ಕ್ರೈಂ ಸುದ್ದಿ:
ಪಿಎಸ್ ಐ ಹಾಗೂ ಸಿಬ್ಬಂದಿಗಳ ಮೇಲೆ ಪೊಲೀಸ್ ಠಾಣೆಯಲ್ಲೇ ಸಮವಸ್ತ್ರ ಹರಿದು ಹಲ್ಲೆ – ಇಬ್ಬರ ಬಂಧನ|nagara
ಹೊಸನಗರ: ಪಿಎಸ್ಐ ಸೇರಿದಂತೆ ಪೊಲೀಸರ ಸಮವಸ್ತ್ರ ಹರಿದು, ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ತಾಲೂಕಿನ ನಗರ ಪೊಲೀಸ್ ಠಾಣೆಯಲ್ಲೇ ನಡೆದಿದೆ. ಹೌದು ಹೀಗಂತ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರಿಂದಲೇ ದೂರು ದಾಖಲಾಗಿದ್ದು ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಬೇಳೂರು ಗ್ರಾಮದ ಮಕ್ಕಿಮನೆ ವಾಸಿಗಳಾದ ಕೃಷ್ಣಮೂರ್ತಿ(45), ರಾಮಚಂದ್ರ (50) ಬಂಧಿತ ಆರೋಪಿಗಳು ಏನಿದು ಘಟನೆ? ಭಾನುವಾರ ಸಂಜೆ ಠಾಣೆ ಬಂದ ಹರೀಶ್ ನೀಡಿದ ದೂರಿನ ಅರ್ಜಿಯಂತೆ, ಕೃಷ್ಣಮೂರ್ತಿ ಮತ್ತು ರಾಮಚಂದ್ರ ಎಂಬುವರನ್ನು ವಿಚಾರಣೆ ನಡೆಸುತ್ತಿದ್ದ ವೇಳೆ,…
ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ – ನಾಲ್ಕು ವರ್ಷದ ಮಗು ಸೇರಿ ಮೂವರ ಸಾವು|Accident
ಕಾರು, ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ಕು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ. ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪ ಸಮೀಪದ ಮಂಚಿಕೊಪ್ಪ ಬಳಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಹಲುಗಿನಕೊಪ್ಪದ ಜ್ಯೋತಿ (30), ಗಂಗಮ್ಮ (50) ಮತ್ತು ಸೌಜನ್ಯ (4) ಮೃತರು. ಕಾರು, ಬೈಕು ಮುಖಾಮುಖಿ ಡಿಕ್ಕಿಯಾಗಿದ್ದು, ಮಗು ಸೌಜನ್ಯ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮಲ್ಲಿಕಾರ್ಜುನ, ಜ್ಯೋತಿ, ಗಂಗಮ್ಮ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕೂಡಲೆ ಶಿಕಾರಿಪುರದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆಸ್ಪತ್ರೆಯಲ್ಲಿ…
ಶಿವಮೊಗ್ಗ : ಕೌಟುಂಬಿಕ ಕಲಹಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ|Sucide
ಶಿವಮೊಗ್ಗ: ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಅಶ್ವತ್ಥ್ ನಗರದಲ್ಲಿ ನಡೆದಿದೆ. ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ. ನವ್ಯಶ್ರೀಗೆ 5 ತಿಂಗಳ ಹಿಂದೆ ಆಕಾಶ್ ಎಂಬ ಯುವಕನ ಜೊತೆ ವಿವಾಹವಾಗಿತ್ತು. ನಿನ್ನೆ ರಾತ್ರಿ ಕಾರ್ ಶೆಡ್ ನಲ್ಲಿ ನೇಣು ಬಿಗಿದು, ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆಗೆ ಸಂಬಂಧಿಸಿ ಆಕೆಯ ಕುಟುಂಬಸ್ಥರು ಮಾತನಾಡಿ, ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಸನಗರ : ಮನೆಯಿಂದ ನಾಪತ್ತೆಯಾಗಿದ್ದ ಮಹಿಳೆ ಇಂದು ಕೆರೆಯಲ್ಲಿ ಶವವಾಗಿ ಪತ್ತೆ|Hosanagara
ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಇಂದು ಹೊಸನಗರ ಸಮೀಪದ ಇಟ್ಟಕ್ಕಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಹೊಸನಗರ ತಾಲೂಕಿನ ಬಿಳ್ಳೋಡಿ ಗ್ರಾಮದ ಮತ್ತಿಗ ನಿವಾಸಿ ಮಂಗಳ (36) ಮೃತ ಮಹಿಳೆಯಾಗಿದ್ದು ತನ್ನ ಗಂಡನೊಂದಿಗೆ ಕಳೆದ ಎರಡ್ಮೂರು ವರ್ಷಗಳಿಂದ ತಾಯಿ ಮನೆ ಮತ್ತಿಗ ಗ್ರಾಮದಲ್ಲಿ ವಾಸ ಮಾಡುತ್ತಿದ್ದರು. ಮಾನಸಿಕವಾಗಿ ದುರ್ಬಲರಾಗಿದ್ದ ಈಕೆ ನ.03 ರಂದು ಮಧ್ಯಾಹ್ನ 2:30ರ ಸುಮಾರಿಗೆ ಬಿಳ್ಳೋಡಿ ಗ್ರಾಮದಿಂದ ಕಾಣೆಯಾಗಿದ್ದರು. ಸಂಬಂಧಿಕರು ಎಲ್ಲ ಕಡೆ ಹುಡುಕಿದರು ಪತ್ತೆಯಾಗದೆ ಇದ್ದು ನಿನ್ನೆ ಹೊಸನಗರ ಠಾಣೆಯಲ್ಲಿ ಮೃತಳ…
ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಓರ್ವ ಗಂಭೀರ|Accident
ತೀರ್ಥಹಳ್ಳಿ : ಪಟ್ಟಣದ ಸೀಬಿನಕೆರೆ ಸಮೀಪದ ಯಡೆಹಳ್ಳಿ ಕೆರೆ ಬಳಿ ಬೈಕ್ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ಗೆ ನಡುವೆ ಭೀಕರ ಅಪಘಾತವಾದ ಘಟನೆ ನಡೆದಿದೆ. ಯಡೆಹಳ್ಳಿ ಕೆರೆ ಏರಿ ಮೇಲೆ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರವಾಗಿ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುರುವಾರ ಸಂಜೆ ನಡೆದಿದೆ. ತೀರ್ಥಹಳ್ಳಿಯ ಮಾರ್ಕೆಟ್ ರಸ್ತೆಯ ಸಿರಾಜ್ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿರಾಜ್ ಅವರು ತೀರ್ಥಹಳ್ಳಿ ಯಿಂದ ಯಡೆಹಳ್ಳಿ…
ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪತಿ
ಗಂಡ ಹೆಂಡತಿ ನಡುವೆ ಜಗಳವಾಗಿದ್ದು, ಗಂಡ ತನ್ನ ಹೆಂಡತಿ ಮೇಲೆ ರಾಡಿನಿಂದ ಹಲ್ಲೆ ನಡೆಸಿ, ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಶಿವಮೊಗ್ಗದ ದುಮ್ಮಳ್ಳಿಯಲ್ಲಿ ನಡೆದಿದೆ. ಶೋಭ (50) ಕೊಲೆಯಾದ ಮಹಿಳೆ. ಪ್ರಕಾಶ ಎಂಬಾತ ತನ್ನ ಹೆಂಡತಿ ಶೋಭರನ್ನು ಕೊಲೆ ಮಾಡಿದ್ದಾನೆ. ಇಂದು ಬೆಳಗ್ಗೆ ಸ್ಥಳಕ್ಕೆ ತುಂಗಾನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿ ಪ್ರಕಾಶ್ ನನ್ನು ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಶೋಭಾ ದುಮ್ಮಳ್ಳಿಯಲ್ಲಿ ಹಾಲಿನ ಅಂಗಡಿ ನಡೆಸುತ್ತಿದ್ದರು. ಪತಿಯೊಂದಿಗೆ…
ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯರ ಸೋದರನ ಪುತ್ರ ಶವವಾಗಿ ಪತ್ತೆ :|Honnali
ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರ ಪುತ್ರ ಚಂದ್ರಶೇಖರ್ ಶವವಾಗಿ ಪತ್ತೆಯಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿಯ ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ಚಂದ್ರಶೇಖರ್ ಕಾರು ಪತ್ತೆಯಾಗಿದ್ದು, ಕಾರಿನ ಹಿಂಬದಿ ಸೀಟಿನಲ್ಲಿ ಚಂದ್ರಶೇಖರ್ ಶವ ಕೂಡ ಪತ್ತೆಯಾಗಿದೆ. ಭದ್ರಾ ಮೇಲ್ದಂಡೆ ಕಾಲುವೆಗೆ ಕಾರು ಬಿದ್ದ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕಾಲುವೆಯಲ್ಲಿ ಶೋಧ ಮಾಡಿದಾಗ ಬಿಳಿ ಬಣ್ಣದ ಕ್ರೇಟಾ ಕಾರು ಪತ್ತೆಯಾಗಿದೆ. ಶೋಧ ಕಾರ್ಯಾಚರಣೆ ವೇಳೆ ಶಾಸಕ ರೇಣುಕಾಚಾರ್ಯ, ಪೊಲೀಸರು…
ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸಹೋದರನ ಮಗ ನಾಪತ್ತೆ ಪ್ರಕರಣ : ಕಾರು ತುಂಗಾ ಕಾಲುವೆಯಲ್ಲಿ ಬಿದ್ದಿರುವ ಶಂಕೆ|honnali
ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಸೋದರ ಪುತ್ರ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಚಂದ್ರಶೇಖರ್ ಕಾರು ತುಂಗಾ ಕಾಲುವೆಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಹೌದು, ಕಳೆದ ಐದು ದಿನಗಳಿಂದ ನಾಪತ್ತೆಯಾಗಿರುವ ಚಂದ್ರಶೇಖತ್ ಪತ್ತೆಗೆ ಪೊಲಿಸರು ತೀವ್ರ ಹುಡುಕಾಟ ನಡೆಸಿದ್ದು, ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ತುಂಗಾ ಕಾಲುವೆ ಬಳಿ ಚಂದ್ರಶೇಖರ್ ಕಾರು ಸಂಚರಿಸಿದೆ ಎಂಬ ಕುರುಹು ಪತ್ತೆಯಾಗಿದೆ. ಈ ಹಿನ್ನೆಲೆ ಪೊಲೀಸರು ಚಂದ್ರಶೇಖರ್ ಕಾರು ತುಂಗಾ ಕಾಲುವೆಗೆ…
ಕಾಸ್ಪಾಡಿ ತಿರುವಿನಲ್ಲಿ ಬೈಕ್ ಅಪಘಾತ : ಸವಾರ ಸ್ಥಳದಲ್ಲೇ ಸಾವು|Accident
ಸಾಗರ : ಬೈಕ್ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನ ಕಾಸ್ಪಾಡಿ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ತಾಲ್ಲೂಕಿನ ಹಾರನಹಳ್ಳಿ ಗ್ರಾಮದ ಹರೀಶ್ ಕುಮಾರ್ (42) ಎಂಬುವರು ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಸಹೋದರಿಯ ಮನೆಗೆ ಹೋಗಿ ವಾಪಾಸ್ ಮನೆಗೆ ಬೈಕ್ ನಲ್ಲಿ ಮರಳುವಾಗ ಕಾಸ್ಪಾಡಿ ತಿರುವಿನಲ್ಲಿ ಬೈಕ್ ಮೇಲಿನ ನಿಯಂತ್ರಣ ಕಳೆದುಕೊಂಡು ಉರುಳಿ ಬಿದ್ದಿದ್ದಾರೆ.ತೀವ್ರ ಸ್ವರೂಪದ ಗಾಯವಾಗಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಕುರಿತು ಸಾಗರ ಗ್ರಾಮಾಂತರ ಬುಧವಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ : ಬಿಹೆಚ್ ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ – ಆಸ್ಪತ್ರೆಗೆ ದಾಖಲು|Shivamogga
ಹಲವಾರು ಗಲಭೆಯ ಬಳಿಕ ಶಾಂತವಾಗಿರುವ ಶಿವಮೊಗ್ಗದಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೇಲೆ ಹರಿತವಾದ ವಸ್ತುವಿನಿಂದ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಶಿವಮೊಗ್ಗ ಬಸ್ ನಿಲ್ದಾಣದ ಸಮೀಪದ ರಾಯಲ್ ಆರ್ಕೇಡ್ ಹೋಟೆಲ್ ಬಳಿ ಭಾನುವಾರ ರಾತ್ರಿ ಘಟನೆ ನಡೆದಿತ್ತು. ಸದ್ಯ ಗಾಯಾಳು ಅಶೋಕ್ ಪ್ರಭು ಎಂಬವರನ್ನು ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸುಮಾರು ನಾಲ್ಕು ಜನರ ಗುಂಪಿನಿಂದ ಈ ದಾಳಿ ನಡೆದಿದೆ. ದುಷ್ಕರ್ಮಿಗಳ ಗುಂಪು ಮೊದಲೇ ರಸ್ತೆಯಲ್ಲಿ ನಿಂತುಕೊಂಡಿತ್ತು. ಈ ವೇಳೆ ಅಶೋಕ್ ಪ್ರಭು…