ಕ್ರೈಂ ಸುದ್ದಿ:
ಇಬ್ಬರು ಮಕ್ಕಳಿಗೆ ನೇಣು ಬಿಗಿದು ತಾಯಿ ಆತ್ಮಹತ್ಯೆ : ಆಯನೂರು ಸಮೀಪದ ಚೋರಡಿಯಲ್ಲೊಂದು ಹೃದಯ ವಿದ್ರಾವಕ ಘಟನೆ
ಆಯನೂರು ಸಮೀಪದ ಚೋರಡಿಯಲ್ಲಿ ಇಬ್ಬರು ಮಕ್ಕಳಿಗೆ ನೇಣುಬಿಗಿದು ತಾಯಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ತಾಯಿ ಜ್ಯೋತಿ (25) ಮಕ್ಕಳಾದ ಎರಡುವರೆ ವರ್ಷದ ಸಾನ್ವಿ ಹಾಗೂ ಒಂದು ವರ್ಷದ ಕುಶಾಲ್ನೊಂದಿಗೆ ನೇಣು ಬಿಗಿದುಕೊಂಡಿದ್ದಾರೆ. ನೇಣಿಗೆ ಕೌಟುಂಬಿಕ ಸಮಸ್ಯೆ ಕಾರಣವೆಂದು ಹೇಳಲಾಗುತ್ತಿದೆ. ಇನ್ನು ಕೆಲವರು ವರದಕ್ಷಿಣೆ ಕಿರುಕುಳದಿಂದ ನವ ವಿವಾಹಿತೆ ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಪೊಲೀಸ್ ತನಿಖೆಯಿಂದ ಸತ್ಯ ಹೊರಬರಬೇಕಿದೆ. ಅರಣ್ಯ ಇಲಾಖೆಯಲ್ಲಿ ವಾಚರ್ ಆಗಿದ್ದ ಶಿವಕುಮಾರ್ ಪತ್ನಿ ಜ್ಯೋತಿ(25) ಎರಡು ವರೆ ವರ್ಷದ ಸಾನ್ವಿ,…
ಸಿಗಂದೂರು ಸಮೀಪ ರಸ್ತೆ ಅಪಘಾತ : ಓರ್ವನ ಸ್ಥಿತಿ ಗಂಭೀರ
ಸಿಗಂದೂರು ದೇವಸ್ಥಾನದ ಸಮೀಪದ ಕಳಸವಳ್ಳಿ ಗ್ರಾಮದಲ್ಲಿ ಟೆಂಪೋ ಟ್ರಾವಲರ್ ಗಾಡಿಯ ಚಾಲಕನು ವಾಹನ ಚಲಿಸುತ್ತಿದ್ದಾಗ ಫೀಡ್ಸ್ ಬಂದಿರುವ ಹಿನ್ನಲೆ ನಿಯಂತ್ರಣ ತಪ್ಪಿ ವಾಹನ ಧರೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. 11ಈ ವಾಹನದಲ್ಲಿ 10 ಜನ ಪ್ರಯಾಣಿಕರಿದ್ದರು,ನಾಲ್ವರಿಗೆ ಪೆಟ್ಟಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಸಿಗಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥ0ಮ ಚಿಕಿತ್ಸೆ ನೀಡಿ,ಸಾಗರದ ಸರ್ಕಾರಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಬೆಂಗಳೂರು ಸಮೀಪದ ಬಿಡದಿ ಮೂಲದ ಯಾತ್ರಾರ್ಥಿಗಳು ಈ ವಾಹನದಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಪರಿಚಿತ ವ್ಯಕ್ತಿಯ ಹೆಸರು ಹೇಳಿ ಕೂಗಿದ್ದಕ್ಕೆ ಅಪರಿಚಿತ ವ್ಯಕ್ತ್ತಿಗಳಿಂದ ಹಲ್ಲೆ : ದೂರು ದಾಖಲು
