ಕ್ರೈಂ ಸುದ್ದಿ:
ಉಸಿರಾಟದ ಸಮಸ್ಯೆಗೆ ಬೇಸತ್ತು ನೇಣಿಗೆ ಶರಣಾದ ಯುವತಿ
ಉಸಿರಾಟದ ಸಮಸ್ಯೆಗೆ ಬೇಸತ್ತು ನೇಣಿಗೆ ಶರಣಾದ ಯುವತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿ ಒಬ್ಬಳು, ತೀವ್ರ ಅನಾರೋಗ್ಯದ ಹಿನ್ನೆಲೆಯಿಂದ ಬೇಸತ್ತಿದ್ದಾಳೆ. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ನೇತಾಜಿ ವೃತ್ತದ ಬಳಿಯ ವಿಜಯನಗರದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಶಿವಮೊಗ್ಗದಲ್ಲಿ ಅನಾರೋಗ್ಯಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿ ನೇಣು ಬಿಗಿದುಕೊಂಡು ಸೌಮ್ಯ (25) ಎನ್ನುವ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಶಿವಮೊಗ್ಗದ ನೇತಾಜಿ ವ್ರತ ಬಳಿಯ ವಿಜಯನಗರದಲ್ಲಿ…
RIPPONPETE | ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ – ಮದ್ಯದ ಹಾವಳಿಗೆ ಮತ್ತೊಂದು ಬಲಿ
RIPPONPETE | ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ – ಮದ್ಯದ ಹಾವಳಿಗೆ ಮತ್ತೊಂದು ಬಲಿ ರಿಪ್ಪನ್ಪೇಟೆ : ಪಟ್ಟಣದ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಕುಳಿತಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ವಿನಾಯಕ ವೃತ್ತದಲ್ಲಿರುವ ಬಸ್ ನಿಲ್ದಾಣದಲ್ಲಿ ಕೆದಲುಗುಡ್ಡೆ ಗ್ರಾಮದ ಷಣ್ಮುಖ (50)ವರ್ಷ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಲ್ಲಿ ಕುಳಿತಲ್ಲಿಯೇ ಮೃತಪಟ್ಟಿದ್ದಾನೆ ಎಂಬ ಹಿನ್ನೆಲೆಯಲ್ಲಿ ಸ್ಥಳೀಯರು ವೈದ್ಯರಾದ ಅನಂತ್ ಮಯ್ಯ ರವರಿಗೆ ಮಾಹಿತಿ ತಿಳಿಸಿದ್ದು ಕೂಡಲೇ ಸ್ಥಳಕ್ಕಾಗಮಿಸಿ ಪರಿಶೀಲಿಸಿದ ಅವರು ವ್ಯಕ್ತಿ ಮೃತಪಟ್ಟಿರುವ ಬಗ್ಗೆ ಧೃಡ ಪಡಿಸಿದ್ದಾರೆ….
ಜಮೀನಿನ ವಿದ್ಯುತ್ ಟಿಸಿ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
ಜಮೀನಿನ ವಿದ್ಯುತ್ ಟಿಸಿ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ ಜಮೀನಿನಲ್ಲಿದ್ದ ವಿದ್ಯುತ್ ಪರಿವರ್ತಕ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಭದ್ರಾವತಿಯ ದೊಡ್ಡೇರಿ ಗ್ರಾಮದಲ್ಲಿ ಬುಧವಾರ (ಜ.22) ರಾತ್ರಿ ನಡೆದಿದೆ. ಶಾಂತ ಕುಮಾರ (35) ಕೊಲೆಯಾದ ದುರ್ದೈವಿ. ಲೇಪಾಕ್ಷಿ ಎನ್ನುವ ವ್ಯಕ್ತಿ ಹಾಗೂ ಮತ್ತೋರ್ವ ಸೇರಿ ಶಾಂತಕುಮಾರನ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಜಮೀನಿನಲ್ಲಿದ್ದ ವಿದ್ಯುತ್ ಪರಿವರ್ತಕ ವಿಚಾರಕ್ಕೆ ಬುಧವಾರ ಸಂಜೆ ಜಗಳ ನಡೆದಿತ್ತು. ಗಲಾಟೆ ವಿಪರೀತಕ್ಕೆ ಹೋಗಿ ರಾತ್ರಿ ಮಚ್ಚಿನಿಂದ ಹಲ್ಲೆ…
