ಕ್ರೈಂ ಸುದ್ದಿ:
ಟಯರ್ ಸ್ಪೋಟಗೊಂಡು ಖಾಸಗಿ ಬಸ್ ಸಂಪೂರ್ಣ ಬೆಂಕಿಗಾಹುತಿ
ಶಿವಮೊಗ್ಗದ ಸಕ್ರೆಬೈಲ್ ಆನೆ ಬಿಡಾರದ ಬಳಿ ಖಾಸಗಿ ಬಸ್ಸೊಂದು ಅಗ್ನಿ ಅಕಸ್ಮಿಕಕ್ಕೆ ತುತ್ತಾಗಿರುವ ಘಟನೆ ಇಂದು ಬೆಳಗ್ಗಿನ ಜಾವ ನಡೆದಿದೆ. ಅದೃಷ್ಟಕ್ಕೆ ಯಾವ ಪ್ರಯಾಣಿಕರಿಗೂ ಅಪಾಯ ಉಂಟಾಗಿಲ್ಲ . ಖಾಸಗಿ ಬಸ್ ಮಂಗಳೂರಿನಿಂದ ದಾವಣಗೆರೆಗ ತೆರಳುತ್ತಿತ್ತು . ಜಾವ ನಾಲ್ಕು ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ. ಸಕ್ರೆಬೈಲ್ ಆನೆ ಬಿಡಾರದ ಬಳಿ ಬಸ್ ಬರುತ್ತಿದ್ದಾಗ ಬಸ್ ನ ಟಯರ್ ಬ್ಲಾಸ್ಟ್ ಆಗಿ ಇಡಿಬಸ್ ಬೆಂಕಿಗೆ ಕಾಣಿಸಿಕೊಂಡಿದೆ. ತಕ್ಷಣವೇ ಬಸನ್ನು ಚಾಲಕ ರಸ್ತೆ ಬದಿಗೆ ತಂದು. ನಿಲ್ಲಿಸಿದ್ದಾರೆ…
Ripponpete | ಬೈಕ್ ಸಮೇತ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು
Ripponpete | ಬೈಕ್ ಸಮೇತ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು ರಿಪ್ಪನ್ಪೇಟೆ : ಇಲ್ಲಿನ ಅರಸಾಳು ಗ್ರಾಪಂ ವ್ಯಾಪ್ತಿಯ ಅಡ್ಡೆರಿ ಗ್ರಾಮದ ಬಳಿಯಲ್ಲಿ ಮಳೆಯಿಂದ ಕೊರೆದಿರುವ ಸುಮಾರು 25 ಅಡಿ ಆಳದ ಹಳ್ಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾರೋಹಿತ್ತಲು ಗ್ರಾಮದ ವಾಸಿಯಾದ ದೇವೇಂದ್ರಪ್ಪ ರವರು ಇಂದು ಸಂಜೆ ಬೈಕ್ ನಲ್ಲಿ ತೆರಳುತಿದ್ದಾಗ ಈ ಹಿಂದೆ ಬಂದ ಮಳೆಯಿಂದ ಕೊರೆದಿರುವ ರಸ್ತೆಯ ಪಕ್ಕದಲ್ಲಿರುವ 25 ಅಡಿ ಆಳದ ಹಳ್ಳಕ್ಕೆ ಬೈಕ್ ಸಮೇತ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬೈಕ್…
ಅಕ್ಕಿ ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಐವರಿಗೆ ಗಂಭೀರ ಗಾಯ, ಓರ್ವ ನಾಪತ್ತೆ
ಅಕ್ಕಿ ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಐವರಿಗೆ ಗಂಭೀರ ಗಾಯ, ಓರ್ವ ನಾಪತ್ತೆ ಭದ್ರಾವತಿ: ಇಲ್ಲಿನ ಚನ್ನಗಿರಿ ರಸ್ತೆಯಲ್ಲಿರುವ ರೈಸ್ ಮಿಲ್ನಲ್ಲಿ ಗುರುವಾರ ಸಂಜೆ ಬಾಯ್ಲರ್ ಸ್ಫೋಟಗೊಂಡು ಐವರು ಗಂಭೀರ ಗಾಯಗೊಂಡಿದ್ದಾರೆ. ಒಬ್ಬ ನಾಪತ್ತೆಯಾಗಿದ್ದಾನೆ. ಸ್ಫೋಟದಿಂದ ಕಟ್ಟಡ ಭಾಗಶಃ ಕುಸಿದು ಬಿದ್ದಿದೆ. ಕಾರ್ಖಾನೆಯ ಹಲವು ವಸ್ತ್ತುಗಳು ದೂರ ಹಾರಿಹೋಗಿ ಬಿದ್ದಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ವೇಳೆ ಒಟ್ಟು ೬ ಜನರು ಮಿಲ್ನಲ್ಲಿ ಕೆಲಸದಲ್ಲಿದ್ದರು. ಅವಶೇಷಗಳಡಿ ಸಿಲುಕಿರುವ ಇನ್ನೊಬ್ಬನಿಗಾಗಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಸ್ಫೋಟದಿಂದ ಹಾರಿದ ವಸ್ತುಗಳು…
ಮೂರು ಕಾರುಗಳ ನಡುವೆ ಅಪಘಾತ : ಮಹಿಳೆ ಸಾವು
ಮೂರು ಕಾರುಗಳ ನಡುವೆ ಅಪಘಾತ : ಮಹಿಳೆ ಸಾವು ಶಿವಮೊಗ್ಗ : ತಾಲೂಕಿನ ಬೇಡರ ಹೊಸಹಳ್ಳಿ ಸಮೀಪ ಮೂರು ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಮೂರು ಕಾರುಗಳಲ್ಲಿದ್ದ ಒಟ್ಟು ಏಳು ಮಂದಿ ಗಾಯಗೊಂಡಿದ್ದಾರೆ.ಕೊಪ್ಪಳಕ್ಕೆ ತೆರಳುತ್ತಿದ್ದ ಕಿಯಾ ಸೆಲ್ಲೋಸ್ ಕಾರಿಗೆ ಎದುರಿನಿಂದ ಬಂದ ಇನ್ನೋವಾ ಕಾರು ಡಿಕ್ಕಿ ಹೊಡೆದಿದೆ. ಇದೇ ವೇಳೆ ಹಿಂದಿನಿಂದ ಬಂದ ಸ್ವಿಫ್ಟ್ ಕಾರು ಕಿಯಾ ಸೆಲ್ಲೋಸ್ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಕಿಯಾ ಕಾರಿನಲ್ಲಿದ್ದ ಸುಲೋಚನಾ (60) ಗಂಭೀರ ಗಾಯಗೊಂಡಿದ್ದು,…