ಮನೆಯ ಹತ್ತಿರ ಜೋರಾಗಿ ಕೂಗಿದ ವಿಚಾರದಲ್ಲಿ ವ್ಯಕ್ತಿಯೋರ್ವನ ಮೇಲೆ ಮೂವರು ಸೇರಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ದೂರು ಪ್ರತಿದೂರು ದಾಖಲಾಗಿದೆ. ಘಟನೆಯ ಹಿನ್ನಲೆ : ತುಂಗ ನಗರದ ನಿವಾಸಿ ವಿನೋದ್ ಎಂಬ ವ್ಯಕ್ತಿ ತನ್ನ ಶಂಕರ್ ಎಂಬಾತನನ್ನು ಮಾತನಾಡಿಸಿಕೊಂಡು ಬರಲು ಕುಂಬಾರಗುಡಿಯಲ್ಲಿರುವ ಆತನ ಮನೆಯ ಬಳಿ ಬಂದಿರುತ್ತಾನೆ. ಆದರೆ ಶಂಕರ್ ಮನೆ ಖಾಲಿ ಮಾಡಿಕೊಂಡು ಹೋಗಿ ಆ ಮನೆಗೆ ಬೇರೊಬ್ಬರು ವಾಸಕ್ಕೆ ಬಂದಿರುತ್ತಾರೆ. ಈ ವಿಷಯ ಅರಿಯದ ವಿನೋದ್ ಶಂಕರ್ ಹೆಸರನ್ನು ಜೋರಾಗಿ ಕೂಗಿದ್ದಾನೆ.ಈ ಸಂಧರ್ಭದಲ್ಲಿ ಆ…
ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ 80 ರ ವೃದ್ದೆ :
ತೀರ್ಥಹಳ್ಳಿ : ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ವಿಠಲನಗರದ ಗಂಗಮ್ಮ ( 80 ವರ್ಷ ) ಎಂಬುವ ವೃದ್ದೆ ಇಂದು ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕುಟುಂಬಸ್ಥರು ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದಾಗ ಮನೆಯ ಹಿಂಭಾಗ ಕೊಟ್ಟಿಗೆಯಲ್ಲಿ ನೇಣು ಹಾಕಿಕೊಂಡಿರುವ ಘಟನೆ ನೆಡೆದಿದೆ. ಅಕ್ಕ ಪಕ್ಕದಲ್ಲಿರುವ ಜನರಿಗೆ ತಮ್ಮ ಅನಾರೋಗ್ಯ ಸಮಸ್ಯೆ ಬಗ್ಗೆ ಅಳಲನ್ನು ಹೇಳಿಕೊಳ್ಳುತ್ತಿದ್ದರು ಎನ್ನಲಾಗಿದೆ. ಮೃತರಿಗೆ ಇಬ್ಬರು ಗಂಡು ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ತೀರ್ಥಹಳ್ಳಿ ಪೊಲೀಸ್…
ದಲಿತ ಮಹಿಳೆ ಮೇಲೆ ಅತ್ಯಾಚಾರ ಯತ್ನ ಪ್ರಕರಣ : ಇಬ್ಬರು ಆರೋಪಿಗಳ ಬಂಧನ
ತೀರ್ಥಹಳ್ಳಿ ತಾಲೂಕಿನ ಆರಗ ಸಮೀಪ ದಲಿತ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೇ 9 ರ ರಾತ್ರಿ ಆರಗ ಬಳಿ ನಾಲ್ವರು ದುಷ್ಕರ್ಮಿಗಳು ದಲಿತ ಮಹಿಳೆ ಮತ್ತು ಆಕೆಯ ಗಂಡನ ಮೇಲೆ ಹಲ್ಲೆ ಮಾಡಿದ್ದರು. ಬಳಿಕ ದಲಿತ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದರು ಎಂದು ದೂರು ದಾಖಲಾಗಿತ್ತು. ಸದ್ಯ ಹಲ್ಲೆಗೊಳಗಾದ ಮಹಿಳೆ ಮತ್ತು ಆಕೆಯ ಪತಿಗೆ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀರ್ಥಹಳ್ಳಿ ಸಿಪಿಐ ಸಂತೋಷ್ ನೇತೃತ್ವದ…
ಭದ್ರಾ ನಾಲೆಯಲ್ಲಿ ಈಜಲು ಹೋದ ಇಬ್ಬರು ಮಕ್ಕಳು ನಾಪತ್ತೆ : ಅಗ್ನಿಶಾಮಕ ದಳದಿಂದ ಶೋಧ ಕಾರ್ಯಾಚರಣೆ
