Headlines

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ತಮ್ಮ ಕಾರಿನಲ್ಲಿ ಕರೆದೊಯ್ದ ಶಿವಮೊಗ್ಗ ಹೆಚ್ಚುವರಿ ಎಸ್ ಪಿ : ವಿಧಿಯಾಟಕ್ಕೆ ವ್ಯಕ್ತಿ ಸಾವು|shivamogga

ಶಿವಮೊಗ್ಗ: ರಸ್ತೆ ಅಪಘಾತದಲ್ಲಿ ಗಾಯಗೊಂಡ ಓರ್ವರನ್ನು ಶಿವಮೊಗ್ಗ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಎಸ್​ಪಿ) ವಿಕ್ರಂ ಆಮ್ಟೆ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗ ನಗರದ ಹೊರವಲಯದ ಹರಿಗೆ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಇರ್ಫಾನ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದರು. ಸಾರ್ವಜನಿಕರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ಆಂಬ್ಯುಲೆನ್ಸ್​ಗಾಗಿ ಕಾಯುತ್ತಿದ್ದರು. ಕಾರ್ಯ ನಿಮಿತ್ತ ಭದ್ರಾವತಿಗೆ ತೆರಳಿ ಅದೇ ಮಾರ್ಗವಾಗಿ ಶಿವಮೊಗ್ಗಕ್ಕೆ ಹಿಂದಿರುಗುತ್ತಿದ್ದ ಹೆಚ್ಚುವರಿ ಎಎಸ್​ಪಿ ವಿಕ್ರಂ ಆಮ್ಟೆ…

Read More

ಗೃಹಸಚಿವರ ತವರಿನಲ್ಲೇ ಅಕ್ರಮ ಮದ್ಯಕ್ಕೆ ವ್ಯಕ್ತಿ ಬಲಿ !!!!!!!?|Guddekoppa

ತೀರ್ಥಹಳ್ಳಿ : ಗೃಹಸಚಿವ ಆರಗ ಜ್ಞಾನೇಂದ್ರ ಅವರ ತವರೂರು ಹೊದಲ ಗ್ರಾಮಪಂಚಾಯಿತಿ ವ್ಯಾಪ್ತಿಯ ಗುಡ್ಡೆಕೊಪ್ಪ ಸಮೀಪದ ತಲವಡ್ಕದ ಕುಟ್ರ ಎಂಬ ಹಳ್ಳಿಯಲ್ಲಿ ಅಕ್ರಮ ಮದ್ಯಕ್ಕೆ ವ್ಯಕ್ತಿ ಬಲಿಯಾದ ಘಟನೆ ಶನಿವಾರ ರಾತ್ರಿ ನೆಡೆದಿದೆ. ಕೆಲವು ದಿನಗಳ ಹಿಂದೆ ಊರಿನ ಗ್ರಾಮಸ್ಥರೆಲ್ಲರೂ ಸೇರಿ ದೈವ ಸಾನಿಧ್ಯದಲ್ಲಿ ನಮ್ಮ ಊರಿನ ಯಾವುದೇ ಅಂಗಡಿ, ಮಳಿಗೆ, ಮನೆ, ಕೈಚೀಲ, ಮತ್ತು ಹೊರ ಊರಿನಿಂದ ಅಥವಾ ಬೇರೆ ಯಾವ ವ್ಯಕ್ತಿಯೂ ಹೊರಗಡೆಯಿಂದ ಮದ್ಯವನ್ನು ತಂದು ಈ ಊರಿನಲ್ಲಿ ಮಾರಾಟ ಮಾಡಬಾರದೆಂದು ದೈವ  ನ…

Read More

ಭೀಕರ ಕಾರು ಅಪಘಾತ : ಹೊಸನಗರ ಮೂಲದ ಮಾಜಿ ಯೋಧ ಸಾವು – ಇಬ್ಬರ ಸ್ಥಿತಿ ಗಂಭೀರ|accident

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮಾವಿನಹೊಳೆ ನಿವಾಸಿ ಪ್ರಗತಿಪರ ರೈತ ಹಾಗೂ ಮಾಜಿ ಸೈನಿಕ ಚನ್ನಪ್ಪ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತರಾಗಿದ್ದಾರೆ. ಬೆಂಗಳೂರಿನಿಂದ ಮನೆಗೆ ವಾಪಸ್ಸಾಗುವಾಗ ಶಿವಮೊಗ್ಗ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮರಣ ಹೊಂದಿರುವುದಾಗಿ ಎಂದು ತಿಳಿದು ಬಂದಿದೆ. ಈ ಅಪಘಾತದಲ್ಲಿ ಮೃತರ ಪತ್ನಿ ಮತ್ತು ಪುತ್ರಿಗೂ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಪುತ್ರಿಯನ್ನು ಬೆಂಗಳೂರಿಗೆ ತನ್ನ ಮಾರುತಿ ಆಲ್ಟೊ 800 ಕಾರಿನಲ್ಲಿ ಕರೆದುಕೊಂಡು ಹೋಗಿ…

