Headlines

ತೀರ್ಥಹಳ್ಳಿ ಗನ್ ಶಾಟ್ ಪ್ರಕರಣ ಎಪ್ ಐ ಆರ್ ದಾಖಲು : ಘಟನೆ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಕಾಂತರಾಜ್ ಕುಟುಂಬಸ್ಥರು

  ತೀರ್ಥಹಳ್ಳಿ :  ಗುಂಡೇಟಿಗೆ ಬಲಿಯಾದ ನೊಣಬೂರು  ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ ಕಾಂತರಾಜು ಅವರು ಗುಂಡೇಟು ತಗುಲಿ ಸಾವನ್ನಪ್ಪಿದ್ದಾರೆ ಪ್ರಕರಣ ದಾಖಲಾಗಿದೆ. ಎಫ್ಐಆರ್ ನಲ್ಲಿ ಕಾಂತರಾಜು ರವರ ಸಾವಿನ ಬಗ್ಗೆ ಅನುಮಾನವಿದೆ ಎಂದು ಮಾತ್ರ ದಾಖಲಾಗಿದೆ. ಕಾಂತರಾಜ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅವರ ದೊಡ್ಡಪ್ಪನ ಮಗ ಗಣೇಶ್ ಸೂಕ್ತ ತನಿಖೆ ನಡೆಸುವಂತೆ ಕೋರಿದ್ದಾರೆ. ನಿನ್ನೆ ಮಧ್ಯಾಹ್ನ ಶಿರಿಗಾರು ನಿವಾಸಿ ಕಾಂತರಾಜು ಮನೆಯಿಂದ ಯಾವುದೋ ಕೆಲಸದ ಮೇಲೆ‌ ಹೊರ ಹೋಗುವಾಗ ಹೊಸಕೇರಿ, ಅತ್ತಿಗಾರಿಗೆ ಹೋಗುವ ರಸ್ತೆಯಲ್ಲಿ…

Read More

ರಿಪ್ಪನ್ ಪೇಟೆಯಲ್ಲಿ ಹಾಡಹಗಲೇ ಮಹಿಳೆಯ ಸರಗಳ್ಳತನ :

ರಿಪ್ಪನ್‌ಪೇಟೆ : ಪಟ್ಟಣದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಬಳಿ ಜನನಿಬಿಡ ಪ್ರದೇಶದಲ್ಲಿಯೋ ಮಹಿಳೆಯೊಬ್ಬರ ಚಿನ್ನದ ಮಾಂಗಲ್ಯ  ಸರವನ್ನು ಇಬ್ಬರು ಯುವಕರು ಕಸಿದುಕೊಂಡು ಹೋಗಿರುವ ಘಟನೆ ನಡೆದಿದೆ. ಪಟ್ಟಣದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಬಳಿ ಸಣ್ಣ ದಿನಸಿ ಅಂಗಡಿ ಇಟ್ಟುಕೊಂಡಿರುವ ಜಯಮ್ಮ ಎಂಬುವವರು  ಸರ ಕಳೆದು ಕೊಂಡವರು. ನಡೆದಿದ್ದೇನು ??? ಇಂದು ಸಂಜೆ 4.30 ರ ಸಮಯ ಜಯಮ್ಮ ರವರು ತಮ್ಮ ಮೈಲಾರಲಿಂಗೇಶ್ವರ ಜನರಲ್ ಸ್ಟೋರ್ ನಲ್ಲಿ ಒಬ್ಬರೇ ಇದ್ದಾಗ ಕೆಟಿಎಂ ಡ್ಯೂಕ್ ಬೈಕ್ ನಲ್ಲಿ…

Read More

80 ಸಾವಿರ ರೂ ಸಾಲಕ್ಕೆ ಹೆದರಿ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ !!!

