ಕ್ರೈಂ ಸುದ್ದಿ:
ರೌಡಿ ಶೀಟರ್ ಕಡೆಕಲ್ ಅಬಿದ್ ಕಾಲಿಗೆ ಪೊಲೀಸರ ಗುಂಡು
ರೌಡಿ ಶೀಟರ್ ಕಡೆಕಲ್ ಅಬಿದ್ ಕಾಲಿಗೆ ಪೊಲೀಸರ ಗುಂಡು ಶಿವಮೊಗ್ಗ: ಸುಮಾರು ೨೦ಕ್ಕ್ಕೂ ಹೆಚ್ಚು ಪ್ರಕರಣಗಳ ಆರೋಪಿಯಾಗಿರುವ, ಕೊಲೆ ಯತ್ನದ ಪ್ರಕರಣಕ್ಕೆ ಸಂಬಂಧಿಸಿ ಭದ್ರಾವತಿ ಪೇಪರ್ ಟೌನ್ ಪೊಲೀಸರಿಗೆ ಬೇಕಾಗಿದ್ದ ಕಡೆಕಲ್ ಅಬಿದ್ ಎನ್ನುವವನ್ನು ಮಂಗಳವಾರ ಸಂಜೆಯ ವೇಳೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ಸಂಭವಿಸಿದೆ. ಪೇಪರ್ ಟೌನ್ ಇನ್ಸ್ಪೆಕ್ಟರ್ ನಾಗಮ್ಮ ಮತ್ತು ತಂಡದವರು ಖಚಿತ ಮಾಹಿತಿ ಮೇರೆಗೆ ಅಬಿದ್ನನ್ನು ಬಂಧಿಸಲು ತೆರಳಿದ್ದರು. ಸುಮಾರು ಒಂದು ತಿಂಗಳಿನಿಂದುಈತ ತಲೆಮರೆಸಿಕೊಂಡಿದ್ದನು. ಪೊಲೀಸರನ್ನು ಕಂಡು ತಪ್ಪಿಸಿಕೊಳ್ಳಲೆತ್ನಿಸಿದನಲ್ಲದೆ ಮರು ದಾಳಿ ನಡೆಸಿದನು….
RIPPONPETE | ಮದ್ಯದಂಗಡಿ ತೆರವಿಗೆ ಗ್ರಾಮಸ್ಥರ ಪ್ರತಿಭಟನೆ
RIPPONPETE | ಮದ್ಯದಂಗಡಿ ತೆರವಿಗೆ ಗ್ರಾಮಸ್ಥರ ಪ್ರತಿಭಟನೆ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯ ಶಿವಮೊಗ್ಗ ರಸ್ತೆಯ ಕೆರೆಹಳ್ಳಿಯಲ್ಲಿರುವ ಎಂಎಸ್ಐಎಲ್ ಮದ್ಯದಂಗಡಿಯನ್ನು ಕೂಡಲೇ ತೆರವುಗೊಳಿಸುವಂತೆ ಆಗ್ರಹಿಸಿ ಗ್ರಾಮದ ಮಹಿಳೆಯರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. MSIL ಅಂಗಡಿಯ ಮುಂಭಾಗ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಗ್ರಾಮದ ಸ್ವಾಸ್ಥ್ಯ ಹದಗೆಡಿಸುತ್ತಿರುವ ಮದ್ಯದಂಗಡಿಯನ್ನು ಕೂಡಲೇ ತೆರವುಗೊಳಿಸುವಂತೆ ಪಟ್ಟು ಹಿಡಿದು ಕುಳಿತಿದ್ದರು. ಈ ಸಂಧರ್ಭದಲ್ಲಿ ಸ್ಥಳಕ್ಕಾಗಮಿಸಿದ ಪಿಎಸೈ ಪ್ರವೀಣ್ ಎಸ್ ಪಿ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿ ನಾಗರಾಜ್ ಪ್ರತಿಭಟನಾ ನಿರತರ ಮನವಿಯನ್ನು ಆಲಿಸಿದರು….
ರಿಪ್ಪನ್ ಪೇಟೆಯ ಯುವಕ ಚನ್ನಪಟ್ಟಣದಲ್ಲಿ ರೈಲಿಗೆ ತಲೆ ಕೊಟ್ಟು ಸಾವು
ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ನಿವಾಸಿ ಬೆಂಗಳೂರಿನಲ್ಲಿ ಚಲಿಸುತಿದ್ದ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ರಸ್ತೆಯ ನಿವಾಸಿ ರಾಮನಾಥ್ (28) ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಶಬರೀಶ ನಗರದ ಸಾಯಿನಾಥ್ ಭಂಡಾರಿಯವರ ಪುತ್ರನಾದ ರಾಮನಾಥ್ ಬೆಂಗಳೂರಿನಲ್ಲಿ ಕಳೆದ ಐದಾರು ವರ್ಷಗಳಿಂದ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡಿಕೊಂಡಿದ್ದನು. ಚನ್ನಪಟ್ಟಣದಿಂದ ಮದ್ದೂರಿಗೆ ತೆರಳುವ ಮಾರ್ಗದ ನಿಡಗುಂಟೆ ರೈಲ್ವೆ ನಿಲ್ದಾಣದ ಗೇಟ್ ಬಳಿ ದ್ವಿಚಕ್ರ ವಾಹನವನ್ನು(KA 15 ED 9437) ನಿಲ್ಲಿಸಿ ಮೊಬೈಲ್ ನ್ನು ಸ್ವಿಚ್ ಆಫ಼್ ಮಾಡಿ…
ಬಿದರಹಳ್ಳಿಯಲ್ಲಿ ಮನೆಗಳ್ಳತನ ಮಾಡಿದ್ದ ಮೂವರು ಆರೋಪಿಗಳ ಮಾಲು ಸಮೇತ ಬಂಧನ
ಬಿದರಹಳ್ಳಿಯಲ್ಲಿ ಮನೆಗಳ್ಳತನ ಮಾಡಿದ್ದ ಮೂವರು ಆರೋಪಿಗಳ ಮಾಲು ಸಮೇತ ಬಂಧನ ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದಲ್ಲಿ ಪೆಬ್ರವರಿ ತಿಂಗಳಿನಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದ ಆರೋಪಿಗಳನ್ನು ಪಿಎಸೈ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿದರಹಳ್ಳಿ ಸಮೀಪದ ಮಂಡ್ಲಿ ಗ್ರಾಮದ ಪುರೋಹಿತ ವೃತ್ತಿ ಮಾಡುವ ಸ್ವಾಮಿ ಹಾಗೂ ಕುಟುಂಬಸ್ಥರು ಫೆಬ್ರವರಿ 15 ರಂದು ಹಾವೇರಿ ಜಿಲ್ಲೆಯ ದೇವಸ್ಥಾನಕ್ಕೆ ತೆರಳಿ ವಾಪಾಸು ಹಿಂದಿರುಗಿದಾಗ ಮನೆಯ ಹಿಂಬದಿಯ ಬಾಗಿಲು ಮುರಿದು…
ಹೆದ್ದಾರಿಯಲ್ಲಿದ್ದ ‘ಪೊಲೀಸ್ ಕಟೌಟ್’ ಹೊತ್ತೊಯ್ದ ಐನಾತಿ ಕಳ್ಳರು
ಹೆದ್ದಾರಿಯಲ್ಲಿದ್ದ ‘ಪೊಲೀಸ್ ಕಟೌಟ್’ ಹೊತ್ತೊಯ್ದ ಐನಾತಿ ಕಳ್ಳರು ಶಿವಮೊಗ್ಗ : ವಾಹನಗಳ ವೇಗ ನಿಯಂತ್ರಣಕ್ಕೆಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಪೊಲೀಸರು ಅಳವಡಿಸಿದ್ದ ರಿಫ್ಲೆಕ್ಟರ್ ಕಟೌಟ್ ವೊಂದನ್ನು, ಐನಾತಿ ಕಳ್ಳರ ತಂಡವೊಂದು ಕಾರಿನಲ್ಲಿ ಆಗಮಿಸಿ ಹೊತ್ತೊಯ್ದ ಕುತೂಹಲಕಾರಿ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಕಟೌಟ್ ಕಳವು ಮಾಡಿ ಕೊಂಡೊಯ್ಯುತ್ತಿರುವ ದೃಶ್ಯವು, ಕಟ್ಟಡವೊಂದರ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರ ಆಧಾರದ ಮೇಲೆ ಪಶ್ಚಿಮ ಟ್ರಾಫಿಕ್ ಠಾಣೆ ಸಬ್ ಇನ್ಸ್’ಪೆಕ್ಟರ್ ತಿರುಮಲೇಶ್ ಅವರು, ವಿನೋಬನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎಫ್ಐಆರ್…
ದುಬಾರಿ ಗಿಫ್ಟ್ ಬಂದಿದೆ ಎಂದು ವಿದೇಶದಿಂದ ಬಂದ ಕರೆ ಹಾಗೂ ಮೆಸೇಜ್ ಗೆ ಸ್ಪಂದಿಸಿದ ವ್ಯಕ್ತಿಗೆ ಕಾದಿತ್ತು ಬಿಗ್ ಶಾಕ್..!!
ದುಬಾರಿ ಗಿಫ್ಟ್ ಬಂದಿದೆ ಎಂದು ವಿದೇಶದಿಂದ ಬಂದ ಕರೆ ಹಾಗೂ ಮೆಸೇಜ್ ಗೆ ಸ್ಪಂದಿಸಿದ ವ್ಯಕ್ತಿಗೆ ಕಾದಿತ್ತು ಬಿಗ್ ಶಾಕ್..!! ಶಿವಮೊಗ್ಗ : ಲಂಡನ್ನಿಂದ ಬೆಲೆ ಬಾಳುವ ಗಿಫ್ಟ್ ಬಂದಿದೆ ಎಂದು ನಂಬಿಸಿ ಭದ್ರಾವತಿಯ ವ್ಯಕ್ತಿಯೊಬ್ಬರಿಗೆ 8.56 ಲಕ್ಷ ರೂ. ವಂಚಿಸಲಾಗಿದೆ. ಇದೇ ಮಾದರಿ ಈ ಹಿಂದೆಯು ಹಲವರಿಗೆ ವಂಚನೆಯಾಗಿದ್ದು, ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ. ಲಂಡನ್ನಿಂದ ಮೈಕಲ್ ಮ್ಯಾಕ್ಡೊನಾಲ್ಡ್ ಹೆಸರಿನಲ್ಲಿ ಕರೆ ಮತ್ತು ಮೆಸೇಜ್ ಮಾಡಿ 43 ಲಕ್ಷ ರೂ. ಮೌಲ್ಯದ ಗಿಫ್ಟ್ ಕಳುಹಿಸುತ್ತಿರುವುದಾಗಿ ಭದ್ರಾವತಿಯ ವ್ಯಕ್ತಿಗೆ…
ಹಾಡಹಗಲೇ ಮನೆ ಕಳವು ಮಾಡಿದ್ದ ಆರೋಪಿಯ ಬಂಧನ – ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ಬೈಕ್ ವಶಕ್ಕೆ.!
ಹಾಡಹಗಲೇ ಮನೆ ಕಳವು ಮಾಡಿದ್ದ ಆರೋಪಿಯ ಬಂಧನ – ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ಬೈಕ್ ವಶಕ್ಕೆ.! ಹೊಸನಗರ : ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆಯ ಪಿಎಸೈ ಶಿವಾನಂದ್ ಕೆ ನೇತ್ರತ್ವದ ಸಿಬ್ಬಂದಿಗಳು ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಆರೋಪಿಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಘಟನೆ ನಡೆದಿದೆ. ಹೊಸನಗರ ತಾಲೂಕಿನ ನಗರ ಹೋಬಳಿಯ ಕಟ್ಟಿನಹೊಳೆ ನಿವಾಸಿ ಶರತ್ ಎಂಬಾತನನ್ನು ಬಂಧಿಸಿ ಚಿನ್ನಾಭರಣ ಹಾಗೂ ಕಳ್ಳತನಕ್ಕೆ ಬಳಸಿದ್ದ ಬೈಕ್ ನ್ನು ವಶಕ್ಕೆ ಪಡೆಯಲಾಗಿದೆ….
ಕೋಣಂದೂರು : ಹಸು ರಕ್ಷಿಸಲು ಹೋಗಿ ಕೂಲಿ ಕಾರ್ಮಿಕ ಸಾವು
ಕೋಣಂದೂರು : ಹಸು ರಕ್ಷಿಸಲು ಹೋಗಿ ಕೂಲಿ ಕಾರ್ಮಿಕ ಸಾವು ಕೋಣಂದೂರು ಸಮೀಪದ ಕಾರಕೊಡ್ಲು ಎಂಬಲ್ಲಿ ಬಾವಿಗೆ ಬಿದ್ದಿದ್ದ ಹಸುವನ್ನು ಮೇಲೆತ್ತಲು ಇಳಿದಿದ್ದ ವ್ಯಕ್ತಿ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಕೂಲಿ ಕಾರ್ಮಿಕ, ಕೇರಳದ ಸತೀಶ (45) ಮೃತಪಟ್ಟವನು. ಕಾರ್ಕೊಡ್ಲುವಿನಲ್ಲಿ ರಾಘು ಎಂಬುವವರು ಇತ್ತೀಚೆಗೆ ರಿಂಗ್ ಬಾವಿ ನಿರ್ಮಿಸಿದ್ದರು. ಅದಕ್ಕೆ ಮಂಗಳವಾರ ಹಸುವೊಂದು ಆಕಸ್ಮಿಕವಾಗಿ ಬಿದ್ದಿತ್ತು. ಅದನ್ನು ರಕ್ಷಿಸಲು ಸತೀಶ್ ಬಾವಿಗೆಇಳಿದಿದ್ದಾಗ ಈ ದುರ್ಘಟನೆ ನಡೆದಿದೆ. ಸತೀಶ್ ಮತ್ತು ಹಸುವಿನ ಮೃತದೇಹವನ್ನು ಅಗ್ನಿಶಾಮಕ ದಳದವರು ಬುಧವಾರ ಬಾವಿಯಿಂದ…
HOSANAGARA | ಚಿರತೆ ದಾಳಿಗೆ ಜಾನುವಾರು ಬಲಿ
HOSANAGARA | ಚಿರತೆ ದಾಳಿಗೆ ಜಾನುವಾರು ಬಲಿ ಹೊಸನಗರ ತಾಲೂಕಿನ ಪುಣಜೆ ಗ್ರಾಮದ ಬ್ರಹ್ಮೇಶ್ವರದಲ್ಲಿ ಕೆಲ ದಿನಗಳಿಂದ ಚಿರತೆ ಸಂಚರಿಸುತ್ತಿದ್ದು ಗ್ರಾಮದ ಜಾನುವಾರುಗಳು ಚಿರತೆ ದಾಳಿಗೆ ಬಲಿಯಾಗಿವೆ. ಇಲ್ಲಿನ ಅಂಬೇಡ್ಕರ್ ಕಾಲೋನಿ ಸಮೀಪದ ಅರಣ್ಯ ಪ್ರದೇಶದಲ್ಲಿ 4 ದನಗಳ ಶವದ ಅವಶೇಷಗಳು ದೊರಕಿದ್ದು ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸುತ್ತಮುತ್ತಲ ಪ್ರದೇಶದಲ್ಲಿ ಚಿರತೆಯ ಹೆಜ್ಜೆ ಗುರುತುಗಳನ್ನು ಗ್ರಾಮಸ್ಥರು ಪತ್ತೆ ಮಾಡಿರುವುದು, ಈ ಭಾಗದಲ್ಲಿ ಚಿರತೆಯ ಇರುವಿಕೆಯನ್ನು ದೃಢಪಡಿಸಿದೆ. ಕೆಲ ದಿನಗಳಿಂದ ಕಾಡಿಗೆ ಮೇಯಲು ಬಿಟ್ಟ ಜಾನುವಾರುಗಳು ಮನೆ…
ರಿಪ್ಪನ್ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!!
ರಿಪ್ಪನ್ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಸುಳುಗೋಡು ಗ್ರಾಮದಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಡ್ಡೆ ಮೇಲೆ ಪಿಎಸ್ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿದ ಓರ್ವನನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಸುಳುಗೋಡು ಗ್ರಾಮದ ಚಿಕನ್ ಅಂಗಡಿಯ ಮುಂಭಾಗದ ಸಾರ್ವಜನಿಕ ಪ್ರದೇಶದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು…