ಕ್ರೈಂ ಸುದ್ದಿ:
ಕಾರ್ ಚಾಲಕನ ಎಡವಟ್ಟು, ಚರಂಡಿಗೆ ಇಳಿದ ಖಾಸಗಿ ಬಸ್ : ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ
ರಿಪ್ಪನ್ ಪೇಟೆ : ಕಾರ್ ಚಾಲಕನ ಎಡವಟ್ಟಿನಿಂದ ಸಂಭವಿಸಲಿದ್ದ ಭಾರಿ ಅಪಘಾತವೊಂದು. ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಬಸ್ಸಿನಲ್ಲಿ 40ಕ್ಕೂ ಅಧಿಕ ಪ್ರಯಾಣಿಕರು ಇದ್ದರು. ರಿಪ್ಪನ್ ಪೇಟೆಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಇಳಿದ ಘಟನೆ ಗುರುವಾರದ ಸೂಡೂರು ನಡೆದಿದೆ. ಎದುರಿನಿಂದ ಬಂದ ಕಾರು ಚಾಲಕನೋರ್ವ ತನ್ನ ಕಾರನ್ನು ಅಡ್ಡಾದಿಡ್ಡಿ ಚಲಿಸಿದ ಪರಿಣಾಮ, ಅಪಘಾತವನ್ನು ತಪ್ಪಿಸಲು ಖಾಸಗಿ ಬಸ್ಸನ್ನು ರಸ್ತೆ ಬದಿಗೆ…
ರಿಪ್ಪನ್ಪೇಟೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಟ್ರಾಕ್ಟರ್ ಕಳ್ಳತನದ ಇಬ್ಬರು ಆರೋಪಿಗಳ ಬಂಧನ
ರಿಪ್ಪನ್ಪೇಟೆ :ಟ್ರ್ಯಾಕ್ಟರ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪ್ಪನ್ ಪೇಟೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಂಗಳವಾರ ರಾತ್ರಿ ಇಬ್ಬರು ಅರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತ ಅರೋಪಿಗಳು ಆನಂದಪುರದ ದಾಸನಕೊಪ್ಪ ವಾಸಿ ಸಂದೀಪ (30) ಹಾಗೂ ಟ್ರ್ಯಾಕ್ಟರ್ ಚಾಲಕ ಹಾವೇರಿ ಜಿಲ್ಲೆಯ ಗುಡ್ಡಪ್ಪ (28) ಎನ್ನಲಾಗಿದೆ. ಶನಿವಾರದಂದು ಸಾಗರ ರಸ್ತೆಯ ವಡಗೆರೆಯ ವೆಂಕಪ್ಪ ಶೆಟ್ಟಿ ಅವರ ಮನೆಯ ಆವರಣದಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಕಳ್ಳತನವಾಗಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ವಡಗೆರೆ –ಚಂದಾಳದಿಂಬದ ವಾಸಿ ಪ್ರತಾಪ್ಸಿಂಗ್ ಮಂಗಳವಾರ…
ರಿಪ್ಪನ್ ಪೇಟೆ ಸಮೀಪದಲ್ಲಿ ಟಿಪ್ಪರ್ ಲಾರಿ ಅಪಘಾತ : ತಪ್ಪಿದ ಭಾರೀ ಅನಾಹುತ
ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿಯೊಂದು ಅಪಘಾತವಾದ ಘಟನೆ ರಿಪ್ಪನ್ ಪೇಟೆ ಸಮೀಪದ ಶೆಟ್ಟಿಬೀಡು ಗ್ರಾಮದಲ್ಲಿ ನಡೆದಿದೆ. ಹೊಸನಗರದಿಂದ ರಿಪ್ಪನ್ ಪೇಟೆಗೆ ತೆರಳುತ್ತಿದ್ದ KA55 3809 ಟಿಪ್ಪರ್ ಲಾರಿಯು ಶೆಟ್ಟಿಬೀಡು ಸಮೀಪದಲ್ಲಿ ಬ್ರೇಕ್ ಜಾಮ್ ಆಗಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಧರೆಗೆ ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ನ ಮುಂಭಾಗ ನಜ್ಜುಗುಜ್ಜಾಗಿದೆ.ಅದೃಷ್ಟವಶಾತ್ ಚಾಲಕನಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ. ಶೆಟ್ಟಿಬೀಡು ಕ್ರಾಸ್ ನಲ್ಲಿ ಬ್ರೇಕ್ ಜಾಮ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯು…
ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿದ್ದ ಟ್ರಾಕ್ಟರ್ ಕಳ್ಳತನದ ಆರೋಪಿ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಎಸ್ಕೇಪ್!!!!!!
ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿದ್ದ ಕಳ್ಳತನದ ಆರೋಪಿಯೊಬ್ಬ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದೆ. ಕಳೆದ ಶನಿವಾರದಂದು ರಾತ್ರಿ ಸಾಗರ ರಸ್ತೆಯ ವಡಗೆರೆಯಲ್ಲಿರುವ ಉದ್ಯಮಿ ವೆಂಕಪ್ಪ ಶೆಟ್ಟಿ ರವರ ಮನೆಯ ಆವರಣದಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಕಳ್ಳತನವಾಗಿತ್ತು.ಈ ಬಗ್ಗೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ CR 66/22, IPC 379 ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಟ್ರಾಕ್ಟರ್ ಕಳ್ಳತನದ ಸಂಶಯದ ಮೇಲೆ ವಡಗೆರೆಯ ನಿವಾಸಿ ಪ್ರತಾಪ್…
ಸಾಗರದ ಗಣಪತಿ ಕೆರೆಯಲ್ಲಿ ಯುವತಿಯ ಶವ ಪತ್ತೆ :
ಸಾಗರದ ಗಣಪತಿ ಕೆರೆಯಲ್ಲಿ ಯುವತಿಯ ಶವವೊಂದು ಪತ್ತೆಯಾಗಿದೆ.ಗಣಪತಿ ಕೆರೆಯ ದಡದ ನೀರಿನಲ್ಲಿ ಶವ ತೇಲುತ್ತಿತ್ತು, ಮೂಲಗಳ ಪ್ರಕಾರ ಮೃತಪಟ್ಟವರು ಬೆಳಲಮಕ್ಕಿ ವಾಸಿ ರಕ್ಷಿತಾ ಎಂದು ಹೇಳಲಾಗುತ್ತಿದ್ದು,ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ರಕ್ಷಿತಾ ಸಾವು ಕೊಲೆಯೋ, ಆತ್ಮಹತ್ಯೆಯೋ ಎಂಬ ನಿಗೂಢ ಅಂಶಗಳು ಪೊಲೀಸರ ತನಿಖೆಯಿಂದ ಹೊರಬರಬೇಕಾಗಿದೆ. ಇತ್ತೀಚಿಗೆ ಸಾಗರದ ಕೇಶವ ಜ್ಯುವೆಲ್ಲರ್ಸ್ ನ ಸುಚಿತ್ರ ಸಾವಿನ ಪ್ರಕರಣದ ಹಿಂದೆಯೇ ರಕ್ಷಿತಾ ಪ್ರಕರಣವು ನಡೆದಿದ್ದು ಸುಚಿತ್ರ ಪ್ರಕರಣ ಕೊಲೆಯೋ ಆತ್ಮಹತ್ಯೆಯೋ ಎನ್ನುವುದು ಇನ್ನೂ ಬಗೆಹರಿದಿಲ್ಲ . ಇದು ಯಾವ ಹಂತಕ್ಕೆ…
ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಜೆ ಎನ್ ಸಿಸಿ ಕಾಲೇಜಿನ ವಿದ್ಯಾರ್ಥಿ
