Headlines

ತೀರ್ಥಹಳ್ಳಿಯಲ್ಲಿ ಹಾಡಹಗಲೇ ಮನೆ ಬೀಗ ಮುರಿದು ಕಳ್ಳತನ :

ತೀರ್ಥಹಳ್ಳಿ : ಹಾಡುಹಗಲೇ ಮನೆಯ ಬೀಗ ಮುರಿದು ಸುಮಾರು  ನಾಲ್ಕು ಲಕ್ಷಕ್ಕೂ ಅಧಿಕ ಮೌಲ್ಯದ ಬೆಳ್ಳಿ ಮತ್ತು ಚಿನ್ನಾಭರಣ ಹಾಗೂ  ನಗದು ಹಣವನ್ನು ದೋಚಿದ ಘಟನೆ  ತಾಲೂಕಿನ ಸಾಲೂರು ಗ್ರಾಪಂ ವ್ಯಾಪ್ತಿಯ ಮಾರಿಗುಣಿ ಸಮೀಪದ  ಹೊನ್ನೆಕಟ್ಟೆಯ ಮಂಜುನಾಥ ಎಂಬುವವರ ಮನೆಯಲ್ಲಿ ಮಂಗಳವಾರ ನೆಡೆದಿದೆ. ಈ ಘಟನೆಯಲ್ಲಿ 90 ಗ್ರಾಂ ಚಿನ್ನಾಭರಣ ಮತ್ತು ಬೆಳ್ಳಿಯ ವಸ್ತುಗಳು ಸೇರಿದಂತೆ 7 ಸಾವಿರ ನಗದು ಹಣ ಕಳ್ಳತನವಾಗಿದೆ ಎಂದು ತಿಳಿದುಬಂದಿದೆ.  ಇವರ ಮನೆಯ ಕಾಂಪೌಂಡ್ ಗೆ  ಹೊಂದಿಕೊಂಡಂತೆ ಎರಡೂ ಭಾಗದಲ್ಲಿ ಅಕ್ಕಪಕ್ಕ…

Read More

ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನ ಬಂಧನ :

ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಶಿವಮೊಗ್ಗ ತುಂಗಾ ನಗರ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ತುಂಗಾ ನಗರ ನಿವಾಸಿ ಮಹಮ್ಮದ್ ತಬಾರಕ್ ವುಲ್ಲಾ ಎಂಬ ವ್ಯಕ್ತಿಯು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿಪ್ಪುನಗರದ ಕೆಕೆ ಶೆಡ್ ನ ಹತ್ತಿರ ಖಾಲಿ ಸ್ಥಳದಲ್ಲಿ ತಾನು ಸಂಗ್ರಹಿಸಿ ಇಟ್ಟಿದ್ದ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಪಿಎಸ್ಐ ತುಂಗಾನಗರ ಪೊಲೀಸ್ ಠಾಣೆ ಹಾಗೂ ಸಿಬ್ಬಂಧಿಗಳ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿದ್ದಾರೆ….

Read More

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಿಂದ ಎಸ್ಕೇಪ್ ಆಗಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು:

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಿಂದ ಪರಾರಿಯಾಗಿದ್ದ ಕಳ್ಳತನದ ಆರೋಪಿ ಪ್ರತಾಪ್ ನನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇಂದು ಬೆಳಿಗ್ಗೆ ಹೊಸನಗರ ಮಾರ್ಗವಾಗಿ ಮಂಗಳೂರಿಗೆ ತೆರಳುತಿದ್ದ ಆರೋಪಿ ಪ್ರತಾಪ್ ನನ್ನು ಪೊಲೀಸರು ಹೊಸನಗರ ಪಟ್ಟಣದಲ್ಲಿ ಹಿಡಿದು ಹೆಡೆಮುರಿ ಕಟ್ಟಿದ್ದಾರೆ. ಠಾಣೆಯಿಂದ ತಪ್ಪಿಸಿಕೊಂಡ ದಿನದಿಂದ ಆರೋಪಿ ಪ್ರತಾಪ್ ನ  ಬೆನ್ನು ಬಿದ್ದಿದ್ದ ಪೊಲೀಸರು ಇಂದು ಹೊಸನಗರ ಮೂಲಕ ಮಂಗಳೂರಿಗೆ ತೆರಳುತ್ತಿರುವ ಖಚಿತ ಮಾಹಿತಿ ಮೇರೆಗೆ ಹೊಸನಗರ ಪಟ್ಟಣದಲ್ಲಿ ಬಂಧಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಡಿವೈಎಸ್ಪಿ ಶಾಂತವೀರ ಹಾಗೂ ಸಿಪಿಐ ಗಿರೀಶ್ ಮಾರ್ಗದರ್ಶನದಲ್ಲಿ ಪಿಎಸ್…

