Headlines

ತೀರ್ಥಹಳ್ಳಿ ಪೊಲೀಸರಿಂದ ಗಾಂಜಾ ಬೇಟೆ !!! ಪಶ್ಚಿಮ ಬಂಗಾಳ ಮೂಲದ ನಾಲ್ವರ ಬಂಧನ

ತೀರ್ಥಹಳ್ಳಿ : ತಾಲೂಕಿನ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ವಿಠಲನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಪಶ್ಚಿಮ ಬಂಗಾಳ  ಮೂಲದ ನಾಲ್ವರನ್ನು ಗಾಂಜಾ ಕೇಸ್ ನಲ್ಲಿ ಅರೆಸ್ಟ್ ಮಾಡಲಾಗಿದೆ.   ನಾಲ್ವರು ಕೂಡ ಪಶ್ಚಿಮ ಬಂಗಾಳದ ಮೂಲದವರಾಗಿದ್ದು ತೀರ್ಥಹಳ್ಳಿಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಖಚಿತ ಮಾಹಿತಿ ಮೇರೆಗೆ ತೀರ್ಥಹಳ್ಳಿಯ ಡಿವೈಎಸ್ಪಿ ಇವರ ನೇತೃತ್ವದಲ್ಲಿ ಮಾರುವೇಷದಲ್ಲಿ ಹೋಗಿ ಆರೋಪಿಗಳನ್ನು ಬಂಧಿಸಿದ್ದು ಒಂದೂವರೆ ಕೆಜಿ ಗಾಂಜಾ ಕೂಡ ವಶಕ್ಕೆ ಪಡೆಯಲಾಗಿದೆ.  ಪಶ್ಚಿಮ ಬಂಗಾಳ ಮೂಲದವರಾದ ಬಾಷಾ ಸರ್ಕಾರ್, ಅಲೋಕ್ ಮಂಡಲ್, ಅಮೃತ್ ಮಂಡಲ್, ಸಂಕರ್…

Read More

ರಿಪ್ಪನ್ ಪೇಟೆ ಶಿವಮಂದಿರದ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ :

ರಿಪ್ಪನ್‌ಪೇಟೆ : ಶಿವಮೊಗ್ಗ ರಸ್ತೆಯ ಶಿವಮಂದಿರದ ಬಳಿ ಕಿಯಾ ಕಾರು ಹಾಗೂ ಮಾರುತಿ ಒಮಿನಿ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಶಿವಮೊಗ್ಗ ರಸ್ತೆ ಕಡೆಯಿಂದ ಬರುತಿದ್ದ ಕಿಯಾ ಕಾರು(ka-15 N 9036) ಹಾಗೂ ರಿಪ್ಪನ್‌ಪೇಟೆ ಕಡೆಯಿಂದ ಕೆಂಚನಾಲಕ್ಕೆ ಹೋಗುತಿದ್ದ ಮಾರುತಿ ಓಮಿನಿ‌ (KA-30 M 2147) ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ನಡೆದಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿಲ್ಲ. ಶಿವಮಂದಿರದ ಎದುರಿನ ಕೆರೆಹಳ್ಳಿ ಗ್ರಾಮಕ್ಕೆ ತಿರುಗುವ ಸ್ಥಳದಲ್ಲಿ ಈ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಪೊಲೀಸರು…

Read More

ಗೋಡೆ ಕೊರೆದು ಚಿನ್ನದ ಅಂಗಡಿಯಿಂದ 1 ಕೋಟಿ 35 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು : ಎಲ್ಲಿ ಗೊತ್ತಾ??? ಈ ಸುದ್ದಿ ನೋಡಿ

