Headlines

ಶಿವಮೊಗ್ಗ : ಹಬ್ಬದ ದಿನ ದರೋಡೆ ಮಾಡಿದ್ದ ಆರೋಪಿಗಳನ್ನು ಬಂಧಿಸಿ ಹೆಡೆಮುರಿ ಕಟ್ಟಿದ ಪೊಲೀಸರು :

  ಶಿವಮೊಗ್ಗ : ಹಬ್ಬದ ದಿನದಂದು ಮದ್ಯರಾತ್ರಿಯಿಂದ ಬೆಳಗ್ಗೆ ವರೆಗೆ ಶಿವಮೊಗ್ಗ ಮತ್ತು ಭದ್ರಾವತಿ ನಗರದಲ್ಲಿ ಜನರನ್ನ ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನ ಕೋಟೆ ಪೊಲೀಸರು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ. 02-11-2021 ರಂದು 03 ಜನ ಆರೋಪಿಗಳು ದಾವಣಗೆರೆ ಜಿಲ್ಲೆಯ ಸವಳಂಗದಲ್ಲಿ  ಬಜಾಜ್ ಪಲ್ಸರ್ ಬೈಕ್ ಅನ್ನು ಕಳ್ಳತನ  ಮಾಡಿ, ಸದರಿ ಬೈಕ್ ಅನ್ನು ಉಪಯೋಗಿಸಿ 04-11-2021  ರಂದು ಬೆಳಗಿನ ಜಾವ ಶಿವಮೊಗ್ಗ ನಗರದ 04 ಕಡೆಗಳಲ್ಲಿ ಹಾಗೂ ಭದ್ರಾವತಿ ನಗರದ 03 ಕಡೆಗಳಲ್ಲಿ ವಿಳಾಸ ಕೇಳುವ…

Read More

ಸ್ಕೂಟಿ ಹಾಗೂ ಬಸ್ ನಡುವೆ ಭೀಕರ ಅಪಘಾತ : ಇಬ್ಬರ ಸಾವು

  ಶಿವಮೊಗ್ಗ : ಮಾಚೇನಹಳ್ಳಿಯ ಶಿಮುಲ್ ಡೈರಿ ಎದುರುಗಡೆ ಕೆಎಸ್ ಆರ್ ಟಿ ಸಿ ಬಸ್  ಸ್ಕೂಟಿಗೆ  ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವು ಕಂಡಿರುವ ಘಟನೆ ಇಂದು ನಡೆದಿದೆ. ದ್ವಿಚಕ್ರ ವಾಹನ ಭದ್ರಾವತಿ ಕಡೆಯಿಂದ ಡೈರಿ ಹಿಂಭಾಗದ ಜಯಂತಿ ಗ್ರಾಮಕ್ಕೆ ತಿರುಗುವ ವೇಳೆ ದ್ವಿಚಕ್ರ ವಾಹನಕ್ಕೆ ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗುವ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ. ದ್ವಿಚಕ್ರ ವಾಹನ ಸವಾರಾದ ಮಂಜುನಾಥ್ (25) ಹಾಗೂ ಆಂಥೋಣಿ ಎಂಬುವರು ಸ್ಥಳದಲ್ಲಿಯೇ…

Read More

ಗಾಂಜಾ ಸೇವನೆ ಮಾಡಿದ್ದ ಅಪ್ರಾಪ್ತ ಸೇರಿ ಇಬ್ಬರ ಬಂಧನ :

ಶಿವಮೊಗ್ಗ : ಗಾಂಜಾ ಸೇವನೆ ಮಾಡಿದ್ದ ಅಪ್ರಾಪ್ತ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಪಾರ್ಕ್ ಬಳಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ಆರೋಗ್ಯ ತಪಾಸಣೆ ಮಾಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ಬೆಳಕಿಗೆ ಬಂದಿದೆ. ಆರ್ ಎಂಎಲ್ ನಗರ ಪಾರ್ಕ್ ಬಳಿ ಇಬ್ಬರು ಯುವಕರು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದರು. ಗಸ್ತು ತಿರುಗುತ್ತಿದ್ದ ಪೊಲೀಸರು ಇವರ ವಿಚಾರಣೆ ನಡೆಸಿದಾಗ ಗಾಂಜಾ ಸೇವನೆ ಬಗ್ಗೆ ಅನುಮಾನ ಮೂಡಿದೆ. ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ಬೆಳಕಿಗೆ ಬಂದಿದೆ….

Read More

ಶಿವಮೊಗ್ಗ : ಪತ್ನಿಗೆ ವೀಡಿಯೋ ಕರೆ ಮಾಡಿ ನೇಣು ಬಿಗಿದುಕೊಂಡ ಜೈಲು ವಾರ್ಡನ್ : ಪತಿಯ ಸಾವಿನ ದೃಶ್ಯ ಕಂಡು ಕಂಗಲಾದ ಪತ್ನಿ

ಶಿವಮೊಗ್ಗ : ಇಲ್ಲಿನ ಜಿಲ್ಲಾ ಕಾರಾಗೃಹದ ಸಿಬ್ಬಂದಿಯೊಬ್ಬ ತಾನು ಸಾಯುವ ದೃಶ್ಯ ತನ್ನ ಮನೆಯವರು ನೋಡಬೇಕೆಂದು ವಿಡಿಯೋ ಕಾಲ್ ಮಾಡಿ, ಅವರ ಸಮ್ಮುಖದಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಶಿವಮೊಗ್ಗ ಸೆಂಟ್ರಲ್ ಜೈಲಿನಲ್ಲಿ ನಡೆದಿದೆ. ಕೇಂದ್ರ ಕಾರಾಗೃಹ ವಸತಿ ಗೃಹದಲ್ಲಿ ಅಸ್ಪಾಕ್ ತಗಡಿ (24) ಪತ್ನಿ ಎದುರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಒಂದು ವರ್ಷದ ಹಿಂದಷ್ಟೆ ಮದುವೆಯಾಗಿದ್ದ ಅಸ್ಪಾಕ್​ಗೆ ಒಂದು ಮಗು ಕೂಡ ಇದೆ….

Read More

ಶಿವಮೊಗ್ಗ : ಪಾದಚಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಶಿವಮೊಗ್ಗ : ಕೆಲಸ ಮುಗಿಸಿ ಮನೆಗೆ ವಾಪಾಸ್ ತೆರಳುತಿದ್ದ ಪಾದಚಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾಳೆ. ಗಾರೆ ಕೆಲಸ ಮುಗಿಸಿಕೊಂಡು ಶ್ರೀರಾಂಪುರದಲ್ಲಿರುವ ಮನೆಗೆ ಹಿಂದಿರುಗುತ್ತಿದ್ದ 40 ವರ್ಷದ ಮಹಿಳೆಗೆ ಹಿಂಬದಿಯಿಂದ ಬಂದ  ಕೆಎ-15-ಎನ್-7444 ಕಾರು ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಹಾಗೂ ಕುತ್ತಿಗೆಗೆ ಪೆಟ್ಟು ಬಿದ್ದ ಕಾರಣ ಆಕೆಯನ್ನ ತಕ್ಷಣ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಯಿತು. ತಪಾಸಣೆ ನಡೆಸಿದ ವೈದ್ಯರು ಮಹಿಳೆ ಸಾವನ್ನಪ್ಪಿರುವುದಾಗಿ ಹೇಳಿದ್ದಾರೆ. ಕಾರು ಅತಿ ವೇಗ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು…

Read More

ಸಾಗರ : ಪೊಲೀಸರ ಮಿಂಚಿನ ಕಾರ್ಯಾಚರಣೆ : ಅಕ್ರಮ ಗೋ ಕಳ್ಳರ ಬಂಧನ

ಸಾಗರ: ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಅಕ್ರಮವಾಗಿ ಗೋವು ಕಳ್ಳತನ ಮಾಡುತ್ತಿದ್ದ ಗೋ ಕಳ್ಳರನ್ನು ಸಾಗರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಐದು ಆರೋಪಿ ಗಳನ್ನು ಹಾಗೂ ದನಕಳ್ಳತನಕ್ಕೆ ಬಳಸುತ್ತಿದ್ದ ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರನ್ನು ವಶಕ್ಕೆ ಪಡೆದಿದ್ದಾರೆ. ರಾತ್ರಿ ವೇಳೆ ಗೋವುಗಳನ್ನು ವಾಹನದಲ್ಲಿ ತುಂಬಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗೋ ಕಳ್ಳತನ ಮಾಡುವ  ಐದು ಜನರ ಗುಂಪನ್ನು ವಾಹನ ಸಮೇತ ಶನಿವಾರ  ಸಾಗರ  ಪೇಟೆ ಮತ್ತು ಗ್ರಾಮಾಂತರ ಠಾಣೆಯ ಪೊಲೀಸರು ಜಂಟಿಯಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ…

Read More

ಶಿವಮೊಗ್ಗ : ನಡುರಾತ್ರಿ ಮೂವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹತ್ಯೆ

ಶಿವಮೊಗ್ಗ : ನಗರದಲ್ಲಿ ನಡುರಾತ್ರಿ ವ್ಯಕ್ತಿಯೊಬ್ಬನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ.ಜೈನುದ್ದೀನ್ (23) ಎಂಬ ರೌಡಿಶೀಟರ್ ನನ್ನು ದುಷ್ಕರ್ಮಿಗಳು ನಿನ್ನೆ ರಾತ್ರಿ 12ರ ಸಮಯದಲ್ಲಿ ನಗರದ ವಾದಿ-ಎ ಹುದಾ ಬಡಾವಣೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಇತ್ತೀಚೆಗಷ್ಟೇ ವಾದಿ-ಎ ಹುದಾ ಬಡಾವಣೆಗೆ ಜೈನುದ್ದೀನ್ ಸ್ಥಳಾಂತರಗೊಂಡಿದ್ದ. ಜೈನುದ್ದೀನ್ ಮನೆಯ ಬಳಿ ನಿಂತು ಮಾತನಾಡುತ್ತಿದ್ದಾಗ ಮೂರು ಜನ ದುಷ್ಕರ್ಮಿಗಳು ಏಕಾಏಕಿ ಬಂದು ಲಾಂಗ್, ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ದಾಳಿಯಿಂದಾಗಿ ಜೈನುದ್ದಿನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಅಥವಾ ಯಾವ ಕಾರಣಕ್ಕಾಗಿ ಈ…

Read More

ತೀರ್ಥಹಳ್ಳಿಯ ಕಟ್ಟೆಹಕ್ಲು ಬಳಿ ವಾಹನ ಸವಾರರ ಮೇಲೆ ಮಚ್ಚಿನಿಂದ ದಾಳಿ ನೆಡೆಸಿದ್ದ ಆರೋಪಿ ಅಂದರ್

ತೀರ್ಥಹಳ್ಳಿ : ತಾಲೂಕಿನ ಕಟ್ಟೆಹಕ್ಕಲಿನ ಪ್ರಾರ್ಥಮಿಕ ಶಾಲೆಯ ಬಳಿ ವಾಹನ ಸವಾರರ ಮೇಲೆ ಮಚ್ಚಿನಿಂದ ದಾಳಿ ನಡೆಸುತ್ತಿದ್ದ ವ್ಯಕ್ತಿಯನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ.  ಅ. 26 ರಾತ್ರಿ ಶಾಲೆಯ ಸಮೀಪ ಕಾರಿನ ಮತ್ತು ಬೈಕಿನ ಮೇಲೆ ಕಟ್ಟೆಹಕ್ಲು ನಿವಾಸಿ ಸಂದೀಪ್ ಮಚ್ಚಿನಿಂದ ದಾಳಿ ನಡೆಸಿದ್ದಾನೆ.   ಬೆಂಗಳೂರಿನ ನಿವಾಸಿ  ಮಹದೇವ ಪ್ರಸಾದ್ ಅವರು ಪತ್ನಿ, ಪತ್ನಿಯ ತಮ್ಮನ ಹೆಂಡತಿ, ದೊಡ್ಡಪ್ಪನ ಮಗ ಹಾಗೂ ಅವರ ಪತ್ನಿ ಯೊಂದಿಗೆ ಕಾರಿನಲ್ಲಿ ತೀರ್ಥಹಳ್ಳಿಗೆ ತಲುಪಿ ಕಟ್ಟೆಹಕ್ಲು ಮೂಲಕ ಹೆದ್ದೂರು ಹೊರಬೈಲಿಗೆ ಹೋಗುವಾಗ ಕಟ್ಟೆಹಕ್ಲುವಿನ…