Read More

ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಸಾವು

ದ್ವಿಚಕ್ರ ವಾಹನಗಳ ಮುಖಾಮುಖಿ‌ ಡಿಕ್ಕಿಯಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ಶಿಕಾರಿಪುರ ತಾಲೂಕಿನ‌ ನೆಲವಾಗಿಲು ಬಳಿ ಸಂಭವಿಸಿದೆ. ಬೆಳಿಗ್ಗೆ ಶಿಕಾರಿಪುರದಿಂದ ಮೂವರು ಯುವಕರು ನೆಲವಾಗಿಲು ಕಡೆ ತೆರಳಿದ್ದರು.ರಾತ್ರಿ ಅಲ್ಲಿಂದ ಹಿಂದಿರುಗುವ ವೇಳೆ ಎದುರಿನಿಂದ ಬಂದ ಬೈಕ್ ಗೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ  ಪಾರಿವಾಳ ಶಿವರಾಮಣ್ಣ ಎಂಬುವರ ಮಗ ಕೊಟ್ರೇಶ್(25)  ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿದ್ದ ಇನ್ನಿಬ್ಬರು ಮತ್ತು ಎದುರಿನಿಂದ ಬಂದ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…

Read More

ಕುಂಸಿ ಸಮೀಪದ ಬಾಳೆಕೊಪ್ಪದಲ್ಲಿ ಭೀಕರ ಅಪಘಾತ : ಇಬ್ಬರು ಬೈಕ್ ಸವಾರರು ಸಾವು

ಬೊಲೆರೋ ಪಿಕಪ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ಸಂಜೆ 7 ಗಂಟೆಗೆ ನಡೆದಿದೆ. ಸಾಗರದ ಮೂಲಕ ಹಾರನಹಳ್ಳಿ – ಸವಳಂಗ – ನ್ಯಾಮತಿ – ಹೊನ್ನಾಳಿ ಮೂಲಕ ರಾಣೇಬೆನ್ನೂರಿಗೆ ಮೀನು ತೆಗೆದುಕೊಂಡು ಹೋಗುತ್ತಿದ್ದ ಬೊಲೆರೋ ಪಿಕಪ್ ವಾಹನ ಮತ್ತು ಬಾಳೆಕೊಪ್ಪಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಉಂಟಾಗಿದ್ದು ಬೈಕ್ ಸವಾರರು ಇಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತಪಟ್ಟ ಯುವಕರನ್ನು ಬಾಳೆಕೊಪ್ಪದ ಗಿರೀಶ್ ( 23),…

Read More

ಅಕ್ರಮ ಗೋಮಾಂಸ ಅಂಗಡಿಯ ಮೇಲೆ ದಾಳಿ : ಓರ್ವನ ಬಂಧನ

ಅಕ್ರಮ ಗೋ ಮಾಂಸ ಮಾರಾಟ ಮಾಡುವ ಅಂಗಡಿ ಮೇಲೆ ಮಾಳೂರು ಪೊಲೀಸರು ದಾಳಿ ನಡೆಸಿದ್ದು, ಅಕ್ರಮ ಅಂಗಡಿ ನಡೆಸುತ್ತಿದ್ದ ಆರೋಪಿಯನ್ನ ಬಂಧಿಸಿದ್ದಾರೆ. ತೀರ್ಥಹಳ್ಳಿಯ ಮಂಡಗದ್ದೇ ಸಮೀಪದ ಲಿಂಗಾಪುರ ಗ್ರಾಮದ ಅಂಗಡಿ ಮೇಲೆ ದಾಳಿ ನಡೆಸಿದ ಪೊಲೀಸರು, ವಧಿಸಲು ಸಿದ್ದವಾಗಿದ್ದ ಗೋವನ್ನು ನವೀನ್ ಕುಮಾರ್ ಮಠಪತಿ ನೇತ್ರತ್ವದಲ್ಲಿ  ದಾಳಿ ನಡೆಸಿ ಹಸುವನ್ನು ರಕ್ಷಿಸಿದ್ದಾರೆ.  ಗೋ ಮಾಂಸದ ಜೊತೆಗೆ ಜೀವಂತ ಹಸುವನ್ನು ರಕ್ಷಿದ ಪೊಲೀಸರು ಆರೋಪಿ ಇಜಾಜ್ ಪಾಶಾ ಎಂಬಾತನನ್ನು  ಬಂಧಿಸಿದ್ದಾರೆ.  ಈ ದಾಳಿಯಲ್ಲಿ ಮಾಳೂರು ಪೊಲೀಸ್ ಠಾಣೆಯ ಪಿಎಸ್ಐ…

Read More

ಶಿವಮೊಗ್ಗದ ರಾಜಾಕಾಲುವೆಯಲ್ಲಿ ತೇಲಿ ಬಂತು ನವಜಾತ ಶಿಶುವಿನ ಮೃತದೇಹ :

ಶಿವಮೊಗ್ಗ ನಗರದಲ್ಲಿ ನಿನ್ನೆಯ ದಿನ ಸುರಿದ ಭಾರೀ ಮಳೆ ಸುರಿದಿತ್ತು.ಇಂದು ಆರ್ ಎಂಎಲ್ ನಗರದ ರಾಜಕಾಲುವೆಯಲ್ಲಿ ಒಂದು ನವಜಾತ ಶಿಶುವೊಂದರ ಮೃತದೇಹ ತೇಲಿಬಂದ ಘಟನೆ ನಡೆದಿದೆ. ಸ್ಥಳೀಯವಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದ ಎಸ್​ಡಿಪಿಐ ಪಕ್ಷದ ಕಾರ್ಯಕರ್ತರು ಕಸದ ರಾಶಿ ನಡುವೆ ಸಿಲುಕಿಕೊಂಡಿದ್ದ ಮೃತದೇಹವನ್ನು ಹೊರಕ್ಕೆ ತೆಗೆದಿದ್ದಾರೆ. ಸುಮಾರು ಒಂದು ತಿಂಗಳ ನವಜಾತ ಶಿಶು ಇದಾಗಿದೆ. ನೆನ್ನೆಯ ದಿನ ಮಗುವೊಂದು ತೇಲಿ ಹೋಗಿರುವ ಬಗ್ಗೆ ಆರ್ ಎಂಎಲ್ ನಗರದ ಮಹಿಳೆಯೊಬ್ಬರು ಎಸ್ ಡಿಪಿಐ ಕಾರ್ಯಕರ್ತರಿಗೆ ತಿಳಿಸಿದ್ದಾರೆ. ಆ ಹಿನ್ನಲೆಯಲ್ಲಿ …

Read More

ಬೆಂಗಳೂರಿನಲ್ಲಿ ಪಾದಾಚಾರಿಗಳ ಮೇಲೆ ಹರಿದ ಕಾರು : ರಿಪ್ಪನ್‌ಪೇಟೆ ಮೂಲದ ಯುವಕ ಸಾವು

ಪಾದಾಚಾರಿಗಳ ಮೇಲೆ ಕಾರು ಹರಿದು ಹೋಗಿ ರಿಪ್ಪನ್‌ಪೇಟೆ ಮೂಲದ ವ್ಯಕ್ತಿಯೊಬ್ಬ ದುರ್ಮರಣ ಹೊಂದಿದ ಘಟನೆ ಬೆಂಗಳೂರು ನಗರದ ಕತ್ರಿಗುಪ್ಪೆಯಲ್ಲಿ ನಡೆದಿದೆ.  ಚಾಲಕನ ನಿಯಂತ್ರಣ ತಪ್ಪಿ ಪಾದಾಚಾರಿಗಳ ಮೇಲೆ ಹರಿದು ಹೋಗಿದ್ದಲ್ಲದೆ, ಮುಂದೆ ನಿಲ್ಲಿಸಿದ್ದ ಕಾರು ಹಾಗೂ ಬೈಕ್​ಗೆ ಡಿಕ್ಕಿ ಹೊಡೆದಿದೆ. ಕೂಡಲೇ ನಾಲ್ವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಗ್ರಾಮದ ಸುರೇಶ್ ಯಾನೆ ರುದ್ರಪ್ಪ (28) ಎಂಬ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಸಚಿನ್, ಸಿವರಾಜು, ಶೈಲೇಂದ್ರ ಅವರಿಗೆ…