ಶಿವಮೊಗ್ಗದ ಜೆಎನ್ ಸಿಸಿ ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಇಂಜಿನಿಯರಿಂಗ್ ಕಂಪ್ಯೂಟರ್ ಸೈನ್ಸ್ ಓದುತ್ತಿರುವ ಸಂದೀಪ್ ಮೂರನೇ ಸೆಮಿಸ್ಟರ್ ಪರೀಕ್ಷೆ ಬರೆದಿದ್ದನು. ಈತನ ಜೊತೆ ಹಾಸ್ಟೆಲ್ ನಲ್ಲಿದ್ದ ಸಹಪಾಠಿಗಳು ರಜೆಯ ಕಾರಣ ತಮ್ಮ ಊರಿಗೆ ಹೋಗಿದ್ದರು. ಎರಡು ದಿನಗಳಿಂದ ಕೊಠಡಿಯಿಂದಹೊರಗೆ ಬಾರದ ವಿದ್ಯಾರ್ಥಿ ಸಂದೀಪ್ ಮಾನಸಿಕ ಖಿನ್ನತೆಗೆ ಒಳಗಾಗಿದ್ದನು ಎನ್ನಲಾಗಿದೆ. ಸಂದೀಪ್ ಮೂಲತ ಕಲಬುರ್ಗಿ ವಾಸಿಯಾಗಿದ್ದು ಶಿವಮೊಗ್ಗದ ಜೆ ಎನ್ ಸಿಸಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು. ಕೊಠಡಿಯಲ್ಲಿ ಫ್ಯಾನ್ ಗೆ ಸಂದೀಪ್…
ಇಬ್ಬರು ಮಕ್ಕಳಿಗೆ ನೇಣು ಬಿಗಿದು ತಾಯಿ ಆತ್ಮಹತ್ಯೆ : ಆಯನೂರು ಸಮೀಪದ ಚೋರಡಿಯಲ್ಲೊಂದು ಹೃದಯ ವಿದ್ರಾವಕ ಘಟನೆ
ಆಯನೂರು ಸಮೀಪದ ಚೋರಡಿಯಲ್ಲಿ ಇಬ್ಬರು ಮಕ್ಕಳಿಗೆ ನೇಣುಬಿಗಿದು ತಾಯಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ತಾಯಿ ಜ್ಯೋತಿ (25) ಮಕ್ಕಳಾದ ಎರಡುವರೆ ವರ್ಷದ ಸಾನ್ವಿ ಹಾಗೂ ಒಂದು ವರ್ಷದ ಕುಶಾಲ್ನೊಂದಿಗೆ ನೇಣು ಬಿಗಿದುಕೊಂಡಿದ್ದಾರೆ. ನೇಣಿಗೆ ಕೌಟುಂಬಿಕ ಸಮಸ್ಯೆ ಕಾರಣವೆಂದು ಹೇಳಲಾಗುತ್ತಿದೆ. ಇನ್ನು ಕೆಲವರು ವರದಕ್ಷಿಣೆ ಕಿರುಕುಳದಿಂದ ನವ ವಿವಾಹಿತೆ ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಪೊಲೀಸ್ ತನಿಖೆಯಿಂದ ಸತ್ಯ ಹೊರಬರಬೇಕಿದೆ. ಅರಣ್ಯ ಇಲಾಖೆಯಲ್ಲಿ ವಾಚರ್ ಆಗಿದ್ದ ಶಿವಕುಮಾರ್ ಪತ್ನಿ ಜ್ಯೋತಿ(25) ಎರಡು ವರೆ ವರ್ಷದ ಸಾನ್ವಿ,…
ಸಿಗಂದೂರು ಸಮೀಪ ರಸ್ತೆ ಅಪಘಾತ : ಓರ್ವನ ಸ್ಥಿತಿ ಗಂಭೀರ
ಸಿಗಂದೂರು ದೇವಸ್ಥಾನದ ಸಮೀಪದ ಕಳಸವಳ್ಳಿ ಗ್ರಾಮದಲ್ಲಿ ಟೆಂಪೋ ಟ್ರಾವಲರ್ ಗಾಡಿಯ ಚಾಲಕನು ವಾಹನ ಚಲಿಸುತ್ತಿದ್ದಾಗ ಫೀಡ್ಸ್ ಬಂದಿರುವ ಹಿನ್ನಲೆ ನಿಯಂತ್ರಣ ತಪ್ಪಿ ವಾಹನ ಧರೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. 