ಕ್ರೈಂ ಸುದ್ದಿ:
ಚಿಕ್ಕ ಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಮರಳು ಧಂಧೆ – ಕಣ್ಮುಚ್ಚಿ ಕುಳಿತಿರುವ ಅಧಿಕಾರಿಗಳು
ಚಿಕ್ಕ ಜೇನಿ ವ್ಯಾಪ್ತಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಮರಳು ಧಂಧೆ – ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಮುತ್ತಲ, ಜನ್ನಂಗಿ , ಗ್ರಾಮದ ನದಿ ಪಾತ್ರದಲ್ಲಿ ಎಗ್ಗಿಲ್ಲದೇ ಅಕ್ರಮ ಮರಳು ದಂಧೆ ನಡೆಯುತ್ತಿದ್ದು ನೂರಾರು ಲೋಡ್ ಅಕ್ರಮ ಮರಳು ಶೇಖರಿಸಿದ್ದರೂ ಅಕ್ರಮ ವ್ಯವಹಾರದಲ್ಲಿ ಮೌನ ಸಮ್ಮತಿ ನೀಡಿರುವ ಆಡಳಿತ ವ್ಯವಸ್ಥೆಯಿಂದ ಅಪಾರ ಪ್ರಮಾಣದ ಸಂಪತ್ತು ನಾಶವಾಗುತ್ತಿದೆ. ಶಾಂತಪುರ ಸೇತುವೆಯಿಂದ ಪ್ರಾರಂಭವಾಗಿ ಹತ್ತಾರು ಸ್ಥಳಗಳಲ್ಲಿ ಮರಳೆತ್ತುವ ಕಾರ್ಯದಲ್ಲಿ ಹೊರರಾಜ್ಯ ಬಿಹಾರದ ಹತ್ತಾರು ಕೂಲಿ ಕಾರ್ಮಿಕರನ್ನು…
HOSANAGARA | ಹಸುವಿನ ಕುತ್ತಿಗೆಗೆ ಹಗ್ಗ ಬಿಗಿದು ಬಾವಿಗೆ ಎಸೆದು ಸಾಯಿಸಿದ ಕಿಡಿಗೇಡಿಗಳು
HOSANAGARA | ಹಸುವಿನ ಕುತ್ತಿಗೆಗೆ ಹಗ್ಗ ಬಿಗಿದು ಬಾವಿಗೆ ಎಸೆದು ಸಾಯಿಸಿದ ಕಿಡಿಗೇಡಿಗಳು ಹೊಸನಗರ ಪಟ್ಟಣದ ಹೊರ ವಲಯದ ಕುವೆಂಪು ಶಾಲೆಯ ಹತ್ತಿರ ನೇಣು ಬಿಗಿದ ಸ್ಥಿತಿಯಲ್ಲಿ ಹಸುವಿನ ಶವವೊಂದು ಪತ್ತೆಯಾದ ಘಟನೆ ನಡೆದಿದೆ. ಪಟ್ಟಣದಲ್ಲಿರುವ ಗೋಶಾಲೆಯಲ್ಲಿ 10-20 ಬೀದಿ ಹಸುಗಳು ಇದರ ಜೊತೆಗೆ ಅಪಘಾತದಲ್ಲಿ ಕಾಲು ಮುರಿದುಕೊಂಡ ಹಸು, ಕರುಗಳನ್ನು ಬಿಡಾಡಿ ದನಗಳನ್ನು ಸಾಕುತ್ತಿದ್ದರು. ಭಾನುವಾರ ರಾತ್ರಿ 12 ಗಂಟೆಯವರೆಗೆ ಗೋ ಶಾಲೆಯ ಗೋ ಸೇವಕರು ದನ-ಕರುಗಳಿಗೆ ಆಹಾರ ಹಾಕಿ ಮನೆಗೆ ಹೋದ ಸಂದರ್ಭದಲ್ಲಿ ಕಿಡಿಗೇಡಿಗಳು…
ರೌಡಿಶೀಟರ್ ಅಮ್ಮು ಕಾಲಿಗೆ ಪೊಲೀಸರ ಗುಂಡೇಟು