Read More

ನೇಣು ಬಿಗಿದುಕೊಂಡು ಆತ್ಮಹತ್ಯೆ ‌ಮಾಡಿಕೊಂಡ ರಿಪ್ಪನ್‌ಪೇಟೆಯ ಯುವಕ ಸಚಿನ್ :

ಜೀವನದಲ್ಲಿ ಜಿಗುಪ್ಸೆಗೊಂಡ ಯುವಕನೊಬ್ಬ ನೇಣು ಬಿಗಿದುಕೊಂಡಿರುವ ಘಟನೆ ರಿಪ್ಪನ್‌ಪೇಟೆಯ ನೆಹರು ಬಡಾವಣೆಯಲ್ಲಿ ನಡೆದಿದೆ. ರಿಪ್ಪನ್ ಪೇಟೆ ಗವಟೂರು ಗ್ರಾಮದ ನೆಹರು ಬಡಾವಣೆಯ ನಿವಾಸಿ  ದಿ|| ಶ್ರೀನಿವಾಸ್ ರವರ ಪುತ್ರ ಯುವಕ ಸಚಿನ್(25) ಮನೆಯಲ್ಲಿಯೇ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ಾತ್ರಿ ಮನೆಯಲ್ಲಿ ತಾಯಿಯೊಂದಿಗೆ ಊಟ ಮುಗಿಸಿಕೊಂಡು ಪಕ್ಕದ ರೂಮಿನಲ್ಲಿ ಮಲಗಿದ್ದ ಸಚಿನ್ ಬೆಳಿಗ್ಗೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮೃತನ ಮರಣೋತ್ತರ ಪರೀಕ್ಷೆ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯುತ್ತಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ…

Read More

ಭಾರಿ ಮಳೆಗೆ ತೀರ್ಥಹಳ್ಳಿಯಲ್ಲಿ ಗದ್ದೆಗೆ ಹೋಗಿದ್ದ ವ್ಯಕ್ತಿ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಆರ್ಭಟಕ್ಕೆ ತೀರ್ಥಹಳ್ಳಿಯಲ್ಲಿ ಓರ್ವ ವ್ಯಕ್ತಿ ಬಲಿಯಾಗಿದ್ದಾನೆ. ಮೃತಪಟ್ಟ ದುರ್ದೈವಿಯನ್ನು ತೂದೂರು ಗ್ರಾಮದ ಶಂಕರ್ ಬಿನ್ ಲಿಂಗ ನಾಯ್ಕ ಎಂದು ಗುರುತಿಸಲಾಗಿದೆ  ತೀರ್ಥಹಳ್ಳಿಯ ಮೇಲಿನ ತೂದೂರು ಗ್ರಾಮದಲ್ಲಿ ತಡರಾತ್ರಿ ಈ ಘಟನೆ ನಡೆದಿದ್ದು, ಶಂಕರ್ ಬಿನ್ ಲಿಂಗಾನಾಯ್ಕ್ ಗದ್ದೆಯ ಹೊಂಡದಲ್ಲಿ ಬಿದ್ದು, ಮೃತಪಟ್ಟ ದುರ್ದೈವಿಯಾಗಿದ್ದಾನೆ. ನಿನ್ನ ರಾತ್ರಿ ಗದ್ದೆಗೆ ತೆರಳಿದ್ದ ವೇಳೆ, ಕಾಲು ಜಾರಿ ಹೊಂಡಕ್ಕೆ  ಶಂಕರ್ ಬಿದ್ದಿದ್ದರು. ಶಂಕರ್ ಬೆಳಿಗ್ಗೆ ಬರದಿದ್ದನ್ನು ಮನೆಯವರು ಗಮನಿಸಿದಾಗ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ತೀರ್ಥಹಳ್ಳಿ…

Read More