Read More

ತೀರ್ಥಹಳ್ಳಿ : ಗಲಾಟೆ ಬಿಡಿಸಲು ಹೋದ ಪೊಲೀಸ್ ಸಿಬ್ಬಂದಿಯ ಮೇಲೆ ವಾಹನ ಹರಿಯಬಿಟ್ಟ ಯುವಕರು – ಪ್ರಕರಣ ದಾಖಲು |Thirthahalli

ತೀರ್ಥಹಳ್ಳಿ : ಸಾರ್ವಜನಿಕ ಸ್ಥಳದಲ್ಲಿ ಸ್ನೇಹಿತರೇ ಪರಸ್ಪರ ಗಲಾಟೆ ಮಾಡಿಕೊಳ್ಳುತಿದ್ದಾಗ  ಬಿಡಿಸಲು ಹೋದ ಪೊಲೀಸ್ ಕಾನ್ ಸ್ಟೇಬಲ್ ಮೇಲೆ ದ್ವಿಚಕ್ರ ವಾಹನವನ್ನ ಹರಿಯಬಿಟ್ಟು ಪರಾರಿಯಾಗಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ತೀರ್ಥಹಳ್ಳಿಯ ಮೂಡ್ ಹೋಟೆಲ್ ಬಳಿ ಯುವಕರು ಸಾರ್ವಜನಿಕ ಸ್ಥಳದಲ್ಲಿ ಪರಸ್ಪರ ಗಲಾಟೆಯಲ್ಲಿ ತೊಡಗಿಕೊಂಡಿರುತ್ತಾರೆ. ಈ ಬಗ್ಗೆ ಮಾಹಿತಿ ಬಂದ ಹಿನ್ನಲೆಯಲ್ಲಿ ಸ್ಥಳಕ್ಕೆ ದಾವಿಸಿದ ಪೊಲೀಸ್ ಕಾನ್ ಸ್ಟೇಬಲ್ ಗಲಾಟೆ ಬಿಡಿಸಲು ಮುಂದಾಗಿದ್ದಾರೆ. ಈ ವೇಳೆ ಯುವಕರು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದಾರೆ. ಪೊಲಿಸ್ ಕಾನ್ ಸ್ಟೇಬಲ್ ತಾವು ಬಂದಿದ್ದ ಬೈಕ್…

Read More

ಸಂಸದ ಬಿ ವೈ ರಾಘವೇಂದ್ರ ಖಾತೆಯಿಂದ 16 ಲಕ್ಷ ಎಗರಿಸಿದ‌ ಮುಂಬೈ ಹ್ಯಾಕರ್ |Hacker

ಸಂಸದ ಬಿ ವೈ ರಾಘವೇಂದ್ರ ರವರ ಬ್ಯಾಂಕ್ ಖಾತೆಗೆ ಕನ್ನ ಹಾಕಿ 16 ಲಕ್ಷ ರೂ. ಹಣ ಲಪಟಾಯಿಸಿದ್ದ ಪ್ರಕರಣ ನಡೆದಿದೆ.  ಈ ಬಗ್ಗೆ ಸ್ವತಃ ಬಿ ವೈ ರಾಘವೇಂದ್ರ ರವರೇ ಶಿಕಾರಿಪುರದ ಕಾರ್ಯಕ್ರಮವೊಂದರಲ್ಲಿ ಹೇಳಿಕೊಂಡಿದ್ದಾರೆ. ಮತ್ತು ಈ ಪ್ರಕರಣವನ್ನು ಶಿವಮೊಗ್ಗ ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿ ಹಣ ಹಿಂದಿರುಗುಸುವಲ್ಲಿ ಯಶಸ್ವಿಯಾಗಿದ್ದಾರೆ ಶಿವಮೊಗ್ಗದ ಇಂಜಿನಿಯರಿಂಗ್ ಕಾಲೇಜಿಗೆ ಸಂಬಂಧಿಸಿದ ಸಂಸದರ ಬ್ಯಾಂಕ್ ಖಾತೆಯಿಂದ 16 ಲಕ್ಷ ರೂ. ಹಣ ದಿಢೀರ್ ವರ್ಗಾವಣೆಯಾಗಿತ್ತು. ಆದರೆ ಆ ಖಾತೆಯಿಂದ ಅವರು ಯಾವುದೆ…