11ಈ ವಾಹನದಲ್ಲಿ 10 ಜನ ಪ್ರಯಾಣಿಕರಿದ್ದರು,ನಾಲ್ವರಿಗೆ ಪೆಟ್ಟಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಸಿಗಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥ0ಮ ಚಿಕಿತ್ಸೆ ನೀಡಿ,ಸಾಗರದ ಸರ್ಕಾರಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಬೆಂಗಳೂರು ಸಮೀಪದ ಬಿಡದಿ ಮೂಲದ ಯಾತ್ರಾರ್ಥಿಗಳು ಈ ವಾಹನದಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಪರಿಚಿತ ವ್ಯಕ್ತಿಯ ಹೆಸರು ಹೇಳಿ ಕೂಗಿದ್ದಕ್ಕೆ ಅಪರಿಚಿತ ವ್ಯಕ್ತ್ತಿಗಳಿಂದ ಹಲ್ಲೆ : ದೂರು ದಾಖಲು
ಮನೆಯ ಹತ್ತಿರ ಜೋರಾಗಿ ಕೂಗಿದ ವಿಚಾರದಲ್ಲಿ ವ್ಯಕ್ತಿಯೋರ್ವನ ಮೇಲೆ ಮೂವರು ಸೇರಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ದೂರು ಪ್ರತಿದೂರು ದಾಖಲಾಗಿದೆ. ಘಟನೆಯ ಹಿನ್ನಲೆ : ತುಂಗ ನಗರದ ನಿವಾಸಿ ವಿನೋದ್ ಎಂಬ ವ್ಯಕ್ತಿ ತನ್ನ ಶಂಕರ್ ಎಂಬಾತನನ್ನು ಮಾತನಾಡಿಸಿಕೊಂಡು ಬರಲು ಕುಂಬಾರಗುಡಿಯಲ್ಲಿರುವ ಆತನ ಮನೆಯ ಬಳಿ ಬಂದಿರುತ್ತಾನೆ. ಆದರೆ ಶಂಕರ್ ಮನೆ ಖಾಲಿ ಮಾಡಿಕೊಂಡು ಹೋಗಿ ಆ ಮನೆಗೆ ಬೇರೊಬ್ಬರು ವಾಸಕ್ಕೆ ಬಂದಿರುತ್ತಾರೆ. ಈ ವಿಷಯ ಅರಿಯದ ವಿನೋದ್ ಶಂಕರ್ ಹೆಸರನ್ನು ಜೋರಾಗಿ ಕೂಗಿದ್ದಾನೆ.ಈ ಸಂಧರ್ಭದಲ್ಲಿ ಆ…
ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ 80 ರ ವೃದ್ದೆ :
ತೀರ್ಥಹಳ್ಳಿ : ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ವಿಠಲನಗರದ ಗಂಗಮ್ಮ ( 80 ವರ್ಷ ) ಎಂಬುವ ವೃದ್ದೆ ಇಂದು ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕುಟುಂಬಸ್ಥರು ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದಾಗ ಮನೆಯ ಹಿಂಭಾಗ ಕೊಟ್ಟಿಗೆಯಲ್ಲಿ ನೇಣು ಹಾಕಿಕೊಂಡಿರುವ ಘಟನೆ ನೆಡೆದಿದೆ. ಅಕ್ಕ ಪಕ್ಕದಲ್ಲಿರುವ ಜನರಿಗೆ ತಮ್ಮ ಅನಾರೋಗ್ಯ ಸಮಸ್ಯೆ ಬಗ್ಗೆ ಅಳಲನ್ನು ಹೇಳಿಕೊಳ್ಳುತ್ತಿದ್ದರು ಎನ್ನಲಾಗಿದೆ. ಮೃತರಿಗೆ ಇಬ್ಬರು ಗಂಡು ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ತೀರ್ಥಹಳ್ಳಿ ಪೊಲೀಸ್…