ಕ್ರೈಂ ಸುದ್ದಿ:
ಮಾರಕಾಸ್ತ್ರಗಳೊಂದಿಗೆ ವೀಡಿಯೋ ಚಿತ್ರಿಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದ ಯುವಕನ ಬಂಧನ |Cybercrime
ಮಾರಕಾಸ್ತ್ರಗಳನ್ನು ಹಿಡಿದುಕೊಂಡು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಯುವಕನನ್ನು ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ತಾಲೂಕಿನ ಅಗಸವಳ್ಳಿಯ ಗೌಳಿ ಕ್ಯಾಂಪ್ನ ಇಸ್ಮಾಯಿಲ್ (20) ಬಂಧಿತ ಆರೋಪಿಯಾಗಿದ್ದು, ಈತ ಸಾಮಾಜಿಕ ಜಾಲತಾಣದಲ್ಲಿ ಲಾಂಗು-ಮಚ್ಚುಗಳೊಂದಿಗೆ ಇರುವ ವಿಡಿಯೋ ಹರಿಬಿಟ್ಟು ಸಾರ್ವಜನಿಕರಲ್ಲಿ ಭಯ ಉಂಟು ಮಾಡಿದ್ದನು. ಈತನು ಫೇಸ್ಬುಕ್ನಲ್ಲಿ ಇಸ್ಮಾಯಿಲ್ ಇಸ್ಮಾಯಿಲ್ ಎಂಬ ಖಾತೆ ಹೊಂದಿದ್ದ. ಜೊತೆಗೆ ಐದಾರು ಮಚ್ಚು ಮತ್ತು ತಲ್ವಾರ್ಗಳ ನಡುವೆ ಕಾಣಿಸಿಕೊಳ್ಳುವ ತನ್ನದೇ ವಿಡಿಯೋ ಮಾಡಿ ಪೇಸ್ಬುಕ್ ನಲ್ಲಿ ಹರಿಯಬಿಟ್ಟಿದ್ದ. ಈ ಬಗ್ಗೆ…
ಹೊಸನಗರ : ಮಹಿಳೆಯ ಮೇಲೆ ಕಾಡುಕೋಣ ದಾಳಿ – ಗಂಭೀರ ಗಾಯಗೊಂಡ ಮಹಿಳೆ ಮಂಗಳೂರಿನ ಆಸ್ಪತ್ರೆಗೆ ದಾಖಲು |Wild attack
ಹೊಸನಗರ : ಕೆಲಸಕ್ಕೆ ಹೋಗುತ್ತಿದ್ದ ವೇಳೆ ಮಹಿಳೆ ಮೇಲೆ ಕಾಡುಕೋಣ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ (03-10-2022) ಸೋಮವಾರ ನಡೆದಿದೆ. ತಾಲೂಕಿನ ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯ ಮಾಕೋಡು ನಿವಾಸಿ ಜಯಮ್ಮ(45) ಕಾಡುಕೋಣ ದಾಳಿಗೆ ತುತ್ತಾದ ಮಹಿಳೆಯಾಗಿದ್ದಾರೆ. ಬೆಳಿಗ್ಗೆ ಎದ್ದು ಅಡಿಕೆ ತೋಟಕ್ಕೆ ಕೆಲಸಕ್ಕೆ ಹೋಗುವ ವೇಳೆ ಕಾಡುಕೋಣ ಏಕಾಏಕಿ ದಾಳಿ ನಡೆಸಿದೆ. ಮಹಿಳೆಯನ್ನು ಕೋಡಿನಿಂದ ತಿವಿದು ನಂತರ ಎತ್ತಿ ಬಿಸಾಡಿದೆ.ಮಹಿಳೆಯ ಕೈಮುರಿತವಾಗಿದ್ದು, ಹೊಟ್ಟೆ, ಹಣೆ, ಮೇಲೆ ತಿವಿದ ಗಾಯಗಳಾಗಿವೆ. ಮಹಿಳೆಯ ಚೀರಾಟ ಕೇಳಿ ತುಸುದೂರದಲ್ಲಿದ್ದ ಪತಿ…
ಮೃಗವಧೆ ರಾಜು ಕೊಲೆ ಪ್ರಕರಣ – ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ | Arrested