ಅಪ್ರಾಪ್ತನಿಂದ ಬೈಕ್ ಚಾಲನೆ – 25 ಸಾವಿರ ರೂ. ದಂಡ
ಅಪ್ರಾಪ್ತನಿಂದ ಬೈಕ್ ಚಾಲನೆ – 25 ಸಾವಿ ರೂ. ದಂಡ ತೀರ್ಥಹಳ್ಳಿ : ಅಪ್ರಾಪ್ತ ಹುಡುಗನೊಬ್ಬ ಬೈಕ್ ಚಲಾಯಿಸಿದ ಹಿನ್ನಲೆಯಲ್ಲಿ ಜೆ ಎಂ ಎಫ್ ಸಿ ಕೋರ್ಟ್ ಹುಡುಗನ ಪೋಷಕರಿಗೆ ಭಾರಿ ದಂಡ ವಿಧಿಸಿದೆ. ತೀರ್ಥಹಳ್ಳಿ ಪಟ್ಟಣದ ಇಂದಿರಾನಗರದ ಶಾಲೆಯೊಂದರ ಸಮೀಪದಲ್ಲಿ ಅಪ್ರಾಪ್ತ ಬಾಲಕ ಬೈಕ್ ಚಲಾಯಿಸಿದ್ದು ಪೊಲೀಸರು ಆತನನ್ನು ಹಿಡಿದು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಅವರ ಪೋಷಕರಿಗೆ ನ್ಯಾಯಾಧೀಶರು 25000 ರೂ ದಂಡ ವಿಧಿಸಿದ್ದಾರೆ.
ಎಟಿಎಂನಲ್ಲಿ ರೈತನಿಗೆ ಸಹಾಯ ಮಾಡುವ ನೆಪದಲ್ಲಿ ಅಪರಿಚಿತ ವ್ಯಕ್ತಿಯಿಂದ ವಂಚನೆ
ಎಟಿಎಂನಲ್ಲಿ ರೈತನಿಗೆ ಸಹಾಯ ಮಾಡುವ ನೆಪದಲ್ಲಿ ಅಪರಿಚಿತ ವ್ಯಕ್ತಿಯಿಂದ ವಂಚನೆ ಆಯನೂರು : ಎಟಿಎಂ ಕೇಂದ್ರದಲ್ಲಿ ಹಣ ಬಿಡಿಸಲು ನೆರವು ನೀಡುವಂತೆ ನಟಿಸಿ, ATM ಕಾರ್ಡ್ ಬದಲಿಸಿ ರೈತರೊಬ್ಬರಿಗೆ ವಂಚಿಸಲಾಗಿದೆ. ಎಟಿಎಂ ಕಾರ್ಡ್ ಅದಲು ಬದಲಾಗಿ 20 ನಿಮಿಷದ ಒಳಗೆ 40 ಸಾವಿರ ರೂ. ಹಣ ಡ್ರಾ ಮಾಡಿ ವಂಚಿಸಿರುವ ಘಟನೆ ನಡೆದಿದೆ. ಹಾರ್ನಳ್ಳಿ ಗ್ರಾಮದ ದೇವಪ್ಪ, ಆಯನೂರಿನ ಬ್ಯಾಂಕ್ ಒಂದರ ಎಟಿಎಂ ಸೆಂಟರ್ನಲ್ಲಿ ಹಣ ಬಿಡಿಸಲು ತೆರಳಿದ್ದಾಗ ಘಟನೆ ಸಂಭವಿಸಿದೆ. ಅಪರಿಚಿತರು ದೇವಪ್ಪ ಅವರಿಗೆ ಹಣ…
RIPPONPETE | ವರಾನಹೊಂಡದ ಬಳಿಯಲ್ಲಿ ಭೀಕರ ಅಪಘಾತ – ಬೈಕ್ ಸವಾರ ಸಾವು
RIPPONPETE | ವರಾನಹೊಂಡದ ಬಳಿಯಲ್ಲಿ ಭೀಕರ ಅಪಘಾತ – ಬೈಕ್ ಸವಾರ ಸಾವು ರಿಪ್ಪನ್ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ವರಾನಹೊಂಡದ ಬಳಿಯಲ್ಲಿ ಭೀಕರ ಅಪಘಾತವಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಚಕ್ಕೊಡಬೈಲ್ ಸಮೀಪದ ಯಡಮನೆ ಗ್ರಾಮದ ಸುನೀಲ್ ಎಸ್ ವಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ನಡೆದಿದ್ದೇನು..!!?? ಸೋಮವಾರ ತಡರಾತ್ರಿ ಸುನೀಲ್ ತೀರ್ಥಹಳ್ಳಿ ಕಡೆಯಿಂದ ರಿಪ್ಪನ್ಪೇಟೆ ಕಡೆಗೆ ಪಲ್ಸರ್ NS 100 ಬೈಕ್ ನಲ್ಲಿ ತೆರಳುತಿದ್ದಾಗ ವರಾನಹೊಂಡದ ಬಳಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಘಟನೆಯಲ್ಲಿ…
ಅಡಿಕೆ ತೋಟದಲ್ಲಿ ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಮೂವರ ಬಂಧನ
ಅಡಿಕೆ ತೋಟದಲ್ಲಿ ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಮೂವರ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆಯ ವಿನಾಯಕ ನಗರದ ಬಳಿಯಲ್ಲಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಮೂವರನ್ನು ಪಿಎಸ್ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ಬಂಧಿಸಿದ್ದಾರೆ. ರಿಪ್ಪನ್ಪೇಟೆ ನಿವಾಸಿಗಳಾದ ವಿಜಯ್ ಕುಮಾರ್ , ವಿನಾಯಕ ಮತ್ತು ಸುಜಿತ್ ಬಂಧಿತ ಆರೋಪಿಯಾಗಿದ್ದಾರೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳವಾರ ಸಾಗರ ರಸ್ತೆಯಲ್ಲಿ…
