Headlines

ಅಪಘಾತವಾಗಿ ಬಿದ್ದವರ ಮೇಲೆ ಟ್ರ್ಯಾಕ್ಟರ್ ಹರಿದು ಯುವಕರಿಬ್ಬರು ಸಾವು

ಅಪಘಾತವಾಗಿ ಬಿದ್ದವರ ಮೇಲೆ ಟ್ರ್ಯಾಕ್ಟರ್ ಹರಿದು ಯುವಕರಿಬ್ಬರು ಸಾವು ಶಿವಮೊಗ್ಗ:  ಆಯನೂರು ಮತ್ತು ಹಾರನಹಳ್ಳಿ ಮಾರ್ಗ ಮಧ್ಯೆ ಶುಕ್ರವಾರ ಸಂಜೆ ಟ್ರ್ಯಾಕ್ಟರ್ ಹರಿದು ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಲ್ಲಾಪುರ ಗ್ರಾಮದ ಆಕೀಬ್ (25) ಮತ್ತು ಚಾಂದ್ ಪೀರ್ (18) ಮೃತಪಟ್ಟವರು. ಘಟನೆಯಲ್ಲಿ ಎರಡು ಬೈಕುಗಳು ಮುಖಾಮುಖಿ ಡಿಕ್ಕಿ ಹೊಡೆದಿದ್ದರಿಂದ, ಬೈಕ್ ಚಾಲಕ ಮತ್ತು ಹಿಂಬದಿ ಸವಾರರಿಬ್ಬರೂ ರಸ್ತೆಗೆ ಬಿದ್ದಿದ್ದರು. ಇದೇ ಸಂದರ್ಭದಲ್ಲಿ  ಹಿಂದೆ ಬರುತ್ತಿದ್ದ ಟ್ರ್ಯಾಕ್ಟರ್ ಕೆಳಕ್ಕೆ ಬಿದ್ದವರ ಮೇಲೆ ಹರಿದಿದೆ. ಪರಿಣಾಮವಾಗಿ ಇಬ್ಬರೂ ಸ್ಥಳದಲ್ಲೇ…

Read More

ಮದುವೆಯಾದ ಒಂದೇ ದಿನಕ್ಕೆ ಮದುಮಗ ಹೃದಯಾಘಾತದಿಂದ ಸಾವು

Groom dies of heart attack just one day after wedding ಮದುವೆಯಾದ ಒಂದೇ ದಿನಕ್ಕೆ ಮದುಮಗ ಹೃದಯಾಘಾತದಿಂದ ಸಾವು Groom dies of heart attack just one day after wedding ಶಿವಮೊಗ್ಗ: ಮದುವೆಯಾಗಿ ಒಂದೇ ದಿನದಲ್ಲಿ ವರ ಹೃದಯಾಘಾತದಿಂದ ಸಾವನ್ನಪ್ಪಿರುವ ದುರ್ಘಟನೆ ಭದ್ರಾವತಿ ತಾಲೂಕಿನ ಹನುಮಂತಾಪುರದಲ್ಲಿ ನಡೆದಿದೆ. ನವವಿವಾಹಿತ ರಮೇಶ್‌ (28) ಅವರು ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹರಪನಹಳ್ಳಿಯ ಬಂಡ್ರಿಯ ಮಧುವನ್ನು ರಮೇಶ್ ಭಾನುವಾರ ಶಿವಮೊಗ್ಗದ ಬಿ.ಹೆಚ್ ರಸ್ತೆ ಗಂಗಾಪ್ರಿಯಾ ಕಲ್ಯಾಣ…

Read More

ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಪತಿಗೆ 10 ವರ್ಷ ಜೈಲು ಶಿಕ್ಷೆ

ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಪತಿಗೆ 10 ವರ್ಷ ಜೈಲು ಶಿಕ್ಷೆ ಶಿವಮೊಗ್ಗ, ಡಿಸೆಂಬರ್ 1: ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿರುವುದಾಗಿ ಶಿವಮೊಗ್ಗ 1ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ತೀರ್ಥಹಳ್ಳಿ ತಾಲ್ಲೂಕಿನ ಮೂವಳ್ಳಿ ಗ್ರಾಮದ ಆಲ್ಬರ್ಟ್ (45) ಶಿಕ್ಷೆಗೆ ಗುರಿಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಜೊತೆಗೆ ರೂ.15,000 ದಂಡ ಹಾಗೂ ದಂಡ…

Read More

ಪೊಕ್ಸೊ ಪ್ರಕರಣದಲ್ಲಿ ಯುವಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ

ಪೊಕ್ಸೊ ಪ್ರಕರಣದಲ್ಲಿ ಯುವಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಶಿವಮೊಗ್ಗ  ಡಿಸೆಂಬರ್ 1: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಭದ್ರಾವತಿಯ ಯುವಕನೋರ್ವನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ – 1 ಕೋರ್ಟ್ ತೀರ್ಪು ನೀಡಿದೆ. 21 ವರ್ಷದ ಯುವಕನೇ ಜೈಲು ಶಿಕ್ಷೆಗೆ ಗುರಿಯಾದ ಯುವಕನಾಗಿದ್ದಾನೆ  ಜೈಲು ಶಿಕ್ಷೆಯ ಜೊತೆಗೆ 61 ಸಾವಿರ ರೂ. ದಂಡ ವಿಧಿಸಲಾಗಿದೆ….