ಭದ್ರಾವತಿ ನಗರದ ಸರ್ಕಾರಿ ಆಸ್ಪತ್ರೆ ಸಮೀಪ ಇರುವ ಎಸ್​ಎಸ್​ ಜ್ಯುವೆಲರ್ಸ್​ನಲ್ಲಿ ಸುಮಾರು 1ಕೋಟಿ 34 ಲಕ್ಷ 73 ಸಾವಿರ ರೂ  ಮೌಲ್ಯದ ಚಿನ್ನ,ಬೆಳ್ಳಿ,ಹಾಗೂ ನಗದು ಕಳ್ಳತನವಾಗಿದೆ.ಶನಿವಾರ ರಾತ್ರಿ ಈ ಘಟನೆ ನಡೆದಿದೆ.  ಎಸ್ ಎಸ್ ಜ್ಯುವೆಲ್ಲರ್ಸ್ ಅಂಗಡಿಯ ಹಿಂಬದಿಯಲ್ಲಿ ಕನ್ಸರ್​ವೆನ್ಸಿ ಇದ್ದು ಅಂಗಡಿಯ ಒಳಭಾಗದಲ್ಲಿ ಮನೆಯ ಮಾದರಿಯಲ್ಲಿದ್ದು, ಅಲ್ಲಿ ಬಳಕೆ ಮಾಡದ ಕೆಲ ರೂಮ್​ಗಳಿತ್ತು.ಕಳೆದೊಂದು ವಾರದಿಂದ ಸಂಪೂರ್ಣವಾಗಿ ವಾಚ್ ಮಾಡಿದ ಕಳ್ಳರು ಹಿಂದಿನ ದಿನ ಕನ್ನ ಹಾಕಲು ಬೇಕಿರುವ ಹ್ಯಾಮರ್​, ಡ್ರಿಲ್ಲರ್​, ರಾಡ್​, ಗ್ಯಾಸ್​ ಕಟ್ಟರ್, ಹೀಗೆ ಟೂಲ್ಸ್​ಗಳನ್ನು…

Read More

ರಿಪ್ಪನ್‌ಪೇಟೆಯ ಸಿದ್ದಪ್ಪನಗುಡಿ ಬಳಿ ಭೀಕರ ಅಪಘಾತ : ಓರ್ವ ಸಾವು

ರಿಪ್ಪನ್‌ಪೇಟೆ: ಇಲ್ಲಿನ ಸಮೀಪದ ಸಿದ್ದಪ್ಪನಗುಡಿ ಬಳಿ ಸ್ವಿಫ್ಟ್ ಕಾರು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. class=”separator” style=”clear: both; text-align: center;”> ಬೆಂಗಳೂರಿನಿಂದ ಎಂ ಗುಡ್ಡೆಕೊಪ್ಪ ಗ್ರಾಮಕ್ಕೆ ಬರುತ್ತಿದ್ದಾಗ ಇಂದು ಬೆಳಗಿನಜಾವ ಸಿದ್ದಪ್ಪನಗುಡಿ ಬಳಿಯ ಸೇತುವೆಯ ತಡೆಗೋಡೆಗೆ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.ಕಾರಿನ ಎಡಬಾಗದಲ್ಲಿ ಕುಳಿತಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಹೊಸನಗರ ಸಮೀಪದ ಎಂ ಗುಡ್ಡೆಕೊಪ್ಪ ಗ್ರಾಮದ ಪ್ರದೀಪ್(32) ಮೃತಪಟ್ಟ ದುರ್ದೈವಿಯಾಗಿದ್ದಾರೆ.ಕಾರು ಚಾಲಕ ನಾಗರಾಜ್ ಎಂಬುವವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂ…

Read More

ಕುಮುಧ್ವತಿ ನದಿಯಲ್ಲಿ ಕೊಚ್ಚಿಹೋದ ವೃದ್ದೆ : ಶೋಧ ಕಾರ್ಯಾಚರಣೆ ಚುರುಕು

ಮಲೆನಾಡು ಭಾಗದಲ್ಲಿ ಅಧಿಕ ಮಳೆಯಿಂದಾಗಿ ಕುಮಧ್ವತಿ ನದಿಯು ಭೋರ್ಗರೆಯುತ್ತಿದ್ದು ಇಂದು ಓರ್ವ ವೃದ್ದೆ ನದಿಯಲ್ಲಿ ಕೊಚ್ಚಿಕೊಂಡು ಹೋಗಿರುವುದಾಗಿ ತಿಳಿದುಬಂದಿದೆ. ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ವೃದ್ಧೆಯನ್ನು ನಾಗರತ್ನ(64) ಎಂದು ಗುರುತಿಸಲಾಗಿದೆ.  ಚೋರಡಿ ನದಿಯ ದಡದಲ್ಲಿರುವ ಚೌಡೇಶ್ವರಿ ದೇವಸ್ಥಾನಕ್ಕೆನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ವೃದ್ಧೆಯನ್ನು ನಾಗರತ್ನ ಎಂದು ಗುರುತಿಸಲಾಗಿದೆ.  ಪೂಜೆಗೆ ಹೋಗಿದ್ದ 64 ವರ್ಷದ ವೃದ್ಧೆ ಕುಮಧ್ವತಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.  ನೀರಿನಲ್ಲಿ ಮುಳುಗಿರುವ ವೃದ್ದೆಗಾಗಿ ಶೋಧಕಾರ್ಯ ನಡೆದಿದೆ.ವೃದ್ದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೊ ಅಥವಾ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾರೋ…

