ಕ್ರೈಂ ಸುದ್ದಿ:
ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ.! – ರೀಲ್ಸ್ ಮಾಡಿ ಸಿಕ್ಕಿ ಬಿದ್ದ ಮಹಿಳೆ
ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ! ರೀಲ್ಸ್ ಮಾಡಿ ಸಿಕ್ಕಿ ಬಿದ್ದ ಮಹಿಳೆ ಬೆಂಗಳೂರಿನ ಸದಾಶಿವನಗರ ಠಾಣೆ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಮನೆಯ ಬಾಲ್ಕನಿಯಲ್ಲಿ ಹೂವಿನ ಪಾಟ್ ಗಳ ನಡುವೆ ಮಾದಕವಸ್ತು ಗಾಂಜಾ ಗಿಡ ಬೆಳೆದಿದ್ದ ದಂಪತಿಯನ್ನು ಬಂಧಿಸಿದ್ದಾರೆ. ಎಂ.ಎಸ್.ರಾಮಯ್ಯ ನಗರದ 3ನೇ ಮುಖ್ಯರಸ್ತೆ 6ನೇ ಅಡ್ಡರಸ್ತೆ ನಿವಾಸಿಗಳಾದ 37 ವರ್ಷದ ಊರ್ಮಿಳಾ ಕುಮಾರಿ ಮತ್ತು 38 ವರ್ಷದ ಸಾಗರ್ ಗುರುಂಗ್ ಬಂಧಿತ ದಂಪತಿ ಎನ್ನಲಾಗಿದೆ. ಆರೋಪಿಗಳಿಂದ 54 ಗ್ರಾಂ ಗಾಂಜಾ ಸೊಪ್ಪು, ಎರಡು ಪಾಟ್…
ಮೆಸ್ಕಾಂ ಸಿಬ್ಬಂದಿ ಆತ್ಮಹತ್ಯೆ – ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಜೀವತೆತ್ತನಾ ಮೆಸ್ಕಾಂ ನೌಕರ
ಮೆಸ್ಕಾಂ ಸಿಬ್ಬಂದಿ ಆತ್ಮಹತ್ಯೆ – ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಜೀವತೆತ್ತನಾ ಮೆಸ್ಕಾಂ ನೌಕರ ಅಧಿಕಾರಿಗಳು ನಡೆಸಿದ ಭ್ರಷ್ಟಾಚಾರಕ್ಕೆ ಮೆಸ್ಕಾಂ ನೌಕರನೊಬ್ಬ ಜೀವ ತೆತ್ತ ಘಟನೆ ಆಯನೂರು ಸಮೀಪದ ಕುಂಸಿಯ ಮೆಸ್ಕಾಂ ವಸತಿ ಗೃಹದಲ್ಲಿ ನಿನ್ನೆ(ಗುರುವಾರ) ನಡೆದಿದೆ. ನಂದೀಶ್ (38) ಎಂಬಾತನೇ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಇಲಾಖೆಯ ವಸತಿ ಗೃಹದಲ್ಲೇ ಮೆಸ್ಕಾಂ ಮೇಸ್ತ್ರೀ ನಂದೀಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂದೀಶ್ ವಸತಿ ಗೃಹದಲ್ಲಿ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನದಲ್ಲದ ತಪ್ಪಿಗೆ ಜೀವ ಕಳೆದುಕೊಳ್ಳುತ್ತಿದ್ದೇನೆ ಎಂದು ನಂದೀಶ್ ಹೇಳಿದ್ದಾರೆ. ಆತ್ಮಹತ್ಯೆಗೂ…
KTM ಬೈಕ್ ಅಪಘಾತ – ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲಿಯೇ ಸಾವು
ಭೀಕರ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೈಕ್ ಸವಾರನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಘಟನೆ ಕಾನೇಹಳ್ಳ ಕ್ರಾಸ್ ಬಳಿ ನಡೆದಿದ್ದು ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಗಾಜನೂರಿನ ಐಟಿಐ ಕಾಲೇಜಿನ ವಿದ್ಯಾರ್ಥಿಗಳಾದ ನಿಸಾರ್ ಆರ್ ಎಂ (20 ವರ್ಷ) ಮತ್ತು ಯಶವಂತ (20 ವರ್ಷ) ಕಾಲೇಜಿಗೆ ತೆರಳುವಾಗ ಅಪಘಾತ ಸಂಭವಿಸಿ ಇಬ್ಬರು ಸಹ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೆಟಿಎಂ ಬೈಕ್ ನಲ್ಲಿ ಇಬ್ಬರು ಕಾಲೇಜಿಗೆ ಹೋಗುವಾಗ ಕಾನೇಹಳ್ಳದ…
ಮನೆಗಳ್ಳತನ ಹಾಗೂ ಬ್ಯಾಗ್ ಕಳವು ಪ್ರಕರಣದ ಆರೋಪಿಗಳ ಬಂಧನ – ಮನೆಗಳ್ಳತನವೆಸಗಿದ್ದ ಐಟಿ ಉದ್ಯೋಗಿ ಅರೆಸ್ಟ್
ಮನೆಗಳ್ಳತನ ಹಾಗೂ ಬ್ಯಾಗ್ ಕಳವು ಪ್ರಕರಣದ ಆರೋಪಿಗಳ ಬಂಧನ – ಮನೆಗಳ್ಳತನವೆಸಗಿದ್ದ ಐಟಿ ಉದ್ಯೋಗಿ ಅರೆಸ್ಟ್ ಹೊಸಮನೆ ಮತ್ತು ನ್ಯೂಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಬ್ಯಾಗ್ ಕಳವು ಮತ್ತು ಮನೆಕಳ್ಳತನ ಪ್ರಕರಣಗಳು ಆಯಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಆರೋಪಿಗಳನ್ನ ಬಂಧಿಸಿ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗದ ನಿವಾಸಿ ಪ್ರಭಾವತಿ ಎಂಬುವರು ಭದ್ರಾವತಿ ಬಸ್ ನಿಲ್ದಾಣಕ್ಕೆ ಬಂದಾಗ ಮಹಿಳೆಯೊಬ್ಬರು ಬ್ಯಾಗ ಹಿಡಿದು ಕಳುವಾದ ಪ್ರಕರಣವನ್ನ ಬೇಧಿಸಿದ ಪೊಲೀಸರು 48 ಗಂಟೆಯ ಒಳಗೆ ಆರೋಪಿಯನ್ನ ಬಂಧಿಸಿ 20 ಲಕ್ಷ…
ಖಾತೆ ಬದಲಾವಣೆಗೆ 25 ಸಾವಿರ ರೂ ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ (VA)
ಖಾತೆ ಬದಲಾವಣೆಗೆ 25 ಸಾವಿರ ರೂ ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ (VA) 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಕಸಬಾ ಹೋಬಳಿ ಗ್ರಾಮ ಲೆಕ್ಕಿಗ ಸಂಜಯ್ ಮೋಹಿತೆ ಬಲೆಗೆ ಬಿದ್ದವರು. ಪೌತಿ ಖಾತೆ ಮಾಡಿಕೊಡಲು ಕಿರಣ್ ಎಂಬುವರಿಂದ 25 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಕಿರಣ್ ಅವರ ಅಜ್ಜ ಮರಣ ಹೊಂದಿದ್ದು, ಅವರ ಹೆಸರಿನಲ್ಲಿರುವ 2 ಎಕರೆ…
ಅಂತರ್ಜಾತಿ ವಿವಾಹದ ಸೇಡಿಗೆ ಬಲಿಯಾಯ್ತೇ ಹಸುಗೂಸು – ಸಿಂಟೆಕ್ಸ್ ಟ್ಯಾಂಕಿನಲ್ಲಿ ಎಳೆಮಗುವಿನ ಶವ ಪತ್ತೆ!
ಅಂತರ್ಜಾತಿ ವಿವಾಹದ ಸೇಡಿಗೆ ಬಲಿಯಾಯ್ತೇ ಹಸುಗೂಸು – ಸಿಂಟೆಕ್ಸ್ ಟ್ಯಾಂಕಿನಲ್ಲಿ ಎಳೆಮಗುವಿನ ಶವ ಪತ್ತೆ! ಮನೆ ಮೇಲಿನ ನೀರಿನ ಸಿಂಟೆಕ್ಸ್ ಟ್ಯಾಂಕಿನಲ್ಲಿ ಎಳೆ ಮಗುವೊಂದು ಶವವಾಗಿ ಪತ್ತೆಯಾದ ಘಟನೆ ಬೆಂಗಳೂರು ಹೊರವಲಯದ ಚಂದಾಪುರ_ಆನೇಕಲ್ ಮುಖ್ಯ ರಸ್ತೆಯ ಇಗ್ಗಲೂರಿನಲ್ಲಿ ನಡೆದಿದೆ. ಅರ್ಚನಾ ಎಂಬುವವರು ಹೆರಿಗೆಗಾಗಿ ತಮ್ಮ ತವರಿಗೆ ಬಂದಿದ್ದಾಗ ಈ ದುರ್ಘಟನೆ ನಡೆದಿದೆ. ತೊಟ್ಟಿಲಲ್ಲಿ ಹಾಯಾಗಿ ಮಲಗಿದ್ದ ಮಗು ನಿಗೂಡವಾಗಿ ಕಾಣೆಯಾಗಿ ಅದೇ ಮನೆಯ ಮೇಲಿನ ಸಿಂಟೆಕ್ಸ್ ಟ್ಯಾಂಕ್ ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್…
ಚಿರತೆ ಉಗುರು, ಹಲ್ಲು ಅಕ್ರಮ ಸಾಗಾಟ – ಮಾಲು ಸಮೇತ ವ್ಯಕ್ತಿ ವಶಕ್ಕೆ
ಚಿರತೆ ಉಗುರು, ಹಲ್ಲು ಅಕ್ರಮ ಸಾಗಾಟ – ಮಾಲು ಸಮೇತ ವ್ಯಕ್ತಿ ವಶಕ್ಕೆ ಕಾನೂನು ಬಾಹಿರವಾಗಿ ಚಿರತೆ ಉಗುರು ಮತ್ತು ಹಲ್ಲುಗಳ ಸಾಗಾಟದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಅರಣ್ಯ ಸಂಚಾರಿ ಪೊಲೀಸ್ ದಳ ಸೊತ್ತು ಸಮೇತ ವಶಕ್ಕೆ ತೆಗೆದುಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಆನಂದಪುರದಲ್ಲಿ ನಡೆದಿದೆ. ದಾಸಕೊಪ್ಪ ಸರ್ಕಲ್ ಪೆಟ್ರೋಲ್ ಬಂಕ್ ಹತ್ತಿರ ಕಾನೂನುಬಾಹಿರವಾಗಿ ಚಿರತೆ ಉಗುರು ಮತ್ತು ಹಲ್ಲುಗಳ ಸಾಗಾಟದಲ್ಲಿ ತೊಡಗಿದ್ದ ಶಂಕೆಯಿಂದ ವಿಚಾರಣೆಗೊಳಪಡಿಸಿದಾಗ ಶಿಕಾರಿಪುರ ತಾಲೂಕಿನ ಹಾರೊಗೊಪ್ಪ ನಿವಾಸಿ ಲೋಕೇಶ್ ಭಾಗ್ಯಣ್ಣ ಅವರ ಬಳಿ 16…
ಸಾಲಬಾಧೆಗೆ ರೈತ ಮಹಿಳೆ ವಿಷ ಸೇವಿಸಿ ಅತ್ಮ*ಹತ್ಯೆ
ಸಾಲ ಬಾಧೆ ರೈತ ಮಹಿಳೆ ವಿಷ ಸೇವಿಸಿ ಅತ್ಮಹತ್ಯೆ ರಿಪ್ಪನ್ಪೇಟೆ : ಸಾಲಭಾದೆಯಿಂದ ತತ್ತರಿಸಿದ ಮಹಿಳೆಯೊಬ್ಬರು ಕಳೆನಾಶಕ ಸೇವಿಸಿ ಮೃತಪ್ಪಟ್ಟಿರುವ ಘಟನೆ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಲ್ಲೂರಿನಲ್ಲಿ ನಡೆದಿದೆ. ಕಲ್ಲೂರಿನ ಮೋಹಿನಿ ಕೋಂ ಶೇಷಪ್ಪ (65) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಅಕಾಲಿಕವಾಗಿ ಬಂದ ಭಾರಿ ಮಳೆಯಿಂದಾಗಿ ಹಾಕಲಾದ ಭತ್ತ ಶುಂಠಿ ಬೆಳೆ ನಾಶವಾಗಿರುವ ಕಾರಣ ಸಹಕಾರ ಸಂಘದಲ್ಲಿ ಮಾಡಿದ ಸಾಲವನ್ನು ತಿರುವಳಿ ಮಾಡುವುದು ಹೇಗೆ ಎಂಬ ಚಿಂತೆಯಲ್ಲಿ ಮಹಿಳೆ ಕಳೆನಾಶಕ ಸೇವಿಸಿದ್ದಾರೆ, ತಕ್ಷಣ ಕುಟುಂಬಸ್ಥರು ಮಹಿಳೆಗೆ ರಿಪ್ಪನ್ಪೇಟೆ ಪ್ರಾಥಮಿಕ…
ತೀರ್ಥಹಳ್ಳಿ ಮೂಲದ ನಟೋರಿಯಸ್ ಮನೆಗಳ್ಳನ ಬಂಧನ – ಬೆಂಜ್ ಕಾರು, ಪಿಸ್ತೂಲು ಸಹಿತ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ, ನಗದು ವಶಕ್ಕೆ ..!!
ತೀರ್ಥಹಳ್ಳಿ ಮೂಲದ ನಟೋರಿಯಸ್ ಮನೆಗಳ್ಳನ ಬಂಧನ – ಬೆಂಜ್ ಕಾರು, ಪಿಸ್ತೂಲು ಸಹಿತ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ, ನಗದು ವಶಕ್ಕೆ ..!! ಮಲೆನಾಡಿನ ಕುಖ್ಯಾತ ಕಳ್ಳರಿಬ್ಬರನ್ನು ಬೆಂಗಳೂರು ಪೋಲಿಸರು ಬಂಧಿಸಿ ಬೆಂಜ್ ,ಸ್ಕೋಡಾ ಕಾರು ಸಮೇತ ಕೋಟ್ಯಾಂತರ ರೂ ನಗದು ಹಾಗೂ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಇತ್ತೀಚೆಗೆ ತೀರ್ಥಹಳ್ಳಿಯಲ್ಲಿ ಮನೆಯ ಹಿಂಭಾಗದಲ್ಲಿ ಮುಚ್ಚ್ಚಿಟ್ಟಿದ್ದ ಚಿನ್ನಾಭರಣವನ್ನು ವಶಪಡಿಸಿಕೊಂಡಿರುವ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರು ತೀರ್ಥಹಳ್ಳಿ ಮೂಲದ ಆರೋಪಿ ಹಾಗೂ ಚಿಕ್ಕಮಗಳೂರಿನ ಆರೋಪಿಯೊಬ್ಬನನ್ನು ಬಂಧಿಸಿ ಐಶರಾಮಿ…
2 ಸಾವಿರ ಕಿಮೀ ದೂರದ ಜಾರ್ಖಂಡ್ ನಿಂದ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕರೆತಂದ ರಿಪ್ಪನ್ಪೇಟೆ ಪೊಲೀಸರು : ಯಾಕೆ ಗೊತ್ತಾ ಈ ಸುದ್ದಿ ನೋಡಿ
2 ಸಾವಿರ ಕಿಮೀ ದೂರದ ಜಾರ್ಖಂಡ್ ನಿಂದ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕರೆತಂದ ರಿಪ್ಪನ್ಪೇಟೆ ಪೊಲೀಸರು : ಯಾಕೆ ಗೊತ್ತಾ ಈ ಸುದ್ದಿ ನೋಡಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ ಹೊಂಡಲಗದ್ದೆ ಗ್ರಾಮದಲ್ಲಿ ಜಾರ್ಖಂಡ್ ಮೂಲದ ಕಾರ್ಮಿಕನೊಬ್ಬ ನಿಗೂಡವಾಗಿ ಸಾವನ್ನಪ್ಪಿರುವ ಘಟನೆಯ ಬಗ್ಗೆ ತನಿಖೆ ಕೈಗೆತ್ತಿಕೊಂಡಿರುವ ರಿಪ್ಪನ್ಪೇಟೆ ಪೊಲೀಸರು 2 ಸಾವಿರ ಕಿಮೀ ದೂರದ ಜಾರ್ಖಂಡ್ ಗೆ ಕರೆದೊಯ್ದಿದ್ದ ಮೃತದೇಹವನ್ನು ವಾಪಾಸು ಕರೆಸಿರುವ ಘಟನೆ ನಡೆದಿದೆ. ಜಾರ್ಖಂಡ್ ಮೂಲದ ಉದಯ್ (26)…