ಕ್ರೈಂ ಸುದ್ದಿ:
RIPPONPETE | ಮಳವಳ್ಳಿ ಗೋಪಾಲಣ್ಣ ಇನ್ನಿಲ್ಲ
RIPPONPETE | ಮಳವಳ್ಳಿ ಗೋಪಾಲಣ್ಣ ಇನ್ನಿಲ್ಲ ರಿಪ್ಪನ್ಪೇಟೆ : ತಳಲೆ ಸೊಸೈಟಿಯ ಮಾಜಿ ಅಧ್ಯಕ್ಷರು , ಪಿಎಲ್ ಡಿ ಬ್ಯಾಂಕ್ ಮಾಜಿ ನಿರ್ದೇಶಕರು ಹಾಗೂ ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ಮಳವಳ್ಳಿ ಗ್ರಾಮದ ಗೋಪಾಲಣ್ಣ ರವರು ಇಂದು ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಹಲವಾರು ದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೆಲವು ದಿನಗಳ ಹಿಂದೆ ಅನಾರೋಗ್ಯದ ಕಾರಣ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಬುಧವಾರ ಬೆಳಗಿನಜಾವ ಮೃತಪಟ್ಟಿದ್ದಾರೆ. ತಳಲೆ ಪ್ರಾಥಮಿಕ ಸಹಕಾರ ಸಂಘದ ಮಾಜಿ…
ಪಂಚರ್ ಹಾಕುವ ವೇಳೆ ಬೈಕ್ ಡಿಕ್ಕಿಯಾಗಿ ಲಾರಿ ಚಾಲಕ ಸಾವು
ಪಂಚರ್ ಹಾಕುವ ವೇಳೆ ಬೈಕ್ ಡಿಕ್ಕಿಯಾಗಿ ಲಾರಿ ಚಾಲಕ ಸಾವು ಶಿಕಾರಿಪುರ : ಲಾರಿ ಪಂಚರ್ ಆಗಿದ್ದ ಕಾರಣ ಟಯರ್ ಬದಲಾವಣೆ ಮಾಡುತ್ತಿರುವ ವೇಳೆ ಬೈಕ್ ಒಂದು ಗುದ್ದಿದ ಪರಿಣಾಮ ರಸ್ತೆಯಲ್ಲಿಲಾರಿ ಚಾಲಕ ದುರ್ಮರಣ ಹೊಂದಿದ ಘಟನೆ ಇಂದು ಸಂಜೆ ನಡೆದಿದೆ. ತೀರ್ಥಹಳ್ಳಿಯ ಯಡೇಹಳ್ಳಿಕೆರೆಯ ರಮೇಶ್ (54 ವರ್ಷ ) ಮೃತ ದುರ್ಧೈವಿ. ಶಿಕಾರಿಪುರ ಸಮೀಪದ ಕೆಂಗಟ್ಟಿ ಮತ್ತು ಸಿದ್ದನ್ಪುರ ಗ್ರಾಮದ ಮುಖ್ಯ ರಸ್ತೆಯ ಬಳಿ ಲಾರಿ ಪಂಚರ್ ಆಗಿದ್ದಕ್ಕಾಗಿ ಲಾರಿಯನ್ನು ರಸ್ತೆಯ ಎಡಭಾಗದಲ್ಲಿ ನಿಲ್ಲಿಸಿಕೊಂಡು ಟಯರ…
ಕೆಲಸಕ್ಕೆಂದು ಮನೆಯಿಂದ ಹೋಗಿ ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಚಾನಲ್ ನಲ್ಲಿ ಪತ್ತೆ
ಕೆಲಸಕ್ಕೆಂದು ಹೋಗಿದ್ದ ಯುವತಿ ನಾಪತ್ತೆ – ಚಾನಲ್ ನಲ್ಲಿ ಮೃತದೇಹ ಪತ್ತೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಶಿವರಾಮನಗರದ ವಾಸಿಯೊಬ್ಬರ ಮಗಳು 17 ವರ್ಷದ ಯುವತಿ ಸೆ.19 ರಂದು ಪ್ಯಾಕ್ಟರಿ ಕೆಲಸಕ್ಕೆಂದು ಹೋದವರು ಕಾಣೆಯಾಗಿದ್ದು,ಇದೀಗ ಆಕೆಯ ಮೃತದೇಹ ಬಿದರೆ ಬಳಿಯ ಭದ್ರಾ ಚಾನಲ್ನಲ್ಲಿ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ನಿವಾಸಿಯೊಬ್ಬರ ಅಪ್ರಾಪ್ತ ವಯಸ್ಸಿನ ಮಗಳು ಪ್ಯಾಕ್ಟರಿ ಕೆಲಸಕ್ಕೆ ಎಂದು ಹೋದವರು ನಾಪತ್ತೆಯಾಗಿದ್ದರು. ಲಕ್ಷ್ಮೀಪುರ ರೈಲ್ವೆ ಬ್ರಿಡ್ಜ್ ಬಳಿಯಲ್ಲಿ ಆಕೆಯ ಬ್ಯಾಗ್, ಚಪ್ಪಲಿ ಮತ್ತು ಐ.ಡಿ.ಕಾರ್ಡ್ ಸಿಕ್ಕಿರುತ್ತದೆ.ಯುವತಿಯ …
ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ
ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ ತೀರ್ಥಹಳ್ಳಿ ತಾಲ್ಲೂಕಿನ ತೂದೂರು ಸರ್ಕಾರಿ ಶಾಲೆಯ ಹಿಂಭಾಗದ ತುಂಗಾನದಿಯಲ್ಲಿ ಅಪರಿಚಿತ ಶವ ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೊಪ್ಪ ಸಮೀಪದ ಕುಟ್ರ ನಿವಾಸಿ ಕೃಷ್ಣಮೂರ್ತಿ ಎಂದು ತಿಳಿದುಬಂದಿದೆ. ಗುಡ್ಡೆಕೊಪ್ಪ ನಿವಾಸಿ 14-07-2024 ರಂದು ತಮ್ಮ ನಿವಾಸದಿಂದ ನಾಪತ್ತೆಯಾಗಿದ್ದರು ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿತ್ತು. ಮೃತದೇಹದ ಸೊಂಟದಲ್ಲಿ ಸೇಫ಼್ಟಿ ಪಿನ್ ಆಧಾರದ ಮೇಲೆ ಕುಟುಂಬಸ್ಥರು ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಮೃತದೇಹವು ಪ್ರಮಾಣದಲ್ಲಿ ಕೊಳೆತಿದ್ದು ಮುಖ, ದೇಹವನ್ನು…
ಆನ್ ಲೈನ್ ಗೇಮ್ ಚಾಳಿಗೆ ಬಿದ್ದು ಗ್ರಾಹಕರ ಹಣವನ್ನು ವಂಚಿಸಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ
ಆನ್ ಲೈನ್ ಗೇಮ್ ಚಾಳಿಗೆ ಬಿದ್ದು ಗ್ರಾಹಕರ ಹಣವನ್ನು ವಂಚಿಸಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ ತೀರ್ಥಹಳ್ಳಿ : ಶೋಕಿ ಜೀವನ, ದಿಢೀರ್ ಹಣ ಮಾಡುವ ದುರಾಸೆಗೆ ಒಳಗಾಗಿ ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿದ್ದ ಗ್ರಾಹಕರ ಹಣವನ್ನು ವಂಚನೆ ಮಾಡಿದ್ದ ಬ್ಯಾಂಕ್ ಉದ್ಯೋಗಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಾಲೂಕಿನ ಆರಗದ ಸುನೀಲ್ (35 ವರ್ಷ) ಮೃತ ದುರ್ದೈವಿ. ಈತ ಯಡೂರಿನ ಕೆನರಾ ಬ್ಯಾಂಕ್ ನಲ್ಲಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ 8 ಖಾತೆಗಳಿಂದ ಠೇವಣಿ ಇಟ್ಟಿದ್ದ ಸುಮಾರು 1 ಕೋಟಿ…
ಉಸಿರಾಟದ ತೊಂದರೆಯಿಂದ ಬಳಲುತಿದ್ದ ಮಗುವಿನ ಉಸಿರು ನಿಲ್ಲಿಸಲು ಹೊರಟನೇ ಪಾನಮತ್ತ ಆಂಬ್ಯುಲೆನ್ಸ್ ಚಾಲಕ .!?
