ಕ್ರೈಂ ಸುದ್ದಿ:
ಆಯನೂರು ಬಳಿ ರಸ್ತೆ ಅಪಘಾತ : ಬೈಕ್ ಸವಾರ ಸ್ಥಳದಲ್ಲಿಯೇ ಸಾವು
ಆಯನೂರು ಬಳಿ ಬೈಕ್ ಹಾಗೂ ಪಿಕಪ್ ವಾಹನದ ನಡುವೆ ಭೀಕರ ಅಪಘಾತವಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಧಾರುಣ ಸಾವುಕಂಡಿದ್ದಾನೆ. ಆಯನೂರು ಸಮೀಪದ ವಿಠಗೊಂಡನಕೊಪ್ಪ ಗ್ರಾಮದ ಆಕಾಶ್ (20) ಮೃತ ದುರ್ದೈವಿಯಾಗಿದ್ದಾನೆ. ಶಿವಮೊಗ್ಗದ ಆಯನೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಘಟನೆ ಇದಾಗಿದೆ. ಶಿವಮೊಗ್ಗದಿಂದ ಆಯನೂರಿನ ಕಡೆ ಬೈಕ್ ನಲ್ಲಿ ತೆರಳುತ್ತಿದ್ದ ಆಕಾಶ್ ಆಯನೂರು ಸಮೀಪದ ವೀರಗಾರನ ಬೈರನಕೊಪ್ಪದ ಬಳಿ ಕೋಳಿ ಸಾಗಿಸುತ್ತಿದ್ದ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದ ಪರಿಣಾಮ ಆಕಾಶ್ ಸ್ಥಳದಲ್ಲಿಯೇ ಸಾವುಕಂಡಿದ್ದಾನೆ. ಅಪಘಾತದ ರಭಸಕ್ಕೆ ಆಕಾಶ್…
ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು
ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ಉಳವಿ ಮತ್ತು ಮಳಲಗದ್ದೆ ಗ್ರಾಮದ ನಡುವೆ ಗುರುವಾರ ರಾತ್ರಿ ಸಂಭವಿಸಿದೆ. ಅವಲಗೋಡು ಗ್ರಾಮದ ಯುವರಾಜ್ ಗಣಪತಿ (38) ಮೃತ ಬೈಕ್ ಸವಾರ. ಉಳುವಿಯಿಂದ ಅವಲಗೋಡು ಗ್ರಾಮಕ್ಕೆ ತೆರಳುತ್ತಿದ್ದ ಬೈಕ್ ಗೆ ಸೊರಬದಿಂದ ಸಾಗರ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಟಿಪ್ಪರ್ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ…
ಬೈಕ್ ನಿಧಾನವಾಗಿ ಚಲಿಸಿ ಎಂದಿದ್ದಕ್ಕೆ ದೇವಸ್ಥಾನದ ಅರ್ಚಕನ ಮೇಲೆ ಹಲ್ಲೆ :
ಬೈಕ್ ನಿಧಾನಕ್ಕೆ ಚಲಿಸಿ ಎಂದು ಬುದ್ದಿವಾದ ಹೇಳಿದ್ದಕ್ಕೆ ದೇವಸ್ಥಾನದ ಅರ್ಚಕನ ಮೇಲೆ ಹಲ್ಲೆ ನಡೆದು ಅವರ ಬಳಿ ಮೊಬೈಲ್ ಮತ್ತು ಇತರೆ ವಸ್ತುಗಳನ್ನ ಕಿತ್ತುಕೊಂಡು ಹೋಗಿರುವ ಘಟನೆ ವರದಿಯಾಗಿದೆ. ಊರುಗಡೂರು ಗಣಪತಿ ದೇವಸ್ಥಾನದ ಅರ್ಚಕ ಅಕ್ಷಯ್ ಕುಮಾರ್ ಕೆಲಸದ ನಿಮಿತ್ತ ಶಿವಮೊಗ್ಗದ ಗಾಂಧಿ ಬಜಾರ್ ಗೆ ಬಂದಿದ್ದು ಜೀ ಕಾರ್ನರ್ ಮೂಲಕ ಎಂಕೆಕೆ ರಸ್ತೆಯಲ್ಲಿ ಹೋಗಲು ಮೆಹಬೂಬ್ ಗಲ್ಲಿಗೆ ಬಂದಾಗ ಇಬ್ಬರು ಬೈಕ್ ಸವಾರರು ಬೈಕ್ ಗೆ ಡಿಕ್ಕಿ ಹೊಡೆಯುವ ರೀತಿ ಚಲಾಯಿಸಿಕೊಂಡು ಬಂದಿದ್ದಾರೆ. ಚಲಾಯಿಸಿಕೊಂಡು ಬಂದ…