Read More

ಕಾಲುಜಾರಿ ತೋಟದ ಬಾವಿಗೆ ಬಿದ್ದು ವ್ಯಕ್ತಿ ಸಾವು :

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೊಡ್ಡಬಿಳಗೋಡು ಗ್ರಾಮದ ಜಿ.ಕೆ.ಗಣಪತಿ (74) ಕೃಷಿ ಕೆಲಸದ ನಿಮಿತ್ತ ತೋಟಕ್ಕೆ ಹೋಗಿದ್ದಾಗ ಕಾಲುಜಾರಿ ತೋಟದ ರಿಂಗ್ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಪುರಪ್ಪೆಮನೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಗಿರಿಜಮ್ಮ ರವರ ಪತಿಯಾದ ಜಿ ಕೆ ಗಣಪತಿ ರವರು ಬೆಳಿಗ್ಗೆ 9.30 ರ ಸಮಯದಲ್ಲಿ ಕೃಷಿ ಕೆಲಸದ ನಿಮಿತ್ತ ತೋಟಕ್ಕೆ ಕೆಲಸಕ್ಕೆ ಹೋದಾಗ ಕಾಲು ಜಾರಿ ರಿಂಗ್ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರಿಗೆ…

Read More

ಸೂಡೂರು ಸಮೀಪ ಟ್ಯಾಂಕರ್ ಹಾಗೂ ಇನ್ನೊವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ :

ಪೆಟ್ರೋಲ್ ಟ್ಯಾಂಕರ್ ಮತ್ತು ಇನ್ನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದ್ದು ಕಾರಿನಲ್ಲಿರುವ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸೂಡೂರು ಸಮೀಪದ ತಿರುವಿನಲ್ಲಿ ಶಿವಮೊಗ್ಗ ಕಡೆಯಿಂದ ಕುಂದಾಪುರ ಕಡೆಗೆ ತೆರಳುತಿದ್ದ ಪೆಟ್ರೋಲ್ ಟ್ಯಾಂಕರ್ ಮತ್ತು ರಿಪ್ಪನ್‌ಪೇಟೆ ಕಡೆಯಿಂದ ಆಯನೂರು ಗೆ ತೆರಳುತಿದ್ದ ಇನ್ನೋವ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿವೆ. ಕಾರಿನಲ್ಲಿ ಪ್ರಯಾಣ ಮಾಡುತಿದ್ದ ನಾಲ್ವರು ಪ್ರಯಾಣಿಕರಿಗೆ ಗಾಯಗಳಾಗಿವೆ. ಆದರೆ ಪ್ರಾಣಾಪಾಯವಿಲ್ಲವೆಂದು ತಿಳಿದು ಬಂದಿದೆ. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಪ್ರಕರಣ…

Read More

ರಿಪ್ಪನ್ ಪೇಟೆ ಗುಡ್ ಶೆಫರ್ಡ್ ಚರ್ಚ್ ಬಳಿ ಭೀಕರ ರಸ್ತೆ ಅಪಘಾತ : ಬೈಕ್ ಸವಾರನ ಸಾವು

ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ಗುಡ್ ಶಫರ್ಡ್ ಶಾಲೆಯ ಸಮೀಪ ಇಂದು ಸಂಜೆ ನಡೆದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ. ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಮ್ಮಡಿ ಕೊಪ್ಪ ಗ್ರಾಮದ ದಿನೇಶ್ ಪಿಸಾಳೆ (42) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮೃತರು ಇಂದು ಸಂಜೆ ರಿಪ್ಪನ್ ಪೇಟೆ ಪಟ್ಟಣದಿಂದ ತನ್ನ ಸ್ವಗ್ರಾಮ ತಮ್ಮಡಿಕೊಪ್ಪ  ಹೋಗುತ್ತಿರುವಾಗ ಕ್ಯಾಂಟರ್ ವಾಹನವೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.  ರಾಜ್ಯ…