ಉಸಿರಾಟದ ತೊಂದರೆಯಿಂದ ಬಳಲುತಿದ್ದ ಮಗುವಿನ ಉಸಿರು ನಿಲ್ಲಿಸಲು ಹೊರಟನೇ ಪಾನಮತ್ತ ಆಂಬ್ಯುಲೆನ್ಸ್ ಚಾಲಕ .!? ರಿಪ್ಪನ್ಪೇಟೆ : ಉಸಿರಾಟದ ತೊಂದರೆಯಿಂದ ಬಳಲುತಿದ್ದ ಮಗುವನ್ನು ಶಿವಮೊಗ್ಗಕ್ಕೆ ರವಾನಿಸುತಿದ್ದ ಆಂಬುಲೆನ್ಸ್ ಗ್ಯಾಸ್ ಟ್ಯಾಂಕರ್ ಲಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿರುವ ಘಟನೆ ನಡೆದಿದೆ. ಹೌದು ಶುಕ್ರವಾರ ರಾತ್ರಿ ಪಟ್ಟಣದ ಸಮೀಪದ ದೂನ ಗ್ರಾಮದಲ್ಲಿ ಚಲಿಸುತಿದ್ದ ಗ್ಯಾಸ್ ಟ್ಯಾಂಕರ್ ಲಾರಿಗೆ ನಗು ಮಗು ಆಂಬುಲೆನ್ಸ್ ಡಿಕ್ಕಿಯಾಗಿ ಬಾಣಂತಿ ಹಾಗೂ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ. ಹೊಸನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಉಸಿರಾಟದ ತೊಂದರೆಗೊಳಗಾದ ಮಗುವನ್ನು…
ಬಸ್ ಹಾಗೂ ಬೈಕ್ ನಡುವೆ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು
ಬಸ್ ಹಾಗೂ ಬೈಕ್ ನಡುವೆ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಹನಸವಾಡಿ ಬಳಿ ನಡೆದಿದೆ. ಹರಿಹರದಿಂದ ಶಿವಮೊಗ್ಗ ಕಡೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ.ಬೈಕ್ ಸವಾರ ಮೋಹನ್ (36) ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟ ಬೇಡರ ಹೊಸಳ್ಳಿ ಮತ್ತು ಹನಸವಾಡಿ ಮಧ್ಯೆ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತ ದೇಹವನ್ನ ಮೆಗ್ಗಾನ್ ಮರಣೋತ್ತರ ಪರೀಕ್ಷಾ…
ವಾಕ್ ಮಾಡುವಾಗ ತೀವ್ರ ಹೃದಯಾಘಾತ – 20 ವರ್ಷದ ವಿದ್ಯಾರ್ಥಿ ಸಾವು !
ವಾಕ್ ಮಾಡುವಾಗಲೇ ತೀವ್ರ ಹೃದಯಾಘಾತ – ವಿದ್ಯಾರ್ಥಿ ಸಾವು ! ಶಿವಮೊಗ್ಗ : ಹೆಲಿಪ್ಯಾಡ್’ನಲ್ಲಿ ವಾಕಿಂಗ್ ಮಾಡುವಾಗ ತೀವ್ರ ಹೃದಯಾಘಾತಕ್ಕೊಳಗಾಗಿ 20 ವರ್ಷದ ವೈದ್ಯಕೀಯ ವಿದ್ಯಾರ್ಥಿ ಮರಣ ಹೊಂದಿರುವ ಘಟನೆ ನಗರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಸಿಮ್ಸ್ ಕಾಲೇಜಿನಲ್ಲಿ 2ನೇ ವರ್ಷದ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ಪೃಥ್ವಿ ಎಂದು ಗುರುತಿಸಲಾಗಿದೆ. ಈ ವಿದ್ಯಾರ್ಥಿ ಇಂದು ಸಂಜೆ 4 ಗಂಟೆ ವೇಳೆಗೆ ಹೆಲಿಪ್ಯಾಡ್’ನಲ್ಲಿ ವಾಕಿಂಗ್ ಮಾಡುತ್ತಿದ್ದರು. ಆ ವೇಳೆ ಏಕಾಏಕಿ ತೀವ್ರ ಹೃದಯಾಘಾತ ಸಂಭವಿಸಿದ್ದು, ಕುಸಿದು ಬಿದ್ದಿದ್ದಾರೆ. ಅಲ್ಲೆ…
ಜಾಗದ ವಿಚಾರದಲ್ಲಿ ಗಲಾಟೆ | ಕೋವಿಯಿಂದ ಗುಂಡು ಹಾರಿಸಿದ್ದ ಆರೋಪಿಗೆ 5ವರ್ಷ ಶಿಕ್ಷೆ
ಜಾಗದ ವಿಚಾರದಲ್ಲಿ ಗಲಾಟೆ | ಕೋವಿಯಿಂದ ಗುಂಡು ಹಾರಿಸಿದ್ದ ಆರೋಪಿಗೆ 5ವರ್ಷ ಶಿಕ್ಷೆ ಜಮೀನಿಗೆ ಹೋಗುವ ಜಾಗದ ವಿಚಾರಕ್ಕೆ ಜಗಳವಾಗಿ ಗುಂಡು ಹಾರಿಸಿದ ವ್ಯಕ್ತಿಗೆ ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ ದಂಡ ವಿಧಿಸಿದೆ. ತೀರ್ಥಹಳ್ಳಿ ತಾಲೂಕು ಜಟ್ಟಿನಮಕ್ಕಿ ಗ್ರಾಮದ ಅಶೋಕ್ ಶಿಕ್ಷೆಗೊಳಗಾದವ.ಈತ 2018ರಲ್ಲಿ ತಮ್ಮ ಗ್ರಾಮದ ಕೃಷ್ಣಮೂರ್ತಿ ಎಂಬವರ ಮೇಲೆ ಕೋವಿಯಿಂದ ಗುಂಡು ಹಾರಿಸಿದ್ದನು. ಗುಂಡು ಕೃಷ್ಣಮೂರ್ತಿ ಕುತ್ತಿಗೆಗೆ ತಾಗಿ ಅವರು…
ತನ್ನ ಪತ್ನಿಯ ಸಹವಾಸಕ್ಕೆ ಬರಬೇಡ ಎಂದವನ ದೇಹವನ್ನು ಪೀಸ್ ಪೀಸ್ ಮಾಡಿ ನದಿಗೆ ಎಸೆದ ಹಂತಕರು |
ತನ್ನ ಪತ್ನಿಯ ಸಹವಾಸಕ್ಕೆ ಬರಬೇಡ ಎಂದವನ ದೇಹವನ್ನು ಪೀಸ್ ಪೀಸ್ ಮಾಡಿ ನದಿಗೆ ಎಸೆದ ಹಂತಕರು | ಗಣಪತಿ ಹಬ್ಬದಂದು ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು, ಹೆಂಡತಿಯ ಸುದ್ದಿಗೆ ಬರಬೇಡ ಎಂದು ವಾರ್ನಿಂಗ್ ನೀಡಿದ್ದಕ್ಕೆ ಆತನು ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ಕೊಲೆಗೈದು ದೇಹವನ್ನು ಛಿದ್ರ ಛಿದ್ರ ಮಾಡಿ ನದಿಗೆ ಬಿಸಾಕಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ನಾಗೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರಕರಣದ ಸಂಬಂಧ ಶಿರಾಳಕೊಪ್ಪ ಪೊಲೀಸರು ಶಿವು ಯಾನೆ ಪ್ರತಾಪ್, ಕಿರಣ್, ಗಣೇಶ್ ಮತ್ತು…