ಭದ್ರಾ ಚಾನೆಲ್ ನಲ್ಲಿ ಸ್ನಾನ ಮಾಡಲು ಹೋದ ನಾಲ್ವರು ಮಕ್ಕಳಲ್ಲಿ ಇಬ್ಬರು ನೀರು ಪಾಲಾಗಿರುವ ಘಟನೆ ವರದಿಯಾಗಿದೆ. ಸಮೀಪದ ಹೆಂಚಿನ ಸಿದ್ದಾಪುರ ಗ್ರಾಮದ ಭದ್ರಾ ಬಲದಂಡೆ ಕಾಲುವೆಯಲ್ಲಿ ದೊಡ್ಡಪ್ಪನ ಜೊತೆ ನಾಲ್ವರು ಮಕ್ಕಳು ಈಜಲು ಹೋಗಿದ್ದು ನಾಲ್ವರು ಕೈಕೈ ಹಿಡಿದು ನೀರಿಗೆ ಇಳಿದಿದ್ದಾರೆ. ಈ ವೇಳೆ ದೊಡ್ಡಪ್ಪರಾದ ಕುಬೇರಪ್ಪ ಒಬ್ವಳನ್ನ ಹಿಡಿದುಕೊಂಡ ಪರಿಣಾಮ ಒಂದು ಮಗುವನ್ನ ರಕ್ಷಣೆ ಮಾಡಿದ್ದಾರೆ. ಇನ್ನೂ ಮೂವರು ಮಕ್ಕಳು ನೀರಿನಲ್ಲಿ ತೇಲಿ ಹೋಗಿದ್ದಾರೆ. ನೀರಿನಲ್ಲಿ ಮುಳುಗಿರುವ ಮೂವರ ಮಕ್ಕಳನ್ನು ಅಲ್ಲಿ ಕುರಿ ಕಾಯುತ್ತಿದ್ದ…
ಗೃಹ ಮಂತ್ರಿಗಳ ಸಾಮ್ರಾಜ್ಯದಲ್ಲಿ ದಲಿತ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ : ನಾಲ್ವರು ಆರೋಪಿಗಳ ಮೇಲೆ ಪ್ರಕರಣ ದಾಖಲು
ಗೃಹ ಸಚಿವರ ಗ್ರಾಮದಲ್ಲಿಯೇ ದಲಿತ ದಂಪತಿಗಳ ಮೇಲೆ ಕೆಲ ಕಿಡಿಗೇಡಿಗಳು ಅಡ್ಡಕಟ್ಟಿ ಥಳಿಸಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸಿರುವ ಘಟನೆ ನಡೆದಿದೆ. ಗೃಹ ಸಚಿವ ಆರಗ ಜ್ಞಾನೇಂದ್ರರ ತವರು ಕ್ಷೇತ್ರದಲ್ಲಿ ಕಳ್ಳತನ ದರೋಡೆ ಪ್ರಕರಣಗಳು ನಡೆದ ಬೆನ್ನಲ್ಲೇ ಈಗ ದುಷ್ಕರ್ಮಿಗಳು ದಲಿತ ಮಹಿಳೆಯ ಮೇಲೆ ಅತ್ಯಾಚಾರ ಮಾಡುವ ಯತ್ನಕ್ಕೂ ಕೈ ಹಾಕಿದ್ದಾರೆ ಎಂದರೆ ತೀರ್ಥಹಳ್ಳಿ ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಇದೆಯೋ?? ಇಲ್ಲವೋ ಎಂಬ ಪ್ರಶ್ನೆ ಮೂಡದೆ ಇರದು. ಘಟನೆಯ ಹಿನ್ನಲೆ: ನಿನ್ನೆ ಸಂಜೆ ತೀರ್ಥಹಳ್ಳಿ ತಾಲ್ಲೂಕಿನ…
ಸಾಲಬಾಧೆಗೆ ಹೆದರಿ ವಿಷ ಸೇವಿಸಿ ಯುವ ರೈತ ಆತ್ಮಹತ್ಯೆ :
ಸೊರಬ: ಸಾಲಬಾಧೆಗೆ ಯುವ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಹಿರೇಕಸವಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಗ್ರಾಮದ ಎಚ್.ಕೆ. ಮಹೇಶ್ (38) ಆತ್ಮಹತ್ಯೆಗೆ ಶರಣಾದ ಯುವ ರೈತ. ಅಕಾಲಿಕ ಮಳೆಯಿಂದಾಗಿ ನಿರೀಕ್ಷೆಗಿಂತ ಕಡಿಮೆ ಬೆಳೆ ಬಂದ ಹಿನ್ನೆಲೆ ಸುಮಾರು ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಮುಸುಕಿನ ಜೋಳದ ಬೆಳೆ ನಷ್ಟವಾಗಿತ್ತು. ಸಹಕಾರಿ ಸಂಘವೊಂದರಲ್ಲಿ 80 ಸಾವಿರ ರೂ., ಹಾಗೂ ಕೈಗಡವಾಗಿ ಸುಮಾರು 2 ಲಕ್ಷ ರೂ., ಸಾಲ ಮಾಡಿಕೊಂಡಿದ್ದನು ಎಂದು ತಿಳಿದು ಬಂದಿದ್ದು, ಬೆಳೆ…
ಬೆಳದಿಂಗಳ ಬಾಲೆಯ ಬೆನ್ನತ್ತಿ ಹೋಗಿ ಹಣ ಕಳೆದುಕೊಂಡ ಯುವಕ : ಸಾಮಾಜಿಕ ಜಾಲತಾಣದ ಮನ್ಮಥರು ನೋಡಲೇಬೇಕಾದ ಸ್ಟೋರಿ!!!!!