ತೀರ್ಥಹಳ್ಳಿ : ತಾಲೂಕಿನ ಮಾಳೂರಿನಲ್ಲಿ ವ್ಯಕ್ತಿಯೋರ್ವನನ್ನು ಬಲವಾಗಿ ಹೊಡೆದು ಆತನನ್ನ ಬೈಕ್ ನಲ್ಲಿ ಕರೆದುಕೊಂಡು ಬಂದು ಮನೆಯ ಬಾಗಿಲಿನಲ್ಲಿ ಬಿಟ್ಟು ಹೋಗಿದ್ದ ಪ್ರಕರಣದಲ್ಲಿ ನಾಲ್ವರನ್ನ ಬಂಧಿಸಲಾಗಿದೆ. ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆಯಲ್ಲಿ ಸೆ.25 ರಂದು ಬೆಳ್ಳಿಕೋಡಿಗೆ ಗ್ರಾಮದಲ್ಲಿ ರಾಜು ಎಂಬ ವ್ಯಕ್ತಿ ಕುಡಿಯಲು ಅಲ್ಲಿದ್ದ ಕೋಳಿ ಅಂಗಡಿಯ ಬಳಿ ಕೋಳಿ ಕದಿಯಲು ಬಂದಿದ್ದೀಯ ಎಂದು ಆರೋಪಿಸಿ ಶಿಶಿರ, ವಿಜಯೇಂದ್ರ ಮತ್ತು ಶಿವು ಎಂಬುವರು ರಾಜುನನ್ನ ಕೈಕಾಲು ಕಟ್ಟಿಹಾಕಿ ದೊಣ್ಣೆಗಳಿಂದ ಹೊಡೆದಿರುತ್ತಾರೆ. ನಂತರ ಬೈಕ್ ನಲ್ಲಿ ಕರೆದುಕೊಂಡು…
ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ : ಕೊಲೆ ಎಂಬ ಶಂಕೆ ವ್ಯಕ್ತಪಡಿಸುತ್ತಿರುವ ಕುಟುಂಬಸ್ಥರು | MISSING
ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಅನ್ವರ್ ಕಾಲೋನಿ ನಿವಾಸಿ ಜಮೀರ್(19) ಎರಡು ದಿನಗಳ ಹಿಂದ ಎಲೆಕ್ಟ್ರಿಕಲ್ ಕೆಲಸಕ್ಕೆ ತೆರಳಿದ್ದ ಆದರೆ ಇಂದು ಭದ್ರಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಅನ್ವರ್ ಕಾಲೋನಿಯ ಜಮೀರ್ ಮೊನ್ನೆ ಟಿವಿ ರಿಪೇರಿಗಾಗಿ ದೇವನರಸೀಪುರ ಗ್ರಾಮಕ್ಕೆ ಹೋಗಿದ್ದ ನಂತರ ಆತನ ಮೊಬೈಲ್ ಸ್ವಿಚ್ ಆಫ಼್ ಆಗಿತ್ತು. ಆತನ ಮೊಬೈಲ್ ಸ್ವಿಚ್ ಆಫ್ ಆದ ಹಿನ್ನೆಲೆಯಲ್ಲಿ ಆತನ ಕುಟುಂಬಸ್ಥರು ಗಾಬರಿಗೊಂಡು ಹೊಸಮನೆ ಪೊಲೀಸ್ ಠಾಣೆಯಲ್ಲಿ…
ಅಕ್ರಮ ಜಾನುವಾರು ಸಾಗಾಟ – ಬಜರಂಗದಳ ಕಾರ್ಯಕರ್ತರಿಂದ ರಕ್ಷಣೆ |bajarangdal
ಮಾರಾಟದ ಉದ್ದೇಶಕ್ಕಾಗಿ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಬಜರಂಗದಳದ ಕಾರ್ಯಕರ್ತರು ರಕ್ಷಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಪ ಗ್ರಾಮದಲ್ಲಿ ಇಂದು ನಡೆದಿದೆ. ಹೊಸನಗರ ಕಡೆಯಿಂದ ಶಿರಾಳಕೊಪ್ಪದ ಕಡೆಗೆ ಅಶೋಕ್ ಲೈಲೆಂಡ್ ದೋಸ್ತ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಆರು ಎತ್ತಿನ ಹೋರಿ ಹಾಗೂ ಒಂದು ಎಮ್ಮೆ ಕರುವನ್ನು ಭಜರಂಗದಳದ ಕಾರ್ಯಕರ್ತರು ರಸ್ತೆಗೆ ಅಡ್ಡಗಟ್ಟಿ ವಶಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇಂದು ಬೆಳಿಗ್ಗೆ ಕೆಎ 17 ಎಎ 0196 ವಾಹನದಲ್ಲಿ ಸುಮಾರು ಆರು ಎತ್ತಿನಹೋರಿ ಹಾಗೂ ಒಂದು ಎಮ್ಮೆ…
