ಕ್ರೈಂ ಸುದ್ದಿ:
ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ : ಅನೈತಿಕ ಸಂಬಂಧ ಬಯಲಾಗುವ ಭಯಕ್ಕೆ ಸ್ನೇಹಿತನನ್ನೆ ಕೊಲೆ ಮಾಡಿ ಹೊಳೆಗೆ ಬಿಸಾಡಿದ !!!!!!!!!
ಜಮೀನು ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆಯಾಗಿದ್ದ ಪ್ರಕರಣ ಹೊಸ ತಿರುವು ಪಡೆದುಕೊಂಡು ಕೊಲೆ ಪ್ರಕರಣವಾಗಿರುವ ಘಟನೆ ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯ ಹಿನ್ನಲೆ : ಏ.11 ರಂದು ಮನ್ಮನೆ ನಿವಾಸಿ ಲೇಖಪ್ಪ(36) ಜಮೀನು ಕೆಲಸಕ್ಕೆಂದು ಹೋದವನು ಮನೆಗೆ ವಾಪಾಸ್ ಬಾರದ ಹಿನ್ನಲೆಯಲ್ಲಿ ಏ.14ರಂದು ಸೊರಬ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವೊಂದು ದಾಖಲಾಗಿತ್ತು. ಇಂದು ಕಡಸೂರು ಗ್ರಾಮದ ಹೊಳೆಯ ಸಮೀಪ ಲೇಖಪ್ಪನ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಲೇಖಪ್ಪನ ಸಹೋದರ ಗ್ರಾಮದಲ್ಲಿ ರಾಜಕೀಯ ವಿಚಾರವಾಗಿ ದ್ವೇಷ…
ಸಾಲಬಾಧೆಗೆ ಹೆದರಿ ಬ್ಲೇಡ್ ನಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ :
ಶಿವಮೊಗ್ಗ : ಬ್ಲೇಡ್ ನಿಂದ ಕೈಕೊಯ್ದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರದ ನೆಹರೂ ರಸ್ತೆಯ ಖಾಸಗಿ ಲಾಡ್ಜ್ ನಲ್ಲಿ ಈ ಘಟನೆ ನಡೆದಿದೆ. ಈ ಯುವಕನ ಸಾವಿನ ಆಯ್ಕೆ ಬಹುತೇಕ ಅಚ್ಚರಿ ಮೂಡಿಸಿದೆ. ಕೈಯ್ಯನ ಬ್ಲೇಡ್ ನಿಂದ ಕೊಯ್ದುಕೊಂಡ ಕಾರಣ ಟಾಯ್ಲೆಟ್ ಎಲ್ಲಾ ರಕ್ತಸಿಕ್ತವಾಗಿದೆ. ಸಾಲಬಾಧೆಯೇ ಆತನ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಮೃತ ವ್ಯಕ್ತಿಯು ಬೆಂಗಳೂರು ನಿವಾಸಿ ನಾಗೇಂದ್ರ ಎಂದು ತಿಳಿದುಬಂದಿದೆ. ಏ. 28 ರ ಬೆಳಿಗ್ಗೆ 5-30 ಕ್ಕೆ ಲಾಡ್ಜ್ ನಲ್ಲಿ ಚೆಕ್ ಇನ್ ಆದ ನಾಗೇಂದ್ರ…
ಮಹಿಳೆಯರು ನಮಾಝ್ ಮಾಡುವ ಕೊಠಡಿಗೆ ನುಗ್ಗಿ ಅಸಭ್ಯ ವರ್ತನೆ: ಯುವಕ ಸುಜಿತ್ ಶೆಟ್ಟಿ ಬಂಧನ