ರೌಡಿಶೀಟರ್ ಅಮ್ಮು ಕಾಲಿಗೆ ಪೊಲೀಸರ ಗುಂಡೇಟು ಶಿವಮೊಗ್ಗ : ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಗಾಯಾಳು ರೌಡಿ ಶೀಟರ್ ಹಬೀಬುಲ್ಲಾ ಅಲಿಯಾಸ್ ಅಮ್ಮುನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೈಪಾಸ್ ರಸ್ತೆ ಸಮೀಪದ ಗರುಡ ಲೇಔಟ್ನಲ್ಲಿ ಇಂದು ಬೆಳಗ್ಗೆ ಹಬೀಬುಲ್ಲಾನ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ಸಂದರ್ಭ ಹಬೀಬುಲ್ಲಾ ಪೊಲೀಸ್ ಸಿಬ್ಬಂದಿ ಜಯಪ್ಪ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾನೆ. ಆಗ ಇನ್ಸ್ಪೆಕ್ಟರ್ ಕೆ.ಟಿ.ಗುರುರಾಜ್…
SAGARA | ಬಾಣಂತಿಗೆ ಕಪಾಳಮೋಕ್ಷ ಆರೋಪ ಡಾ. ನಾಗೇಂದ್ರಪ್ಪ ಮೇಲೆ ಪ್ರಕರಣ ದಾಖಲು | ಆಸ್ಪತ್ರೆಗೆ DHO ದಿಡೀರ್ ಭೇಟಿ
SAGARA | ಬಾಣಂತಿಗೆ ಕಪಾಳಮೋಕ್ಷ ಆರೋಪ ಡಾ. ನಾಗೇಂದ್ರಪ್ಪ ಮೇಲೆ ಪ್ರಕರಣ ದಾಖಲು | ಆಸ್ಪತ್ರೆಗೆ DHO ದಿಡೀರ್ ಭೇಟಿ ಸಾಗರ : ಶಸ್ತ್ರ ಚಿಕಿತ್ಸೆಗೆ ದಾಖಲಾಗಿದ್ದ ಬಾಣಂತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಾಯಿ-ಮಗು ಆಸ್ಪತ್ರೆಯ ಪ್ರಸೂತಿ ವೈದ್ಯ ಡಾ. ನಾಗೇಂದ್ರಪ್ಪ ಎಂಬವರ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ. 1 ರಂದು ಲೋಕೇಶ್ ಎಂಬುವವರ ಪತ್ನಿಯನ್ನು ತಾಯಿ-ಮಗು ಆಸ್ಪತ್ರೆಗೆ ಸಂತಾನಹರಣ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು.ಬೆಳಿಗ್ಗೆ 9.45 ಕ್ಕೆ ಡಾ. ನಾಗೇಂದ್ರಪ್ಪ ಶಸ್ತ್ರಚಿಕಿತ್ಸೆ ಮಾಡಿದ್ದರು….
ಶಾಲಾ ಮಕ್ಕಳಿಗೆ ಆರು ದಿನ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ
ಶಾಲಾ ಮಕ್ಕಳಿಗೆ ಆರು ದಿನ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ಸಾಗರ : ನಮ್ಮ ಶಾಲೆ ನಮ್ಮ ಜವಾಬ್ದಾರಿ ಅತ್ಯಂತ ಪರಿಣಾಮಕಾರಿ ಹೆಜ್ಜೆಯಾಗಿದೆ. ಈ ಯೋಜನೆಯಡಿ 500 ರೂಪಾಯಿಯಿಂದ 6.50 ಕೋಟಿ ರೂ. ವರೆಗೆ ಶಾಲಾಭಿವೃದ್ಧಿಗೆ ದೇಣಿಗೆ ಬಂದಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಇಲ್ಲಿನ ನಗರಸಭೆ ರಂಗಮಂದಿರದಲ್ಲಿ ಆ.1ರ ಮಂಗಳವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಅಕ್ಷರ ದಾಸೋಹ ಮಧ್ಯಾಹ್ನ ಉಪಹಾರ ಯೋಜನೆಯಡಿ ಅಜೀಂ ಪ್ರೇಮ್ಜೀ ಫೌಂಡೇಶನ್ನಿಂದ ನೀಡಲಾದ ಅನುದಾನದಲ್ಲಿ ಶಾಲಾ…
