Headlines

ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ KSRTC ಬಸ್

ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಕೆ ಎಸ್ಸಾರ್ಟಿಸಿ ಬಸ್ ಶಿವಮೊಗ್ಗ : ಸಾಗರದಿಂದ ಹೊನ್ನಾವರಕ್ಕೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಅಪಘಾತವಾಗಿದ್ದು, ಹಲವರಿಗೆ ಸಣ್ಣಪುಟ್ಟ ಪೆಟ್ಟಾಗಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರು ಹೊನ್ನಾವರ ಹೈವೆಯಲ್ಲಿ ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಸೂಳೆಮುರ್ಕಿ ಕ್ರಾಸ್‌‌ನಲ್ಲಿ ಆಕ್ಸಿಡೆಂಟ್‌ ಆಗಿದೆ.  ಬಸ್‌ನಲ್ಲಿ 49 ಪ್ರಯಾಣಿಕರಿದ್ದರು. ಬಸ್‌ ಸಾಗರದಿಂದ ಹೊರಟು, ಮಾವಿನಗುಂಡಿಯಿಂದ ಇಳಿದು ಗೇರುಸೊಪ್ಪ ಬಳಿ ಸಿಗುವ ಕ್ರಾಸ್‌ನಲ್ಲಿ ಕಂಟ್ರೋಲ್‌ ತಪ್ಪಿ ರಸ್ತೆಗೆ ಹೊಂದಿಕೊಂಡಿದ್ದ ಧರೆಗೆ ಬಸ್‌ ಡಿಕ್ಕಿಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ…

Read More

ಹೊಸನಗರ ಮೂಲದ ಏರ್ ಫೋರ್ಸ್ ಅಧಿಕಾರಿ ಆಗ್ರಾದಲ್ಲಿ ಸಾವು

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಏರ್ ಫೋರ್ಸ್ ಅಧಿಕಾರಿಯೊಬ್ಬರು ಸ್ಕೈ ಡೈವಿಂಗ್ ವೇಳೆಯಲ್ಲಿ ಪ್ಯಾರಚೂಟ್ ನಿಷ್ಕ್ರಿಯವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಪಟಗುಪ್ಪ ಬಳಿಯ ಸಂಕೂರು ನಿವಾಸಿ  ಮಂಜುನಾಥ್ ಜಿ ಎಸ್(36) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಆಗ್ರಾದ ಪ್ಯಾರಾ ಟ್ರೈನಿಂಗ್ ಸ್ಕೂಲ್ ನಲ್ಲಿ ವಾರಂಟ್ ಆಫಿಸರ್ ಹಾಗೂ ಪ್ಯಾರಾ ಜಂಪ್ ಇನಸ್ಟ್ರಕ್ಟರ್ ಆಗಿ ಕಾರ್ಯ ನಿರ್ವಹಿಸುತಿದ್ದ ಮಂಜುನಾಥ್ ಶುಕ್ರವಾರ ಬೆಳಿಗ್ಗೆ 9.30ಕ್ಕೆ ಸ್ಕೈ ಡೈವಿಂಗ್ ಮಾಡುವಾಗ ಪ್ಯಾರಾಚೂಟ್ ನಿಷ್ಕ್ರಿಯವಾದ ಕಾರಣ ನಿಯಂತ್ರಣ ಕಳೆದುಕೊಂಡು ಸುಮಾರು 13 ಸಾವಿರ…

