ಅಂತರ್ ಜಿಲ್ಲಾ ಕುಖ್ಯಾತ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು

ಅಂತರ್ ಜಿಲ್ಲಾ ಕುಖ್ಯಾತ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಬಂಕಾಪುರ : ವಿವಿಧ ಜಿಲ್ಲೆಗಳಲ್ಲಿ ಮನೆಗಳಿಗೆ ಕನ್ನ ಹಾಕಿ ನಗ, ನಗದು ಕಳವು ಮಾಡಿದ್ದ ಅಂತರ ಜಿಲ್ಲಾ ಕಳ್ಳ ಜಗದೀಶ್ ಅಲಿಯಾಸ್‌ ಕಣ್ಣನಹಳ್ಳಿ ಜಗ್ಗ ಎಂಬಾತನನ್ನು ಬಂಕಾಪುರ ಠಾಣೆ ಪಿಎಸ್ ಐ ನಿಂಗರಾಜ್ ಕೆ ನೇತ್ರತ್ವದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಗದೀಶ್ ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲ್ಲೂಕಿನ ಕಣ್ನನಹಳ್ಳಿ ಗ್ರಾಮದವನು. ಆರೋಪಿಯಿಂದ ಒಟ್ಟು 100600/- ಹಣ ಮತ್ತು ಕಳ್ಳತನ ಮಾಡಲು ಉಪಯೋಗಿಸಿದ ಸ್ವತ್ತುಗಳು 696,400/- ಹೀಗೆ…

Read More

ಕಾಡು ಹಂದಿ‌ ಭೇಟೆಯಾಡಿದ್ದ ಮೂವರ ವಿರುದ್ಧ ಕೇಸು – ಮಾಂಸ ವಶಕ್ಕೆ..!

ಕಾಡು ಹಂದಿ‌ ಭೇಟೆಯಾಡಿದ್ದ ಮೂವರ ವಿರುದ್ಧ ಕೇಸು – ಮಾಂಸ ವಶಕ್ಕೆ..! ಸಾಗರ : ತಾಲ್ಲೂಕಿನ ಬಾಳೆಗುಂಡಿ ಗ್ರಾಮದಲ್ಲಿ ಅಕ್ರಮ ಕಾಡುಹಂದಿ ಮಾಂಸ ಹಂಚಿಕೆ ಮಾಡಿಕೊಳ್ಳುತ್ತಿದ್ದ ಮೂವರ ವಿರುದ್ದ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಮಂಗಳವಾರ ಪ್ರಕರಣ ದಾಖಲಾಗಿದೆ. ಬಾಳೆಗುಂಡಿ ಗ್ರಾಮದ ಕೆರೆದಂಡೆಯ ಮೇಲೆ ಮೂವರು ಕಾಡುಹಂದಿ ಮಾಂಸ ಹಂಚಿಕೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಮೂವರು ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ ನಾಲ್ಕೂವರೆ ಕೆ.ಜಿ. ಮಾಂಸವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಪ್ರಭಾಕರ್,…

Read More

ಪೊಲೀಸರ ಮೇಲೆ ಕಂಟ್ರಿಮೇಡ್ ಪಿಸ್ತೂಲಿನಿಂದ ಅಟ್ಯಾಕ್ ಗೆ ಯತ್ನ – ನಸ್ರು ಕಾಲಿಗೆ ಗುಂಡು ಹಾರಿಸಿದ ಪೊಲೀಸರು , ನಡೆದಿದ್ದೇನು….!?

ಪೊಲೀಸರ ಮೇಲೆ ಕಂಟ್ರಿಮೇಡ್ ಪಿಸ್ತೂಲಿನಿಂದ ಅಟ್ಯಾಕ್ – ನಸ್ರು ಕಾಲಿಗೆ ಗುಂಡು ಹಾರಿಸಿದ ಪೊಲೀಸರು , ನಡೆದಿದ್ದೇನು….!? ಭದ್ರಾವತಿ :: ಇಲ್ಲಿನ ನ್ಯೂ ಟೌನ್ ಪೊಲೀಸ್ ಠಾಣೆಯ ಮಿತಿಯಲ್ಲಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಘಟನೆ ಇಂದು ಮುಂಜಾನೆ ಸಂಭವಿಸಿದೆ. 21 ವರ್ಷದ ನಸ್ರು ಅಲಿಯಾಸ್ ನಸ್ರುಲ್ಲಾ‌‌ ಎನ್ನುವ ವೆಲ್ಡಿಂಗ್ ಕೆಲಸ ಮಾಡುವ ಅನ್ವರ್ ಕಾಲೋನಿ ನಿವಾಸಿ ಮೇಲೆ ಗುಂಡಿನ ದಾಳಿ ನಡೆದಿದೆ. ಈತನ ಮೇಲೆ ಐದು ಪ್ರಕರಣಗಳಿವೆ.ನಿನ್ನೆ ಓಲ್ಡ್ ಟೌನ್ ಪೊಲೀಸ್ ಠಾಣೆಯ ಪಿಎಸ್ಐ…

Read More

ಚಾಕೊಲೇಟ್  ಕೊಡಿಸುವ ನೆಪ ಹೇಳಿ 5 ವರ್ಷದ ಬಾಲಕಿಯ ಅತ್ಯಾ*ಚಾರಕ್ಕೆ ಯತ್ನಿಸಿ ಕೊಲೆ –  ಘಟನೆ ನಡೆದ 6 ಗಂಟೆಯೊಳಗೆ ಪೊಲೀಸರ ಗುಂಡೇಟಿಗೆ ಆರೋಪಿ ಬಲಿ!

ಚಾಕೊಲೇಟ್  ಕೊಡಿಸುವ ನೆಪ ಹೇಳಿ 5 ವರ್ಷದ ಬಾಲಕಿಯ ಅತ್ಯಾ*ಚಾರಕ್ಕೆ ಯತ್ನಿಸಿ ಕೊಲೆ –  ಘಟನೆ ನಡೆದ 6 ಗಂಟೆಯೊಳಗೆ ಪೊಲೀಸರ ಗುಂಡೇಟಿಗೆ ಆರೋಪಿ ಬಲಿ! ಹುಬ್ಬಳ್ಳಿಯ ಅಧ್ಯಾಪಕ್ ನಗರದಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ, ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಐದು ವರ್ಷದ ಬಾಲಕಿಯ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹುಬ್ಬಳ್ಳಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಯ ಪತ್ತೆಗಾಗಿ ಹಲವು ತಂಡಗಳನ್ನು ರಚಿಸಿದ್ದರು. ಇನ್ನು ತನಿಖೆಗೆ ಇಳಿದ…

Read More

ಶರಾವತಿ ಹಿನ್ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

ಶರಾವತಿ ಹಿನ್ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು ಸಾಗರ, ಏ.೧೨ : ಶರಾವತಿ ನದಿ ಹಿನ್ನೀರಿನಲ್ಲಿ ಮುಳುಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ, ಸಾಗರ ತಾಲೂಕು ತಾಳಗುಪ್ಪ ಸಮೀಪದ ಬೆಳ್ಳೆಣ್ಣೆ ಎಂಬಲ್ಲಿ  ನಡೆದಿದೆ. ತಾಳಗುಪ್ಪದ ರಂಗನಾಥ ಕಾಲೋನಿ ನಿವಾಸಿಯಾದ ಮಾಜಿ ಎಪಿಎಂಸಿ ನಾಮ ನಿರ್ದೇಶಿತ ಸದಸ್ಯರಾದ ಚಂದ್ರಶೇಖರ (೫೮) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಅಗ್ನಿಶಾಮಕ ದಳ ಹಾಗೂ ಸ್ಥಳಿಯರು ನೀರಿನಿಂದ ಶವ ಹೊರತೆಗೆದಿದ್ದಾರೆ. ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಲಾರಿ, ಬೈಕ್ ನಡುವೆ ಡಿಕ್ಕಿ – ಯುವಕ ಸಾವು

