ಕ್ರೈಂ ಸುದ್ದಿ:
ವಿವಾಹಿತ ಮಹಿಳೆ ನಾಪತ್ತೆ : ಸುಳಿವು ಪತ್ತೆಗೆ ಮನವಿ
2021 ರ ಏಪ್ರಿಲ್ 13 ರಂದು ಅನುಷಾ ಕೋಂ ಆನಂದ, 26 ವರ್ಷ, ಗೃಹಿಣಿ ಈಕೆ ನಗರದ ಹೊಸಮನೆ 06 ನೇ ಕ್ರಾಸ್ನಲ್ಲಿರುವ ತನ್ನ ನಿವಾಸದಿಂದ ಕಾಣೆಯಾಗಿರುತ್ತಾರೆ. ಅಂದು ರಾತ್ರಿ 8 ಗಂಟೆ ಹೊತ್ತಿಗೆ ಮನೆಯಿಂದ ಹೊರಗೆ ಹೋದವಳು ಹಿಂತಿರುಗಿ ಬಂದಿರುವುದಿಲ್ಲ. ಅಕ್ಕ ಪಕ್ಕ, ನೆಂಟರ ಮನೆ ಹೀಗೆ ಎಲ್ಲೆಡೆ ಹುಡುಕಿದರೂ ಪತ್ತೆಯಾಗಿರುದಿಲ್ಲ. ಕಾಣೆಯಾದ ಮಹಿಳೆ ಅನುಷಾ 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕೋಲು ಮುಖ, ಎಣ್ಣೆಗೆಂಪು ಮೈಬಣ್ಣ ಹೊಂದಿದ್ದು, ಕಾಣೆಯಾದ…
ರಿಪ್ಪನ್ ಪೇಟೆ ಸಮೀಪದ ಬಿದರಹಳ್ಳಿಯಲ್ಲಿ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ :
ರಿಪ್ಪನ್ ಪೇಟೆ : ತಾಯಿ ತನ್ನ ಮಗುವಿನ ಜತೆ ಬಿದರಹಳ್ಳಿಯ ತನ್ನ ಮನೆಯ ಎದುರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಬಿದರಹಳ್ಳಿಯ ನಿವಾಸಿ ವಿದ್ಯಾ(32) ಮಗಳು ತನ್ವಿ(4) ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಗುರುವಾರ ಬೆಳಗಿನ ಜಾವ ವಿದ್ಯಾ ಮಗುವಿನೊಂದಿಗೆ ಬಾವಿಗೆ ಹಾರಿದ್ದಾರೆ.ಇಂದು ಬೆಳಿಗ್ಗೆ ಮೃತ ದೇಹ ಪತ್ತೆಯಾಗಿದೆ. ಹೊಸನಗರದ ಅಗ್ನಿಶಾಮಕ ಸಿಬ್ಬಂದಿ ಭೀಷ್ಮಚಾರಿ 50 ಅಡಿ ಆಳದ ಬಾವಿಗೆ ಇಳಿದು ಎರಡು ಮೃತದೇಹಗಳನ್ನು ಹೊರತೆಗೆದಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ರಿಪ್ಪನ್…
ಕಾರಿಗೆ ಅಡ್ಡ ಬಂದ ಹಾವು ತಪ್ಪಿಸಲು ಹೋಗಿ ಚಾನೆಲ್ ಗೆ ಇಳಿದ ಕಾರು : ಒಬ್ಬರ ಸಾವು
ಕಾರಿಗೆ ಅಡ್ಡ ಬಂದ ಹಾವನ್ನು ತಪ್ಪಿಸಲು ಹೋಗಿ ತುಂಗಾ ಚಾನೆಲ್ ಗೆ ಕಾರು ಬಿದ್ದು ಗಾಜನೂರಿನ ನವೋದಯ ಶಾಲೆಯ ಗೇಟ್ ಕೀಪರ್ ಆಗಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗಿನ ಜಾವ 2 ಗಂಟೆಯ ಸಮಯದಲ್ಲಿ ಸಂಭವಿಸಿದೆ. ಗಾಜನೂರಿನ ನವೋದಯ ಶಾಲೆಯ ಗೇಟ್ ಕೀಪರ್ ಆಗಿ ಕೆಲಸ ಮಾಡುತ್ತಿದ್ದ ಸುಷ್ಮ.ಇ(28) ಮೃತ ದುರ್ಧೈವಿ. ಸುಷ್ಮ ಮತ್ತು ಪತಿ ಚೇತನ್ ಕುಮಾರ್ ತುಮಕೂರಿನಲ್ಲಿರುವ ಅತ್ತೆಗೆ (ಚೇತನ್ ತಾಯಿಗೆ) ಎದೆ ನೋವು ಕಾಣಿಸಿಕೊಂಡಿದ್ದರಿಂದ ತುಮಕೂರಿಗೆ ಕಾರಿನಲ್ಲಿ…
ಮದ್ಯವ್ಯಸನಿ ಪತಿಯಿಂದ ಬೇಸತ್ತ ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ:
ಕೌಟುಂಬಿಕ ಸಮಸ್ಯೆಗಳಿಂದ ಹಾಗೂ ಮದ್ಯವ್ಯಸನಿ ಪತಿಯಿಂದ ಬೇಸತ್ತ ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನುಪಿನ ಕಟ್ಟೆ ರಸ್ತೆಯಲ್ಲಿರುವ ಸಿದ್ದೇಶ್ವರ ನಗರದ ನಿವಾಸಿ ಸವಿತಾ(35) ಎಂಬುವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಂಸಿಯ ನಿವಾಸಿಯಾಗಿದ್ದ ಸವಿತಾ ಕಳೆದ 14 ವರ್ಷದ ಹಿಂದೆ ಗಾರೆ ಕೆಲಸ ಮಾಡಿಕೊಂಡಿದ್ದ ರಾಘವೇಂದ್ರ ಎಂಬಾತನನ್ನು ಮದುವೆಯಾಗಿದ್ದರು. ಇಬ್ಬರು ಮಕ್ಕಳಿದ್ದರು. ಮದುವೆಯಾದಾಗಿನಿಂದ ರಾಘವೇಂದ್ರ ವಿಪರೀತ ಮದ್ಯ ವ್ಯಸನಿಯಾಗಿದ್ದು ಈ ವ್ಯಸನದಿಂದ ಬದಲಾಗದ ಹಿನ್ನಲೆಯಲ್ಲಿ ಪವಿತ್ರ ಬೇಸತ್ತಿದ್ದರು. ಇಂದು ಮನೆಯಲ್ಲಿ ಪವಿತ್ರಾ ನೇಣು…
