Headlines

ಪ್ರೀತಿಸಿದ ಯುವಕನ ಜೊತೆ ಮದುವೆಗೆ ಅಡ್ಡಿಯಾಯಿತು ಕುಜ ದೋಷ : ವಿಷ ಸೇವಿಸಿದ್ದ ಮಹಿಳಾ ಪೊಲೀಸ್ ಸಾವು

ಪ್ರೀತಿಸಿದ ಯುವನೊಂದಿಗೆ ಮದುವೆಯಾಗಲು ಕುಜ ದೋಷ ಅಡ್ಡಿಯಾಗಿದ್ದರಿಂದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಸುಧಾ ಎಂದು ಗುರುತಿಸಲಾಗಿದೆ. ಭದ್ರಾವತಿ ತಾಲೂಕಿನ ಕಲ್ಲಾಪುರ ನಿವಾಸಿಯಾಗಿರುವ ಪೊಲೀಸ್ ಕಾನ್ಸ್‌ಟೇಬಲ್ ಸುಧಾ ಹಾಗೂ ಭದ್ರಾವತಿ ಅರಣ್ಯ ವಲಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬೆಳಗಾವಿ ಮೂಲದ ಪ್ರವೀಣ್ ಆರು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಪ್ರೀತಿಗೆ ಹೆತ್ತವರ ವಿರೋಧವಿತ್ತು. ಆರಂಭದಲ್ಲಿ ಇವರಿಬ್ಬರ ಪ್ರೀತಿಗೆ ಜಾತಿ ಅಡ್ಡಿಯಾಗಿತ್ತು. ಜಾತಿ ಅಡ್ಡಿಯ ನಡುವೆಯೂ ಇಬ್ಬರು ಮದುವೆಗೆ…

Read More

ಗ್ರಾಮ ಪಂಚಾಯತ್ ಅಧ್ಯಕ್ಷಗಾದಿ ಕೈ ತಪ್ಪಿದ್ದಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ :

ಅಧ್ಯಕ್ಷಗಾದಿ ದೊರಕಲಿಲ್ಲವೆಂದು ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಭದ್ರಾವತಿ ತಾಲೂಕಿನ ದೊಣಬಘಟ್ಟದಲ್ಲಿ(ದರಮಘಟ್ಟ) ಪೊಲೀಸ್ ಬಂದೋಬಸ್ತ್ ನಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ನಡೆದಿದ್ದು ಡ್ರಾಮಾ ಹೈಡ್ರಾಮಕ್ಕೆ ಎಡೆ‌ಮಾಡಿಕೊಟ್ಟಿದೆ. ಖಲೀಮ್ ಎಂಬುವರು ಇಂದು ದೊಣಬಘಟ್ಟ ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿ ಆಯ್ಕೆ ಆಗುವುದು ಅದರಂತೆ ಉಪಾಧ್ಯಕ್ಷರಾಗಿ ಮಾಲಮ್ಮ ಎಂಬುವರು ಆಯ್ಕೆಯಾಗುವುದು ಬಹತೇಕ ಖಚಿತವಾಗಿದೆ. ಈ ಹಿನ್ನಲೆಯಲ್ಲಿ ಕೌಸರ್ ಭಾನು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಆಯ್ಕೆಗೂ ಮೊದಲು ಕೌಸರ್ ಭಾನು ಎಂಬ…

Read More

ರಂಜದಕಟ್ಟೆಯಲ್ಲಿ ಮೆಸ್ಕಾಂ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ !?

ತೀರ್ಥಹಳ್ಳಿ: ತಾಲೂಕಿನ ಮುಳುಬಾಗಿಲು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ರಂಜದಕಟ್ಟೆಯ ಭೀಮನ ಕಟ್ಟೆ ತೂಗು ಸೇತುವೆಯ ಬಳಿ ವಿದ್ಯುತ್ ತಂತಿಯೊಂದು ನೆಲದ ಮೇಲೆ ಬಿದ್ದಿದ್ದನ್ನು ಗಮನಿಸದೆ ರೈತ ಮಹಿಳೆಯೊಬ್ಬರು ಜಾನುವಾರಿಗೆ ಹುಲ್ಲು ತರುವಾಗ ವಿದ್ಯುತ್ ಶಾಕ್ ತಗುಲಿ ಮೃತರಾಗಿರುವ ಘಟನೆ ಜರುಗಿದೆ. ಕೆಲವು ಕಡೆ ವಿದ್ಯುತ್ ಕಂಬಗಳಲ್ಲಿ ತಂತಿ ಕೆಳಗೆ ಜೋತು ಬಿದ್ದಿರುತ್ತವೆ ಅದನ್ನು ಗಮನಿಸದೆ ಅಥವಾ ಶಾರ್ಟ್ ಸರ್ಕ್ಯೂಟ್ ನಿಂದ ಜನರಿಗೆ ತೊಂದರೆಯಾಗುವ ಸಾಧ್ಯತೆ ಇದ್ದು ಈಗಾಗಲೇ ಮಳೆಗಾಲ ಪ್ರಾರಂಭವಾಗುತ್ತಿದ್ದು ಕೆಲವು ತಂತಿಗಳು ತುಕ್ಕು ಹಿಡಿಯುವ ಸ್ಥಿತಿಯಲ್ಲಿ…