Read More

ನವಜಾತ ಶಿಶುವನ್ನು ಆಸ್ಪತ್ರೆಯ ಶೌಚಾಲಯದಲ್ಲಿ ಬಿಟ್ಟು ಹೋದ ಹೆತ್ತಮ್ಮ | ಬೇಡವಾದ ಪಲ್ಲಂಗದಾಟಕ್ಕೆ ಸಾಕ್ಷಿಯಾದ ಮಗು|Shivamogga

ತಾಯಿಯೊಬ್ಬಳು ತನ್ನ ನವಜಾತ ಹೆಣ್ಣು ಮಗುವನ್ನು ಆಸ್ಪತ್ರೆಯ ಬಾತ್ ರೂಂನಿಂದ ಹೊರಗೆ ಬಿಸಾಡಿರುವ ಘಟನೆ ಶಿವಮೊಗ್ಗ ನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಹೊಟ್ಟೆ ನೋವು ಮತ್ತು ಹೊಟ್ಟೆಯಲ್ಲಿ ಗಡ್ಡೆ ಬೆಳೆದಿದೆ ಎಂದು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ಶರಾವತಿ ನಗರದ ಯುವತಿ ದಾಖಲಾಗಿದ್ದಾಳೆ. ಬಳಿಕ ಶನಿವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇಂದು ಬೆಳಗ್ಗೆ ನವಜಾತ ಹೆಣ್ಣು ಮಗುವನ್ನು ಆಸ್ಪತ್ರೆಯ ಶೌಚಾಲಯದಲ್ಲಿ ಬಿಟ್ಟು ಬಂದಿದ್ದಾಳೆ. ಮಗುವಿನ ಅಳುವಿನ ಶಬ್ಧ ಸರ್ಜರಿ ವಿಭಾಗದಿಂದ ಕೇಳಿ ಬಂದಿದ್ದಕ್ಕೆ ಮೆಗ್ಗಾನ್ ಸಿಬ್ಬಂದಿಗಳು ಎಚ್ಚೆತ್ತುಕೊಂಡು ಹುಡುಕಿದ್ದಾರೆ. ಶೌಚಾಲಯದ…

Read More

ರಸ್ತೆ ಅಪಘಾತ : ಭಾರತ್ ಜೋಡೋ ಯಾತ್ರೆಗೆ ತೆರಳಿದ್ದ ಕಾಂಗ್ರೆಸ್ ಕಾರ್ಯಕರ್ತ ಸಾವು |Accident

  ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನಡೆಸುತ್ತಿರುವ ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಲ್ಲಲು ತೆರಳಿದ್ದ  ಕಾಂಗ್ರೆಸ್‌ ಕಾರ್ಯಕರ್ತನೋರ್ವ ಅಪಘಾತದಿಂದ ಮೃತಪಟ್ಟ ಘಟನೆ ಸೋಮವಾರ ಹಿರಿಯೂರಿನಲ್ಲಿ ನಡೆದಿದೆ. ಸಾಗರ ತಾಲೂಕು ತ್ಯಾಗರ್ತಿ ಸಮೀಪದ ಹಿರೇಬಿಲಗುಂಜಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುತ್ತದಿಂಬ ಗ್ರಾಮದ ರಮೇಶ್‌ (62) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.  ಎಂ.ಎಲ್ ರಮೇಶ್ ಅವರು ಭಾರತ್ ಜೋಡೊ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಸಾಗರ ತಾಲೂಕಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಜೊತೆ ಹಿರಿಯೂರಿಗೆ ತೆರಳಿದ್ದರು ಈ ಸಂದರ್ಭದಲ್ಲಿ ರಸ್ತೆ ದಾಟುವಾಗ ಖಾಸಗಿ…

Read More

ತೀರ್ಥಹಳ್ಳಿ : ಕ್ಷುಲ್ಲಕ ಕಾರಣಕ್ಕೆ ಎದೆಗೆ ಚೂರಿ ಇರಿತ – ಗಾಯಾಳು ಮಣಿಪಾಲ್ ಗೆ ದಾಖಲು|Stabbing