Read More

ಕುಂಸಿಯ ವೃದ್ಧೆಯ ಕ್ರೂರ ಹತ್ಯೆ ಕೇಸ್ – ಕೊಲೆಗಾರ ಮಗನಲ್ಲ..!

ಕುಂಸಿಯ ವೃದ್ಧೆಯ ಕ್ರೂರ ಹತ್ಯೆ ಕೇಸ್ – ಕೊಲೆಗಾರ ಮಗನಲ್ಲ..!! ವೃದ್ದೆಯ ಕೈಯಿಂದ ಫಲಾವ್ ತಿಂದು ಹಿಂಬದಿಯಿಂದ ಹತ್ಯೆಗೈದಿದ್ದಇಬ್ಬರು ಯುವಕರ ಬಂಧನ ಶಿವಮೊಗ್ಗ: ತಾಲೂಕಿನ ಕುಂಸಿ ಗ್ರಾಮದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ 70 ವರ್ಷದ ಬಸಮ್ಮ ಅವರ ಮೇಲೆ ನಡೆದಿದ್ದ ಕ್ರೂರ ಹತ್ಯೆ ರಹಸ್ಯಕ್ಕೆ ಎರಡು ತಿಂಗಳ ಬಳಿಕ ತೆರೆ ಬಿದ್ದಿದೆ. ದೂರದೃಷ್ಟಿಯಿಂದ ರೂಪಿಸಿದ ದರೋಡೆ–ಕೊಲೆ ಯತ್ನದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ದೋಚಿದ್ದ ಚಿನ್ನಾಭರಣ, ಬೈಕ್ ಸೇರಿದಂತೆ ಸಾಕ್ಷ್ಯಾಧಾರಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರು ; ಕುಂಸಿ ಗ್ರಾಮದ…

Read More

ಶಿವಮೊಗ್ಗದಲ್ಲಿ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯ ಆರೋಪ, ಕುಟುಂಬಸ್ಥರ ಆಕ್ರೋಶ

ಶಿವಮೊಗ್ಗದಲ್ಲಿ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯ ಆರೋಪ, ಕುಟುಂಬಸ್ಥರ ಆಕ್ರೋಶ ಶಿವಮೊಗ್ಗ: ಮೆಗ್ಗಾನ್‌ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯೊಬ್ಬರು ಸಾವನ್ನಪ್ಪಿದ ಪ್ರಕರಣ ಬೆಳಕಿಗೆ ಬಂದಿದೆ. ಚಿಕಿತ್ಸೆ ಫಲಕಾರಿಯಾಗದೆ 26 ವರ್ಷದ ನೂರ್ ಅಪ್ ಶಾ ಅವರು ಮೃತಪಟ್ಟಿದ್ದಾರೆ. ಈ ಕುರಿತು ಮೃತ ಮಹಿಳೆಯ ಕುಟುಂಬ ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ನವಂಬರ್ 21ರಂದು ನೂರ್ ಅಪ್ ಶಾ ಅವರು ಶಸ್ತ್ರಚಿಕಿತ್ಸೆ ಮೂಲಕ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ ಅಪರೇಷನ್ ವೇಳೆ ವೈದ್ಯರು ಎಡವಟ್ಟಿಗೆ…

Read More

ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಸರ ಅಪಹರಣ

ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆಯ ಸರ ಅಪಹರಣ ಶಿವಮೊಗ್ಗ:   ಸ್ವಾಮಿ ವಿವೇಕಾನಂದ ಬಡವಾಣೆಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಎದುರು ಮಹಿಳೆಯೊಬ್ಬರು ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಕಳ್ಳರು ಮಹಿಳೆಯ ಸರವನ್ನು ಕದ್ದು ಪರಾರಿಯಾಗಿದ್ದಾರೆ. ಈ ಹಿನ್ನೆಲೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿವೇಕಾನಂದ ಬಡಾವಣೆಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜ್ ಎದುರು ರಸ್ತೆಯಲ್ಲಿ  ಮಹಿಳೆ ಶಾಪಿಂಗ್ ಮುಗಿಸಿ ಸ್ಕೂಟಿಯಲ್ಲಿ ಮನೆಗೆ ವಾಪಸ್ ಬರುತ್ತಿದ್ದರು. ಈ ವೇಳೆ, ಹಿಂಬದಿಯಿಂದ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬರು ಏಕಾಏಕಿ ಮಹಿಳೆಯ ಕುತ್ತಿಗೆಗೆ ಕೈ…

Read More

ಮದುವೆಯಾದ ಏಳೇ ತಿಂಗಳಿಗೆ ‘ಡೆತ್ ನೋಟ್’ ಬರೆದಿಟ್ಟು ಕಾಲುವೆಗೆ ಹಾರಿ ನವವಿವಾಹಿತೆ ಆತ್ಮಹತ್ಯೆ.!