ಚಿನ್ನಮನೆ ಸಮೀಪದಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು
ಚಿನ್ನಮನೆ ಸಮೀಪದಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಚಿನ್ನಮನೆ ಗ್ರಾಮದ ಬಳಿಯಲ್ಲಿ ನಡೆದಿದೆ. ರಿಪ್ಪನ್ಪೇಟೆ ಕಡೆಯಿಂದ ತೆರಳುತಿದ್ದ ಗಜಾನನ (ಚಕ್ರಾ) ಬಸ್ ಹಾಗೂ ಆಯನೂರು ಕಡೆಯಿಂದ ರಿಪ್ಪನ್ಪೇಟೆ ಕಡೆಗೆ ತೆರಳುತಿದ್ದ ಬೈಕ್ (KA 14 EG 6503) ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ…
ಬಸ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ | ಬಾಲಕಿಗೆ ಗಂಭೀರ ಗಾಯ
ಬಸ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ | ಬಾಲಕಿಗೆ ಗಂಭೀರ ಗಾಯ ಶಿವಮೊಗ್ಗ: ನಗರದ ಮಂಡ್ಲಿ ಪಂಪ್ ಹೌಸ್ ಬಳಿ ಬಸ್ ಹಾಗೂ ಸ್ಕೂಟಿ ಡಿಕ್ಕಿಯಾಗಿ ಆಕ್ಸಿಡೆಂಟ್ ಆಗಿದೆ. ಘಟನೆಯಲ್ಲಿ ಓರ್ವ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಬಾಲಕಿಯು ತಂದೆಯೊಂದಿಗೆ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಗಾಯಗೊಂಡಿರುವ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗೊಂದಿಚಟ್ನಹಳ್ಳಿ ನಿವಾಸಿಯೊಬ್ಬರು ತಮ್ಮ ಮಗಳನ್ನು ಕರೆದಕೊಂಡು ಸ್ಕೂಟಿಯಲ್ಲಿ ಬರುತ್ತಿದ್ದರು. ಈ ವೇಳೆ ಶಿವಮೊಗ್ಗದಿಂದ ಬಸ್ ಮಂಗಳೂರಿಗೆ ಹೊರಟಿತ್ತು.ಮಂಡ್ಲಿ ಸಮೀಪ…
ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಅಪಘಾತ – ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವು
ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಅಪಘಾತ – ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವು ಶಿವಮೊಗ್ಗ: ಬಾರಂದೂರು ಕ್ರಾಸ್ ಬಳಿ ಸಂಭವಿಸಿದ ಅಪಘಾತವೊಂದರಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಟ್ರ್ಯಾಕ್ಟರ್ ಹಾಗೂ ಕಾರು ನಡುವೆ ಡಿಕ್ಕಿಯಾದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಅವರನ್ನು ತರೀಕೆರೆಯ ಅಮೃತಾಪುರ ಮೂಲದವರು ಎನ್ನಲಾಗುತ್ತಿದ್ದು, ಕೃತಿ ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ MBBS ಓದುತ್ತಿದ್ದರು ಎಂದು ತಿಳಿದುಬಂದಿದೆ. ಇವರು ತರೀಕೆರೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಅಪಘಾತ…