ಕ್ರೈಂ ಸುದ್ದಿ:
ಬಿಳಿ ಜಾಂಡಿಸ್ ಖಾಯಿಲೆಯಿಂದ ತೀರ್ಥಹಳ್ಳಿಯ ವಿದ್ಯಾರ್ಥಿನಿ ಸ
ಬಿಳಿ ಜಾಂಡಿಸ್ ಖಾಯಿಲೆಯಿಂದ ತೀರ್ಥಹಳ್ಳಿಯ ವಿದ್ಯಾರ್ಥಿನಿ ಸ ತೀರ್ಥಹಳ್ಳಿ : ಬಿಳಿ ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದ ತೀರ್ಥಹಳ್ಳಿಯ ಬೆಟ್ಟಮಕ್ಕಿ ಸಹ್ಯಾದ್ರಿ ( ಐ. ಸಿ. ಎಸ್. ಸಿ ) ಶಾಲೆಯ ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿದ್ದಾರೆ. ಐಸಿರಿ (14 ವರ್ಷ ) ಮೃತಪಟ್ಟ ದುರ್ಧೈವಿ.ಹೆಗ್ಗೋಡಿನ ಐಸಿರಿ ಎಂಟನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೆಲವು ದಿನಗಳಿಂದ ಬಿಳಿ ಜಾಂಡಿಸ್ ಕಾಯಿಲಿಯಿಂದ ಬಳಲುತ್ತಿದ್ದ ಇವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ನಂತರ ಕಿಡ್ನಿ ವೈಫಲ್ಯ ಸಹ ಉಂಟಾಗಿತ್ತು ಎಂದು ತಿಳಿದು ಬಂದಿದೆ. ಆದರೆ…
ಕಾಮಗಾರಿ ವೇಳೆಯಲ್ಲಿ ಏಕಾಏಕಿ ವಿದ್ಯುತ್ ಪ್ರವಹಿಸಿ ಯುವಕ ಮೃತ್ಯು ಪ್ರಕರಣ – ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮಕ್ಕೆ ಶಾಸಕ ಬೇಳೂರು ಸೂಚನೆ
ವಿದ್ಯುತ್ ಅವಘಡದಲ್ಲಿ ಯುವಕ ಮೃತ್ಯು ಪ್ರಕರಣ – ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮಕ್ಕೆ ಶಾಸಕ ಬೇಳೂರು ಸೂಚನೆ ರಿಪ್ಪನ್ಪೇಟೆ : ವಿದ್ಯುತ್ ದುರಸ್ತಿ ಕಾಮಗಾರಿ ವೇಳೆಯಲ್ಲಿ ನಡೆದ ಅಚಾತುರ್ಯದಿಂದ ಮಂಗಳವಾರ ಸಂಜೆ ಬಿಳಿಕಿ ಗ್ರಾಮದಲ್ಲಿ ಮೃತಪಟ್ಟ ಗಾಜಿನಗೋಡು ಗ್ರಾಮದ ಯುವಕ ಕೇಶವ್ ಸಾವಿಗೆ ಸಂಬಂಧಿಸಿದವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಖಡಕ್ ಸೂಚನೆ ನೀಡಿದರು. ಮಂಗಳವಾರ ರಾತ್ರಿ ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮೃತ ಯುವಕನ ಕುಟುಂಬಸ್ಥರಿಗೆ…
ಆಕಸ್ಮಿಕವಾಗಿ ವಿದ್ಯುತ್ ತಗುಲಿ ರಿಪ್ಪನ್ಪೇಟೆಯ ಯುವಕ ಸಾವು
ಆಕಸ್ಮಿಕವಾಗಿ ವಿದ್ಯುತ್ ತಗುಲಿ ರಿಪ್ಪನ್ಪೇಟೆಯ ಯುವಕ ಸಾವು ರಿಪ್ಪನ್ಪೇಟೆ : ಆಕಸ್ಮಿಕವಾಗಿ ವಿದ್ಯುತ್ ತಗುಲಿ ಲೈನ್ ದುರಸ್ತಿ ಮಾಡುತಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಸಮೀಪದ ಬಿಳಿಕಿ ಗ್ರಾಮದಲ್ಲಿ ನಡೆದಿದೆ. ಗಾಜೀನಗೋಡು ಗ್ರಾಮದ ಕೇಶವ್(28) ಮೃತಪಟ್ಟಿರುವ ದುರ್ಧೈವಿಯಾಗಿದ್ದಾರೆ. ಬಿಳಿಕಿ ಗ್ರಾಮದಲ್ಲಿ ವಿದ್ಯುತ್ ಲೈನ್ ದುರಸ್ಥಿ ಮಾಡುತಿದ್ದ ಕಾರ್ಮಿಕ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ.ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ಮೃತದೇಹವನ್ನು ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇರಿಸಲಾಗಿದೆ. ರಿಪ್ಪನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ…
ಭೀಕರ ಅಪಘಾತ – ಲಾರಿ ಅಡಿಯಲ್ಲಿ ಸಿಲುಕಿದ ಬೈಕ್ ಸವಾರರು ,ಓರ್ವ ಸಾವು ಇನ್ನೊಬ್ಬನ ಸ್ಥಿತಿ ಗಂಭೀರ
ಭೀಕರ ಅಪಘಾತ – ಲಾರಿ ಅಡಿಯಲ್ಲಿ ಸಿಲುಕಿದ ಬೈಕ್ ಸವಾರರು ,ಓರ್ವ ಸಾವು ಇನ್ನೊಬ್ಬನ ಸ್ಥಿತಿ ಗಂಭೀರ ಲಾರಿ ಮತ್ತು ಬೈಕ್ ನಡುವೆ ಬೀಕರ ಅಪಘಾತ ಸಂಭವಿಸಿದ್ದು, ಒಬ್ಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಬ್ಬ ಯುವಕನ ಸ್ಥಿತಿ ಗಂಭೀರವಾಗಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಕುಡುಮಲ್ಲಿಗೆಯ ಬಳಿ ನಡೆದಿದೆ. ಬಾಗಲಕೋಟೆಯಿಂದ ಇಬ್ಬರು ಯುವಕರು ತೀರ್ಥಹಳ್ಳಿ ಮಾರ್ಗದಲ್ಲಿ ಚಲಿಸುತ್ತಿದ್ದರು. ವೇಳೆ ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ 10 ಚಕ್ರದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆ ಬೈಕ್ ಲಾರಿಯ ಚಕ್ರಕ್ಕೆ…
ಮಹಿಳೆಯ ಮಾಂಗಲ್ಯ ಸರ ಕಿತ್ತು ಬೈಕ್ ನಲ್ಲಿ ಪರಾರಿಯಾದ ಕಳ್ಳರು
ಮಹಿಳೆಯ ಮಾಂಗಲ್ಯ ಸರ ಕಿತ್ತು ಬೈಕ್ ನಲ್ಲಿ ಪರಾರಿಯಾದ ಕಳ್ಳರು ಶಿವಮೊಗ್ಗ:ಮಾದೇಶ್ವರ ದೇವಸ್ಥಾನದ ರಸ್ತೆಯ ಮೂಲಕ ವೀರಾಪುರಕ್ಕೆ ಬೈಕ್ ನಲ್ಲಿ ದಂಪತಿ ತೆರಳುತ್ತಿದ್ದ ವೇಳೆ ಗೃಹಿಣಿಯ ಮಾಂಗಲ್ಯ ಸರವನ್ನು ಇನ್ನೊಂದು ಬೈಕಿನಲ್ಲಿ ಬಂದ ಯುವಕರಿಬ್ಬರು ಕಿತ್ತು ಪರಾರಿಯಾದ ಘಟನೆ ಭದ್ರಾವತಿಯಿಂದ ವರದಿಯಾಗಿದೆ. ಭದ್ರಾವತಿಯ ನ್ಯೂ ಕಾಲೋನಿಯಲ್ಲಿ ವಾಸವಾಗಿರುವ ಸಂಬಂಧಿಕರ ಮನೆಯ ಕಾರ್ಯಕ್ರಮಕ್ಕೆ ಹಿರಿಯೂರು ವೀರಾಪುರದ ಹನುಮಂತೇಗೌಡ ಎನ್ನುವವರು ಬೈಕ್ ನಲ್ಲಿ ಪತ್ನಿ ಜೊತೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿಕೊಂಡು ವಾಪಾಸ್ ಮನೆಗೆ ತೆರಳುವಾಗ ಬೈಪಾಸ್ ಬಳಿ ಹನುಮಂತೆ ಗೌಡ…
SHIVAMOGGA | ಬ್ಲೂಮೂನ್ ವೈನ್ಸ್ ಬಳಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ
ಸಾಗರ ರಸ್ತೆಯಲ್ಲಿರುವ ಬ್ಲೂಮೂನ್ ವೈನ್ಸ್ ಬಳಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಶಿವಮೊಗ್ಗದ ಸಾಗರ ರೋಡ್ನಲ್ಲಿ ಇಂದು ಸಂಜೆ ಇಬ್ಬರ ಮೇಲೆ ಮಾರಣಾಂತಿಕ ದಾಳಿ ನಡೆದಿದೆ . ಇಲ್ಲಿನ ಬ್ಲೂಮೂನ್ ವೈನ್ಸ್ ಎದುರುಗಡೆ ಘಟನೆ ನಡೆದಿದ್ದು, ಇಬ್ಬರ ಮೇಲೆ ರಾಡ್ ನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಇಬ್ಬರ ಸ್ಥಿತಿಯು ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಸಂಜೆ ಐದು ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ. ಹಲ್ಲೆ…
ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡೇಟು | ಭದ್ರಾವತಿಯಲ್ಲಿ ನಡೆದಿದ್ದೇನು..!!?
ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಗೆ ಗುಂಡೇಟು | ಭದ್ರಾವತಿಯಲ್ಲಿ ನಡೆದಿದ್ದೇನು..!!? ಶಿವಮೊಗ್ಗ ; ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಮುಂದಾಗಿದ್ದ ರೌಡಿಶೀಟರ್ ಕಾಲಿಗೆ ಸಬ್ಇನ್ಸ್ಪೆಕ್ಟರ್ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ ಘಟನೆ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಗುಂಡ ಅಲಿಯಾಸ್ ರವಿ, ಪೊಲೀಸ್ ಸಿಬಂದಿ ಆದರ್ಶ್ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದ ಈ ವೇಳೆ ಪಿಎಸ್ಐ ಕೃಷ್ಣ, ಶರಣಾಗುವಂತೆ ಸೂಚಿಸಿದರು.ಕೇಳದೇ ಇದ್ದಾಗ…
ತುಂಗಾ ಹಿನ್ನೀರಿನಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ
ತುಂಗಾ ಹಿನ್ನೀರಿನಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ ಶಿವಮೊಗ್ಗದ ತುಂಗಾ ನದಿಯ ಹಿನ್ನೀರಿನಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿದ್ದು. ಇಬ್ಬರು ಪುರುಷರು ಹಾಗೂ ಮಹಿಳೆಯ ಶವ ಪತ್ತೆಯಾಗಿದೆ. ಮೃತದೇಹಗಳು ಕಿಳೆತ ಸ್ಥಿತಿಯಲ್ಲಿದ್ದು ಮೂವರು ಅತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗುತ್ತಿದ್ದು, ಪೊಲೀಸರ ತನಿಖೆ ನಡೆಯಬೇಕಿದೆ. ಇವರು ಯಾರು? ಯಾವ ಊರು? ಆತ್ಮಹತ್ಯದಗೆ ಕಾರಣವೇನು ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ.ಮೂವರ ವಯಸ್ಸು ಸಹ 40-45 ಇರಬಹುದು ಎಂದು ಶಂಕಿಸಲಾಗಿದೆ. ತುಂಗಾನಗರ ಪೊಲೀಸ್ ಠಾಣೆಯ ಪೊಲೀಸರು…
ANANDAPURA | ಸಾಲದ ಬಾಧೆಗೆ ಬೇಸತ್ತು ರೈತ ಮಹಿಳೆ ಆತ್ಮಹತ್ಯೆ
ANANDAPURA | ಸಾಲದ ಭಾದೆಗೆ ಬೇಸತ್ತು ರೈತ ಮಹಿಳೆ ಆತ್ಮಹತ್ಯೆ ಸಾಲದ ಬಾಧೆ ತಾಳಲಾರದೆ ರೈತ ಮಹಿಳೆಯೊಬ್ಬರು ನೇಣಿಗೆ ಶರಣಾದ ಘಟನೆ ಸಮೀಪದ ಇರುವಕ್ಕಿ ಗ್ರಾಮದಲ್ಲಿ ಫೆ. 18ರ ಮಂಗಳವಾರ ನಡೆದಿದೆ. ಯಡೇಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇರುವಕ್ಕಿ ಗ್ರಾಮದ ಯೋಗಮ್ಮ(58) ಆತ್ಮಹತ್ಯೆ ಮಾಡಿಕೊಂಡ ರೈತ ಮಹಿಳೆ. ಯೋಗಮ್ಮ ತಮ್ಮ ಹೊಲದಲ್ಲಿ ಬೆಳೆ ಬೆಳೆಯಲು ಕೃಷಿ ಸಾಲವಾಗಿ ಡಿಸಿಸಿ ಬ್ಯಾಂಕ್, ನಂದಿತಳೆ ಸೊಸೈಟಿ ಹಾಗೂ ಎಲ್ಐಸಿ ಯಲ್ಲಿ ಒಟ್ಟು 2-3 ಲಕ್ಷ ಸಾಲ ಮಾಡಿದ್ದು, ಮಳೆ ಸರಿಯಾಗಿ…
ಭೀಕರ ರಸ್ತೆ ಅಪಘಾತ – ಯುವತಿ ಸ್ಥಳದಲ್ಲಿಯೇ ಸಾವು
ಭೀಕರ ರಸ್ತೆ ಅಪಘಾತ – ಯುವತಿ ಸ್ಥಳದಲ್ಲಿಯೇ ಸಾವು ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಸಂಕದಹೊಳೆ ಸಮೀಪದಲ್ಲಿ ಇಂದು ಸಂಜೆ ನಡೆದಿದೆ. ಸ್ಕೂಟಿ ಹಾಗೂ ಕಾರಿನ ನಡುವೆ ಅಪಘಾತ ನಡೆದು ಯುವತಿಯ ಮೈಮೇಲೆ ಟಯರ್ ಹರಿದ ಪರಿಣಾಮ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಮೃತ ಯುವತಿ ಹಾಗೂ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.