ಕ್ರೈಂ ಸುದ್ದಿ:
ಅಬಕಾರಿ ದಾಳಿ : ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ
ಅಬಕಾರಿ ಇಲಾಖೆ ದಾಳಿ : ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ ಶಿವಮೊಗ್ಗ ನಗರದ ಸವಳಂಗ ರಸ್ತೆಯ ಫ್ಲೆ ಓವರ್ನ ಅಂಡರ್ ಪಾಸ್ನಲ್ಲಿ ಡಿ.30 ರಂದು ಅಬಕಾರಿ ದಾಳಿ ನಡೆಸಿ 180 ಮಿ.ಲಿ.ನ ಮ್ಯಾಕ್ಡೋವೆಲ್ಸ್ ನಂ-1 ವಿಸ್ಕಿಯ 170 ಬಾಟಲಿಗಳು ಅಂದಾಜು ಮೌಲ್ಯ ರೂ.1,35,000 ದ ಒಟ್ಟು 30,600 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ) ದಾವಣಗೆರೆ ವಿಭಾಗ, ದಾವಣಗೆರೆ ಹಾಗೂ ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ ಇವರ…
Anandapura | ಕಾರು- ಬಸ್ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು
Anandapura | ಕಾರು- ಬಸ್ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು ಶಿವಮೊಗ್ಗ: ಸಾಗರ ತಾಲ್ಲೂಕು ಆನಂದಪುರ ಸಮೀಪದ ಇವತ್ತು ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಖಾಸಗಿ ಬಸ್ ಹಾಗೂ ಕಾರು ನಡುವಿನ ಡಿಕ್ಕಿಯಲ್ಲಿ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನ ದೊಡ್ಡಬಳ್ಳಾಪುರದ ಮೂಲದವರು ಎನ್ನಲಾಗಿದ್ದು, ಅಕ್ಷಯ್ ಹಾಗೂ ಶರಣ್ ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ಇಲ್ಲಿನ ಮುರುಘಾಮಠದ ಸಮೀಪ ಇವತ್ತು ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಎರಟಿಗಾ ಕಾರು ಧರ್ಮಸ್ಥಳಕ್ಕೆ…
ತಾಳಗುಪ್ಪ – ಮೈಸೂರು ರೈಲಿನಲ್ಲಿ ಮಾಂಗಲ್ಯ ಸರ ಕಳವು – 72 ಗಂಟೆಗಳಲ್ಲಿ ಪತ್ತೆ
ತಾಳಗುಪ್ಪ – ಮೈಸೂರು ರೈಲಿನಲ್ಲಿ ಮಾಂಗಲ್ಯ ಸರ ಕಳವು – 72 ಗಂಟೆಗಳಲ್ಲಿ ಪತ್ತೆ ತಾಳಗುಪ್ಪ – ಮೈಸೂರು ರಾತ್ರಿ ಎಕ್ಸ್ಪ್ರೆಸ್ ರೈಲಿನಲ್ಲಿ ಮಹಿಳೆಯ ಮಾಂಗಲ್ಯ ಸರ ಕಳ್ಳತನ ಪ್ರಕರಣವನ್ನು ರೈಲ್ವೆ ಪೊಲೀಸರು ಮೂರೇ ದಿನದಲ್ಲಿ ಬೇಧಿಸಿದ್ದಾರೆ. ಆರೋಪಿಯನ್ನು ಬಂಧಿಸಿದ್ದು ಆತನಿಂದ 3 ಲಕ್ಷ ರೂ. ಮೌಲ್ಯದ 60 ಗ್ರಾಂ ತೂಕದ ಮಾಂಗಲ್ಯ ಸರ ವಶಪಡಿಸಿಕೊಂಡಿದ್ದಾರೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ಧರ್ಮನಾಯ್ಕ್ ಬಂಧಿತ ಆರೋಪಿಯಾಗಿದ್ದಾನೆ. ಕದ್ದ ಮಾಂಗಲ್ಯ ಸರವನ್ನು ತನ್ನೂರಿನಲ್ಲಿ ಮಾರಾಟ ಮಾಡಲು ತೆರಳುವಾಗ ಈತ ಸಿಕ್ಕಿಬಿದ್ದಿದ್ದಾನೆ….