ಅಪರಿಚಿತ ವ್ಯಕ್ತಿಯನ್ನು ರಕ್ಷಿಸಲು ಚಾನೆಲ್ ಗೆ ಹಾರಿದ್ದ ರಿಪ್ಪನ್ಪೇಟೆ ಯುವಕನ ಮೃತದೇಹ ಪತ್ತೆ : ಮುಗಿಲುಮುಟ್ಟಿದ ಕುಟುಂಬಸ್ಥರ ಆಕ್ರಂದನ
ಮಂಗಳವಾರ ಬೆಳಿಗ್ಗೆ ದಾವಣಗೆರೆ ಜಿಲ್ಲೆ ಸಿದ್ದಾಪುರದ ಚಾನಲ್ ಗೆ ಬಿದ್ದು ಸಾಯುತ್ತಿದ್ದ ವೃದ್ದ ದಂಪತಿಗಳನ್ನು ಬದುಕಿಸಬೇಕು ಎಂಬ ಹಂಬಲದಲ್ಲಿ ಚಾನೆಲ್ ಗೆ ಜಿಗಿದು ಬದುಕಿಸುವ ಯತ್ನದಲ್ಲಿ ಈತನು ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಘಟನೆ ನಡೆದಿದೆ. ರಿಪ್ಪನ್ ಪೇಟೆ ನೆಹರು ಬಡಾವಣೆ ನಿವಾಸಿ ಅನೀದ್ (22) ಮೃತಪಟ್ಟ ಧುರ್ಧೈವಿಯಾಗಿದ್ದಾನೆ. ಕಳೆದ 48 ಗಂಟೆಗಳಿಂದ ಅಗ್ನಿಶಾಮಕ ದಳ ದವರು ಕಾರ್ಯಾಚರಣೆ ನಡೆಸುತ್ತಿದ್ದರೂ ಯುವಕನ ಶವ ಪತ್ತೆಯಾಗಿರಲಿಲ್ಲ,ಇಂದು ಬೆಳಿಗ್ಗೆ ನೆಲ್ಲೂರು ಸಮೀಪದ ಹಿರೆಮಳಲಿ ಎಂಬ ಗ್ರಾಮದ ಬಳಿ ಯುವಕನ ಮೃತದೇಹ ಪತ್ತೆಯಾಗಿದೆ….
ಇನ್ನೂ ಪತ್ತೆಯಾಗದ ವೃದ್ದನನ್ನು ರಕ್ಷಿಸಲು ಚಾನೆಲ್ ಗೆ ಹಾರಿ ನಾಪತ್ತೆಯಾಗಿದ್ದ ರಿಪ್ಪನ್ ಪೇಟೆಯ ಯುವಕ : ಅಗ್ನಿಶಾಮಕ ದಳದವರಿಂದ ಬಿರುಸಿನ ಕಾರ್ಯಾಚರಣೆ
ದಾವಣಗೆರೆ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಸಿದ್ದಾಪುರ ಚಾನೆಲ್ ನಲ್ಲಿ ವೃದ್ದನೊಬ್ಬನನ್ನು ರಕ್ಷಿಸಲು ಹೋಗಿ ರಿಪ್ಪನ್ಪೇಟೆಯ ಯುವಕನೊಬ್ಬ ನಾಪತ್ತೆಯಾಗಿ ಸುಮಾರು 48 ಗಂಟೆ ಕಳೆದಿದ್ದು ಇನ್ನೂ ಯುವಕನ ಸುಳಿವು ಪತ್ತೆಯಾಗಿಲ್ಲ. ರಿಪ್ಪನ್ ಪೇಟೆ ನೆಹರು ನಗರ ನಿವಾಸಿ ಅನೀದ್ (22) ವರ್ಷ ಎಂಬ ಯುವಕ ಮಂಗಳವಾರ ಬೆಳಿಗ್ಗೆ ದಾವಣಗೆರೆಯಿಂದ ಲಾರಿಯೊಂದರಲ್ಲಿ ಶಿವಮೊಗ್ಗಕ್ಕೆ ಬರುತ್ತಿದ್ದಾಗ ಸಿದ್ದಾಪುರ ರಸ್ತೆ ಬದಿಯ ಚಾನೆಲ್ ಬಳಿ ಸೇರಿದ ಜನಸ್ತೋಮವನ್ನು ನೋಡಿ ಪ್ರಶ್ನಿಸಿದ್ದಾನೆ. ಆ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಚಾನೆಲ್ ಗೆ ಹಾರಿರುವ ವಿಚಾರ ಗಮನಕ್ಕೆ ಬಂದಿದ್ದು,ತಕ್ಷಣವೇ…