Read More

ರಿಪ್ಪನ್‌ಪೇಟೆಯಲ್ಲಿ ಭೀಕರ ಬೈಕ್ ಅಪಘಾತ : ಓರ್ವ ಸಾವು,ಇನ್ನೊಬ್ಬನ ಸ್ಥಿತಿ ಗಂಭೀರ

ರಿಪ್ಪನ್ ಪೇಟೆ : ಸಮೀಪದ ಗವಟೂರು ಕೆರೆ ಬಳಿ 2 ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ. ಹೊಸನಗರ ಕಡೆಯಿಂದ ರಿಪ್ಪನ್ ಪೇಟೆ ಕಡೆಗೆ ಬರುತ್ತಿದ್ದ (KA 15 W 3356) ಟಿವಿಎಸ್ ಬೈಕ್ ಹಾಗೂ ರಿಪ್ಪನ್ ಪೇಟೆಯಿಂದ ಹೊಸನಗರ ಕಡೆಗೆ ತೆರಳುತ್ತಿದ್ದ ಟಿವಿಎಸ್ ಬೈಕ್(KA 15 ED 5303) ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಅಪಘಾತದ ರಭಸಕ್ಕೆ ವ್ಯಕ್ತಿಯೊಬ್ಬ  ಮೃತಪಟ್ಟಿದ್ದಾನೆ.ಇನ್ನೊರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು ಶಿವಮೊಗ್ಗ ಆಸ್ಪತ್ರೆಗೆ…

Read More

ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ :

ರಿಪ್ಪನ್ ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿ ತಡರಾತ್ರಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.ಅಪಘಾತದ ರಭಸಕ್ಕೆ ಎರಡು ಕಾರುಗಳು ನಜ್ಜುಗುಜ್ಜಾಗಿವೆ. ಶಿವಮೊಗ್ಗದಿಂದ ಹೊಸನಗರಕ್ಕೆ ತೆರಳುತಿದ್ದ( KA15 N 6258)  ಮಾರುತಿ ಎರ್ಟಿಗಾ ಕಾರು ಹಾಗೂ ತೀರ್ಥಹಳ್ಳಿಯಿಂದ ಸಾಗರಕ್ಕೆ ತೆರಳುತಿದ್ದ (KA 02 AE 9621)ಇನ್ನೊವಾ ಕಾರುಗಳ ನಡುವೆ ವಿನಾಯಕ ವೃತ್ತದಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ.ಆಪಘಾತದ ರಭಸಕ್ಕೆ ಎರಡು ಕಾರುಗಳು ನಜ್ಜುಗುಜ್ಜಾಗಿವೆ. ಎರಡು ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಅದೃಷ್ಟವಶಾತ್ ಯಾರಿಗೂ ಯವುದೇ ಗಂಭೀರ ಗಾಯಗಳಾಗಿರುವುದಿಲ್ಲ.ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ವಾಹನಗಳನ್ನು ತೆರವುಗೊಳಿಸಿದ್ದಾರೆ….