Read More

ಜೋಗ ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಮೂಲದ ಮಹಿಳೆ ಕಾಲುಜಾರಿ ಬಿದ್ದು ಸಾವು :

ಜೋಗ ಪ್ರವಾಸಕ್ಕೆ ಬಂದಿದ್ದ ಮಹಿಳೆ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಜೋಗದಲ್ಲಿ ನಡೆದಿದೆ. ಬೆಂಗಳೂರು ಮೂಲದ ನಿಶಾ(24) ಮೃತ ದುರ್ಧೈವಿಯಾಗಿದ್ದಾರೆ. ಕಳೆದ ಒಂದು ವರ್ಷದ ಹಿಂದೆಯಷ್ಟೇ ನಾಗೇಶ್ ಎಂಬುವವರ ಜೊತೆ ವಿವಾಹವಾಗಿದ್ದ ನಿಶಾ, ಪತಿ ನಾಗೇಶ್​ ಅವರೊಂದಿಗೆ ಜೋಗ ಜಲಪಾತ ವೀಕ್ಷಿಸಲು ಬಂದಿದ್ದರು.  ಜೋಗದ ಜಂಗಲ್ ರೆಸಾರ್ಟ್ ಸಮೀಪದ ಹಿನ್ನೀರಿನ ಬಳಿ ನಿಶಾ ಕಾಲು ಜಾರಿ ಬಿದ್ದಿದ್ದು, ತಕ್ಷಣವೇ ಸ್ಥಳೀಯರ ಸಹಾಯದಿಂದ ನಾಗೇಶ್​ ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ದುರಾದೃಷ್ಟವಶಾತ್​ ನಿಶಾ ಸಾವನ್ನಪ್ಪಿದ್ದಾರೆ. ನಿಶಾ…

Read More

ಆಗುಂಬೆ ಸಮೀಪದ ಗುಡ್ಡೇಕೇರಿಯಲ್ಲಿ ಬೈಕ್ ಗೆ ಕಾರು ಡಿಕ್ಕಿ : ಪಿಗ್ಮಿ ಸಂಗ್ರಹಕ ಸುನೀಲ್ ಸಾವು

ತೀರ್ಥಹಳ್ಳಿ ಸಮೀಪದ ಗುಡ್ಡೇಕೇರಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಈ ಅಪಘಾತದಲ್ಲಿ ಕೈಮರದ ಸೊಸೈಟಿಯ ಪಿಗ್ಮಿ ಸಂಗ್ರಾಹಕ ಸುನೀಲ್ ಸಾವು ಕಂಡಿದ್ದಾರೆ. ಕೈಮರದಿಂದ ಗುಡ್ಡೇಕೇರಿಗೆ ಬೈಕ್ ನಲ್ಲಿ ಹೋಗುತ್ತಿದ್ದ ಸುನೀಲ್ ಗೆ ಮಂಗಳೂರಿನಿಂದ ಶಿವಮೊಗ್ಗ ಕಡೆ ಹೋಗುತ್ತಿದ್ದ ಬೊಲೇನೋ ಕಾರು ಡಿಕ್ಕಿ ಹೊಡೆದಿದೆ. ಮುಖಾಮುಖಿ ಅಪಘಾತದಲ್ಲಿ ಕಾರಿನ ಮುಂಭಾಗ ಹಾನಿಯಾಗಿದೆ. ಬೈಕ್ ನುಜ್ಜುಗುಜ್ಜಾಗಿದೆ. ಗಾಯಾಳು ಸುನೀಲ್ ಗೆ ತೀವ್ರತರನಾದ ಗಾಯಗಳಾಗಿದ್ದು ಸ್ಥಳೀಯರೇ ಆತನನ್ನು ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತೀರ್ಥಹಳ್ಳಿ ಜೆಸಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗೆ…

Read More