ಪಾಲೀಶ್ ಮಾಡಿಕೊಡುವ ನೆಪದಲ್ಲಿ ಮಹಿಳೆಯ ಎರಡೂವರೆ ಲಕ್ಷ ಮೌಲ್ಯದ ಮಾಂಗಲ್ಯ ಸರ ಅಪಹರಣ :
ಒಂಟಿ ಮಹಿಳೆಯ ಮನೆಗೆ ಬಂದ ಇಬ್ಬರು ವ್ಯಕ್ತಿಗಳು ಆಭರಣಗಳನ್ನು ಪಾಲಿಶ್ ಮಾಡಿಕೊಡುವ ನೆಪದಲ್ಲಿ ಮಹಿಳೆಯ ಮಾಂಗಲ್ಯ ಸರ ಅಪಹರಿಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ. ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೋಟೆ ಕೊಪ್ಪ ಗ್ರಾಮದ ಸರೋಜಮ್ಮ ಅವರೇ ಮಾಂಗಲ್ಯ ಸರ ಕಳೆದುಕೊಂಡವರು. ಪಾಲಿಶ್ ಮಾಡಿಕೊಡುವ ನೆಪದಲ್ಲಿ ಸರೋಜಮ್ಮ ಅವರ ಮನೆಗೆ ಬಂದ ಇಬ್ಬರು ವ್ಯಕ್ತಿಗಳು ಅವರ ಗಮನ ಬೇರೆಡೆ ಸೆಳೆದು ಕ್ಷಣ ಮಾತ್ರದಲ್ಲಿ ನಲವತ್ತು ಗ್ರಾಂ ತೂಕದ ಮಾಂಗಲ್ಯ ಸರವನ್ನು ಅಪಹರಿಸಿ ಪರಾರಿಯಾಗಿದ್ದಾರೆ.ಮೊದಲು ಬೆಳ್ಳಿಯ ಗೆಜ್ಜೆಯನ್ನು…
ಚಾನೆಲ್ ಗೆ ಹಾರಿದ ವ್ಯಕ್ತಿಯನ್ನು ರಕ್ಷಿಸಲು ಹೋದ ರಿಪ್ಪನ್ಪೇಟೆ ಯುವಕನೊಬ್ಬ ನಾಪತ್ತೆ : ಮುಂದುವರೆದಿರುವ ಶೋಧ ಕಾರ್ಯಾಚರಣೆ
ಚಾನೆಲ್ ಗೆ ಹಾರಿದ ವ್ಯಕ್ತಿಯೊಬ್ಬರನ್ನು ರಕ್ಷಿಸಲು ಹೋಗಿ ರಿಪ್ಪನ್ಪೇಟೆಯ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಸಿದ್ದಾಪುರ ಚಾನೆಲ್ ಬಳಿ ನಡೆದಿದೆ. ರಿಪ್ಪನ್ ಪೇಟೆ ನೆಹರು ನಗರ ನಿವಾಸಿ ಅನೀದ್ (22) ವರ್ಷ ನಾಪತ್ತೆಯಾಗಿರುವ ಯುವಕನಾಗಿದ್ದಾನೆ. ಅನೀದ್ ಲಾರಿಯೊಂದರಲ್ಲಿ ನಿರ್ವಾಹಕನಾಗಿ ಕಾರ್ಯನಿರ್ವಹಿಸುತ್ತಿದ್ದು, ದಾವಣಗೆರೆಯಿಂದ ಲಾರಿಯೊಂದರಲ್ಲಿ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಸಿದ್ದಾಪುರ ರಸ್ತೆ ಬದಿಯ ಚಾನೆಲೊಂದರ ಬಳಿ ಸೇರಿದ ಜನಸ್ತೋಮವನ್ನು ನೋಡಿ ಪ್ರಶ್ನಿಸಿದ್ದಾನೆ. ಆ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಚಾನೆಲ್ ಗೆ ಹಾರಿರುವ ವಿಚಾರ ಗಮನಕ್ಕೆ ಬಂದಿದ್ದು,ತಕ್ಷಣವೇ ಅವರನ್ನು…
ಸಿಡಿಲು ಬಡಿದು ಯುವ ರೈತ ಸಾವು