ಲಾರಿ, ಬೈಕ್ ನಡುವೆ ಡಿಕ್ಕಿ – ಯುವಕ ಸಾವು ಭದ್ರಾವತಿ, ಏ. 12: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ, ಬೈಕ್ ಸವಾರ ಮೃತಪಟ್ಟ ಘಟನೆ ಹೊಳೆಹೊನ್ನೂರು ಸಮೀಪದ ಭದ್ರಾವತಿ ರಸ್ತೆಯ ಸಂತೋಷ್ ರೈಸ್ ಮಿಲ್ ಸಮೀಪ  ರಾತ್ರಿ ನಡೆದಿದೆ. ಮಾರಶೆಟ್ಟಿಹಳ್ಳಿ ಗ್ರಾಮದ ನಿವಾಸಿ ವಿನುತ್ ಘೋರ್ಪಡೆ (23) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಮೃತ ಯುವಕ ಭದ್ರಾವತಿ ತಾಲೂಕಿನ ಹಿರಿಯ ರೈತ ಮುಖಂಡ ಯಶವಂತರಾವ್ ಘೋರ್ಪಡೆ ಅವರ ಮೊಮ್ಮಗನಾಗಿದ್ದಾನೆ. ಭದ್ರಾವತಿಯ ಖಾಸಗಿ ನರ್ಸಿಂಗ್ ಆಸ್ಪತ್ರೆಯಲ್ಲಿ…

Read More

ದೇವರ ಹರಕೆಗೆ ತಂದಿದ್ದ ಕುರಿ ರಾತ್ರೋರಾತ್ರಿ ಮಾಯ ,  ಬೆಳಗೆದ್ದು ಅಯ್ಯೋಯ್ಯೋ ಅಂದ್ರು – ನಿಜವಾಗಿಯೂ ನಡೆದಿದ್ದೇನು..?

ದೇವರ ಹರಕೆಗೆ ತಂದಿದ್ದ ಕುರಿ ರಾತ್ರೋರಾತ್ರಿ ಮಾಯ ,  ಬೆಳಗೆದ್ದು ಅಯ್ಯೋಯ್ಯೋ ಅಂದ್ರು – ನಿಜವಾಗಿಯೂ ನಡೆದಿದ್ದೇನು..? ತೀರ್ಥಹಳ್ಳಿ : ದೇವರು ಎಂದರೇ ಅದೇನೋ ಭಯ ಭಕ್ತಿ ಅದರ ಜೊತೆಗೆ ಕೆಲವೊಂದು ನಂಬಿಕೆ. ಅದೇ ನಂಬಿಕೆಯಿಂದ ದೇವರಿಗಾಗಿ ಐದು ಕುರಿಯನ್ನು ಹರಕೆಯ ಸಲುವಾಗಿ ರಾತ್ರಿ ತಂದಿದ್ದರು. ಆದರೆ ಮಾರನೇ ದಿನ ಹರಕೆಗೆ ಕುರಿಯನ್ನು ಕಡಿಯಲು ನೋಡುವಾಗ ಕುರಿ ಮಂಗಮಾಯವಾಗಿದ್ದ ಘಟನೆಕುಚ್ಚಲು ಎಂಬ ಗ್ರಾಮದಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಮಾಳೂರು ಸಮೀಪದ ಕುಚ್ಚಲು ಎಂಬ ಗ್ರಾಮದಲ್ಲಿ ಭೂತರಾಯ ಉರಿಚೌಡಿ…

Read More

ಕಾರು ಮತ್ತು ಗೂಡ್ಸ್ ವಾಹನದ ನಡುವೆ ಭೀಕರ ಅಪಘಾತ – ಡಿಸಿಸಿ ಬ್ಯಾಂಕ್ ಉದ್ಯೋಗಿ ಸಾವು..!