ಅಕ್ಕನ ಬಾಣಂತನಕ್ಕೆ ಹೋದ ಯುವತಿ ಭಾವನಿಂದ ಗರ್ಭಿಣಿ – ಮದುವೆಗೆ ಒಲ್ಲೆ ಎಂದಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ |suicide
ಶಿವಮೊಗ್ಗ ಜಿಲ್ಲೆ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 21 ವರ್ಷದ ಯುವತಿ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಕ್ಕನ ಬಾಣಂತನಕ್ಕೆ ಹೋಗಿದ್ದ ವೇಳೆ ಅಕ್ಕನ ಗಂಡ ಪುಸಲಾಯಿಸಿ ಬಲವಂತದಿಂದ ದೈಹಿಕ ಸಂಪರ್ಕ ಬೆಳೆಸಿದ್ದ.ನಂತರ ಎಲ್ಲಾರಿಗೂ ಗೊತ್ತಾದ ನಂತರ ಉಡಾಫೆ ಮಾತನಾಡಿದ ಕಾರಣ ಯುವತಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. [ ಆರೋಪಿ ಪ್ರಶಾಂತ್ ] ಚೋರಡಿಯ ಮರಾಠೀ ಕ್ಯಾಂಪ್ ನಿವಾಸಿಯಾದ ಯುವತಿ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾಳೆ.ಅದೇ ಮರಾಠಿ…
ರಿಪ್ಪನ್ಪೇಟೆ : ಮಹಿಳೆಯೊಬ್ಬರ ಅಸ್ಥಿಪಂಜರ ಪತ್ತೆ – ಕಳೆದ ವರ್ಷ ನಾಪತ್ತೆಯಾಗಿದ್ದ ಮಹಿಳೆ ಎಂಬ ಶಂಕೆ | Human skeleton
ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಹಾರಂಬಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಮಹಿಳೆಯೊಬ್ಬರ ಅಸ್ಥಿಪಂಜರ ಆಕೆ ಧರಿಸಿದ್ದ ವಸ್ತ್ರದ ಜೊತೆಗೆ ಪತ್ತೆಯಾಗಿರುವ ಘಟನೆ ನಡೆದಿದೆ. ವರ್ಷದ ಹಿಂದೆ ನಾಪತ್ತೆಯಾಗಿದ್ದ ವೃದ್ದೆ ಎಂಬ ಶಂಕೆ : ಹಾರಂಬಳ್ಳಿ ಗ್ರಾಮದ ಮಹಿಳೆ ಗಿಡ್ಡಮ್ಮ (80) ಕಳೆದ 12-07-2021ರಂದು ನಾಪತ್ತೆಯಾಗಿದ್ದರು.ಕೂಡಲೇ ಗಿಡ್ಡಮ್ಮ ಅವರ ಮಕ್ಕಳು ರಿಪ್ಪನ್ಪೇಟೆ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ನಾಪತ್ತೆ ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.ಆದರೆ ವೃದ್ದೆ ಎಲ್ಲೂ ಪತ್ತೆಯಾಗಿರಲಿಲ್ಲ. ನಾಪತ್ತೆಯಾಗಿ ಒಂದು ವರ್ಷ ಎರಡು ತಿಂಗಳ ನಂತರ…
ಎರಡು ಕಾರುಗಳು,ಬಸ್ ಮತ್ತು ಬೈಕ್ ನಡುವೆ ಸರಣಿ ಅಪಘಾತ : ನಾಲ್ವರಿಗೆ ತೀವ್ರ ಗಾಯ-ಮೆಗ್ಗನ್ ಗೆ ದಾಖಲು |Accident