Read More

ದೇವಸ್ಥಾನ ಹುಂಡಿಗೆ ಕನ್ನ ಹಾಕಿದ ಇಬ್ಬರು ಖದೀಮರ ಬಂಧನ : ಹತ್ತು ಲಕ್ಷ ಮೌಲ್ಯದ ಚಿನ್ನಾಭರಣ ವಶ

ಭದ್ರಾವತಿ : ಕುಮರಿ ನಾರಾಯಣಪುರ ಗ್ರಾಮದ ಚೌಡಮ್ಮ ದೇವಸ್ಥಾನದ‌ ಹುಂಡಿಗೆ ಕನ್ನ ಹಾಕಿದ ಇಬ್ಬರನ್ನು ಸೋಮವಾರ ಬಂಧಿಸಲಾಗಿದೆ. ಭದ್ರಾವತಿಯ ಹೊಸಮನೆ ನಿವಾಸಿ ವಸಂತರಾಜು ಅಲಿಯಾಸ್ ವಸಂತ(37), ಬೇಡರ ಹೊಸಳ್ಳಿಯ ಶ್ವೇತಾ ಅಲಿಯಾಸ್ ಆಸ್ಮಾ(32) ಬಂಧಿತರು. ಚೌಡಮ್ಮ ದೇವಸ್ಥಾನದ ಬಾಗಿಲಿನ ಬೀಗವನ್ನು ಮುರಿದು ಒಳಗಡೆ ಇದ್ದ ಕಾಣಿಕೆ ಹುಂಡಿಯನ್ನು ಒಡೆದು ಅದರಲ್ಲಿದ್ದ ಅಂದಾಜು ₹20,000 ರಿಂದ ₹30,000 ನಗದು ಹಣವನ್ನು ಕಳ್ಳತನ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ಪಿಐ ನೇತೃತ್ವದ ‌ತಂಡ ಕಾರ್ಯಾಚರಣೆ ‌ಕೈಗೊಂಡು…

Read More

ಜಿಂಕೆ ಕೊಂಬುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳು ಮಾಲು ಸಮೇತ ಸೆರೆ :

ಅರಣ್ಯ ಸಂಚಾರಿ ದಳದ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಕಾನೂನು ಬಾಹಿರವಾಗಿ ಜಿಂಕೆ ಕೊಂಬುಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಸಾಗಾಟದಲ್ಲಿ ತೊಡಗಿದ್ದಂತಹ ಆರೋಪಿಗಳನ್ನು ಬಂಧಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಿರಿಗೆರೆ ರಸ್ತೆಯ ಆಯನೂರು ಕೆರೆ ಬಳಿ ಜಿಂಕೆ ಕೊಂಬುಗಳ ಸಾಗಾಟದಲ್ಲಿ ತೊಡಗಿದ್ದ ಸಿರಿಗೆರೆ ನಿವಾಸಿ ಇಸ್ಮಾಯಿಲ್,ಹಾರನಹಳ್ಳಿ ನಿವಾಸಿ ನಯಾಜುಲ್ಲಾ ರನ್ನು ಬಂಧಿಸಿ ಜಿಂಕೆ ಕೊಂಬುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯನ್ನು ಚಂದ್ರಕಾಂತ್ ಐಪಿಎಸ್ ಎಸ್ಪಿ ಸಿಐಡಿ ಅರಣ್ಯ ಘಟಕ ಮಡಿಕೇರಿ ಇವರ ಮಾರ್ಗದರ್ಶನದಲ್ಲಿ ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್  ಸಬ್ ಇನ್ಸ್ಪೆಕ್ಟರ್…

Read More

ಮೀನುಗಾರರ ಮೇಲೆ ಹಲ್ಲೆ ಮಾಡಿದ್ದ ನಿಹಾಲ್ ಕೋಬ್ರಾ & ಗ್ಯಾಂಗ್ ಬಂಧನ

ತೀರ್ಥಹಳ್ಳಿ : ತಾಲೂಕಿನ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಲಿಸರದಲ್ಲಿ ಮಂಡಗದ್ದೆ ಕ್ಯಾಂಪ್ ಮೀನುಗಾರರ ಮೇಲೆ ಕಳೆದ ಐದು ದಿನದ ಹಿಂದೆ ಹಲ್ಲೆ ನೆಡೆಸಿದ್ದ ನಿಹಾಲ್ ಕೋಬ್ರಾನಾ  ಬಂಧನವಾಗಿದೆ. ಇತ್ತೀಚಿಗೆ ಅನೇಕ ಗಲಭೆ ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸರಿಗೆ ಬೇಕಾಗಿದ್ದ ನಿಹಾಲ್ ಕೋಬ್ರಾ ಮತ್ತು ಅವನ ಸಹಚರರು ಮಂಡಗದ್ದೆ ಕ್ಯಾಂಪ್ ಯುವಕರ ಮೇಲೆ ಹಲ್ಲೆ ನೆಡೆಸಿ ಕಣ್ತಪ್ಪಿಸಿಕೊಂಡಿದ್ದರು. ಕಳೆದ 5 ದಿನಗಳಿಂದ ಹಗಲು ರಾತ್ರಿ ನಿರಂತರವಾಗಿ ಕೋಬ್ರಾನಾ ಬೇಟೆಯಾಡಿದ ತೀರ್ಥಹಳ್ಳಿ ಪೊಲೀಸರು ಬೆಂಗಳೂರು ಸೇರಿದಂತೆ ನಾನಾ ಭಾಗದಲ್ಲಿ ಓಡಾಡಿಕೊಂಡು…