HOSANAGARA | ಅಕ್ರಮವಾಗಿ ಸಾಗಿಸುತಿದ್ದ 20 ಗೋವುಗಳ ರಕ್ಷಣೆ
HOSANAGARA | ಅಕ್ರಮವಾಗಿ ಸಾಗಿಸುತಿದ್ದ 20 ಗೋವುಗಳ ರಕ್ಷಣೆ ಹೊಸನಗರ ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಗೋವುಗಳನ್ನ ಸಾಗಿಸಲು ಯತ್ನಿಸುತ್ತಿದ್ದ ವಾಹನವನ್ನ ತಡೆದು ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ. ಕ್ಯಾಂಟರ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 20 ಕ್ಕೂ ಹೆಚ್ಚು ಗೋವುಗಳನ್ನು ಹೊಸನಗರ ತಾಲ್ಲೂಕಿನ ನಗರದಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಅಡ್ಡಗಟ್ಟಿ ಪೋಲಿಸ್ ಠಾಣೆಗೆ ಒಪ್ಪಿಸಿದ್ದಾರೆ. ಗೋವುಗಳನ್ನು ಅಕ್ರಮವಾಗಿ ಕ್ಯಾಂಟರ್ ಲಾರಿಯಲ್ಲಿ ತುಂಬಿಕೊಂಡು ಹೋಗುತ್ತಿರುವ ಖಚಿತ ಮಾಹಿತಿಯನ್ನರಿತ ಸಂಘಟನೆಯ ಕಾರ್ಯಕರ್ತರು ವಾಹನವನ್ನು ಅಡ್ಡಗಟ್ಟಿ…
ಆಂಬುಲೆನ್ಸ್ ಡಿಕ್ಕಿಯಾಗಿ ಸೊನಲೆಯ ಪ್ರವೀಣ್ ಸಾವು | ವರ್ಷದ ಅಂತರದಲ್ಲಿ ಇಬ್ಬರು ಮಕ್ಕಳನ್ನು ಕಳೆದುಕೊಂಡ ಅನಾಥಳಾದ ತಾಯಿ
ಆಂಬುಲೆನ್ಸ್ ಡಿಕ್ಕಿಯಾಗಿ ಸೊನಲೆಯ ಪ್ರವೀಣ್ ಸಾವು | ವರ್ಷದ ಅಂತರದಲ್ಲಿ ಇಬ್ಬರು ಮಕ್ಕಳನ್ನು ಕಳೆದುಕೊಂಡ ಅನಾಥಳಾದ ತಾಯಿ ಆಂಬುಲೆನ್ಸ್ ಡಿಕ್ಕಿಯಾಗಿ ಹೊಸನಗರ ಮೂಲದ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಿಲುವಾಗಿಲು ಬಳಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸೊನಲೆ ಗ್ರಾಮದ ಪ್ರವೀಣ್ (30) ಎಂದು ಗುರುತಿಸಲಾಗಿದೆ. ನಿಲುವಾಗಿಲು ಬಳಿಯಲ್ಲಿ ಬೈಕ್ ಹಾಗೂ ಆಂಬುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಪ್ರವೀಣ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.ಕೊಪ್ಪ…
ಅಂದಾಸುರ ರೈಲ್ವೆ ಹಳಿ ಮೇಲೆ ಪುರುಷನ ಶವ ಪತ್ತೆ – ಕೊಲೆ ಶಂಕೆ !?