ಇನ್ ಸ್ಟಾಗ್ರಾಮ್ ನಲ್ಲಿ ಪರಿಚಯವಾದ ಬೆಳದಿಂಗಳ ಬಾಲೆಯೊಬ್ಬಳು ತನ್ನ ಬೇಡಿಕೆ ಈಡೇರಿಕೆಗಾಗಿ ಸಹಚರರ ಮೂಲಕ ಸೊರಬ ತಾಲೂಕು ಕ್ಯಾಸನೂರು ಗ್ರಾಮ ಉಮಟೆಗದ್ದೆ ನಿವಾಸಿ ವಿದ್ಯಾರ್ಥಿಗೆ ಬ್ಲಾಕ್ ಮೇಲ್ ಮಾಡಿ, ಹಣ ಕಿತ್ತುಕೊಂಡು ವಂಚಿಸಿರುವ ಘಟನೆ ನಿಧಾನವಾಗಿ ಬೆಳಕಿಗೆ ಬಂದಿದೆ. ಸಾಗರದ ಸಂಜಯ್ ಮೆಮೋರಿಯಲ್ ಡಿಪ್ಲಮೋ ಕಾಲೇಜಿನಲ್ಲಿ ಪ್ರಥಮ ವರ್ಷದ ತರಗತಿಯ ವಿವೇಕ್ ಎಂಬ ಯುವಕನಿಗೆ ಇನ್ಸ್ಟಾ ಗ್ರಾಮ್ ನಲ್ಲಿ ಅಣಲೇಕೊಪ್ಪದ ಸೌಜನ್ಯ ಎಂಬ ಯುವತಿ ಹಾಯ್ ಎಂಬ ಮೆಸೇಜ್ ಕಳುಹಿಸುವ ಮೂಲಕ ಪರಿಚಿತಳಾಗುತ್ತಾಳೆ. ಇಬ್ಬರು ಪರಸ್ಪರ ಮೊಬೈಲ್ ನಲ್ಲಿ…
ಹೆಂಡತಿಯ ಅಪ್ರಾಪ್ತ ತಂಗಿಯ ಮೇಲೆ ಅತ್ಯಾಚಾರ : ಪೊಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ
ಸಾಗರ : ಹೆಂಡತಿಯ ಅಪ್ರಾಪ್ತ ತಂಗಿಯನ್ನು ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ ಸಾಗರ ತಾಲೂಕಿನ ನಿವಾಸಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ವಿಶ್ವ ಬಂಧಿತ ಆರೋಪಿ. 17 ವರ್ಷದ ಬಾಲಕಿಯನ್ನು ಗರ್ಭಿಣಿಯನ್ನಾಗಿಸಿದ್ದ ಈತನ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯು ಸಾಗರ ತಾಲೂಕಿನ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಈ ಮಹಿಳೆಗೆ ತಂದೆ ಇಲ್ಲದ ಕಾರಣ, ಆಕೆಯ ತಾಯಿ ಹಾಗೂ ಆಕೆಯ ತಂಗಿಯನ್ನು ಆರೋಪಿ ತನ್ನ ಮನೆಗೆ ಕರೆಸಿಕೊಂಡಿದ್ದ. ಎಲ್ಲರೂ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಹೆಂಡತಿಯ ತಂಗಿಯ ಜೊತೆ…