Read More

ಕಾಡುಕೋಣ ಭೇಟೆಯಾಡಿದ್ದ ಮೂವರ ಬಂಧನ

ಕಾಡುಕೋಣ ಭೇಟೆಯಾಡಿದ್ದ ಮೂವರ ಬಂಧನ ಹೊಸನಗರ : ತಾಲ್ಲೂಕಿನ  ನಗರ ವಲಯಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಕಾಡುಕೋಣ ಬೇಟೆಯಾಡಿ ಕಾಲು ತಲೆ ಮಾಂಸವನ್ನು ಬಿಡಿಸಿ ಕಾರಿನಲ್ಲಿ ಅಕ್ರಮ ಸಾಗಾಣಿಕೆ ಮಾಡಿರುವ ಕುರಿತು ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಅರೋಪಿಗಳು ನಾಪತ್ತೆಯಗಿದ್ದು  ಅರೋಪಿಗಳ ಪತ್ತೆ ಹಚ್ಚುವಲ್ಲಿ ನಗರ ವಲಯ ಅರಣ್ಯದಿಕಾರಿಗಳ ತಂಡ ಯಶ್ವಸಿಯಾಗಿದೆ. ಆರೋಪಿಗಳಾದ ಮಹ ಮ್ಮದ್ ಆಶ್ರಫ್ ಮುಂಡಳ್ಳಿ ವಾಸಿ, ಭಟ್ಕಳ ತಾಲ್ಲೂಕು, ಉತ್ತರ ಕನ್ನಡ ಎ೨) ಯಾಸೀನ್, ಹಣಬರಕೇರಿ, ಶಿರೂರು ಗ್ರಾಮ, ಬೈಂದೂರು ತಾಲ್ಲೂಕು, ಉಡುಪಿ ಜಿಲ್ಲೆ…

Read More

RIPPONPETE | ಹೃದಯಾಘಾತದಿಂದ 35 ವರ್ಷದ ವ್ಯಕ್ತಿ ಸಾವು

RIPPONPETE | ಹೃದಯಾಘಾತದಿಂದ 35 ವರ್ಷದ ವ್ಯಕ್ತಿ ಸಾವು ರಿಪ್ಪನ್‌ಪೇಟೆ : ಹೃದಯಾಘಾತದಿಂದ 35 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಗವಟೂರು ಗ್ರಾಮದಲ್ಲಿ ನಡೆದಿದೆ. ಗವಟೂರು ಗ್ರಾಮದ ಹಳೂರು ನಿವಾಸಿ ನಾಗೇಶ್ (35) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಶುಕ್ರವಾರ ಬೆಳಗಿನಜಾವ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಆದರೆ ಅಷ್ಟರಲ್ಲಾಗಲೇ ನಾಗೇಶ್ ಮೃತಪಟ್ಟಿದ್ದಾರೆ. ಮೃತರು ಪತ್ನಿ , ಒರ್ವ ಪುತ್ರ , ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ…

Read More

ಬೈಕ್ ಅಪಘಾತ – ಯುವಕ ಸಾವು

ಬೈಕ್ ಅಪಘಾತ – ಯುವಕ ಸಾವು ಬೈಕ್ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾಸ್ಪಾಡಿ ಬಳಿ ನಡೆದಿದೆ. ತ್ಯಾಗರ್ತಿಯ ಚಿಕ್ಕಬಿಲಗುಂಜಿ ಗ್ರಾಮದ ಪ್ರಜ್ವಲ್ (20) ಮೃತ ಯುವಕ. ತ್ಯಾಗರ್ತಿ ಮಾರಿಕಾಂಬಾ ಜಾತ್ರೆಗೆ ಮನೆಗೆ ಬಂದಿದ್ದ ಸಂಬಂಧಿಕರನ್ನು ಊರಿಗೆ ಬಿಟ್ಟು ವಾಪಾಸ್ ಆಗುವ ಸಂದರ್ಭದಲ್ಲಿ ಕಾಸ್ಪಾಡಿ ಬಳಿ ಬೈಕ್ ಅಪಘಾತಗೊಂಡ ಘಟನೆ ಬುಧವಾರ ರಾತ್ರಿ 12 ಗಂಟೆ ಸುಮಾರಿಗೆ ನಡೆದಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕನನ್ನು ಕೂಡಲೇ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ಸಾಗಿಸುವ…

Read More

ನನ್ನ ಪತ್ನಿಗೆ ಯಾಕೆ ಮೆಸೇಜ್ ಮಾಡ್ತೀಯಾ? ಎಂದು ಪ್ರಶ್ನಿಸಿದ್ದಕ್ಕೆ ಖಾರದ ಪುಡಿ ಎರಚಿ ಚಾಕು ಚುಚ್ಚಿದ ಸ್ನೇಹಿತ!

ನನ್ನ ಪತ್ನಿಗೆ ಯಾಕೆ ಮೆಸೇಜ್ ಮಾಡ್ತೀಯಾ? ಎಂದು ಪ್ರಶ್ನಿಸಿದ್ದಕ್ಕೆ ಖಾರದ ಪುಡಿ ಎರಚಿ ಚಾಕು ಚುಚ್ಚಿದ ಸ್ನೇಹಿತ! ಹಾಡಹಗಲೇ ಗೆಳೆಯನೊಬ್ಬ ತನ್ನ ಸ್ನೇಹಿತನ ಕಣ್ಣಿಗೆ ಖಾರದ ಪುಡಿ ಎರಚಿ ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗದ ಶರಾವತಿ ನಗರದ ಪಾಂಡುರಂಗ ದೇಗುಲದ ಬಳಿ ನಡೆದಿದೆ. ಅರುಣ್ ಎಂಬಾತ ತನ್ನ ಸ್ನೇಹಿತ ಅರುಣ್ ಎಂಬಾತನಿಗೆ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ರವಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗ ತಾಲೂಕಿನ ಕೋಟೆಗಂಗೂರಿನಲ್ಲಿ ಡ್ರೈವರ್ ಕೆಲಸ ಮಾಡುವ ರವಿ (34)…

Read More

ಎರಡು ಪ್ರತ್ಯೇಕ ಪ್ರಕರಣ – ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ

ಎರಡು ಪ್ರತ್ಯೇಕ ಪ್ರಕರಣ – ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ ಶಿವಮೊಗ್ಗ,: ವಿನೋಬ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ದಾಳಿ ನಡೆದಿದೆ. ಎರಡು ಪ್ರತ್ಯೇಕ ದಾಳಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಜೆ. ಹೆಚ್. ಪಟೇಲ್ ಬಡಾವಣೆ ತುಂಗಾ ಚಾನಲ್ ದಂಡೆಯಲ್ಲಿ ವ್ಯಕ್ತಿಯೊಬ್ಬನು ದ್ವಿಚ ಕ್ರ ವಾಹನವನ್ನು ನಿಲ್ಲಿಸಿಕೊಂಡು, ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಾಹಿತಿಯ ಮೇರೆಗೆ ದಾಳಿ ನಡೆಸಲಾಗಿದ್ದು   ಗಾಂಜಾ ಮಾರಾಟ ಮಾಡುತ್ತಿದ್ದ ಸಾಗರ ತಾಲೂಕಿನ ಬಿಲಗೋಡಿ ಗ್ರಾಮದ ಪ್ರತಾಪ್ ಎಸ್,…