ಮಂಗಳೂರು: ತೊಕ್ಕೊಟ್ಟು ಮಸೀದಿಯಲ್ಲಿ ಮಹಿಳೆಯರು ನಮಾಝ್ ಮಾಡುವ ಕೊಠಡಿಗೆ ನುಗ್ಗಿ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ಯುವಕನೋರ್ವನನ್ನು ಉಳ್ಳಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ.. ಬಂಧಿತ ಆರೋಪಿಯನ್ನು ಕಾರ್ಕಳ ತಾಲೂಕಿನ ನಿಟ್ಟೆ ನಿವಾಸಿ ಸುಜಿತ್ ಶೆಟ್ಟಿ(26) ಎಂದು ಗುರುತಿಸಲಾಗಿದೆ. ತೊಕ್ಕೊಟ್ಟಿನ ಹುದಾ ಜುಮ್ಮಾ ಮಸೀದಿಯಲ್ಲಿ ಲೈಲಾತುಲ ಖದರ್ ನ ರಾತ್ರಿ ವಿಶೇಷ ಕಾರ್ಯಕ್ರಮವನ್ನು ಕಳೆದ 28 ರಂದು ಏರ್ಪಡಿಸಲಾಗಿದ್ದು, ಈ ವೇಳೆ ಆರೋಪಿ ಸುಜಿತ್ ಶೆಟ್ಟಿಯು ಮಸೀದಿಯಲ್ಲಿ ಮಹಿಳೆಯರು ನಮಾಜ್ ಮಾಡುವ ಕೊಠಡಿಗೆ ನುಗ್ಗಿ ಮಹಿಳೆಯರ ಕೈಹಿಡಿದು ಎಳೆದು, ಅಶ್ಲೀಲವಾಗಿ…
ವಿದ್ಯುತ್ ತಂತಿ ತಗುಲಿ ಮೂರು ವರ್ಷದ ಮಗು ಸಾವು :
ವಿದ್ಯುತ್ ತಂತಿ ಬೇಲಿಯ ಮೇಲೆ ಕೇಬಲ್ ಬಿದ್ದಿದ್ದು ಕೇಬಲ್ ನ್ನು ಮೂರು ವರ್ಷದ ಹೆಣ್ಣು ಮಗು ಮುಟ್ಟಿದ್ದರ ಪರಿಣಾಮ ಮಗು ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಭದ್ರಾವತಿ ತಾಲೂಕಿನ ಹಿರಿಯೂರು ಗ್ರಾಮದಲ್ಲಿ ಮನೆ ಬಳಿ ಹಾಕಿರುವ ವಿದ್ಯುತ್ ತಂತಿ ಬೇಲಿಯ ಮೇಲೆ ಟಿವಿ ಕೇಬಲ್ ಹರಿದು ಬಿದ್ದಿದೆ. ಈ ಕೇಬಲ್ ನ್ನ ಆಟಾಡುವ ವೇಳೆ ಮಗು ಮುಟ್ಟಿದ ಹಿನ್ನಲೆಯಲ್ಲಿ ವಿದ್ಯುತ್ ಶಾಕ್ ಹೊಡೆದು ಸ್ಥಳದಲ್ಲೇ ಸಾವುಕಂಡಿದೆ. ತಂತಿ ಬೇಲಿ ಮೇಲೆ ಕೇಬಲ್ ತುಂಡಾಗಿ ಬಿದ್ದಿದ್ದರಿಂದ ಕೇಬಲ್…
KSRTC ಬಸ್ ನಲ್ಲಿ ಶಿವಮೊಗ್ಗಕ್ಕೆ ಸಾಗಿಸುತಿದ್ದ ₹1.27000 ಮೌಲ್ಯದ ಗೋವಾ ಮದ್ಯ ವಶ : ಇಬ್ಬರ ಬಂಧನ
ಸಾಗರ-ಪಣಜಿ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಅಕ್ರಮವಾಗಿ ಗೋವಾ ಮದ್ಯ ಸಾಗಿಸುತಿದ್ದ ಇಬ್ಬರನ್ನು ವಶಕ್ಕೆ ಪಡೆದು ₹ 1.27000 ಸಾವಿರ ಮೌಲ್ಯದ ವಿವಿಧ ಬ್ರಾಂಡ್ ನ ಗೋವಾ ಮದ್ಯ ವನ್ನು ಅಬಕಾರಿ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡ ಘಟನೆ ಕಾರವಾರ ತಾಲೂಕಿನ ಮಾಜಾಳಿಯ ಚಕ್ ಪೋಸ್ಟ್ ನಲ್ಲಿ ನಡೆದಿದೆ. ಶಿವಮೊಗ್ಗ ಮೂಲದ ನಾಗರಾಜ (35), ಸಾಗರ್ (25) ಬಂಧಿತರಾಗಿದ್ದು ,ಗೋವಾದಿಂದ ಶಿವಮೊಗ್ಗ ಕ್ಕೆ ಬ್ಯಾಗ್ ನಲ್ಲಿ ವಿವಿಧ ಬ್ರಾಂಡ್ ನ ಮದ್ಯವನ್ನು ತುಂಬಿಕೊಂಡು ಬಸ್…
