ಕ್ರೈಂ ಸುದ್ದಿ:
ಪಾಲೀಶ್ ಮಾಡಿಕೊಡುವ ನೆಪದಲ್ಲಿ ಮಹಿಳೆಯ ಎರಡೂವರೆ ಲಕ್ಷ ಮೌಲ್ಯದ ಮಾಂಗಲ್ಯ ಸರ ಅಪಹರಣ :
ಒಂಟಿ ಮಹಿಳೆಯ ಮನೆಗೆ ಬಂದ ಇಬ್ಬರು ವ್ಯಕ್ತಿಗಳು ಆಭರಣಗಳನ್ನು ಪಾಲಿಶ್ ಮಾಡಿಕೊಡುವ ನೆಪದಲ್ಲಿ ಮಹಿಳೆಯ ಮಾಂಗಲ್ಯ ಸರ ಅಪಹರಿಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ. ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೋಟೆ ಕೊಪ್ಪ ಗ್ರಾಮದ ಸರೋಜಮ್ಮ ಅವರೇ ಮಾಂಗಲ್ಯ ಸರ ಕಳೆದುಕೊಂಡವರು. ಪಾಲಿಶ್ ಮಾಡಿಕೊಡುವ ನೆಪದಲ್ಲಿ ಸರೋಜಮ್ಮ ಅವರ ಮನೆಗೆ ಬಂದ ಇಬ್ಬರು ವ್ಯಕ್ತಿಗಳು ಅವರ ಗಮನ ಬೇರೆಡೆ ಸೆಳೆದು ಕ್ಷಣ ಮಾತ್ರದಲ್ಲಿ ನಲವತ್ತು ಗ್ರಾಂ ತೂಕದ ಮಾಂಗಲ್ಯ ಸರವನ್ನು ಅಪಹರಿಸಿ ಪರಾರಿಯಾಗಿದ್ದಾರೆ.ಮೊದಲು ಬೆಳ್ಳಿಯ ಗೆಜ್ಜೆಯನ್ನು…
ಚಾನೆಲ್ ಗೆ ಹಾರಿದ ವ್ಯಕ್ತಿಯನ್ನು ರಕ್ಷಿಸಲು ಹೋದ ರಿಪ್ಪನ್ಪೇಟೆ ಯುವಕನೊಬ್ಬ ನಾಪತ್ತೆ : ಮುಂದುವರೆದಿರುವ ಶೋಧ ಕಾರ್ಯಾಚರಣೆ
ಚಾನೆಲ್ ಗೆ ಹಾರಿದ ವ್ಯಕ್ತಿಯೊಬ್ಬರನ್ನು ರಕ್ಷಿಸಲು ಹೋಗಿ ರಿಪ್ಪನ್ಪೇಟೆಯ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಸಿದ್ದಾಪುರ ಚಾನೆಲ್ ಬಳಿ ನಡೆದಿದೆ. ರಿಪ್ಪನ್ ಪೇಟೆ ನೆಹರು ನಗರ ನಿವಾಸಿ ಅನೀದ್ (22) ವರ್ಷ ನಾಪತ್ತೆಯಾಗಿರುವ ಯುವಕನಾಗಿದ್ದಾನೆ. ಅನೀದ್ ಲಾರಿಯೊಂದರಲ್ಲಿ ನಿರ್ವಾಹಕನಾಗಿ ಕಾರ್ಯನಿರ್ವಹಿಸುತ್ತಿದ್ದು, ದಾವಣಗೆರೆಯಿಂದ ಲಾರಿಯೊಂದರಲ್ಲಿ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಸಿದ್ದಾಪುರ ರಸ್ತೆ ಬದಿಯ ಚಾನೆಲೊಂದರ ಬಳಿ ಸೇರಿದ ಜನಸ್ತೋಮವನ್ನು ನೋಡಿ ಪ್ರಶ್ನಿಸಿದ್ದಾನೆ. ಆ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಚಾನೆಲ್ ಗೆ ಹಾರಿರುವ ವಿಚಾರ ಗಮನಕ್ಕೆ ಬಂದಿದ್ದು,ತಕ್ಷಣವೇ ಅವರನ್ನು…
ಸಿಡಿಲು ಬಡಿದು ಯುವ ರೈತ ಸಾವು