ಮದುವೆಯಾದ ಏಳೇ ತಿಂಗಳಿಗೆ ‘ಡೆತ್ ನೋಟ್’ ಬರೆದಿಟ್ಟು ಕಾಲುವೆಗೆ ಹಾರಿ ನವವಿವಾಹಿತೆ ಆತ್ಮಹತ್ಯೆ.! ಶಿವಮೊಗ್ಗದಲ್ಲಿ ಪತಿಯ ಕಿರುಕುಳಕ್ಕೆ ಬೇಸತ್ತು ಮದುವೆ ಆದ 6 ತಿಂಗಳಿಗೆ ನವವಿವಾಹಿತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಭದ್ರಾವತಿ ತಾಲೂಕಿನ ಹಂಚಿನ ಸಿದ್ದಾಪುರ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಪತಿ ಹಾಗೂ ಪತಿಯ ಮನೆಯವರ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದೆ. ಆತ್ಮಹತ್ಯೆಗೆ ಶರಣಾದ ನವವಿವಾಹಿತೆಯನ್ನು ಲತಾ (25) ಎಂದು ತಿಳಿದುಬಂದಿದೆ. ಭದ್ರಾವತಿಯ ಹಂಚಿನ ಸಿದ್ದಾಪುರದ ನಿವಾಸಿಯಾಗಿರುವ ಲತಾ ಬಿ…

Read More

ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ

ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ ಶಿವಮೊಗ್ಗ: ನಗರದ ಹೊರವಲಯದ ಲಕ್ಷ್ಮೀಪುರದಿಂದ ಶ್ರೀರಾಂಪುರಕ್ಕೆ ಹೋಗುವ ರಿಂಗ್  ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ತುಂಗಾನಗರ ಪೊಲೀಸರು ಬಂಧಿಸಿದ್ದಾರೆ. ಸಿಪಿಐ ಕೆ.ಟಿ. ಗುರುರಾಜ್, ಪಿಎಸ್ ಐ ಎಂ.ರಘುವೀರ್, ಎಎಸ್ ಐ ಚಂದ್ರಾನಾಯ್ಕರ ತಂಡ ದಾಳಿ ಮಾಡಿಟಿಪ್ಪುನಗರದ 37 ವರ್ಷದ ಶಾಹಿದ್ ಖಾನ್ @ಶಾಹಿದ್, ಸೂಳೆಬೈಲಿನ 23 ವರ್ಷದ ಮೊಹಮ್ಮದ್ ಜಾಫರ್ ಸಾದಿಕ್ @ ಜಾಫರ್ ಸಾದಿಖ್ ಅವರನ್ನು ಬಂಧಿಸಿದೆ. ಸ್ಕಾರ್ಪಿಯೋ ವಾಹನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ  ಬಗ್ಗೆ ಮಾಹಿತಿ ಪಡೆದು…

Read More

ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ – ಸಿಮ್ಸ್‌ ಡೀನ್‌ ಆಪ್ತ ಸಹಾಯಕನ ಮನೆ ಮೇಲೆ ರೇಡ್

ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ – ಸಿಮ್ಸ್‌ ಡೀನ್‌ ಆಪ್ತನ ಮನೆಗೆ ರೇಡ್ ಶಿವಮೊಗ್ಗ: ನಗರದ ವಿವಿಧ ಭಾಗಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭಾರೀ ದಾಳಿ ನಡೆಸಿದ್ದು, ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ಡೀನ್‌ ಡಾ. ವಿರುಪಾಕ್ಷಪ್ಪ ಅವರ ಆಪ್ತ ಸಹಾಯಕ ಲಕ್ಷ್ಮೀಪತಿ ಅವರ ಮನೆ ಮೇಲೆ ರೇಡ್‌ ನಡೆದಿದೆ. ಲಕ್ಷ್ಮೀಪತಿ ಅವರ ಶಿವಮೊಗ್ಗದ ಜೆ.ಹೆಚ್. ಪಟೇಲ್ ಬಡಾವಣೆ ಹಾಗೂ ಜಗಳೂರಿನ ಮನೆಯಲ್ಲಿ ಒಂದೇ ಸಮಯದಲ್ಲಿ ದಾಳಿ ನಡೆಸಲಾಗಿದೆ. ಇದಲ್ಲದೆ, ಸಿಮ್ಸ್‌ ಕಚೇರಿಯ ಮೇಲೂ ಏಕಕಾಲದಲ್ಲಿ…

Read More