು ಹೊತ್ತು ಮದುವೆಯಾಗಿದ್ದ ನವ ವಿವಾಹಿತೆ ವರದಕ್ಷಿಣೆ ಭೂತಕ್ಕೆ ಬಲಿಯಾಗಿರುವ ಘಟನೆ ಶಿವಮೊಗ್ಗ ಶಿಕಾರಿಪುರದ ಶಿರಾಳಕೊಪ್ಪದ ಉಡುಗುಣಿ ಗ್ರಾಮದಲ್ಲಿ ನಡೆದಿದೆ. ನವವಿವಾಹಿತೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕಳೆದ ವರ್ಷವಷ್ಟೇ ಮದುವೆಯಾಗಿದ್ದ ಸಂಗೀತಾ ಅನುಮಾನಸ್ಪದವಾಗಿ ಸಾವನಪ್ಪಿದ್ದು, ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಡ, ಅತ್ತೆ ಮಾವನ ಕಿರುಕುಳಕ್ಕೆ ಅಮಾಯಕ ಜೀವ ಬಲಿಯಾಗಿದ್ದು, ಸಂಗೀತಾ ನೂರಾರು ಕನಸು ಹೊತ್ತು ಹರೀಶ್ ಎಂಬಾತನ ಜೊತೆ ಮದುವೆಯಾಗಿದ್ದರು. ಸಂಗೀತಾ ಪೋಷಕರು ಚಿನ್ನ, ಹಣ ಕೊಟ್ಟು ಅದ್ದೂರಿಯಾಗಿ ಮದುವೆ ಮಾಡಿದ್ದರು. ಮದುವೆಯಾದ ಆರು ತಿಂಗಳಿಗೆ…

Read More

ಸಾಗರದ ಬಳಿ ಹೊಸನಗರದ ಓಮಿನಿ‌ ಕಾರು ಅಪಘಾತ – ಜಖಂಗೊಂಡ ಕಾರಿನಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿಯ ಜೀವ ಉಳಿಸಿದ 112 ಸಿಬ್ಬಂದಿ|Accident

ಹೊಸನಗರದಿಂದ ಕುಮುಟಾ ಕಡೆಗೆ ತೆರಳುತಿದ್ದ ಮಾರುತಿ ಓಮಿನಿ ಕಾರು  ಆಕ್ಸಿಡೆಂಟ್​ ಆಗಿ, ಜಖಂ ಆದ ವಾಹನದಲ್ಲಿ ಸಿಲುಕಿ ನರಳುತ್ತಿದ್ದ ವ್ಯಕ್ತಿಯನ್ನು 112 ಸಿಬ್ಬಂದಿ ಕಾಪಾಡಿದ್ಧಾರೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.  ನಿನ್ನೆ ಬೆಳಗ್ಗಿನ ಜಾವ ಸಾಗರ ತಾಲ್ಲೂಕಿನ ಶಿರವಂತೆ ಬಳಿ ಅಪಘಾತವೊಂದು ಸಂಭವಿಸಿತ್ತು. ಹೊಸನಗರ ಮೂಲದ ಪ್ರವೀಣ್ ಓಮಿನಿ ಕಾರಿನಲ್ಲಿ  ಕುಮಟಾಕ್ಕೆ ಹೋಗುತ್ತಿದ್ದ ಸಂಧರ್ಭದಲ್ಲಿ ಅಪಘಾತವಾಗಿತ್ತು. ತಕ್ಷಣ ಸ್ಥಳೀಯರು 112 ಸಿಬ್ಬಂದಿ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ವಿಚಾರ ಕೇಳಿ ತಕ್ಷಣ…

Read More