ಕೃಷಿ ಚಟುವಟಿಕೆಯಲ್ಲಿ ನಿರತನಾಗಿದ್ದ ಯುವ ರೈತನೊಬ್ಬ ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ಇಂಡುವಳ್ಳಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. ಇಂಡುವಳ್ಳಿ ಗ್ರಾಮದ ಗೌತಮ್ ನಾಗರಾಜ (23) ಮೃತ ದುರ್ಧೈವಿ. ಗ್ರಾಮದ ಸರ್ವೆ ನಂ 121/2 ರಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತಾಗಿದ್ದ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಗೌತಮ್ ಮೃತ ಪಟ್ಟಿದ್ದಾರೆ. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಬಜರಂಗದಳ ಕಾರ್ಯಕರ್ತನಿಗೆ ಕೊಲೆ ಬೆದರಿಕೆ : ಮೂವರ ಬಂಧನ
ಬಜರಂಗದಳದ ಕಾರ್ಯಕರ್ತನ ಹತ್ಯೆಗೆ ಸಂಚು ಮಾಡಿ ಮೂವರು ಅನ್ಯ ಕೋಮಿನ ಯುವಕರು ಬಂಧನಕ್ಕೊಳಗಾಗಿದ್ದಾರೆ. ಇಲ್ಲೂ ಸಹ ದೊಡ್ಡಪೇಟೆ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಸಂಚು ಹಾಕಿದ ಮೂವರನ್ನ ಬಂಧಿಸಿ ಹೆಡೆಮುರಿಕಟ್ಟಿದ್ದಾರೆ. ಬಜರಂಗದಳ ಕಾರ್ಯಕರ್ತನನ್ನ ಅನೇಕ ದಿನಗಳಿಂದ ಹಿಂಬಾಲಿಸಿದ ಮೂವರು ಯುವಕರು ಮೊನ್ನೆ ನ್ಯೂ ಮಂಡ್ಲಿಯ ಬಳಿ ಬೈಕ್ ನಲ್ಲಿ ತೆರಳುತ್ತಿದ್ದ ಕಾರ್ಯಕರ್ತನ ಸಹೋದರನನ್ನ ಮೂವರು ಯುವಕರು ಅಡ್ಡಹಾಕಿ ಅವ್ಯಾಚ್ಯ ಶಬ್ದಗಳಿಂದ ಬೈದಿದ್ದಾರೆ. ನಿನ್ನ ಜೊತೆ ಬೈಕ್ ನಲ್ಲಿ ಓಡಾಡುತ್ತಿದ್ದ ಕಾರ್ಯಕರ್ತ ಎಲ್ಲಿ ಹೇಳು ಎಂದು ಮಾರಕಾಸ್ತ್ರಗಳನ್ನು…
ಸಾಗರದಲ್ಲಿ ಬಸ್ ಇಳಿಯುವಾಗ ಬಿದ್ದು ಮತ್ತೊಬ್ಬ ವ್ಯಕ್ತಿ ಸಾವು : ಒಂದೇ ದಿನ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಘಟನೆಯಲ್ಲಿ ಇಬ್ಬರ ಸಾವು
ಬಸ್ ಇಳಿಯಲು ಹೊರಟಿದ್ದ ಪ್ರಯಾಣಿಕರೊಬ್ಬರು ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಸಾಗರ ಪಟ್ಟಣದ ಸಂಜೀವಿನಿ ಆಯುರ್ವೇದಿಕ್ ಆಸ್ಪತ್ರೆಯ ಬಳಿ ಸಂಭವಿಸಿದೆ. ಹೋಟೆಲ್ ಕೆಲಸಕ್ಕೆಂದು ಕಾರ್ಗಲ್ ಗೆ ತೆರಳಿದ್ದ ಮಹಾದೇವ ನಾಯ್ಕ್ ವಾಪಾಸ್ ಸಾಗರಕ್ಕೆ ಕುಮಧ್ವತಿ ಖಾಸಗಿ ಬಸ್ ನಲ್ಲಿ ಬಂದಿದ್ದಾರೆ. ಸಾಗರದ ಅಗಡಿಮಠ ಹತ್ತಿರ ಮನೆ ಮಾಡಿಕೊಂಡಿರುವ ಮಹದೇವ ನಾಯ್ಕ್ ಬಸ್ ಸಾಗರ ಕೆಎಸ್ ಆರ್ ಟಿ ಬಸ್ ನಿಲ್ದಾಣದ ಮುಂದೆ ಬರುತ್ತಿದ್ದಂತೆ ಸೀಟ್ ನಿಂದ ಎದ್ದು ಹಿಂಬದಿ ಡೋರ್ ಬಳಿ ಬಂದು ನಿಂತಿದ್ದಾರೆ. ಸಂಜೀವಿನಿ ಆಯುರ್ವೇದಿಕ್…
ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಪ್ರಯಾಣಿಕ ಬಸ್ ನಿಂದ ಕೆಳಗೆ ಬಿದ್ದು ಸಾವು : ಚಾಲಕನ ಬಂಧನ
ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯದಿಂದ ಪ್ರಯಾಣಿಕರೊಬ್ಬರು ಸಾವನ್ನಪ್ಪಿರುವ ಘಟನೆ ಸೊರಬ ತಾಲೂಕಿನ ಹಿರೇಕಬ್ಬೂರು ಗ್ರಾಮದಲ್ಲಿ ನಡೆದಿದೆ. ಬಸ್ ನಿಂದ ಇಳಿಯುವಾಗ ಬಸ್ ಮುಂದೆ ಚಲಾಯಿಸಿದ ಪರಿಣಾಮ ಪ್ರಯಾಣಿಕ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ. ಏ.19 ರಂದು ರಾತ್ರಿ ಶಿಕಾರಿಪುರದಿಂದ ಕೃಷ್ಣ ಬಸ್ ನಲ್ಲಿ ಪ್ರಯಾಣಿಸಿದ ಫಕೀರಪ್ಪ (44) ಎಂಬುವರು ಹಿರೇಕಬ್ಬೂರು ಗ್ರಾಮದ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಇಳಿಯಲು ಮುಂದಾಗಿದ್ದಾರೆ. ಇದನ್ನ ಗಮನಿಸಿದ ಚಾಲಕ ಬಸ್ ಚಲಾಯಿಸಿದ್ದಾನೆ. ಬಸ್ ಚಲಿಸುತ್ತಿದ್ದಂತೆ ಬ್ಯಾಲೆನ್ಸ್ ಕಳೆದುಕೊಂಡ ಫಕೀರಪ್ಪ ಕೆಳಗೆ ಬಿದ್ದಿದ್ದಾರೆ. ಕೆಳಗೆ ಬಿದ್ದ…
ಹೊಸನಗರ ಪೊಲೀಸ್ ಇನ್ಸ್ ಪೆಕ್ಟರ್ ಮಧುಸೂದನ್ ಸೇರಿದಂತೆ ಜಿಲ್ಲೆಯ ಮೂವರು ಪಿ ಐ ಗಳ ವರ್ಗಾವಣೆ :
ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಮಧುಸೂದನ್ ಸೇರಿದಂತೆ ಜಿಲ್ಲೆಯ ಮೂವರು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿದೆ. ಪಿಐ ಮಧುಸೂಧನ್ ಜಿ.ಕೆ ರವರು ಬೆಂಗಳೂರಿನ ಸದಾಶಿವ ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಜಿಲ್ಲೆಯ ಮೂರು ಪೊಲೀಸ್ ಇನ್ ಸ್ಪೆಕ್ಟರ್ ಗಳ ವರ್ಗಾವಣೆ ಆಗಿದೆ. ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯ ಗುರುರಾಜ್ ಕೆ.ಟಿ, ಹೊಸನಗರ ಪೊಲೀಸ್ ಅಧಿಕಾರಿ ಮಧುಸೂಧನ್ ಮತ್ತು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ಚೈತನ್ಯ ಸಿ.ಜೆ. ವರ್ಗವಣೆಗೊಂಡಿರುವ ಪಿಐಗಳಾಗಿದ್ದಾರೆ ಪಿಐ ಗುರುರಾಜ್ ಕೆ.ಟಿ ಕಡೂರು…
ಹೊಸನಗರ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ :
ಹೊಸನಗರ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 31 ಮಂದಿ ಗಾಯಗೊಂಡಿರುವ ಘಟನೆ ಹೊಸನಗರ ತಾಲೂಕಿನ ಕರಕೆ ಹಕ್ಲು ಗ್ರಾಮದ ಬಳಿ ನಡೆದಿದೆ. ಇಂದು ಬೆಳಗಿನ ಜಾವ 5 ಗಂಟೆಗೆ ಬೆಂಗಳೂರಿನಿಂದ ಭಟ್ಕಳಕ್ಕೆ ಹೊರಟಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ. ಬಸ್ ಬೆಂಗಳೂರಿನಿಂದ ತೀರ್ಥಹಳ್ಳಿ ಮೂಲಕ ಭಟ್ಕಳಕ್ಕೆ ತೆರಳುತ್ತಿತ್ತು. ಬೆಳಗಿನ ಜಾವ ನಿದ್ದೆಯ ಮಂಪರಿನಲ್ಲಿ ಬಸ್ ಚಾಲಕ ನಿಯಂತ್ರಣ ತಪ್ಪಿ ಬಸ್ ಪಲ್ಟಿ ಹೊಡೆದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹೊಸನಗರ ಹಾಗೂ ತೀರ್ಥಹಳ್ಳಿ ಆಸ್ಪತ್ರೆಗೆ ರವಾನಿಸಲಾಯಿತು. ಪ್ರಯಾಣಿಕರಿಗೆ…
ರಿಪ್ಪನ್ ಪೇಟೆ : ಶುಂಠಿ ವ್ಯಾಪಾರದಲ್ಲಿ ನಷ್ಟ , ವಿಷ ಸೇವಿಸಿ ಕೃಷಿಕ ಆತ್ಮಹತ್ಯೆ :
ರಿಪ್ಪನ್ ಪೇಟೆ:ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವಾಪುರ ಗ್ರಾಮದ ವಸಂತ (34) ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಕಳೆದ ಐದು ವರ್ಷದಿಂದ ಜಾಗ ಬಾಡಿಗೆ ಪಡೆದು ಶುಂಠಿ ಬೆಳೆ ಹಾಕಿದ್ದು, ಸತತ ಮೂರು ವರ್ಷಗಳಿಂದ ಶುಂಠಿ ಧಾರಣೆ ಕುಸಿತ ಕಂಡು ನಷ್ಟ ಅನುಭವಿಸಿ ದ ಈತ ಸಂಘ ಸಂಸ್ಥೆ ಹಾಗೂ ಇತರೆ ಕೈಗಡ ಸೇರಿದಂತೆ ಸುಮಾರು 10 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದು ಸಾಲಗಾರರ ಕಾಟಕ್ಕೆ ಹೆದರಿ ಈತ ಚಿಕ್ಕ ಜೇನಿ ಗ್ರಾಮ…
ಮಕ್ಕಳ ಅಶ್ಲೀಲ ವೀಡಿಯೋ ಅಂತರ್ಜಾಲದಲ್ಲಿ ಅಪ್ ಲೋಡ್ ಮಾಡಿದ್ದ ಯುವಕನಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್:
ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ ಆರೋಪಿಗೆ ಶಿವಮೊಗ್ಗ ನ್ಯಾಯಾಲಯ ಕಠಿಣ ಜೈಲು ಶಿಕ್ಷೆ ನೀಡಿದೆ. ಶಿವಮೊಗ್ಗ ತಾಲೂಕಿನ ದಮ್ಮಳ್ಳಿ ಗ್ರಾಮದ ರಘು (25) ಶಿಕ್ಷೆಗೆ ಒಳಗಾದವನು. ಈತ 2020ರ ಮೇ 6ರಂದು ಸಾಮಾಜಿಕ ಜಾಲತಾಣದಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ಅಪ್ ಲೋಡ್ ಮಾಡಿದ್ದ. ಈ ಸಂಬಂಧ ಸಿಐಡಿ ಘಟಕದ ಸೈಬರ್ ಟಿಪ್ ಲೈನ್ ಮಾಹಿತಿ ನೀಡಿತ್ತು. ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಸಿಇಎನ್ ಠಾಣೆ ಇನ್ಸ್ ಪೆಕ್ಟರ್…