ಕೃಷಿ ಚಟುವಟಿಕೆಯಲ್ಲಿ ನಿರತನಾಗಿದ್ದ ಯುವ ರೈತನೊಬ್ಬ ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ಇಂಡುವಳ್ಳಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. ಇಂಡುವಳ್ಳಿ ಗ್ರಾಮದ ಗೌತಮ್ ನಾಗರಾಜ (23) ಮೃತ ದುರ್ಧೈವಿ. ಗ್ರಾಮದ ಸರ್ವೆ ನಂ 121/2 ರಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತಾಗಿದ್ದ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಗೌತಮ್ ಮೃತ ಪಟ್ಟಿದ್ದಾರೆ. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಬಜರಂಗದಳ ಕಾರ್ಯಕರ್ತನಿಗೆ ಕೊಲೆ ಬೆದರಿಕೆ : ಮೂವರ ಬಂಧನ
ಬಜರಂಗದಳದ ಕಾರ್ಯಕರ್ತನ ಹತ್ಯೆಗೆ ಸಂಚು ಮಾಡಿ ಮೂವರು ಅನ್ಯ ಕೋಮಿನ ಯುವಕರು ಬಂಧನಕ್ಕೊಳಗಾಗಿದ್ದಾರೆ. ಇಲ್ಲೂ ಸಹ ದೊಡ್ಡಪೇಟೆ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಸಂಚು ಹಾಕಿದ ಮೂವರನ್ನ ಬಂಧಿಸಿ ಹೆಡೆಮುರಿಕಟ್ಟಿದ್ದಾರೆ. ಬಜರಂಗದಳ ಕಾರ್ಯಕರ್ತನನ್ನ ಅನೇಕ ದಿನಗಳಿಂದ ಹಿಂಬಾಲಿಸಿದ ಮೂವರು ಯುವಕರು ಮೊನ್ನೆ ನ್ಯೂ ಮಂಡ್ಲಿಯ ಬಳಿ ಬೈಕ್ ನಲ್ಲಿ ತೆರಳುತ್ತಿದ್ದ ಕಾರ್ಯಕರ್ತನ ಸಹೋದರನನ್ನ ಮೂವರು ಯುವಕರು ಅಡ್ಡಹಾಕಿ ಅವ್ಯಾಚ್ಯ ಶಬ್ದಗಳಿಂದ ಬೈದಿದ್ದಾರೆ. ನಿನ್ನ ಜೊತೆ ಬೈಕ್ ನಲ್ಲಿ ಓಡಾಡುತ್ತಿದ್ದ ಕಾರ್ಯಕರ್ತ ಎಲ್ಲಿ ಹೇಳು ಎಂದು ಮಾರಕಾಸ್ತ್ರಗಳನ್ನು…
ಸಾಗರದಲ್ಲಿ ಬಸ್ ಇಳಿಯುವಾಗ ಬಿದ್ದು ಮತ್ತೊಬ್ಬ ವ್ಯಕ್ತಿ ಸಾವು : ಒಂದೇ ದಿನ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಘಟನೆಯಲ್ಲಿ ಇಬ್ಬರ ಸಾವು
ಬಸ್ ಇಳಿಯಲು ಹೊರಟಿದ್ದ ಪ್ರಯಾಣಿಕರೊಬ್ಬರು ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಸಾಗರ ಪಟ್ಟಣದ ಸಂಜೀವಿನಿ ಆಯುರ್ವೇದಿಕ್ ಆಸ್ಪತ್ರೆಯ ಬಳಿ ಸಂಭವಿಸಿದೆ. ಹೋಟೆಲ್ ಕೆಲಸಕ್ಕೆಂದು ಕಾರ್ಗಲ್ ಗೆ ತೆರಳಿದ್ದ ಮಹಾದೇವ ನಾಯ್ಕ್ ವಾಪಾಸ್ ಸಾಗರಕ್ಕೆ ಕುಮಧ್ವತಿ ಖಾಸಗಿ ಬಸ್ ನಲ್ಲಿ ಬಂದಿದ್ದಾರೆ. ಸಾಗರದ ಅಗಡಿಮಠ ಹತ್ತಿರ ಮನೆ ಮಾಡಿಕೊಂಡಿರುವ ಮಹದೇವ ನಾಯ್ಕ್ ಬಸ್ ಸಾಗರ ಕೆಎಸ್ ಆರ್ ಟಿ ಬಸ್ ನಿಲ್ದಾಣದ ಮುಂದೆ ಬರುತ್ತಿದ್ದಂತೆ ಸೀಟ್ ನಿಂದ ಎದ್ದು ಹಿಂಬದಿ ಡೋರ್ ಬಳಿ ಬಂದು ನಿಂತಿದ್ದಾರೆ. ಸಂಜೀವಿನಿ ಆಯುರ್ವೇದಿಕ್…