Shivamogga | ಕಾಲೇಜಿನಲ್ಲಿ ದಿಡೀರ್ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು
Shivamogga | ಕಾಲೇಜಿನಲ್ಲಿ ದಿಡೀರ್ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು ಶಿವಮೊಗ್ಗ:ಕಾಲೇಜಿನಲ್ಲಿಯೇ ವಿದ್ಯಾರ್ಥಿನಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆಯೊಂದು ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ನಗರದ ನಂಜಪ್ಪ ಲೇ ಔಟ್ ನಲ್ಲಿರುವ ಖಾಸಗಿ ಪಿಯು ಕಾಲೇಜಿನಲ್ಲಿ ಓದುತ್ತಿದ್ದ ದ್ವಿತಿಯ ಪಿಯು ವಿದ್ಯಾರ್ಥಿನಿ ಮೂರ್ಛೆ ತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ. ಕಾಲೇಜಿನಲ್ಲಿ ಇದ್ದಕ್ಕಿದ್ದ ಹಾಗೆ ಅಸ್ವಸ್ಥಗೊಂಡು ಪ್ರಿನ್ಸಿಫಾಲರ ರೂಮ್ನ ಬಾಗಿಲಲ್ಲಿಯೇ ವಿದ್ಯಾರ್ಥಿನಿ ಕುಸಿದುಬಿದ್ದಿದ್ದಳು. ತಕ್ಷಣವೇ ಅಲ್ಲಿಂದ ಕಾರೊಂದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೃತ ವಿದ್ಯಾರ್ಥಿನಿ ಓದಿದ್ದ…
ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪದವಿ ವಿದ್ಯಾರ್ಥಿ !
ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪದವಿ ವಿದ್ಯಾರ್ಥಿ ! ತೀರ್ಥಹಳ್ಳಿ : ತುಂಗಾ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದಯುವಕನೋರ್ವ ವಾರಳಿ ಬಳಿ ನದಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ. ತಾಲೂಕಿನ ಆಗುಂಬೆ ಹೋಬಳಿ ಹೊನ್ನೇತಾಳು ಗ್ರಾಂಪಂ ವ್ಯಾಪ್ತಿಯ ವಾರಳ್ಳಿಯ ಧ್ರುವ (20) ವಾರಳ್ಳಿ ಬಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮ ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತನು ವಾರಳ್ಳಿ ದಿನೇಶ್ ರವರ ಮಗ ಎಂದು ತಿಳಿದು ಬಂದಿದೆ.ಕುರುವಳ್ಳಿ ಪ್ರಮೋದ್ ಪೂಜಾರಿ ಮೃತ ದೇಹವನ್ನು ಹೊರ ತೆಗೆದಿದ್ದಾರೆ. ಆಗುಂಬೆ ಪೊಲೀಸ್…
KODURU | ಕಾರುಗಳ ನಡುವೆ ಅಪಘಾತ ಪ್ರಕರಣ – ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು
KODURU | ಕಾರುಗಳ ನಡುವೆ ಅಪಘಾತ ಪ್ರಕರಣ – ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಓರ್ವ ಮೃತಪಟ್ಟಿದ್ದಾರೆ. ದಾವಣಗೆರೆ ನಗರದ ನಿವಾಸಿ ಪರಮೇಶ್ವರಪ್ಪ (74) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಒಂದು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಂಬುಲೆನ್ಸ್ ಮೂಲಕ…
ಗಂಡನ ಮನೆಗೆ ಹೋಗುವುದಾಗಿ ಹೇಳಿ ಹೋದ ಮಹಿಳೆ ಮಗನೊಂದಿಗೆ ನಾಪತ್ತೆ !
ಗಂಡನ ಮನೆಗೆ ಹೋಗುವುದಾಗಿ ಹೇಳಿ ಹೋದ ಮಹಿಳೆ ಮಗನೊಂದಿಗೆ ನಾಪತ್ತೆ ! ಸೊರಬ: ಪತಿ ಮನೆಗೆ ತೆರಳುವುದಾಗಿ ತಿಳಿಸಿದ ಮಹಿಳೆಯೊರ್ವಳು ತನ್ನ ಮಗಳೊಂದಿಗೆ ನಾಪತ್ತೆಯಾಗಿರುವ ಘಟನೆ ತಾಲೂಕಿನ ಆನವಟ್ಟಿ ಸಮೀಪದ ನೆಗವಾಡಿ ತಾಂಡಾದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ನಿವಾಸಿ ಹೊನ್ನಮ್ಮ ಮಹಾದೇವ ಭೋವಿ (೩೦) ಹಾಗೂ ದೀಪ್ತಿ ಮಹಾದೇವ ಭೋವಿ (೮) ನಾಪತ್ತೆಯಾದವರು. ನೆಗವಾಡಿ ತಾಂಡಾ ಗ್ರಾಮದಲ್ಲಿ ಸಹೋದರ ಅನಾರೋಗ್ಯ ವಿಚಾರಿಸಿಕೊಂಡು ಪತಿಯ ಮನೆಗೆ ಹೋಗುವುದಾಗಿ ತಿಳಿಸಿ ಮಗಳೊಂದಿಗೆ ತೆರಳಿದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ…
ವಿಷ ಸೇವಿಸಿ ವ್ಯಕ್ತಿ ಆತ್ಮ*ಹತ್ಯೆ – ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕುಟುಂಬ
ವಿಷ ಸೇವಿಸಿ ವ್ಯಕ್ತಿ ಆತ್ಮ*ಹತ್ಯೆ – ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕುಟುಂಬ ಶಿವಮೊಗ್ಗ: ಗಾಡಿಕೊಪ್ಪದ ಸೇವಾಲಾಲ್ ಬೀದಿಯ ನಿವಾಸಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಕುಟುಂಬ ಇದು ಆತ್ಮಹತ್ಯೆ ಅಲ್ಲ, ಅನುಮಾನಾಸ್ಪದ ಸಾವು ಎಂದು ಆರೋಪಿಸಿದೆ. ಗಾಡಿಕೊಪ್ಪದ ನಿವಾಸಿ ಭೋಜ್ಯ ನಾಯ್ಕ (೫೮) ಆತ್ಮಹತ್ಯೆ ಮಾಡಿಕೊಂಡಿರುವವರು. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡರೂ ಅವರ ಕುತ್ತಿಗೆಯಲ್ಲಿ ನೇಣು ಬಿಗಿದ ಕಲೆ ಇರುವುದರಿಂದ ಕುಟುಂಬ ಇದೊಂದು ಅನುಮಾನಸ್ಪದ ಸಾವು ಎಂದು ಆರೋಪಿಸಿದೆ. ಭೋಜ್ಯ ನಾಯ್ಕ್ ಅಣ್ಣ ತಮ್ಮಂದಿರ ನಡುವೆ ಆಸ್ತಿ…
ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ – ಸಿಸಿಟಿವಿ ದೃಶ್ಯಾವಳಿ ವೈರಲ್
ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ – ಸಿಸಿಟಿವಿ ದೃಶ್ಯಾವಳಿ ವೈರಲ್ ಹಳೇ ದ್ವೇಷ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಗ್ರಾಪಂ ಸದಸ್ಯನೊಬ್ಬನ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಹೊಸನಗರ ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ಭಾನುವಾರ ನಡೆದಿದ್ದು ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಲ್ಲೆಯ ಸಿಸಿಟಿವಿ ದೃಶ್ಯ ವೈರಲ್ ಆಗಿದೆ. ನಿಟ್ಟೂರು ಗ್ರಾಪಂ ಕಾಂಗ್ರೆಸ್ ಬೆಂಬಲಿತ ಸದಸ್ಯ ನಾಗೋಡಿ ವಿಶ್ವನಾಥ್ ಎಂಬುವವರ ಮೇಲೆ ದೇವರಾಜ್ ಎಂಬಾತ…