ಕ್ರೈಂ ಸುದ್ದಿ:
ಸಿಗಂದೂರು ಬಳಿಯಲ್ಲಿ ತೆಪ್ಪ ಮುಳುಗಿ ಮೂವರು ಯುವಕರು ಕಣ್ಮರೆ
ಸಿಗಂದೂರು ಬಳಿಯಲ್ಲಿ ತೆಪ್ಪ ಮುಳುಗಿ ಮೂವರು ಕಣ್ಮರೆ ಶಿವಮೊಗ್ಗ: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಯುವಕರು ಕಣ್ಮರೆಯಾಗಿರುವ ಘಟನೆ ಇಂದು ಸಂಜೆ ನಡೆದಿದೆ. ಸಿಗಂದೂರು ಸಮೀಪದ ಕಳಸವಳ್ಳಿಯಲ್ಲಿ ಇವತ್ತು ಘಟನೆ ಸಂಭವಿಸಿದ್ದು ಮೂವರು ಯುವಕರು ಕಣ್ಮರೆಯಾಗಿದ್ದಾರೆ. ಚೇತನ್, ಸಂದೀಪ್ ಮತ್ತು ರಾಜು ಎಂಬುವವರು ಕಣ್ಮರೆಯಾಗಿದ್ದಾರೆ.ಸಿಗಂದೂರು, ಹುಲಿದೇವರ ಬನ ಮತ್ತು ಗಿಣಿವಾರದವರಾದ ಯುವಕರು ಕಣ್ಮರೆಯಾಗಿದ್ದಾರೆ. ತೆಪ್ಪದಲ್ಲಿ ಐವರು ಯುವಕರು ತೆರಳುತಿದ್ದು ಈ ವೇಳೆಯಲ್ಲಿ ತೆಪ್ಪ ಮಗುಚಿ ಮೂವರು ಕಣ್ಮರೆಯಾಗಿದ್ದಾರೆ ಇನ್ನಿಬ್ಬರು ಈಜಿ ದಡ ಸೇರಿದ್ದಾರೆ ಎನ್ನಲಾಗುತ್ತಿದೆ. ಸಿಗಂದೂರು,…
ಆಸ್ತಿ ವಿಚಾರದಲ್ಲಿ ಚಿಕ್ಕಪ್ಪನಿಂದಲೇ ಚಾಕು ಇರಿತ
ಆಸ್ತಿ ವಿಚಾರದಲ್ಲಿ ಚಿಕ್ಕಪ್ಪನಿಂದಲೇ ಚಾಕು ಇರಿತ SHIVAMOGGA | ಸಂಬಧಿಕರ ನಡುವೆ ಆಸ್ತಿ ವಿಚಾರದಲ್ಲಿ ಗಲಾಟೆ ನಡೆದು ಒರ್ವನಿಗೆ ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗದ ಗೌರವ್ ಹೋಟೆಲ್ ಬಳಿ ನಡೆದಿದೆ. ಸ್ಥಳೀಯ ನಿವಾಸಿ ಶ್ರೀರಂಗ ಎಂಬಾತನಿಗೆ ಅವರ ಚಿಕ್ಕಪ್ಪ ಚಾಕು ಇರಿದಿದ್ದಾರೆ.ಈ ಹಿಂದೆಯೂ ಸಹ ಇವರಿಬ್ಬರ ನಡುವೆ ಆಸ್ತಿ ವಿಚಾರದಲ್ಲಿ ಗಲಾಟೆ ನಡೆದಿತ್ತು. ಕಳೆದ ಭಾನುವಾರ ಮತ್ತೆ ಇದೇ ವಿಚಾರವಾಗಿ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಶ್ರೀರಂಗನಿಗೆ ಚಿಕ್ಕಪ್ಪ ಚಾಕುವಿನಿಂದ ಇರಿದಿದ್ದಾರೆ. ಈ ಸಂಬಂಧ ದೊಡ್ಡಪೇಟೆ…
ಕಡವೆ ಭೇಟೆ -ಓರ್ವನ ಬಂಧನ , ನಾಲ್ವರು ಪರಾರಿ
ಕಡವೆ ಭೇಟೆ -ಓರ್ವನ ಬಂಧನ , ನಾಲ್ವರು ಪರಾರಿ ಕಡವೆ ಬೇಟೆಯಾಡಿದ ಆರೋಪದ ಮೇಲೆ ಓರ್ವ ಆರೋಪಿಯನ್ನು ಬಂಧಿಸಿದ್ದು ಉಳಿದ ನಾಲ್ವರು ಪರಾರಿಯಾಗಿರುವ ಘಟನೆ ಜಿಲ್ಲೆಯ ದಾನವಾಡಿ ಕಿರು ಅರಣ್ಯ ಪ್ರದೇಶದಲ್ಲಿ ಮಂಗಳವಾರ(ನ.12) ನಡೆದಿದೆ. ಬಂಧಿತ ಆರೋಪಿಯನ್ನು ಮಂಜುನಾಥ್ ಎನ್ನಲಾಗಿದ್ದು ಬಂಧಿತನಿಂದ ಕಡವೆ ಮಾಂಸ ಬೇಟೆಗೆ ಬಳಸಿದ ಆಯುಧಗಳನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಶಿಶ್ ರೆಡ್ಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ನಾಲ್ವರು ಪರಾರಿಯಾಗಿದ್ದು ಅವರ ಪತ್ತೆಗೆ…
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತಿದ್ದ ನಟೋರಿಯಸ್ ಖದೀಮನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತಿದ್ದ ನಟೋರಿಯಸ್ ಖದೀಮನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಹಲವು ವರ್ಷಗಳಿಂದ ಮನೆಗಳ್ಳತನವೆಸಗುತ್ತಾ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಾ ಪರಾರಿಯಾಗುತಿದ್ದ ನಟೋರಿಯಸ್ ಖದೀಮನನ್ನು ಬಂಧಿಸಿ ಹೆಡೆಮುರಿ ಕಟ್ಟುವಲ್ಲಿ ಬಂಕಾಪುರ ಪಿಎಸ್ಐ ನಿಂಗರಾಜ್ ಕೆ ವೈ ನೇತ್ರತ್ವದ ಪೊಲೀಸರು ಯಶಸ್ವಿಯಾಗಿದ್ದಾರೆ. ಖಾಜಾ ತಂದೆ ಹಜರೇಸಾಬ ಹಾವೇರಿ, 26 ವರ್ಷ, 3ನೇ ಕ್ರಾಸ್, ಈಶ್ವರನಗರ, ಹುಬ್ಬಳ್ಳಿ, ಧಾರವಾಡ ಜಿಲ್ಲೆ, ಬಂಧಿತ ಆರೋಪಿಯಾಗಿದ್ದಾನೆ. ದಿನಾಂಕ 5-10-2024ರಂದು ರಾತ್ರಿ ಬಂಕಾಪುರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಕಳ್ಳತನವಾಗಿತ್ತು. ಮನೆಗೆ ನುಗ್ಗಿದ್ದ ಯಾರೋ, ಮನೆಯಲ್ಲಿದ್ದ…
RIPPONPETE | ದುರ್ಗಾಂಬ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ
RIPPONPETE | ದುರ್ಗಾಂಬ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಸಮೀಪದ ಚಿಕ್ಕಜೇನಿಯಲ್ಲಿ ನಡೆದಿದೆ. ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಬಸ್ ಗೆ ಹೊಸನಗರದಿಂದ ಬರುತಿದ್ದ ಭತ್ತ ಕಟಾವು ಯಂತ್ರವನ್ನು ಕೊಂಡೊಯ್ಯುತಿದ್ದ ತಮಿಳುನಾಡಿನ ಲಾರಿಗೆ ಡಿಕ್ಕಿಯಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣತಪ್ಪಿ ಬಸ್ ಪಲ್ಟಿಯಾಗಿದ್ದು, ಬಸ್ ನಲ್ಲಿ 20 ಪ್ರಯಾಣಿಕರಿದ್ದು…
ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ – 62ವರ್ಷದ ವೃದ್ದನಿಗೆ ಶಿಕ್ಷೆ ಪ್ರಕಟ
ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ – 62ವರ್ಷದ ವೃದ್ದನಿಗೆ ಶಿಕ್ಷೆ ಪ್ರಕಟ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ 27 ವರ್ಷದ ಮಹಿಳೆಯನ್ನ ಲೈಂಗಿಕವಾಗಿ ಬಳಸಿಕೊಂಡ 62 ವರ್ಷದ ವೃದ್ಧನಿಗೆ ಇಲ್ಲಿನ 2ನೇ ಜೆಎಂಎಫ್ ಸಿ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2016ನೇ ಸಾಲಿನಲ್ಲಿ ಶಿವಮೊಗ್ಗ ಟೌನ್ ನ 62 ವರ್ಷದ ವ್ಯಕ್ತಿಯೊಬ್ಬ 27 ವರ್ಷದ ಮಹಿಳೆಯೊಬ್ಬಳಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದನು. ಆಕೆಯ ಫೋಟೋಗಳನ್ನು…
ಶತಾಯುಷಿ ಮೀನಜ್ಜ ಅಪಘಾತದಲ್ಲಿ ಸಾವು – ಹಿಟ್ ಅಂಡ್ ರನ್ ಗೆ ಬಲಿಯಾದ ಸ್ವಾವಲಂಬಿ ಶತಾಯುಷಿ
ಶತಾಯುಷಿ ಮೀನಜ್ಜ ಅಪಘಾತದಲ್ಲಿ ಸಾವು – ಹಿಟ್ ಅಂಡ್ ರನ್ ಗೆ ಬಲಿಯಾದ ಸ್ವಾವಲಂಬಿ ಶತಾಯುಷಿ ಹುಲಿಕಲ್ ನಿವಾಸಿ 102 ವರ್ಷದ ಮೀನಜ್ಜ ಅಲಿಯಾಸ್ ಕೃಷ್ಣ ದೇವರು ಎಂಬುವವರು ಭಾನುವಾರ (ನ.10) ರಸ್ತೆ ಅಪಘಾತಕ್ಕೆ ಮರಣಹೊಂದಿದ ಘಟನೆ ನಡೆದಿದೆ. ರಾತ್ರಿ 8 ರಿಂದ 8.30ರ ಸುಮಾರಿಗೆ ರಸ್ತೆ ಬದಿಯಲ್ಲಿ ಸಾಗುತ್ತಿದ್ದ ವೇಳೆ ಕಾರು ಮತ್ತು ಟ್ಯಾಂಕರ್ ಓವರ್ ಟೇಕ್ ಮಾಡುವ ಭರದಲ್ಲಿ ಮೀನಜ್ಜನಿಗೆ ಡಿಕ್ಕಿ ಹೊಡೆದ ಪರಿಣಾಮ ಮೀನಜ್ಜ ತೀವ್ರ ಗಾಯಗೊಂಡಿದ್ದು ನಗರ ಆಸ್ಪತ್ರೆಗೆ ಕರೆತರುವ ಮುನ್ನವೇ…