Read More

ವ್ಹೀಲಿಂಗ್ ಮಾಡಿದ ಯುವಕನಿಗೆ 5 ಸಾವಿರ ರೂ. ದಂಡ

ವ್ಹೀಲಿಂಗ್ ಮಾಡಿದ ಯುವಕನಿಗೆ 5 ಸಾವಿರ ರೂ. ದಂಡ ಶಿವಮೊಗ್ಗ: ಸಂಚಾರಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ವೇಳೆಯೇ ವೀಲಿಂಗ್ ಮಾಡಿ ಸಿಕ್ಕಿಬಿದ್ದ ಸವಾರನಿಗೆ 5 ಸಾವಿರ ರೂ. ದಂಡ ವಿಧಿಸಿ ಕೋರ್ಟ್ ಆದೇಶಿಸಿದೆ. ಶಿವಮೊಗ್ಗ ನಗರದ ಗಾರ್ಡನ್ ಏರಿಯಾದ ಗೌರವ್ಲಾಡ್ಜ್ ಸಮೀಪ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಪಿಎಸ್‌ಐ ತಿರುಮಲೇಶ್‌ ಹಾಗೂ ಸಿಬ್ಬಂದಿಗಳು ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಬೈಕ್ ಸವಾರನೋರ್ವ ವೀಲಿಂಗ್ ಮಾಡಿದ್ದನು. ಆತನ ವಿರುದ್ಧ ಪೊಲೀಸರು ನೋಟೀಸ್ ನೀಡಿದ್ದು, ಇದೀಗ ಶಿವಮೊಗ್ಗದ ಜಿಲ್ಲಾ…

Read More

ಅಕ್ರಮ ಮರಳು ಅಡ್ಡೆ ಮೇಲೆ ದಿಡೀರ್ ದಾಳಿ

ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ದಿಡೀರ್ ದಾಳಿ ಅಕ್ರಮವಾಗಿ ಮರಳು (Sand) ಸಾಗಣೆ ಮಾಡುತ್ತಿದ್ದ ಆರೋಪದ ಹಿನ್ನೆಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಕಳೆದ ರಾತ್ರಿ ದಿಢೀರ್‌ ದಾಳಿ ನಡೆಸಿದ್ದಾರೆ. ಈ ಸಂದರ್ಭ ಅಧಿಕಾರಿಗಳನ್ನು ಕಂಡು ಮರಳು ಸಾಗಿಸುತ್ತಿದ್ದ ಟ್ರಾಕ್ಟರ್‌ ನಿಲ್ಲಿಸದೆ ಪರಾರಿಯಾಗಿದ್ದಾನೆ. ಆದರೆ ಜೆಸಿಬಿಯೊಂದು ಸಿಕ್ಕಿಬಿದ್ದಿದೆ. ಶಿವಮೊಗ್ಗ ತಾಲೂಕು ಹಾಡೋನಹಳ್ಳಿಯಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ನದಿಯಲ್ಲಿ ಅಕ್ರಮವಾಗಿ ಮರಳು ತೆಗೆದು ಸಾಗಿಸುತ್ತಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆ ಗಣಿ ಮತ್ತು ಭೂ…

Read More

ನದಿಯ ದಡದಲ್ಲಿ ರುಂಡವಿಲ್ಲದ ಶವ ಪತ್ತೆ

ನದಿಯ ದಡದಲ್ಲಿ ರುಂಡವಿಲ್ಲದ ಶವ ಪತ್ತೆ ಶಿವಮೊಗ್ಗ: ತಲೆಯಿಲ್ಲದ ಅನಾಮಧೇಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಬೇಡರಹೊಸಹಳ್ಳಿಯ ತುಂಗ ನದಿಯ ದಡದಲ್ಲಿ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಪತ್ತೆಯಾದ ಮೃತದೇಹದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.‌ ಬೇಡರಹೊಸಹಳ್ಳಿಯ ಬಸರಾಜ ಗೌಡರ ಅಡಿಕೆ ತೋಟದ ಹಿಂಭಾಗದಲ್ಲಿ ಹರಿಯುವ ತುಂಗ ನದಿಯ ದಡದಲ್ಲಿ ಕಲ್ಲು ಮಣ್ಣಿನ ದಿಣ್ಣೆಯಲ್ಲಿ ಪತ್ತೆಯಾಗಿದೆ. ಸಾರ್ವಜನಿಕರು ನೋಡಿ ತೋಟದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಅನಾಮಧೇಯ ಶವದ ಬಗ್ಗೆ ಹಲವು ಶಂಕೆಗಳನ್ನ ವ್ಯಕ್ತಪಡಿಸಲಾಗಿದೆ ಈ…

Read More