ಅಂದಾಸುರ ರೈಲ್ವೆ ಹಳಿ ಮೇಲೆ ಪುರುಷನ ಶವ ಪತ್ತೆ – ಕೊಲೆ ಶಂಕೆ !? ರೈಲ್ವೆ ಹಳಿಯ ಮೇಲೆ ಅನುಮಾನಸ್ಪದ ರೀತಿಯಲ್ಲಿ ಪುರುಷನೊಬ್ಬನ ಶವ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಅಂದಾಸುರ ರೈಲ್ವೆ ಗೇಟ್ ಬಳಿ ನಡೆದಿದೆ. ಅಂದಾಸುರ ರೈಲ್ವೆ ಗೇಟ್ ಸಮೀಪದಲ್ಲಿರುವ ದೇವಸ್ಥಾನವೊಂದರ ಮುಂಭಾಗದಲ್ಲಿ ಮೃತದೇಹ ಪತ್ತೆಯಾಗಿದ್ದು , ಮೃತ ವ್ಯಕ್ತಿಯನ್ನು ಕೋಡೂರು ಮೂಲದ ಜೆಸಿಬಿ ಆಪರೇಟರ್ ಬಸವರಾಜ್ ಎನ್ನಲಾಗುತಿದ್ದು ಇನ್ನಷ್ಟೇ ಮಾಹಿತಿ ತಿಳಿದುಬರಬೇಕಾಗಿದೆ. ರೈಲು ಹಳಿಯ ಮೇಲೆ ಮೃತದೇಹ…
ಅಕ್ರಮವಾಗಿ ಸಾಗಿಸುತಿದ್ದ 37 ಗೋವುಗಳ ರಕ್ಷಣೆ
ಅಕ್ರಮವಾಗಿ ಸಾಗಿಸುತಿದ್ದ 37 ಗೋವುಗಳ ರಕ್ಷಣೆ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಿಂದ ಮಂಗಳೂರಿನ ಬಿ.ಸಿ ರಸ್ತೆಗೆ ಗೋವುಗಳನ್ನ ಸಾಗಿಸಲು ಯತ್ನಿಸುತ್ತಿದ್ದ 407 ಐಷರ್ ವಾಹನವನ್ನ ಬಜರಂಗದಳ ಯುವಕರು ತಡೆದು ಜಯನಗರ ಪೊಲೀಸ್ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ವಾಹನವನ್ನ ಉಷ ನರ್ಸಿಂಗ್ ಹೋಮ್ ವೃತ್ತದ ಬಳಿ ಹಿಂದೂ ಸಂಘಟನೆಗಳು ತಡೆದಿದ್ದಾರೆ. ನಂತರ 112 ಪೊಲೀಸರಿಗೆ ಕರೆಯಲಾಗಿದೆ. 407 ಐಷರ್ ವಾಹನದಲ್ಲಿ ಟಾರ್ಪಲ್ ಮುಚ್ಚಿ ಸಾಗಿಸಲಾಗುತ್ತಿತ್ತು. ಟಾರ್ಪಲ್ ಸಮೇತ ಜಯನಗರ ಪೊಲೀಸ್ ಠಾಣೆಯಲ್ಲಿ ವಾಹನ ತಂದು ನಿಲ್ಲಿಸಲಾಗಿದೆ. ಟಾರ್ಪಲ್ ಬಿಚ್ಚಿ ನೋಡಿದಾಗ…
ಬೈಕ್ ಅಪಘಾತದಲ್ಲಿ ಯುವಕ ಸಾವು
ಬೈಕ್ ಅಪಘಾತದಲ್ಲಿ ಯುವಕ ಸಾವು ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ನಲ್ಲಿ ಸಂಭವಿಸಿದ ಅಪಘಾತದಲ್ಲಿ 22 ವರ್ಷದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಾಗರ ತಾಲ್ಲೂಕು ಸಾಗರ ಟೌನ್ ಗಾಂಧಿನಗರ ನಿವಾಸಿ ಸಮೀರ್ ಎಂಬುವವರು ನಿನ್ನೆ ದಿನ ಅಣಲೇಕೊಪ್ಪದಲ್ಲಿರುವ ಅವರ ಅಕ್ಕನ ಮನೆಗೆ ಬೈಕ್ನಲ್ಲಿ ಹೋಗುತ್ತಿದ್ದ ಸಮೀರ್ ಗೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯ ಸಮೀಪ ಕಾರೊಂದು ಡಿಕ್ಕಿಯಾಗಿದೆ. ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣದ ಆಂಬುಲೆನ್ಸ್ ಮೂಲಕ ಸಮೀರ್ರವರನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆಗೆ ಸಾಗಿಸುವ…