ಬೈಕ್ ವೀಲಿಂಗ್ ಮಾಡಿದ್ದ ಯುವಕನಿಗೆ ದಂಡ
ಬೈಕ್ ವೀಲಿಂಗ್ ಮಾಡಿದ್ದ ಯುವಕನಿಗೆ ದಂಡ ಶಿವಮೊಹ್ಹ: ನಗರದಲ್ಲಿ ಬೈಕ್ ವೀಲಿಂಗ್ ಮಾಡಿದ್ದ ವಿದ್ಯಾರ್ಥಿಯೊಬ್ಬನಿಗೆ 6 ಸಾವಿರ ರೂಪಾಯಿ ದಂಡ ವಿಧಿಸಿ ಶಿವಮೊಗ್ಗ ಜಿಲ್ಲಾ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ಗುರುವಾರ ಆದೇಶಿಸಿದೆ. ಆರೋಪಿಯು ನಂಬರ್ ಪ್ಲೇಟ್ ಇಲ್ಲದೇ ನಗರದಲ್ಲಿ ಬೈಕ್ ಓಡಿಸುತ್ತಿದ್ದಾಗ ಪಶ್ಚಿಮ ಸಂಚಾರ ಠಾಣೆ ಪಿಎಸ್ಐ ತಿರುಮಲೇಶ್ ನೇತೃತ್ವದಲ್ಲಿ ತಡೆದು ವಿಚಾರಣೆ ಮಾಡಲಾಗಿದೆ. ಆ ವೇಳೆ, ಮೊಬೈಲ್ ಪರಿಶೀಲಿಸಿದಾಗ ಬೈಕ್ ವೀಲಿಂಗ್ ಮಾಡಿದ ವಿಡಿಯೊ ಚಿತ್ರೀಕರಿಸಿದ್ದು, ಇನ್ ಸ್ಟಾಗ್ರಾಂನಲ್ಲಿ ಪತ್ತೆಯಾಗಿತ್ತು. ಆತನ ವಿರುದ್ಧ…
RIPPONPETE | ಗವಟೂರು ಬಳಿಯಲ್ಲಿ ಹಿಟ್ ಆಂಡ್ ರನ್ ಗೆ ಬೈಕ್ ಸವಾರ ಸಾವು
RIPPONPETE | ಗವಟೂರು ಬಳಿಯಲ್ಲಿ ಹಿಟ್ ಆಂಡ್ ರನ್ ಗೆ ಬೈಕ್ ಸವಾರ ಸಾವು ರಿಪ್ಪನ್ಪೇಟೆ : ಇಲ್ಲಿನ ಗವಟೂರು ಬಳಿಯಲ್ಲಿ ಬೆಳ್ಳಂಬೆಳ್ಳಗ್ಗೆ ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಗವಟೂರು ಸಮೀಪದ ಬಿಳಿಕಿ ನಿವಾಸಿ ಸಂಜೀವ್ ಪೂಜಾರಿ (65) ಮೃತ ದುರ್ಧೈವಿಯಾಗಿದ್ದಾರೆ. ಟಿವಿಎಸ್ ಎಕ್ಸೆಲ್ ಬೈಕ್ ನಲ್ಲಿ ಇಂದು ಬೆಳಿಗ್ಗೆ ಮನೆಯಿಂದ ರಿಪ್ಪನ್ಪೇಟೆ ಹೊರಡುತಿದ್ದಾಗ ಗವಟೂರು ಸರ್ಕಾರಿ ಶಾಲೆಯ ಸಮೀಪದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್ ಸವಾರನಿಗೆ…
ಅಕ್ರಮ ಬಂಧನದಲ್ಲಿರಿಸಿದ್ದ ಮುಶಿಯಾ (ಕಪ್ಪು ಮೂತಿಯ ಬುಕ್ಕ) ರಕ್ಷಣೆ – ಓರ್ವ ಬಂಧನ
ಅಕ್ರಮ ಬಂಧನದಲ್ಲಿರಿಸಿದ್ದ ಮುಶಿಯಾ (ಕಪ್ಪು ಮೂತಿಯ ಬುಕ್ಕ) ರಕ್ಷಣೆ – ಓರ್ವ ಬಂಧನ ಅಕ್ರಮವಾಗಿ ಬಂಧನದಲ್ಲಿರಿಸಿದ್ದ ಮುಶಿಯಾ ( ಗ್ರೇ ಲಂಗೂರು) ನನ್ನು ಪೊಲೀಸ್ ಅರಣ್ಯ ಸಂಚಾರಿ ದಳ ಸಾಗರ ಪತ್ತೆ ಹಚ್ವಿ ಆರೋಪಿಯನ್ನು ವಶಕ್ಕೆ ಪಡೆದಿರುವ ಘಟನೆ ಸಾಗರ ತಾಲೂಕಿನ ಗಡಿಕಟ್ಟೆ ಬಳಿಯಲ್ಲಿ ನಡೆದಿದೆ. ಅಕ್ರಮವಾಗಿ ಕಾಡಿನಿಂದ ಸೆರೆ ಹಿಡಿದು ಬಂಧನದಲ್ಲಿ ಇರಿಸಿದ್ದ ಗ್ರೇ ಲಂಗೂರ್ (Semnopythecus Entellus) ಶೆಡ್ಯೂಲ್ ll ಸಸ್ತನಿ ಯನ್ನು ಆರೋಪಿಯ ಬಂಧನದಿಂದ ರಕ್ಷಿಸಿ, ವನ್ಯಜೀವಿ ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು…
ಕ್ರಿಸ್ಮಸ್ ರಜೆ ಹಿನ್ನಲೆ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ಸಾವು
ಕ್ರಿಸ್ಮಸ್ ರಜೆ ಹಿನ್ನಲೆ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ಸಾವು ಶಿವಮೊಗ್ಗ: ನಗರದ ಕಲ್ಲೂರು-ಮಂಡ್ಲಿ ಬಳಿಯ ಬಂಡೆಕಲ್ಲು ಎಂಬಲ್ಲಿ ತುಂಗಾ ಚಾನೆಲ್ಗೆ ಕ್ರಿಸ್ಮಸ್ ದಿನದಂದು ಈಜಲು ತೆರಳಿದ್ದ ಪ್ರೌಢಶಾಲಾ ವಿದ್ಯಾರ್ಥಿಯೋರ್ವ ಮುಳುಗಿ ಸಾವನ್ನಪ್ಪಿದ್ದು, ಗುರುವಾರ ಶವ ಪತ್ತೆಯಾಗಿದೆ. ಹಳೆ ಮಂಡ್ಲಿ ನಿವಾಸಿ ಮೋಹಿತ್ (೧೫) ಸ್ನೇಹಿತರೊಂದಿಗೆ ಬುಧವಾರ ಮಧ್ಯಾಹ್ನ ೩ ಗಂಟೆ ಹೊತ್ತಿಗೆ ಕಲ್ಲೂರು ಮಂಡ್ಲಿ ಬಳಿಯ ಚಾನೆಲ್ ಬಳಿ ಹೋಗಿದ್ದನು. ನೀರು ನೋಡಿ ಈಜಲು ಹೋದ ಬಾಲಕ ನೀರುಪಾಲಾಗಿದ್ದನು. ಈತನ ಜೊತೆ ಹೋಗಿದ್ದ ಸ್ನೇಹಿತರು ಭಯದಿಂದ…
HOSANAGARA | ಮನೆಯ ಹೆಂಚು ತೆಗೆದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನ
HOSANAGARA | ಮನೆಯ ಹೆಂಚು ತೆಗೆದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನ ಹೊಸನಗರ ಗೋರಗೋಡು ಗ್ರಾಮದ ನಿವಾಸಿಯೊಬ್ಬರ ಮನೆಯ ಹೆಂಚು ತೆಗೆದು ಬರೋಬ್ಬರಿ 9 ಲಕ್ಷ ರೂಪಾಯಿ ಮೌಲ್ಯದ ಒಡವೆ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಗೊರಗೋಡು ಗ್ರಾಮದ ನಿವಾಸಿ ಪ್ರತಿಭಾ ಕೃಷ್ಟೋಜಿರಾವ್ ಎಂಬುವರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಕಳ್ಳರು ಮನೆಯ ಹೆಂಚುಗಳನ್ನು ತೆಗೆದು ಒಳನುಗ್ಗಿರುವ ಕಳ್ಳರು ಗೋದ್ರೇಜ್ ಬೀರುವಿನಲ್ಲಿಟ್ಟಿದ್ದ ಬಳೆ, ಸರ, ಓಲೆ ಸೇರಿದಂತೆ ಚಿನ್ನದ ಆಭರಣಗಳನ್ನು ಕಳವು ಮಾಡಿದ್ದಾರೆ.ಈ ವೇಳೆ ಮನೆಯವರು…
ಮೊಬೈಲ್ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ಮನನೊಂದು ಯುವತಿ ವಿಷ ಸೇವಿಸಿ ಸಾವು
ಮೊಬೈಲ್ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ಮನನೊಂದು ಯುವತಿ ವಿಷ ಸೇವಿಸಿ ಸಾವು ಶಿವಮೊಗ್ಗ : ಮೊಬೈಲ್ ನೋಡದಂತೆ ತಾಯಿ ಬುದ್ದಿ ಹೇಳಿದ್ದಕ್ಕೆ ಮನನೊಂದು ವಿಷ ಸೇವಿಸಿದ್ದ ಪದವಿ ವಿದ್ಯಾರ್ಥಿನಿಯೊಬ್ಬಳು ಇವತ್ತು ಸಾವನ್ನಪ್ಪಿದ್ದಾಳೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಆಕೆ ಕೊನೆಯುಸಿರೆಳೆದಿದ್ದಾಳೆ. ಹಾರನಹಳ್ಳಿಯ ಧನುಶ್ರೀ (20) ಮೃತಳು. ಮನೆಯಲ್ಲಿ ಓದುವುದನ್ನು ಬಿಟ್ಟು ಮೊಬೈಲ್ ಹಿಡಿದುಕೊಂಡಿದ್ದಕ್ಕೆ ತಾಯಿ ಬೈದಿದ್ದರಿಂದ ಮನನೊಂದು ಧನುಶ್ರೀ ಕಳೆನಾಶಕ ಸೇವಿಸಿದ್ದಳು. ಕೂಡಲೆ ಆಕೆಯನ್ನು ಆಯನೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ…
ಜೀಪ್ ಹಾಗೂ ಟೆಂಪೋ ಟ್ರಾವಲರ್ ನಡುವೆ ಅಪಘಾತ: ಐವರಿಗೆ ಗಾಯ
ಜೀಪ್ ಹಾಗೂ ಟೆಂಪೋ ಟ್ರಾವಲರ್ ನಡುವೆ ಅಪಘಾತ: ಐವರಿಗೆ ಗಾಯ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪ ಜೀಪ್ ಹಾಗೂ ಟಿಟಿ ಮುಖಾಮುಖಿ ಢಿಕ್ಕಿಯಾಗಿ 5 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ತಾಲೂಕಿನ ನಿಟ್ಟೂರು ಸಮೀಪದ ಮರಕುಟಿಗ ಬಳಿ ಇಂದು ಬೆಳಿಗ್ಗೆ ಘಟನೆ ನಡೆದಿದೆ.ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್ ಗೆ ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಟಿಟಿ ಢಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿವೆ. ಜೀಪ್ ನಲ್ಲಿದ್ದ 8 ಜನರಲ್ಲಿ ಮೂವರಿಗೆ ಗಂಭೀರ…