ಕಾರು ಮತ್ತು ಗೂಡ್ಸ್ ವಾಹನದ ನಡುವೆ ಭೀಕರ ಅಪಘಾತ – ಡಿಸಿಸಿ ಬ್ಯಾಂಕ್ ಉದ್ಯೋಗಿ ಸಾವು..! ತೀರ್ಥಹಳ್ಳಿ : ತಡ ರಾತ್ರಿ ಭೀಕರ ಅಪಘಾತವೊಂದು ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ಸಮೀಪದ ಶಿವರಾಜಪುರ ಬಳಿ ನಡೆದಿದೆ. ಮಂಗಳೂರಿಂದ ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿ ನಿದ್ರೆ ಮಂಪರಿನಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಶಾಶ್ವತ್ (30 ವರ್ಷ) ಎಂದು…

Read More

ತೀರ್ಥಹಳ್ಳಿ ಮಹಿಷಿ ಮಠದಲ್ಲಿ ಕಳ್ಳತನ ಪ್ರಕರಣ – ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

ತೀರ್ಥಹಳ್ಳಿ ಮಹಿಷಿ ಮಠದಲ್ಲಿ ಕಳ್ಳತನ ಪ್ರಕರಣ – ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು ಶಿವಮೊಗ್ಗ: ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಮಹಿಷಿ ಗ್ರಾಮದಲ್ಲಿರುವ  ಉತ್ತರಾದಿ ಮಠದಲ್ಲಿ ಇತ್ತೀಚೆಗೆ ಸಂಭವಿಸಿದ ದರೋಡೆಗೆ ಸಂಬಂಧಿಸಿದಂತೆ ಆರೋಪಿ ಮತ್ತು ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿರುವ ಶ್ರೀನಿವಾಸ್ ಮತ್ತು ಅವರ ತಂಡವನ್ನು ಪೊಲೀಸರು ಬಂಧಿಸಲು ತೆರಳಿದ ವೇಳೆ ಆತ ಪೊಲೀಸರ ಮೇಲೆ ದಾಳಿ ನಡೆಸಲೆತ್ನಿಸಿದ್ದರಿಂದ ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಇದು ಶಿಕಾರಿಪುರದ ಕೆಂಗುಡ್ಡೆ ರಸ್ತೆಯ ಕೆರೆ ಏರಿ ಮೇಲೆ…

Read More

ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಸ್ಮಾರ್ಟ್ ಸಿಟಿ ಇಂಜಿನಿಯರ್

ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಸ್ಮಾರ್ಟ್ ಸಿಟಿ ಇಂಜಿನಿಯರ್ ಶಿವಮೊಗ್ಗ : ಜಾಹೀರಾತು ಫಲಕಗಳ ನಿರ್ವಹಣೆ ಮೊತ್ತದ ಬಿಡುಗಡೆಗೆ ಗುತ್ತಿಗೆ ಸಂಸ್ಥೆಯಿಂದ ₹1 ಲಕ್ಷ ಲಂಚ ಪಡೆಯುತ್ತಿದ್ದ ಇಲ್ಲಿನ ಸ್ಮಾರ್ಟ್ ಸಿಟಿ ಸಂಸ್ಥೆಯ ಚೀಫ್ ಎಂಜಿನಿಯರ್ ಎಂ.ಕೃಷ್ಣಪ್ಪ ಬುಧವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗದ ಎಕ್ಸ್‌ಟ್ರೀಮ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆ 2019ರಲ್ಲಿ ಸ್ಮಾರ್ಟ್ ಸಿಟಿ ಸಂಸ್ಥೆಯಿಂದ ನಗರದಲ್ಲಿ ಡಿಜಿಟಲ್ ಡಿಸ್‌ಪ್ಲೇ ಬೋರ್ಡ್ ಜಾಹೀರಾತಿಗೆ ಟೆಂಡರ್ ಪಡೆದುಕೊಂಡು ಕೆಲಸ ಮುಗಿಸಿ ಐದು ವರ್ಷ ಕಾಲ…

Read More