ಎರಡು ಕಾರುಗಳು, ಬಸ್ಸು ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿ, ನಾಲ್ವರು ಗಾಯಗೊಂಡಿರುವ ಘಟನೆ ಸಾಗರ ತಾಲೂಕಿನ ಕುಗ್ವೆ ಕ್ರಾಸ್ ಬಳಿ ಸಂಜೆ ಸಂಭವಿಸಿದೆ. ಕುಗ್ವೆ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ವ್ಯಾಗನಾರ್ ಕಾರು, ಬೈಕ್, ಕಾರು ಮತ್ತು ಬಸ್ಸಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಜೋಗ ನಿವಾಸಿಗಳಾದ ಕೃಷ್ಣಮೂರ್ತಿ, ಬಾಲಕೃಷ್ಣ, ಮಧು ಮತ್ತು ಶ್ರೀಧರ್ ಎಂಬುವವರಿಗೆ ತೀವ್ರ ಗಾಯವಾಗಿದೆ. ಅವರನ್ನು ಕೂಡಲೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ…
ಕೆ ಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸಾವು
ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಭದ್ರಾವತಿ ನಗರದ ಉಂಬ್ಳೆಬೈಲು ರಸ್ತೆಯಲ್ಲಿ ಕೆಎಸ್ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಆಂಜನೇಯ ಅಗ್ರಹಾರದ ಮೂರನೇ ತಿರುವಿನ ನಿವಾಸಿ ಲೋಕೇಶ್ ಎಂಬಾತನು ಬೈಕ್ ನಲ್ಲಿ ಹೋಗುತ್ತಿದ್ದಾಗ ನ್ಯೂಟೌನ್ ಪೊಲೀಸ್ ಠಾಣೆಯ ಸಮೀಪ ಕೆಎಸ್ ಆರ್ ಟಿ ಸಿ ಬಸ್ ಗೆ ಡಿಕ್ಕಿ ಹೊಡೆದಿದ್ದಾರೆ. ಬೈಕ್ ಸವಾರ…
ಖಾಸಗಿ ಈಜುಕೊಳದಲ್ಲಿ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು :
ಖಾಸಗಿ ಈಜುಕೊಳದಲ್ಲಿ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ತನ್ನ ಸ್ನೇಹಿತರೊಂದಿಗೆ ಶಿವಮೊಗ್ಗದ ಶಕ್ತಿಧಾಮದ ಖಾಸಗಿ ಈಜುಕೊಳಕ್ಕೆ ತೆರಳಿದ್ದ ಜೋಸೆಫ್ ನಗರದ ಯುವಕ ರಾಕೇಶ್ ಎಂಬ 18 ವರ್ಷದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಡಿವಿಎಸ್ ಕಾಮರ್ಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ರಾಕೇಶ್ ಎರಡು ಮೂರು ದಿನಗಳಿಂದ ಸ್ನೇಹಿತರೊಂದಿಗೆ ಈಜುಕೊಳದಲ್ಲಿ ತೆರಳಿ ಈಜು ಹೊಡೆಯಲು ಯೋಜನೆ ಹಾಕಿಕೊಂಡಿದ್ದ. ಇಂದು ಮಧ್ಯಾಹ್ನ ಈಜುಕೊಳಕ್ಕೆ ತೆರಳಿದ್ದ ಯುವಕ ಮನೆಗೆ ಹೊರಡುವ ವೇಳೆ ನೀರಿನಿಂದ…