ರಿಪ್ಪನ್ ಪೇಟೆ : ಕಾರಿನ ಟೈರ್ ಸ್ಪೋಟಗೊಂಡು ಸರಣಿ ಅಪಘಾತ : ಇಬ್ಬರಿಗೆ ಗಂಭೀರ ಗಾಯ : ಮೆಗ್ಗಾನ್ ಗೆ ದಾಖಲು
ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ಗುಡ್ ಶೆಫರ್ಡ್ ಚರ್ಚ್ ಬಳಿ ಚಲಿಸುತ್ತಿದ್ದ ಮಾರುತಿ ಬ್ರೀಜಾ ಕಾರಿನ ಮುಂಭಾಗದ ಎರಡು ಟೈರ್ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತಿದ್ದ ಎರಡು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ರಿಪ್ಪನ್ ಪೇಟೆಯಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿದ್ದ ಮಾರುತಿ ಬ್ರೀಜಾ ಕಾರಿನ ಮುಂದಿನ ಎರಡು ಟೈರ್ ಸ್ಪೋಟಗೊಂಡ ಹಿನ್ನಲೆ ಚಾಲಕನ ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಬರುವೆ ಗ್ರಾಮದ ನಿವಾಸಿ ತಿಮ್ಮಪ್ಪ (40) ಇವರ ಬಜಾಜ್…
ಆಗುಂಬೆ ಪೊಲೀಸರ ಭರ್ಜರಿ ಕಾರ್ಯಾಚರಣೆ : ಒಂದೂವರೆ ಕ್ವಿಂಟಲ್ ಅಡಿಕೆ ಕದ್ದಿದ್ದ ಆರೋಪಿ ಮಾಲು ಸಮೇತ ಬಂಧನ
ತೀರ್ಥಹಳ್ಳಿ : ಅಡಿಕೆ ಮೂಟೆ ಕದ್ದ ಕಳ್ಳನನ್ನು ಆಗುಂಬೆ ಪೊಲೀಸರು ಬಂಧಿಸಿ ಆತನಿಂದ ಸುಮಾರು ಒಂದೂವರೆ ಕ್ವಿಂಟಲ್ ಅಡಿಕೆ ವಶಪಡಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಸುಧಾಕರ್ ಎಂಬುವವನು ಜನವರಿ ತಿಂಗಳಲ್ಲಿ ಕೌರಿಹಕ್ಕಲು ಬಿಎಸ್ಎನ್ಎಲ್ ವೆಂಕಟೇಶ್ ಎಂಬುವವರ ಮನೆಯಲ್ಲಿ ಒಣಹಾಕಿದ್ದ ಒಂದುವರೆ ಕ್ವಿಂಟಲ್ ಅಡಿಕೆ ಕದ್ದಿದ್ದ. ಈ ಬಗ್ಗೆ ಆಗುಂಬೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಡಿವೈಎಸ್ ಪಿ ಶಾಂತವೀರ, ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಪ್ರವೀಣ್ ನೀಲಮ್ಮನವರ್,ಆಗುಂಬೆ ಪಿಎಸ್ ಐ ಶಿವಕುಮಾರ್ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳಾದ ವೀರೇಂದ್ರ,…
ಬಸ್ ನಿಯಂತ್ರಣ ತಪ್ಪಿ ಪಾದಾಚಾರಿಗಳಿಗೆ ಡಿಕ್ಕಿ : ಗಾಯಾಳುಗಳು ಮೆಗ್ಗಾನ್ ಗೆ ದಾಖಲು
ಆಯನೂರು ಮೆಸ್ಕಾಂ ಕಚೇರಿ ಎದುರು ನಡೆದುಕೊಂಡು ಹೋಗುತಿದ್ದ ವಿದ್ಯಾರ್ಥಿಗಳಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರೂ ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ. ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಖಾಸಗಿ ಬಸ್ ಆಯನೂರಿನ ಮೆಸ್ಕಾಂ ಕಚೇರಿ ಎದುರು ಚಾಲಕನ ನಿಯಂತ್ರಣ ಕೈತಪ್ಪಿ ಫುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದಿದೆ. ಅಲ್ಲಾಭಕ್ಷಿ (17) ಆಯನೂರು ಸಮೀಪದ ಹೊಸೂರು ಗ್ರಾಮದವನೆಂದು ತಿಳಿದುಬಂದಿದೆ. ಸನು (16) ಎಂಬ ಯುವಕನು ಭದ್ರಾವತಿ ದಡಂಘಟ್ಟದ ಯುವಕನೆಂದು ಹಾಗೂ ಹಾರನಹಳ್ಳಿಯ ರಾಹುಲ್ (17) ಎಂಬುವರನ್ನು ಹೆಚ್ಚಿನ…
ಬೈಕ್ ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ : ಸಾಗರದ ಚಾರ್ಟಡ್ ಅಕೌಂಟೆಂಟ್ ಸೇರಿದ್ದಂತೆ ಇಬ್ಬರ ದುರ್ಮರಣ
ಸಾಗರ : ಸಾಗರದ ಆರ್. ಎಂ.ಸಿಬಳಿ ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸಾಗರದ ಚಾರ್ಟೆಡ್ ಅಕೌಂಟೆಂಟ್ ರಾಜೇಶ್ (48) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂಲತಃ ರಾಜೇಶ್ ರವರು ಬಂದಗದ್ದೆಯ ನಿವಾಸಿಯಾಗಿದ್ದಾರೆ. ಹಾಗೂ ಎದುರುಗಡೆ ಬೈಕಿನ ಹರೀಶ್ (25 ) ವರ್ಷ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹರೀಶ್ ಕಾರವಾರದಿಂದ ಕೂಲಿ ಕೆಲಸಕ್ಕೆ ಸಾಗರಕ್ಕೆ ಆಗಮಿಸಿದ್ದರು ಅಪಘಾತದಲ್ಲಿ ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಸ್ಥಳಕ್ಕೆ ಸಾಗರ ಟೌನ್ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಆನ್ ಲೈನ್ ವಂಚನೆ : 79,998 ರೂ ಕಳೆದುಕೊಂಡ ಕಾಲೇಜು ವಿದ್ಯಾರ್ಥಿ
ಸರಕಾರ ಹಾಗೂ ಬ್ಯಾಂಕ್ ಗಳು ಹಲವಾರು ಜಾಹಿರಾತಿನ ಮೂಲಕ ಆನ್ ಲೈನ್ ವಂಚನೆಯ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು ಹಲವರು ಈಗಲೂ ಆನ್ ಲೈನ್ ವಂಚಕರ ಬಲೆಗೆ ಬೀಳುತಿದ್ದಾರೆ. ಶಿವಮೊಗ್ಗದ ವಿದ್ಯಾರ್ಥಿಯೊಬ್ಬ ಆನ್ ಲೈನ್ ವಂಚನೆಗೆ ಒಳಗಾಗಿ ಪರಿತಪಿಸುತ್ತಿರುವ ಘಟನೆ ನಡೆದಿದೆ. ಪಾನ್ ಕಾರ್ಡ ಅಪ್ಡೇಟ್ ಮಾಡಿಕೊಳ್ಳುವಂತೆ ಬಂದ ಲಿಂಕ್ ಒತ್ತುವ ಮೂಲಕ ವಿದ್ಯಾರ್ಥಿಯೋರ್ವ 79998/- ರೂ. ಹಣ ಕಳೆದುಕಂಡ ಘಟನೆ ಈಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ನಡದಿದೆ. ಅಪರಿಚಿತ ಮೊಬೈಲ್ ನಂಬರ್ ಮೂಲಕ ಬಂದ ಲಿಂಕ್ ನಲ್ಲಿ…
ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ : ಸ್ಥಳದಲ್ಲೆ ಇಬ್ಬರು ಸಾವು
ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಂದು ಮುಂಜಾನೆ ಇಬ್ಬರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಚೇನಹಳ್ಳಿ ಡೈರಿ ಸಮೀಪ ನಡೆದ ಭೀಕರ ಅಪಘಾತದಲ್ಲಿ ಬೆಳ್ಳಂಬೆಳಗ್ಗೆಯೇ ಇಬ್ಬರು ಸಾವನ್ನಪ್ಪಿದ್ದಾರೆ. ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ಭದ್ರಾವತಿಯಿಂದ ಶಿವಮೊಗ್ಗದ ಕಡೆಗೆ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಲಾರಿ ಡಿವೈಡರ್ ದಾಟಿ ಭದ್ರಾವತಿ ಕಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ…