Headlines

HOSANAGARA | ಔಷಧಿ ಸಿಂಪಡಿಸುವಾಗ ಅಡಿಕೆ ಮರದಿಂದ ಬಿದ್ದು  ಸಾವು

HOSANAGARA | ಔಷಧಿ ಸಿಂಪಡಿಸುವಾಗ ಅಡಿಕೆ ಮರದಿಂದ ಬಿದ್ದು  ಸಾವು ಹೊಸನಗರ: ತಾಲೂಕಿನ  ಕಿಳಂದೂರು ಗ್ರಾಮದ ನೂಲಿ- ಗೇರಿಯ ಅಡಿಕೆ ತೋಟದಲ್ಲಿ ಔಷಧ ಸಿಂಪಡಣೆ ವೇಳೆ ಕೃಷಿ ಕಾರ್ಮಿಕ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತ್ತಿಮನೆ ನಿವಾಸಿ ಸಾದಿಕ್ (42)ಮೃತಪಟ್ಟ ಕಾರ್ಮಿಕ. ಅ. 18ರಂದು ಸಾದಿಕ್ ಮತ್ತು ಮಂಜುನಾಥ ಎಂಬುವರು ನೂಲಿಗೇರಿ ನಿವಾಸಿ ಅಬ್ಬಾಸ್ ಅವರ ಅಡಿಕೆ ತೋಟದಲ್ಲಿ ಔಷಧಿ ಸಿಂಪಡಿಸುತ್ತಿದ್ದರು. ಆಗ ಮರದಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದರು….

Read More

HOSANAGARA | ಪಟಗುಪ್ಪ ಸೇತುವೆ ಬಳಿ ವ್ಯಕ್ತಿಯ ಶವ ಪತ್ತೆ

HOSANAGARA | ಪಟಗುಪ್ಪ ಸೇತುವೆ ಬಳಿ ವ್ಯಕ್ತಿಯ ಶವ ಪತ್ತೆ ಹೊಸನಗರ ತಾಲ್ಲೂಕಿನ ಗಡಿ ಭಾಗವಾದ ಸಾಗರ ತಾಲೂಕಿಗೆ ಹೊಂದಿಕೊಂಡಿರುವ ಪಟಗುಪ್ಪ ಸೇತುವೆ ಬಳಿ ಹಿನ್ನೀರಿನಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತರನ್ನು ಶಿಕಾರಿಪುರ ಮೂಲದ ಶಿವರಾಜ್ (29) ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಶಿಕಾರಿಪುರ ತಾಲ್ಲೂಕಿನ ಬಿಳಕಿ ಗ್ರಾಮದವರು ಎಂದು ತಿಳಿದುಬಂದಿದ್ದು , ಶಿವರಾಜ್‌ಗೆ ಮದ್ಯಪಾನ ವ್ಯಸನವಿದ್ದು, ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ. ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಾವಿಗೆ ಹಾರಿ ಮಾಜಿ ಯೋಧ ಆತ್ಮ*ಹತ್ಯೆ

ಬಾವಿಗೆ ಹಾರಿ ಮಾಜಿ ಯೋಧ ಆತ್ಮಹತ್ಯೆ ಕುಂಸಿ: ಮಾಜಿ ಸೈನಿಕರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕುಂಸಿ ಸಮೀಪದ ಚಿನ್ಮನೆ ಗ್ರಾಮದ ಮಾಜಿ ಯೋಧ ಡಿ.ಆರ್.ಸುರೇಶಪ್ಪ ದೊಡ್ಮನೆ (೬೬) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ಬೆಳಗಿನ ಜಾವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಊರಿನಲ್ಲಿ ವ್ಯವಸಾಯದ ಜೊತೆಗೆ ಅಂಗಡಿ ನಡೆಸುತ್ತಿದ್ದರು. ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದು, ಇದರಿಂದ ಬೇಸತ್ತು ತನ್ನ ಮನೆ ಪಕ್ಕದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಕುಂಸಿ ಠಾಣೆಯಲ್ಲಿ ಪ್ರಕರಣ…

Read More

ANANDAPURA | ಸಾಲಬಾಧೆಗೆ ಬೇಸತ್ತು ಯುವಕ ನೇ*ಣಿಗೆ ಶರಣು

ANANDAPURA | ಸಾಲಬಾಧೆಗೆ ಬೇಸತ್ತು ಯುವಕ ನೇ*ಣಿಗೆ ಶರಣು ಸಾಲಬಾಧೆ ಮತ್ತು ಬೆಳೆ ನಷ್ಟದಿಂದ ಮನನೊಂದಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಮಂಜುನಾಥ್ ( 36 ) ಎಂದು ಗುರುತಿಸಲಾಗಿದೆ. ಮಂಜುನಾಥ್ ಬ್ಯಾಂಕ್ ಸೇರಿದಂತೆ ವಿವಿಧ ಮೂಲಗಳಿಂದ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಇದೇ ಸಮಯದಲ್ಲಿ, ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಅವರ ಮೆಕ್ಕೆಜೋಳದ ಬೆಳೆ ಸಂಪೂರ್ಣವಾಗಿ ನಾಶವಾಗಿತ್ತು. ಕೃಷಿ ನಷ್ಟದಿಂದ ಆರ್ಥಿಕ…

Read More

ತೀರ್ಥಹಳ್ಳಿಯಲ್ಲಿ ಲಾರಿ ಮಾಲೀಕ ನೇಣು ಬಿಗಿದುಕೊಂಡು ಸಾವು!

ತೀರ್ಥಹಳ್ಳಿಯಲ್ಲಿ ಮತ್ತೊಬ್ಬ ಲಾರಿ ಮಾಲೀಕ ನೇ*ಣಿಗೆ ಶರಣು! ತೀರ್ಥಹಳ್ಳಿ : ತಾಲೂಕಿನ ಮೇಗರವಳ್ಳಿಯ ಲಾರಿ ಮಾಲೀಕರೊಬ್ಬರು ಮಂಗಳವಾರ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದು ಬೆಳಕಿಗೆ ಬಂದಿದೆ. ಲಾರಿ ಮಾಲೀಕರದ ಮೇಗರವಳ್ಳಿಯ ಮಂಜುನಾಥ್ (42 ) ಸಾಲಬಾದೆಯಿಂದ ಮನನೊಂದು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಇವರು ಅವಿವಾಹಿತರಾಗಿದ್ದು ಎನ್ನಲಾಗಿದ್ದು ಸಾವಿಗೆ ನಿಖರವಾದ ಮಾಹಿತಿ ಪೊಲೀಸ್ ಮಹಜರಿನ ನಂತರ ತಿಳಿದು ಬರ ಬೇಕಿದೆ. ಇತ್ತೀಚಿಗೆ ಮೇಲಿನಕುರುವಳ್ಳಿಯಲ್ಲೂ ಇದೆ ರೀತಿ ಪ್ರಕರಣ ನಡೆದಿತ್ತು. ಒಂದೇ ತಿಂಗಳಲ್ಲಿ ಇದು ಎರಡನೇ ಪ್ರಕರಣ…

Read More

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಇಬ್ಬರು ಮೆಡಿಕಲ್‌ ವಿದ್ಯಾರ್ಥಿಗಳ ದುರ್ಮರಣ

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಇಬ್ಬರು ಮೆಡಿಕಲ್‌ ವಿದ್ಯಾರ್ಥಿಗಳ ದುರ್ಮರಣ ಶಿವಮೊಗ್ಗ: ನಗರದ ಸರ್ಕ್ಯೂಟ್‌ ಹೌಸ್‌ ಸರ್ಕಲ್‌ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಎಂಬಿಬಿಎಸ್‌ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ ಹಾಗೂ ನಂದಿನಿ ಹಾಲಿನ ವಾಹನ ಪರಸ್ಪರ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ನಡೆದಿದೆ. ಮೃತರನ್ನು ಮೂರನೇ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿಗಳಾದ ಆದಿತ್ಯ ಮತ್ತು ಸಂದೀಪ್ ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಇಬ್ಬರೂ ತೀವ್ರವಾಗಿ ರಸ್ತೆ ಮೇಲೆ ಬಿದ್ದು…

Read More

RIPPONPETE | ಬಾವಿಗೆ ಬಿದ್ದು ಯುವಕ ಸಾವು – ಕಾಲು ಜಾರಿ ಬಿದ್ದಿರುವ ಶಂಕೆ

RIPPONPETE | ಬಾವಿಗೆ ಬಿದ್ದು ಯುವಕ ಸಾವು – ಕಾಲು ಜಾರಿ ಬಿದ್ದಿರುವ ಶಂಕೆ ರಿಪ್ಪನ್ ಪೇಟೆ : ಇಲ್ಲಿನ ನೆವಟೂರು ಗ್ರಾಮದ ಯುವಕನೊಬ್ಬ ಬಾವಿಗೆ ಬಿದ್ದು ಮೃತಪಟ್ಟಿದ್ದು ಆತ್ಮಹತ್ಯೆಯೋ ಅಥವಾ ಕಾಲುಜಾರಿ ಬಿದ್ದಿದ್ದಾನೋ ಎಂಬ ಶಂಕೆ ವ್ಯಕ್ತವಾಗಿದೆ. ನೆವಟೂರು ಗ್ರಾಮದ ಆನಂದ್ (30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಬೆಳಿಗ್ಗೆ ಮೃತ ಯುವಕನ ಮನೆ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ , ನೆವಟೂರು ಗ್ರಾಮದ ಭರ್ಮಪ್ಪ ಎಂಬುವವರ ಪುತ್ರನಾದ ಆನಂದ್ ಇಂದು…

Read More

ಹಣಗೆರೆ ಬಳಿ ಭಯಾನಕ ರಸ್ತೆ ಅಪಘಾತ – ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಹಣಗೆರೆ ಬಳಿ ಭಯಾನಕ ರಸ್ತೆ ಅಪಘಾತ – ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು ಶಿವಮೊಗ್ಗ, ಹಣಗೆರೆಕಟ್ಟೆ ರಸ್ತೆಯ ಕುಣಜೆ ಗ್ರಾಮದ ಬಳಿ ನಿನ್ನೆ ಭಯಾನಕ ರಸ್ತೆ ಅಪಘಾತ ಸಂಭವಿಸಿದೆ. ಆದರೆ ಅದೃಷ್ಟವಶಾತ್ ಈ ದುರ್ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯವಾಗದೇ ಪಾರಾಗಿದ್ದಾರೆ. ಶಿವಮೊಗ್ಗದಿಂದ ಹಣಗೆರೆಕಟ್ಟೆ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಒಂದಕ್ಕೆ ಎದುರಿನಿಂದ ಬಂದ ಸ್ವಿಫ್ಟ್ ಕಾರೊಂದು ಹಿಂಬದಿ ಭಾಗದಲ್ಲಿ ಡಿಕ್ಕಿ ಹೊಡೆದ ಪರಿಣಾಮ, ಬಸ್‌ನ ಹಿಂಬದಿ ನಾಲ್ಕು ಟಯರ್‌ಗಳು ಸಂಪೂರ್ಣವಾಗಿ ಕಿತ್ತು ಹೋಗಿವೆ. ಕಾರಿನ ಮುಂಭಾಗ ತೀವ್ರವಾಗಿ ಜಕಂಗೊಂಡಿದ್ದರೂ,…

Read More

ಭೀಕರ ಅಪಘಾತ ; ಓರ್ವ ಸಾವು, 8 ಮಂದಿಗೆ ಗಂಭೀರ ಗಾಯ !

ಭೀಕರ ಅಪಘಾತ ; ಓರ್ವ ಸಾವು, 8 ಮಂದಿಗೆ ಗಂಭೀರ ಗಾಯ ! ಓಮ್ನಿ ಕಾರು ಮತ್ತು ಪಿಕಪ್ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ 08 ಮಂದಿ ಗಂಭೀರ ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ತಾಳಗುಪ್ಪ ಸಮೀಪದ ಬಲೆಗಾರು ತಿರುವಿನಲ್ಲಿ ಇಂದು ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್‌.ಆರ್‌.ಪುರ ತಾಲ್ಲೂಕಿನ ಶೆಟ್ಟಿಕೊಪ್ಪ ಗ್ರಾಮದ 09 ಜನರು ಜೋಗ ನೋಡಲು ಹೋಗುತ್ತಿದ್ದಾಗ ತಾಳಗುಪ್ಪದಿಂದ ಸಾಗರಕ್ಕೆ ಬರುತ್ತಿದ್ದ ಪಿಕಪ್ ವಾಹನ ನಡುವೆ ಮುಖಾಮುಖಿ…

Read More

RIPPONPETE | ಶಾಲಾ ಬಸ್ ಪಲ್ಟಿ : ತಪ್ಪಿದ ಭಾರಿ ಅನಾಹುತ

RIPPONPETE | ಶಾಲಾ ಬಸ್ ಪಲ್ಟಿ : ತಪ್ಪಿದ ಭಾರಿ ಅನಾಹುತ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕಾನುಗೋಡು ಗ್ರಾಮದ ಬಳಿ ಇಂದು ಬೆಳಿಗ್ಗೆ ನರ್ಸರಿ ಮಕ್ಕಳನ್ನು ಕರೆದೊಯ್ಯುತಿದ್ದ ಶಾಲಾ ಬಸ್ ಪಲ್ಟಿಯಾದ ಘಟನೆ ನಡೆದಿದೆ. ತಮ್ಮಡಿಕೊಪ್ಪ – ಮೂಗುಡ್ತಿ ಮಾರ್ಗದಲ್ಲಿ ಚಲಿಸುತ್ತಿದ್ದ ಶಾಲಾ ಬಸ್‌ ಕಾನುಗೋಡು ಬಳಿಯಲ್ಲಿ ಪಲ್ಟಿಯಾಗಿದೆ. ಗರ್ತಿಕೆರೆಯ ಖಾಸಗಿ ಶಾಲೆಯ ನರ್ಸರಿ ವಿಭಾಗದ 12 ಮಂದಿ ಮಕ್ಕಳು ಇದ್ದರು ಎನ್ನಲಾಗಿದೆ. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ. ಸ್ಥಳೀಯರ ಪ್ರಕಾರ ಬಸ್ ಚಾಲಕನ…

Read More