Read More

ಗೃಹ ಸಚಿವರ ಜಿಲ್ಲೆಯಲ್ಲಿ ಮಿತಿಮೀರಿದ ರೌಡಿಗಳ ಹಾವಳಿ! ಜೀವ ಬೆದರಿಕೆ ಹಾಕಿ ಹಣಕ್ಕೆ ಡಿಮ್ಯಾಂಡ್

ಶಿವಮೊಗ್ಗ: ಗೃಹ ಸಚಿವ ಆರಗ ಜ್ಞಾನೇಂದ್ರರವರ ಜಿಲ್ಲೆಯಲ್ಲೇ ರೌಡಿಗಳ ಹಾವಳಿ ಮಿತಿಮೀರಿದೆ. ರೌಡಿಗಳು ಉದ್ಯಮಿಗಳಿಗೆ ಜೀವ ಬೆದರಿಕೆ ಹಾಕಿ ಹಣ ನೀಡುವಂತೆ ಡಿಮ್ಯಾಂಡ್ ಮಾಡುತ್ತಿದ್ದಾರೆ. ಶಿವಮೊಗ್ಗದ ಕುಖ್ಯಾತ ರೌಡಿ ಬಚ್ಚಾ ಅಲಿಯಾಸ್ ಜಮೀರ್ ಉದ್ಯಮಿಗಳಿಗೆ ಜೀವ ಬೆದರಿಕೆ ಹಾಕಿ ಹಣ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾನೆ. ಹಣ ನೀಡುವಂತೆ ಹೆದರಿಸಲು ಜಮೀರ್ ಸಹಚರರು ಉದ್ಯಮಿ ಮನೆ ಮೇಲೆ ದಾಳಿ ನಡೆಸಿದ್ದು, ಈ ಪ್ರಕರಣ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ. ಜಮೀರ್ ಶಿವಮೊಗ್ಗದ ಶಾದ್ ನಗರದ ಉದ್ಯಮಿಯಾಗಿರುವ ಅನ್ಸರ್ ಎಂಬುವವರಿಗೆ…

Read More

ಜೋಗದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ.

ಸಾಗರ : ತಾಲ್ಲೂಕಿನ ಜೋಗದಲ್ಲಿ ಮನೆಯ ಸಮೀಪ ಇರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ. ಜೋಗದ ನಿವಾಸಿ ಗಂಗಾಧರ್ (38) ಆತ್ಮಹತ್ಯೆ ಮಾಡಿಕೊಂಡವರು.ಗಂಗಾಧರ್ ಮದ್ಯವ್ಯಸನಿಯಾಗಿದ್ದು,ನಿನ್ನೆ ರಾತ್ರಿ ಸಹ ವಿಪರೀತ ಕುಡಿದು ಬಂದು ಪತ್ನಿ ಮಕ್ಕಳ ಮೇಲೆ ಹಲ್ಲೆ ಮಾಡಿದ್ದಾನೆ. ತದ ನಂತರ ಮನೆಯ ಹೊರಗೆ ಇರುವ ಮರಕ್ಕೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪಿಎಸ್‌ಐ ನಿರ್ಮಲಾ ಭೇಟಿ ನೀಡಿ ಪರಿಶೀಲಿಸಿದರು.   

Read More