ಆಯನೂರು ಬಳಿ ರಸ್ತೆ ಅಪಘಾತ : ಬೈಕ್ ಸವಾರ ಸ್ಥಳದಲ್ಲಿಯೇ ಸಾವು
ಆಯನೂರು ಬಳಿ ಬೈಕ್ ಹಾಗೂ ಪಿಕಪ್ ವಾಹನದ ನಡುವೆ ಭೀಕರ ಅಪಘಾತವಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಧಾರುಣ ಸಾವುಕಂಡಿದ್ದಾನೆ. ಆಯನೂರು ಸಮೀಪದ ವಿಠಗೊಂಡನಕೊಪ್ಪ ಗ್ರಾಮದ ಆಕಾಶ್ (20) ಮೃತ ದುರ್ದೈವಿಯಾಗಿದ್ದಾನೆ. ಶಿವಮೊಗ್ಗದ ಆಯನೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಘಟನೆ ಇದಾಗಿದೆ. ಶಿವಮೊಗ್ಗದಿಂದ ಆಯನೂರಿನ ಕಡೆ ಬೈಕ್ ನಲ್ಲಿ ತೆರಳುತ್ತಿದ್ದ ಆಕಾಶ್ ಆಯನೂರು ಸಮೀಪದ ವೀರಗಾರನ ಬೈರನಕೊಪ್ಪದ ಬಳಿ ಕೋಳಿ ಸಾಗಿಸುತ್ತಿದ್ದ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದ ಪರಿಣಾಮ ಆಕಾಶ್ ಸ್ಥಳದಲ್ಲಿಯೇ ಸಾವುಕಂಡಿದ್ದಾನೆ. ಅಪಘಾತದ ರಭಸಕ್ಕೆ ಆಕಾಶ್…
ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು
ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ಉಳವಿ ಮತ್ತು ಮಳಲಗದ್ದೆ ಗ್ರಾಮದ ನಡುವೆ ಗುರುವಾರ ರಾತ್ರಿ ಸಂಭವಿಸಿದೆ. ಅವಲಗೋಡು ಗ್ರಾಮದ ಯುವರಾಜ್ ಗಣಪತಿ (38) ಮೃತ ಬೈಕ್ ಸವಾರ. ಉಳುವಿಯಿಂದ ಅವಲಗೋಡು ಗ್ರಾಮಕ್ಕೆ ತೆರಳುತ್ತಿದ್ದ ಬೈಕ್ ಗೆ ಸೊರಬದಿಂದ ಸಾಗರ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಟಿಪ್ಪರ್ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ…
ಬೈಕ್ ನಿಧಾನವಾಗಿ ಚಲಿಸಿ ಎಂದಿದ್ದಕ್ಕೆ ದೇವಸ್ಥಾನದ ಅರ್ಚಕನ ಮೇಲೆ ಹಲ್ಲೆ :
ಬೈಕ್ ನಿಧಾನಕ್ಕೆ ಚಲಿಸಿ ಎಂದು ಬುದ್ದಿವಾದ ಹೇಳಿದ್ದಕ್ಕೆ ದೇವಸ್ಥಾನದ ಅರ್ಚಕನ ಮೇಲೆ ಹಲ್ಲೆ ನಡೆದು ಅವರ ಬಳಿ ಮೊಬೈಲ್ ಮತ್ತು ಇತರೆ ವಸ್ತುಗಳನ್ನ ಕಿತ್ತುಕೊಂಡು ಹೋಗಿರುವ ಘಟನೆ ವರದಿಯಾಗಿದೆ. ಊರುಗಡೂರು ಗಣಪತಿ ದೇವಸ್ಥಾನದ ಅರ್ಚಕ ಅಕ್ಷಯ್ ಕುಮಾರ್ ಕೆಲಸದ ನಿಮಿತ್ತ ಶಿವಮೊಗ್ಗದ ಗಾಂಧಿ ಬಜಾರ್ ಗೆ ಬಂದಿದ್ದು ಜೀ ಕಾರ್ನರ್ ಮೂಲಕ ಎಂಕೆಕೆ ರಸ್ತೆಯಲ್ಲಿ ಹೋಗಲು ಮೆಹಬೂಬ್ ಗಲ್ಲಿಗೆ ಬಂದಾಗ ಇಬ್ಬರು ಬೈಕ್ ಸವಾರರು ಬೈಕ್ ಗೆ ಡಿಕ್ಕಿ ಹೊಡೆಯುವ ರೀತಿ ಚಲಾಯಿಸಿಕೊಂಡು ಬಂದಿದ್ದಾರೆ. ಚಲಾಯಿಸಿಕೊಂಡು ಬಂದ…
ಅಪರಿಚಿತ ವ್ಯಕ್ತಿಯನ್ನು ರಕ್ಷಿಸಲು ಚಾನೆಲ್ ಗೆ ಹಾರಿದ್ದ ರಿಪ್ಪನ್ಪೇಟೆ ಯುವಕನ ಮೃತದೇಹ ಪತ್ತೆ : ಮುಗಿಲುಮುಟ್ಟಿದ ಕುಟುಂಬಸ್ಥರ ಆಕ್ರಂದನ
ಮಂಗಳವಾರ ಬೆಳಿಗ್ಗೆ ದಾವಣಗೆರೆ ಜಿಲ್ಲೆ ಸಿದ್ದಾಪುರದ ಚಾನಲ್ ಗೆ ಬಿದ್ದು ಸಾಯುತ್ತಿದ್ದ ವೃದ್ದ ದಂಪತಿಗಳನ್ನು ಬದುಕಿಸಬೇಕು ಎಂಬ ಹಂಬಲದಲ್ಲಿ ಚಾನೆಲ್ ಗೆ ಜಿಗಿದು ಬದುಕಿಸುವ ಯತ್ನದಲ್ಲಿ ಈತನು ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಘಟನೆ ನಡೆದಿದೆ. ರಿಪ್ಪನ್ ಪೇಟೆ ನೆಹರು ಬಡಾವಣೆ ನಿವಾಸಿ ಅನೀದ್ (22) ಮೃತಪಟ್ಟ ಧುರ್ಧೈವಿಯಾಗಿದ್ದಾನೆ. ಕಳೆದ 48 ಗಂಟೆಗಳಿಂದ ಅಗ್ನಿಶಾಮಕ ದಳ ದವರು ಕಾರ್ಯಾಚರಣೆ ನಡೆಸುತ್ತಿದ್ದರೂ ಯುವಕನ ಶವ ಪತ್ತೆಯಾಗಿರಲಿಲ್ಲ,ಇಂದು ಬೆಳಿಗ್ಗೆ ನೆಲ್ಲೂರು ಸಮೀಪದ ಹಿರೆಮಳಲಿ ಎಂಬ ಗ್ರಾಮದ ಬಳಿ ಯುವಕನ ಮೃತದೇಹ ಪತ್ತೆಯಾಗಿದೆ….
ಇನ್ನೂ ಪತ್ತೆಯಾಗದ ವೃದ್ದನನ್ನು ರಕ್ಷಿಸಲು ಚಾನೆಲ್ ಗೆ ಹಾರಿ ನಾಪತ್ತೆಯಾಗಿದ್ದ ರಿಪ್ಪನ್ ಪೇಟೆಯ ಯುವಕ : ಅಗ್ನಿಶಾಮಕ ದಳದವರಿಂದ ಬಿರುಸಿನ ಕಾರ್ಯಾಚರಣೆ
ದಾವಣಗೆರೆ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಸಿದ್ದಾಪುರ ಚಾನೆಲ್ ನಲ್ಲಿ ವೃದ್ದನೊಬ್ಬನನ್ನು ರಕ್ಷಿಸಲು ಹೋಗಿ ರಿಪ್ಪನ್ಪೇಟೆಯ ಯುವಕನೊಬ್ಬ ನಾಪತ್ತೆಯಾಗಿ ಸುಮಾರು 48 ಗಂಟೆ ಕಳೆದಿದ್ದು ಇನ್ನೂ ಯುವಕನ ಸುಳಿವು ಪತ್ತೆಯಾಗಿಲ್ಲ. ರಿಪ್ಪನ್ ಪೇಟೆ ನೆಹರು ನಗರ ನಿವಾಸಿ ಅನೀದ್ (22) ವರ್ಷ ಎಂಬ ಯುವಕ ಮಂಗಳವಾರ ಬೆಳಿಗ್ಗೆ ದಾವಣಗೆರೆಯಿಂದ ಲಾರಿಯೊಂದರಲ್ಲಿ ಶಿವಮೊಗ್ಗಕ್ಕೆ ಬರುತ್ತಿದ್ದಾಗ ಸಿದ್ದಾಪುರ ರಸ್ತೆ ಬದಿಯ ಚಾನೆಲ್ ಬಳಿ ಸೇರಿದ ಜನಸ್ತೋಮವನ್ನು ನೋಡಿ ಪ್ರಶ್ನಿಸಿದ್ದಾನೆ. ಆ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಚಾನೆಲ್ ಗೆ ಹಾರಿರುವ ವಿಚಾರ ಗಮನಕ್ಕೆ ಬಂದಿದ್ದು,ತಕ್ಷಣವೇ…