ಕ್ಷುಲ್ಲಕ ಕಾರಣಕ್ಕೆ ಮಸೀದಿಯ ಸಮೀಪ  ಇಬ್ಬರ ನಡುವೆ ನಡೆದ ಗಲಾಟೆ..ಚಾಕು ಇರಿತದಲ್ಲಿ ದುರಂತ ಅಂತ್ಯ ಕಂಡ ಘಟನೆ ಮಾಳೂರು ಪೊಲೀಸ್ ಠಾಣೆಯ ಎದುರು ನಡೆದಿದೆ. ಮಾಳೂರು ಮಟನ್ ಅಂಗಡಿಯ ಮಾಲೀಕ ಶಮಿಯುಲ್ಲಾ ಎಂಬುವರ  ಎದೆಗೆ ರಿಜ್ವಾನ್ ಎಂಬಾತ ಚಾಕು ಇರಿದಿದ್ದಾನೆ ಪರಿಣಾಮ ಶಮಿಯುಲ್ಲಾ ಎದೆಗೆ ಗಂಭೀರವಾಗಿ ಗಾಯವಾಗಿದೆ.  ಗಾಯಾಳು ಶಮಿಯನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಇಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ರವಾನಿಸಿದ್ದಾರೆ ಸದ್ಯ ಮಣಿಪಾಲ್ ಆಸ್ಪಯಲ್ಲಿ ದಾಖಲಾಗಿರುವ ಶಮಿಯುಲ್ಲಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ….

Read More

ಹೊಸನಗರ : ಅಡಿಕೆ ತೋಟಕ್ಕೆ ಎಲೆಚುಕ್ಕಿ ರೋಗ – ಬೇಸತ್ತ ರೈತ ಆತ್ಮಹತ್ಯೆ |sucide

ಮಲೆನಾಡಿನಲ್ಲಿ ಎಲೆ ಚುಕ್ಕೆ ತೀವ್ರತೆ ಹೆಚ್ಚಾಗಿದ್ದು, ರೈತನೋರ್ವನ ಬಲಿ ಪಡೆದುಕೊಂಡಿದೆ. ಎಲೆಚುಕ್ಕೆ ರೋಗಕ್ಕೆ ಅಡಕೆ ತೋಟ ಬಲಿಯಾದ ಹಿನ್ನೆಲೆ ಮಾಡಿದ ಸಾಲ ತೀರಿಸಲಾಗದೆ ಸಂಕಷ್ಟಕ್ಕೆ ಸಿಲುಕಿದ ರೈತ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸನಗರ ತಾಲೂಕಿನ ಕರಿಮನೆ ಗ್ರಾಪಂ ವ್ಯಾಪ್ತಿಯ ಕಿಳಮದೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಕರಿಮನೆ ಗ್ರಾಪಂ ಕಿಳಂದೂರು ಗ್ರಾಮದ ಕೃಷ್ಣಪ್ಪಗೌಡ (60) ಮೃತ ವ್ಯಕ್ತಿ ಮನೆಯ ಪಕ್ಕದಲ್ಲಿರುವ ಮಾವಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಕೃಷ್ಣಪ್ಪಗೌಡ ಅವರ ಸಹೋದರ…

Read More

ರಿಪ್ಪನ್‌ಪೇಟೆ : ಪಾದಚಾರಿಗೆ ಬೈಕ್ ಡಿಕ್ಕಿ – ಗಂಭೀರ ಗಾಯಗೊಂಡ ಪಾದಚಾರಿ ಮೆಗ್ಗಾನ್ ಗೆ ದಾಖಲು |Accident

ರಿಪ್ಪನ್‌ಪೇಟೆ : ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಗೆ ತೀವ್ರತರವಾದ ಗಾಯಗಳಾಗಿರುವ ಘಟನೆ ಪಟ್ಟಣದ ವಿನಾಯಕನಗರದ ಬಾಲಕಿಯರ ಹಾಸ್ಟೆಲ್ ಮುಂಭಾಗದಲ್ಲಿ ನಡೆದಿದೆ. ಶಿವಮೊಗ್ಗ ರಾಮನಗರ ನಿವಾಸಿ ಸೈಯದ್ ಮುಜಾಹಿದ್ (34) ಗಂಭೀರ ಗಾಯಗೊಂಡಿದ್ದಾರೆ. ವಿನಾಯಕನಗರದಿಂದ ರಿಪ್ಪನ್‌ಪೇಟೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ರಿಪ್ಪನ್‌ಪೇಟೆ ಕಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಎಡಗಾಲು ಮುರಿದಿದ್ದು ,ತಲೆ ಹಾಗೂ ಎಡಪಕ್ಕೆಗೆ ತೀವ್ರತರವಾದ ಪೆಟ್ಟಾಗಿದ್ದು ಗಾಯಾಳುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗ ರಾಮನಗರ ನಿವಾಸಿ ಸೈಯದ್ ಮುಜಾಹಿದ್…

Read More