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರ ಸಮೀಪದ ಬ್ಯಾಡರ ಕೊಪ್ಪದ ರೈತ  ಮರಿಯಪ್ಪ ಸಾವನ್ನಪ್ಪಿರುವ ದುರ್ದೈವಿ ರೈತ. ಶುಂಠಿಗೆ ಹೊಡೆಯುವ ಕಳೆನಾಶಕವನ್ನು ಸೇವಿಸಿದ್ದ ಮರಿಯಪ್ಪ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕಾರ್ಪೊರೇಷನ್ ಬ್ಯಾಂಕ್ ನಲ್ಲಿ ಎಂಬತ್ತು ಸಾವಿರ ರೂಪಾಯಿ ಸಾಲ ಮಾಡಿದ್ದರು ಎಂಬ ಮಾಹಿತಿ ತಿಳಿದುಬಂದಿದೆ. ಇವರ ಮಗ ಲಿಂಗರಾಜು ಸಾಗರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Read More

ತೀರ್ಥಹಳ್ಳಿಯಲ್ಲಿ ಗುಂಡಿನ ಸದ್ದು : ನೊಣಬೂರು ಗ್ರಾಪಂ ಮಾಜಿ ಉಪಾಧ್ಯಕ್ಷ ಸಾವು

ಬೇಟೆಯಾಡಲು ಹೋದವರಿಂದ ಹಾರಿದ ಗುಂಡೊಂದು ಮಾಜಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷನನ್ನ ಬಲಿಪಡೆದಿದೆ.ಈ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ತೀರ್ಥಹಳ್ಳಿಯ‌ ನೊಣಬೂರು ಮತ್ತು ಅರಳಸುರಳಿ ಗ್ರಾಮ ಪಂಚಾಯಿತಿ ನಡುವಿನ ಅರಣ್ಯ ಪ್ರದೇಶದಲ್ಲಿ ಬೇಟೆಯಾಡಲು ಬಂದಿದ್ದವರಿಂದ ಹಾರಿದ ಗುಂಡೊಂದು ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ ನಿಗೆ ತಗುಲಿದೆ ಆತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಾಂತರಾಜು(38) ಎಂಬುವರು ಗುಂಡಿಗೆ ಬಲಿಯಾಗಿದ್ದಾರೆ. 12 ಜನರ ಗುಂಪೊಂದು ಬೆಟೆಯಾಡಲು ಹೋಗಿ ಮಿಸ್ ಫೈರ್ ಆಗಿ ಕಾಂತರಾಜು ಸಾವಿಗೆ ಕಾರಣ ಎನ್ನಲಾಗುತ್ತಿದೆ. ಗುಂಡು ಹಾರಿಸಿದ 12 ಜನರು ಯಾರು…

Read More

ಕರ್ತವ್ಯ ನಿರತವಾಗಿದ್ದಲೇ ವಿದ್ಯುತ್ ಪ್ರವಹಿಸಿ, ಲೈನ್ ಮ್ಯಾನ್ ಸಾವು

ಶಿವಮೊಗ್ಗ: ಟ್ರಾನ್ಸ್ ಫಾರ್ಮರ್ ತೊಂದರೆಯಿಂದಾಗಿ ದುರಸ್ಥಿ ಕಾರ್ಯದಲ್ಲಿ ತೊಡಗಿದ್ದಂತ ಸಂದರ್ಭದಲ್ಲಿಯೇ ವಿದ್ಯುತ್ ಪ್ರವಹಿಸಿ, ಲೈನ್ ಮ್ಯಾನ್ ಸಾವನ್ನಪ್ಪಿರೋ ಘಟನೆ, ಸೊರಬ ತಾಲೂಕಿನ ಉಳವಿ ಹತ್ತಿರದ ದೂಗೂರು ಬಳಿಯ ಭದ್ರಾಪುರದಲ್ಲಿ ನಡೆದಿದೆ. ಸೊರಬ ತಾಲೂಕಿನ ದೂಗೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಭದ್ರಾಪುರದಲ್ಲಿ ವಿದ್ಯುತ್ ಸಮಸ್ಯೆಯಿಂದಾಗಿ ನಿನ್ನೆ ಟ್ರಾನ್ಸ್ ಫಾರ್ಮರ್ ಬಳಿಯಲ್ಲಿ ಉಳವಿ ಮೆಸ್ಕಾಂ ಶಾಖೆಯ ಲೈನ್ ಮ್ಯಾನ್, ಗದಗ ಜಿಲ್ಲೆಯ ಗಜೇಂದ್ರಗಡದ ರವಿ ಬೀರಪ್ಪ ಚವ್ಹಾಣ್ (32) ಕೆಲಸ ನಿರತರಾಗಿದ್ದರು. ಈ ವೇಳೆ 11 ಕೆವಿ ಮಾರ್ಗದ ವಿದ್ಯುತ್…

Read More

ಹಾವು ಕಚ್ಚಿ ಗೃಹಿಣಿ ಸಾವು :

ಹೊಸನಗರ  ಪಟ್ಟಣದ ಸಮೀಪದ ಮೇಲಿನಬೆಸಿಗೆ ಗ್ರಾಮದ ಮಹಿಳೆಯೊಬ್ಬಳಿಗೆ ಅಡುಗೆ ಮನೆಯಲ್ಲಿ ಹಾವು ಕಚ್ಚಿದ ಪರಿಣಾಮ ಮೃತಪಟ್ಟಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಮೇಲಿನಬೆಸಿಗೆ ನಿವಾಸಿ  ನಾಗರಾಜ್ ಎಂಬುವವರ ಪತ್ನಿ ಸೌಮ್ಯ (24) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಸೌಮ್ಯ ಬುಧವಾರ ಮಧ್ಯಾಹ್ನ ಅಡುಗೆ ಮಾಡಲು ಅಡುಗೆ ಮನೆಗೆ ತೆರಳಿದಾಗ ಅವರ ಕಾಲಿಗೆ ಹಾವು ಕಚ್ಚಿದ್ದು ಅವರ ಗಮನಕ್ಕೆ ಬಂದಿರಲಿಲ್ಲ.ಕೆಲ ಹೊತ್ತಿನಲ್ಲಿಯೇ ಹಾವು ಕಚ್ಚಿದ ಜಾಗದಲ್ಲಿ ತೀವ್ರತರ ಬಾಧೆಯಾಗಲು ಶುರುವಾದಗ ಮನೆಯವರ ಗಮನಕ್ಕೆ ತಂದಿದ್ದಾರೆ. ಕೂಡಲೇ ಮನೆಯವರು ಹಾವು ಕಚ್ಚಿರಬೇಕೆಂಬ ಶಂಕೆಯಿಂದ…

Read More

ಆನಂದಪುರ ಸಮೀಪ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ದಂಪತಿಗಳಿಗೆ ಗಾಯ :

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಇರುವಕ್ಕಿಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಅನಾಹುತ ಸಂಭವಿಸಿದೆ. ಅಮಟೆಕೊಪ್ಪ ದಿಂದ ಹಾಲುಗುಡ್ಡೆಗೆ ಗೃಹಪ್ರವೇಶದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಇರುವಕ್ಕಿ ಬಳಿ   ಬೈಕ್ ನಲ್ಲಿ ಕೂತಿದ್ದ ಗಂಡ ಹೆಂಡತಿಯ ಮೇಲೆ ಚಲಿಸುತ್ತಿರುವಾಗಲೇ ಬೃಹತ್ ಆಕಾರದ ಮರ ಬಿದ್ದು ಬೈಕ್ ಸವಾರರಿಗೆ ತೀವ್ರ ಗಾಯವಾಗಿದೆ ತಕ್ಷಣ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗುತ್ತಿದ್ದು  ಸ್ಥಳೀಯರ ಸಹಕಾರದಿಂದ ಇಬ್ಬರ ಜೀವ ಉಳಿದಂತಾಗಿದೆ. ಬೈಕ್ ಇದೀಗ ಮರದಡಿ ಅಪ್ಪಚ್ಚಿಯಾಗಿದ್ದು ತೆರವುಗೊಳಿಸುವ ಕಾರ್ಯ…

Read More

ಹಿಜಾಬ್ ವಿಚಾರದಲ್ಲಿ ಬಿಜೆಪಿ ಎಂಎಲ್‌ಸಿ ಅರುಣ್‌ಗೆ ಜೀವ ಬೆದರಿಕೆ ಹಾಕಿದ್ದು ಮುಸ್ಲಿಂ ಯುವಕನ ಹೆಸರಲ್ಲಿ ನಕಲಿ ಪ್ರೊಫ಼ೈಲ್ ಸೃಷ್ಟಿಸಿದ್ದ ಶ್ರೀಕಾಂತ್ : ಆರೋಪಿಯ ಬಂಧನ

ಶಿವಮೊಗ್ಗ: ಬಿಜೆಪಿ ಎಂಎಲ್ ಸಿ ಡಿ. ಎಸ್. ಅರುಣ್ ಅವರಿಗೆ ಮುಸ್ಲಿಂ ವ್ಯಕ್ತಿಯ ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಾಗಲಕೋಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಿದ್ದಾರೂಢ ಶ್ರೀಕಾಂತ್(31) ಎಂದು ಗುರುತಿಸಲಾಗಿದೆ. ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯ ನಂತರ ಅರುಣ್ ಅವರು ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಫೇಸ್ ಬುಕ್ ನಲ್ಲಿ ಮುಸ್ಲಿಂ ಯುವಕ ಮುಸ್ತಾಕ ಅಲಿ ಹೆಸರಿನಲ್ಲಿ ಬೆದರಿಕೆ…

Read More

ಆನಂದಪುರ ಸಮೀಪ ಭೀಕರ ಕಾರು ಅಪಘಾತ : ಓರ್ವ ಸಾವು,ನಾಲ್ವರು ಶಿವಮೊಗ್ಗ ಮೆಗ್ಗಾನ್ ಗೆ ದಾಖಲು

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಚನ್ನಕೊಪ್ಪ ಗ್ರಾಮದಲ್ಲಿ ಮರಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿ ಹೊಡೆದು ಒಬ್ಬ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗದಿಂದ ಸಾಗರಕ್ಕೆ ಹೊರಟಿದ್ದ ಕಾರು ಎದುರು ಭಾಗದಲ್ಲಿ ಯಾವುದೋ ಗಾಡಿ ಬಂದಿರುವ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ರಸ್ತೆಯಿಂದ ಹತ್ತು ಅಡಿ ದೂರಕ್ಕೆ ಎಸೆಯಲ್ಪಟ್ಟಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ 65…

Read More

ಶಾಲೆಗೆ ತೆರಳುತ್ತಿದ್ದ ಶಿಕ್ಷಕಿಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿ !!!

ಸಾಗರ ತಾಲೂಕಿನ ಬ್ರಾಹ್ಮಣ ಮಂಚಾಲೆ ಬಳಿ ಅಪರಿಚಿತ ವ್ಯಕ್ತಿಯೋರ್ವ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ ಶಿಕ್ಷಕಿಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾದ ಘಟನೆ ನಡೆದಿದೆ. ಬ್ರಾಹ್ಮಣ ಮಂಚಾಲೆ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪ್ರಭಾವತಿ ಅವರು ಬಸ್ಸಿನಿಂದ ಇಳಿದು ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೋರ್ವ ಕುತ್ತಿಗೆಯಲ್ಲಿದ್ದ ಸುಮಾರು 2 ಲಕ್ಷ ರೂ. ಮೌಲ್ಯದ 35 ಗ್ರಾಂ ಬಂಗಾರದ ಮಾಂಗಲ್ಯ ಸರ ಹಾಗೂ ಒಂದು ಸರ ಕಿತ್ತುಕೊಂಡು ಶಿಕ್ಷಕಿಯನ್ನು ತಳ್ಳಿ ಪರಾರಿಯಾಗಿದ್ದಾನೆ.  ಇದರಿಂದಾಗಿ ಪ್ರಭಾವತಿಯವರ ತಲೆ ಭಾಗದಲ್ಲಿ ತೀವ್ರ…

Read More