Headlines

ಶಿವಮೊಗ್ಗ ಚೂರಿ ಇರಿತ ಪ್ರಕರಣ : ಆರೋಪಿಗಳ ಬಂಧನ – ಒಬ್ಬನ ಕಾಲಿಗೆ ಪೊಲೀಸರ ಗುಂಡೇಟು

ಶಿವಮೊಗ್ಗದ  ಕಸ್ತೂರ ಬಾ ರಸ್ತೆಯಲ್ಲಿ ಪ್ರೇಮ್ ಸಿಂಗ್ ಎಂಬ ಕಾರ್ಮಿಕನಿಗೆ ಚಾಕು ಇರಿದು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಸ್ತೂರ್‌ ಬಾ ರಸ್ತೆಯಲ್ಲಿರುವ ನಂದಿ ಸಿಲ್ಕ್‌ ನಲ್ಲಿ ಕೆಲಸ ಮಾಡುತ್ತಿದ್ದ ಶ್ರೀ ಪ್ರೇಮ್‌ ಸಿಂಗ್‌, 20 ವರ್ಷದ ಯುವಕ ಅಂಗಡಿಯ ಬಾಗಿಲು ಹಾಕಿಕೊಂಡು ಗಾಂಧಿ ಬಜಾರ್‌ ನ ತರಕಾರಿ ಮಾರುಕಟ್ಟೆಯ ಹತ್ತಿರ  ಹೋಗುತ್ತಿದ್ದಾಗ ಯಾರೋ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ಪ್ರೇಮ್‌ ಸಿಂಗ್‌ ರವರಿಗೆ ಹಲ್ಲೆ ಮಾಡಿರುವ ಬಗ್ಗೆ ಪ್ರಕರಣ ದಾಖಲಿಸಿದ ಪೊಲೀಸರು 1) ನದೀಮ್ ಬಿನ್…

Read More

ಶಿವಮೊಗ್ಗ ಗುಂಪು ಘರ್ಷಣೆ : ಓರ್ವನಿಗೆ ಚಾಕು ಇರಿತ – ಭದ್ರಾವತಿ ನಗರದಲ್ಲೂ 144 ಸೆಕ್ಷನ್ ಜಾರಿ

ಸ್ವಾತಂತ್ರ್ಯದ 75 ನೇ ಅಮೃತ ಮಹೋತ್ಸವದ ದಿನದಂದೆ ಶಿವಮೊಗ್ಗದಲ್ಲಿ ವಿಷಮ ಪರಿಸ್ಥಿತಿ ಭುಗಿಲೆದ್ದಿದೆ. ಓರ್ವನಿಗೆ ಚೂರಿ ಇರಿಯಲಾಗಿದೆ ಎನ್ನಲಾಗುತ್ತಿದೆ. ಗಾಂದಿ ಬಜಾರ್ ನಲ್ಲಿ ಪ್ರೇಮ್ ಸಿಂಗ್ ಓರ್ವನಿಗೆ ಚಾಕು ಇರಿದ ಬೆನ್ನಲ್ಲೇ ಅಶೋಕ ನಗರದಲ್ಲಿ ಮತ್ತೋರ್ವನಿಗೆ ಚಾಕುವಿನಿಂದ ಇರಿಯಲಾಗಿದೆ ಎನ್ನಲಾಗುತ್ತಿದ್ದು ಈ ಬಗ್ಗೆ ಅನೇಕ ಗೊಂದಲಗಳಿವೆ. ಇದರಿಂದ ಸ್ವಾತಂತ್ರ್ಯದ ಸಂಭ್ರಮಾಚರಣೆ ಎಲ್ಲವೂ ನೆಗೆದುಬಿದ್ದು ಹೋಗಿದೆ.ಅದರಂತೆ ಭದ್ರಾವತಿ ನಗರದಲ್ಲೂ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಸ್ವಾತಂತ್ರ್ಯದ ಅಮೃತ‌ ಮಹೋತ್ಸವ ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಕಾರ್ಮೊಡ ಕವಿದಿದೆ

Read More

ಶಾಲೆಯಿಂದ ಮನೆಗೆ ತೆರಳುತಿದ್ದ ಮಗು ಕಾರು ಡಿಕ್ಕಿಯಾಗಿ ಸಾವು : ಆನಂದಪುರ ಸಮೀಪದಲ್ಲೊಂದು ಹೃದಯವಿದ್ರಾವಕ ಘಟನೆ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಚೆನ್ನ ಕೊಪ್ಪದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಗುವಿಗೆ ಕಾರು ಡಿಕ್ಕಿಯಾಗಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಸಂಭವಿಸಿದೆ. ಚೆನ್ನಕೊಪ್ಪ ಗ್ರಾಮದಲ್ಲಿ ಶಾಲೆ ಮುಗಿದ ನಂತರ ವಿದ್ಯಾರ್ಥಿ ಮನೆಗೆ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು ಅಭಿಷೇಕ್ (6 ) ವರ್ಷ  ಸಾವಿಗೀಡಾದ ಪುಟಾಣಿ ವಿದ್ಯಾರ್ಥಿಯಾಗಿದ್ದಾನೆ. ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕಾರು ವಿದ್ಯಾರ್ಥಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಗುವಿಗೆ ಗಂಭೀರ ಗಾಯಗಳಾಗಿವೆ ಕೂಡಲೇ ಸ್ಥಳೀಯರು ವಾಹನದಲ್ಲಿ ಶಿವಮೊಗ್ಗ ಆಸ್ಪತ್ರೆಗೆ ಕರೆದುಕೊಂಡು…

Read More

ರಿಪ್ಪನ್‌ಪೇಟೆ ಸಮೀಪದ ಸಿದ್ದಪ್ಪನಗುಡಿ ಬಳಿ ಭೀಕರ ಅಪಘಾತ : ಲಾರಿ ಅಡಿಗೆ ಸಿಲುಕಿಕೊಂಡ ಬೈಕ್ ಸವಾರ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಸಿದ್ದಪನಗುಡಿ ಬಳಿ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರು ಲಾರಿಯಡಿ ಸಿಲುಕಿಕೊಂಡ ಘಟನೆ ನಡೆದಿದೆ. ಆಯನೂರಿನಿಂದ ರಿಪ್ಪನ್‌ಪೇಟೆಗೆ ಬೈಕ್ ನಲ್ಲಿ ಬರುತ್ತಿದ್ದ ಇಬ್ಬರು ಯುವಕರಿಗೆ ರಿಪ್ಪನ್‌ಪೇಟೆ ಯಿಂದ ಶಿವಮೊಗ್ಗ ಕಡೆಗೆ ಸಾಗುತ್ತಿದ್ದ ಲಾರಿ ಡಿಕ್ಕಿಯಾಗಿ ಬೈಕ್ ಸಮೇತ ಇಬ್ಬರು ಯುವಕರು ಲಾರಿಯಡಿಗೆ ಸಿಲುಕಿಕೊಂಡ ಘಟನೆ ನಡೆದಿದೆ. ನಡೆದಿದ್ದೇನು…. ರಿಪ್ಪನ್‌ಪೇಟೆಗೆ ಗಾರೆ ಕೆಲಸಕ್ಕೆಂದು ಬೈಕ್ ನಲ್ಲಿ ಬರುತ್ತಿದ್ದ ಆಯನೂರಿನ ನಿವಾಸಿಗಳಾದ ಶ್ರೀನಿವಾಸ್ (29) ಮತ್ತು ಮಂಜುನಾಥ್ (28) ಹಾಗೂ…

Read More

ಜಿಂಕೆ ಮಾಂಸದೂಟ : ಅರಣ್ಯಾಧಿಕಾರಿಗಳ ದಾಳಿ ,ಇಬ್ಬರ ಬಂಧನ

 ಜಿಂಕೆ ಮಾಂಸದೂಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಭದ್ರಾವತಿ ತಾಲೂಕಿನ ಉಂಬ್ಳೆಬೈಲು ವಲಯ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.  ಭದ್ರಾವತಿ ತಾಲೂಕು ಹುಣಸೇಕಟ್ಟೆ ಗ್ರಾಮದ ವೆಂಕಟೇಶ್ ಎಂಬುವರ ಮನೆಯಲ್ಲಿ ಜಿಂಕೆಯ ಮಾಂಸವನ್ನು ಬೇಯಿಸಿ, ಊಟ ತಯಾರು ಮಾಡುವಾಗ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ, ಇವರ ಮನೆಯಲ್ಲಿ ಸುಮಾರು ಎರಡು ಕೆಜಿಯಷ್ಟು ಜಿಂಕೆ ಮಾಂಸ ದೊರಕಿದೆ‌. ಜೊತೆಗೆ ಮನೆ ಪರಿಶೀಲಿಸಿದಾಗ ಮಾಂಸವನ್ನು ಕತ್ತರಿಸುವ ಮರದ ತುಂಡು ಹಾಗೂ ಮಚ್ಚು ಪತ್ತೆಯಾಗಿದೆ. ವೆಂಕಟೇಶ್ ಜೊತೆ ಅವರ ಮಗ ಮಂಜುನಾಥ್​​ನನ್ನು ಸಹ ಬಂಧಿಸಲಾಗಿದೆ.  ಆರೋಪಿಗಳ…

Read More

ಮಂಡಗದ್ದೆ ಸಮೀಪ ಭೀಕರ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು

ತೀರ್ಥಹಳ್ಳಿ : ರಾಷ್ಟ್ರೀಯ ಹೆದ್ದಾರಿ 169 ರ ಶಿವಮೊಗ್ಗ ತೀರ್ಥಹಳ್ಳಿ ನಡುವಿನ ಮಂಡಗದ್ದೆ ಸಮೀಪ ಸಿಂಗನಬಿದರೆ ಕ್ರಾಸ್ ನಲ್ಲಿ ಸ್ಕೂಟಿ ಸ್ಕಿಡ್ ಆಗಿ ಎದುರಿನಿಂದ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಸಂಜೆ ನೆಡೆದಿದೆ. ಮೃತಪಟ್ಟ ವ್ಯಕ್ತಿ ಶಿವಮೊಗ್ಗ ಸಮೀಪದ ಹೊಸಮನೆ ಗಿರೀಶ್ ಎಂದು ತಿಳಿದುಬಂದಿದೆ. ಈತ ಮಂಡಗದ್ದೆಯಲ್ಲಿ ಊಟ ಮಾಡಿ ಶಿವಮೊಗ್ಗದ ಕಡೆ ತೆರಳುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.  ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ…

Read More

ಆಗುಂಬೆ : ಟಿವಿ ನೋಡಲು ಬಂದ ಪಕ್ಕದ ಮನೆಯ ಯುವತಿಯನ್ನು ಅತ್ಯಾಚಾರಗೈದ ವಿವಾಹಿತ : ಆರೋಪಿ ಅಂದರ್

ತೀರ್ಥಹಳ್ಳಿ : ಟಿ.ವಿ.ನೋಡಲು ಬರುತ್ತಿದ್ದ ಯುವತಿಯನ್ನ ರೇಪ್ ಮಾಡಿ ಗರ್ಭಾವತಿಯನ್ನಾಗಿ ಮಾಡಿದ  ಆರೋಪದ ಅಡಿಯಲ್ಲಿ ವ್ಯಕ್ತಿಯೋರ್ವನನ್ನು ಇಂದು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ತಾಲೂಕಿನ ನಾಲೂರಿನಲ್ಲಿ ಪರಿಶಿಷ್ಟ ಜಾತಿಯ ಯುವತಿಯು 2021 ರ ಡಿಸೆಂಬರ್ ನಲ್ಲಿ ಕಾಲೇಜು ಇಲ್ಲದ ಕಾರಣ ಮನೆಯಲ್ಲೇ ಇದ್ದ ಯುವತಿ ಪಕ್ಕದ ಮನೆಯ ಮುರುಳೀಧರ್ ಭಟ್ ಎಂಬುವರ ಮನೆಗೆ ಟಿವಿ ನೋಡಲು ಹೋಗುತ್ತಿದ್ದಳು.ಟಿವಿ ನೋಡುವ ವೇಳೆ ಯುವತಿಯನ್ನ ಮುರುಳೀಧರ್ ಬಲತ್ಕರಿಸಿರುವುದಾಗಿ ಯುವತಿ ಆರೋಪಿಸಿದ್ದಾಳೆ. .   (ಅತ್ಯಾಚಾರದ ಆರೋಪಿ ಮುರುಳಿಧರ್ ಭಟ್) ಇದಾದ ನಂತರ ದಾರಿಯಲ್ಲಿ…

Read More

ಮಂಡಗದ್ದೆ ಸಮೀಪ ಭೀಕರ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು

ತೀರ್ಥಹಳ್ಳಿ :  ಶಿವಮೊಗ್ಗ ರಸ್ತೆಯ ಮಂಡಗದ್ದೆ ಸಮೀಪದ ಹದಿನಾರನೇ ಮೈಲಿಕಲ್ ನಲ್ಲಿ ಭೀಕರ ಅಪಘಾತವಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಫೋರ್ಡ್ ಕಾರು ಹಾಗೂ ಬೈಕ್ ನಡುವೆ ಹದಿನಾರನೇ ಮೈಲಿಕಲ್ ಬಳಿ ಡಿಕ್ಕಿಯಾಗಿದ್ದು,ಅಪಘಾತದ ಭೀಕರತೆಗೆ ಪುಟರೊಳ್ಳಿ ಗ್ರಾಮದ ಬೈಕ್ ಸವಾರ ಸತೀಶ್ ಸ್ಥಳದಲ್ಲಿ ಮತಪಟ್ಟಿದ್ದಾನೆ. ಅಪಘಾತದ ಬಗ್ಗೆ ಹೆಚ್ಚಿನ ಮಾಹಿತಿ‌ ಇನ್ನಷ್ಟೇ ತಿಳಿದುಬರಬೇಕಾಗಿದೆ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಸಾಗರ ಸಮೀಪದಲ್ಲಿ ಲಾರಿ ಹಾಗೂ ಬೈಕುಗಳ ನಡುವೆ ಭೀಕರ ಅಪಘಾತ : ಓರ್ವ ಸಾವು,ಮೂವರ ಸ್ಥಿತಿ ಗಂಭೀರ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಉಳ್ಳೂರು ಸಮೀಪದ ತಿರುವಿನಲ್ಲಿ  ಲಾರಿ ಹಾಗೂ 2 ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಲಾರಿ ಹಾಗೂ ಸಾಗರದಿಂದ ಶಿವಮೊಗ್ಗಕ್ಕೆ  ಹೊರಟಿದ್ದ  ಬುಲೆಟ್ ಬೈಕ್ ಹಾಗೂ ಪಲ್ಸರ್ ಬೈಕ್ ಗಳ ನಡುವೆ ಅಪಘಾತ ಸಂಭವಿಸಿದೆ. ಸ್ಥಳದಲ್ಲೇ ಪಡವಗೂಡು ‌ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರೇಮಾನಂದ ಗೌಡ ಅಸುನೀಗಿದ್ದು ಅವರ ಹೆಂಡತಿ ಹಾಗೂ ಇನ್ನೊಂದು ಬೈಕಿನಲ್ಲಿದ್ದ ಇಬ್ಬರ ಸ್ಥಿತಿ ಗಂಭೀರವಾಗಿದ್ದು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಆಂಬುಲೆನ್ಸ್ ಮೂಲಕ…

Read More

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ :

ಖಾಸಗಿ ಬಸ್​ವೊಂದು ಚಾಲಕ ನಿಯಂತ್ರಣ ತಪ್ಪಿ ರಸ್ತೆ ಪಕ್ಕ ಉರುಳಿ ಬಿದ್ದ ಪರಿಣಾಮ 20 ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರುವ ಘಟನೆ ಹೊಳೆಹೊನ್ನೂರು ಸಮೀಪ ಸಿದ್ಲಿಪುರದ ಬಳಿ ನಡೆದಿದೆ. ಶಿವಮೊಗ್ಗ ದಿಂದ ಚಿತ್ರದುರ್ಗ ಕ್ಕೆ ಹೋಗುತ್ತಿದ್ದ ಬಸ್​, ಹೊಳೆಹೊನ್ನೂರು ಸಮೀಪ ಸಿದ್ಲಿಪುರದ ಬಳಿ ಪಲ್ಟಿ! ಘಟನೆಯಲ್ಲಿ ಗಾಯಗೊಂಡವರಿಗೆ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಮೆಗ್ಗಾನ್​ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದೆ. ಹೊಳೆಹೊನ್ನೂರು ಸಮೀಪದ ಸಿದ್ಲಿಪುರದಲ್ಲಿ ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ತೆರಳುತ್ತಿದ್ದ ಬಸ್​ ಪಲ್ಟಿಯಾಗಿದೆ. ಎದುರಿನಿಂದ ಬರುತ್ತಿದ್ದ ಲಾರಿಗೆ…

Read More