Read More

ಶಿವಮೊಗ್ಗದ ಗಾಂಧಿಬಜಾರ್ ನಲ್ಲಿ ಚಾಕು ಇರಿತಕ್ಕೊಳಗಾಗಿದ್ದ ವ್ಯಕ್ತಿ ಸಾವು :

ಶಿವಮೊಗ್ಗ : ಗಾಂಧಿ ಬಜಾರ್​ನ ಮಾರ್ಕೆಟ್​ನಲ್ಲಿ ಚಾಕುವಿನಿಂದ ಇರಿತಕ್ಕೆ ಒಳಗಾಗಿದ್ದ ಸೆಂಧಿಲ್ ಕುಮಾರ್  ಇಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.  ಒಂಬತ್ತು ತಿಂಗಳ ಹಿಂದೆ  ಸೆಂಧಿಲ್ ನ ಸ್ನೇಹಿತ ಸಂತೋಷ್ (ಜೋಗಿ ಸಂತು) ವಿನ ಜೊತೆಯಲ್ಲಿ ಹಣದ ವ್ಯವಹಾರದ ವಿಚಾರವಾಗಿ ಜಗಳವಾಗಿದ್ದು ಆ ಕಾರಣಕ್ಕೆ ಸೆಂಧಿಲ್ ಮೇಲೆ ಅಟ್ಯಾಕ್  ಮಾಡಲಾಗಿತ್ತು. ಈ ಅಟ್ಯಾಕ್ ನಿಂದ ಗಾಯಗೊಂಡಿದ್ದ  ಸೆಂಥಿಲ್ ನನ್ನ​ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಕುಟುಂಬದವರು ಕರೆದುಕೊಂಡು ಹೋಗಿದ್ದರು….

Read More

ಅಪ್ರಾಪ್ತ ಬಾಲಕಿಯ ಅಪಹರಣ ಪ್ರಕರಣ : 48 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿ ಬಾಲಕಿಯನ್ನು ರಕ್ಷಿಸಿದ ಪೊಲೀಸರು

ತೀರ್ಥಹಳ್ಳಿ : ಅಪ್ರಾಪ್ತ ಬಾಲಕಿಯನ್ನು ಅಪಹರಿಸಿದ ಪ್ರಕರಣದಲ್ಲಿ ಮಾಳೂರು ಪೊಲೀಸರು 48 ಗಂಟೆಯಲ್ಲಿ ಪ್ರಕರಣದ ಆರೋಪಿಯನ್ನು ಬಂಧಿಸಿ ಬಾಲಕಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ಹಿನ್ನಲೆ : ತಮಿಳುನಾಡಿನ ಮೂಲದ ಯುವಕ, ಚೆನ್ನಗಿರಿ ಹೊನ್ನಾಳಿ ಭಾಗದ ನೆಂಟರ ಸಂಪರ್ಕ ಪಡೆದು ಶಿವಮೊಗ್ಗದಲ್ಲಿ ಕೆಲಸ ಮಾಡುತ್ತಿದ್ದ. ಈ ಮಧ್ಯೆ ತೀರ್ಥಹಳ್ಳಿಯ ಕುಡುಮಲ್ಲಿಗೆಯಲ್ಲಿ ಗಾರೆ ಕೆಲಸ ಮಾಡುವವರೊಬ್ಬರ ಪರಿಚಯವಾಗಿ ಅವರ ಜೊತೆಗೆ 15 ದಿನದಿಂದ ಕೆಲಸ ಮಾಡುತ್ತಿದ್ದ. ಆತ ತನಗೆ ಕೆಲಸ ಕೊಟ್ಟಿದ್ದವರ ಅಪ್ತಾಪ್ತ ವಯಸ್ಸಿನ ಮಗಳನ್ನ ಪುಸಲಾಯಿಸಿ, ತಮಿಳುನಾಡಿಗೆ ಕರೆದೊಯ್ದಿದ್ದ….

Read More