ಹುಂಚ ಬಳಿಯಲ್ಲಿ ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಪಿಕಪ್ ವಾಹನ
ಹುಂಚ ಬಳಿಯಲ್ಲಿ ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಪಿಕಪ್ ವಾಹನ ಟಾಟಾ ಏಸ್ ವಾಹನವೊಂದಕ್ಕೆ ಬೆಂಕಿ ಹತ್ತಿಕೊಂಡು ಉರಿದು ಭಸ್ಮವಾಗಿರುವ ಘಟನೆ ಇಂದು ಬೆಳಗಿನಜಾವ ನಡೆದಿದೆ. ಶಿವಮೊಗ್ಗ ಜಿಲ್ಲೆಯ ರಿಪ್ಪನ್ಪೇಟೆ ಸಮೀಪದ ಹಾದಿಗಲ್ಲು ಗ್ರಾಮದಲ್ಲಿ ಇಂದು ಬೆಳಗಿನ ಜಾವ ಟಾಟಾ ಏಸ್ ವಾಹನವೊಂದು ಬೆಂಕಿಯಿಂದ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಹಾದಿಗಲ್ಲು – ಹುಂಚದ ಕಟ್ಟೆ ನಡುವಿನ ಮುನಿಯೂರು ಕ್ರಾಸ್ ಬಳಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ವಾಹನವು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಸೋಮವಾರ ಬೆಳಗಿನ ಜಾವ…
8ನೇ ತರಗತಿಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆಗೆ ಶರಣು
8ನೇ ತರಗತಿಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆಗೆ ಶರಣು 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಶನಿವಾರ ಮಾರ್ನಿಂಗ್ ಸ್ಕೂಲ್ ಮುಗಿಸಿಕೊಂಡು ಮನೆಗೆ ತೆರಳಿದ್ದ ಫಾತಿಮಾ (13) ಎಂಬ ಬಾಲಕಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ಬಿಹೆಚ್ ರಸ್ತೆಯಲ್ಲಿರುವ ಪ್ರತಿಷ್ಠಿತ ಶೂ ಅಂಗಡಿಯ ಮಾಲೀಕರ ಮಗಳಾಗಿದ್ದ ಫಾತಿಮಾ ಕೆ ಆರ್ ಪುರಂ ನಲ್ಲಿರುವ ತಮ್ಮ ಮನೆಯಲ್ಲಿ ನೇಣಿಗೆ…
ಊಟ ಬಡಿಸಲು ನಿರಾಕರಿಸಿದ ಹೆಂಡತಿ – ಟವೆಲ್ ನಿಂದ ಕುತ್ತಿಗೆ ಬಿಗಿದು ಪತ್ನಿಯನ್ನು ಕೊಂದ ಪತಿರಾಯ
ಊಟ ಬಡಿಸಲು ನಿರಾಕರಿಸಿದ ಹೆಂಡತಿ – ಟವೆಲ್ ನಿಂದ ಕುತ್ತಿಗೆ ಬಿಗಿದು ಪತ್ನಿಯನ್ನು ಕೊಂದ ಪತಿರಾಯ ಊಟ ಬಡಿಸಲು ನಿರಾಕರಿಸಿದ ಪತ್ನಿಯ ಕತ್ತನ್ನು ಟವಲ್ನಲ್ಲಿ ಬಿಗಿದು ಪತಿಯೇ ಕೊಂದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಅಂಬ್ಲಿಗೊಳ ಗ್ರಾಮದಲ್ಲಿ ನಡೆದಿದೆ. ಅಂಬ್ಲಿಗೊಳ ಗ್ರಾಮದ ಗೌರಮ್ಮ (28) ಕೊಲೆಯಾದ ಮಹಿಳೆ. ಪತಿ ಮನು (35) ಕೊಲೆಗೈದ ಆರೋಪಿಯಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಗೌರಮ್ಮ ಶಿಕಾರಿಪುರದ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ಮಧ್ಯಾಹ್ನ ಗಂಡ ಮನು ಮನೆಗೆ ಬಂದಾಗ ಪತ್ನಿ…