ಕ್ರೈಂ ಸುದ್ದಿ:
ಜೀವನದಲ್ಲಿ ಜಿಗುಪ್ಸೆ | ಮಾದಾಪುರದಲ್ಲಿ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ
ಜೀವನದಲ್ಲಿ ಜಿಗುಪ್ಸೆ | ಮಾದಾಪುರದಲ್ಲಿ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ರಿಪ್ಪನ್ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಮಾದಾಪುರ ಗ್ರಾಮದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡ ಮಹಿಳೆಯೊಬ್ಬರು ಶನಿವಾರ ರಾತ್ರಿ ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶಾಹಿದಾ ಭಾನು (63) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕೊರೊನಾ ಕಾಯಿಲೆಯಿಂದ ನಾಲ್ಕು ವರ್ಷಗಳ ಹಿಂದೆ ಮೃತ ಮಹಿಳೆಯ ಪತಿ ಮುನೀರ್ ಸಾಬ್ ಸಾವನ್ನಪ್ಪಿದರು. ಪತಿಯ ಅಗಲಿಕೆಯಿಂದ ಕೊರಗುತಿದ್ದ ಶಾಹಿದಾ ಭಾನು ಶನಿವಾರ ರಾತ್ರಿ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ….
ರಿಪ್ಪನ್ಪೇಟೆಯ ಮಲ್ಲಾಪುರದಲ್ಲಿ ವಿದ್ಯುತ್ ತಗುಲಿ ವೃದ್ದೆ ಸಾವು
ರಿಪ್ಪನ್ಪೇಟೆಯ ಮಲ್ಲಾಪುರದಲ್ಲಿ ವಿದ್ಯುತ್ ತಗುಲಿ ವೃದ್ದೆ ಸಾವು ರಿಪ್ಪನ್ಪೇಟೆ : ವಿದ್ಯುತ್ ತಗುಲಿ ವೃದ್ದೆಯೊಬ್ಬರು ಸಾವನ್ನಪ್ಪಿರುವ ಘಟನೆ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಪಾರ್ವತಮ್ಮ (67) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಬೆಳಿಗ್ಗೆ ಮನೆ ಮುಂಭಾಗದಲ್ಲಿರುವ ಉನುಗೋಲು ತೆಗೆಯುವಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ತೋಟದ ಪಂಪ್ ಸೆಟ್ ವಿದ್ಯುತ್ ವಯರ್ ನ್ನು ಬೇಲಿಗೆ ಸುತ್ತಿ ಇಟ್ಟಿದ್ದ ಪರಿಣಾಮ ವಿದ್ಯುತ್ ಬೇಲಿಗೆ ಪ್ರವಹಿಸಿ ಈ ದುರ್ಘಟನೆ ನಡೆದಿದೆ ಎನ್ನಲಾಗುತಿದೆ. ಸ್ಥಳಕ್ಕೆ ರಿಪ್ಪನ್ಪೇಟೆ ಪಿಎಸ್ಐ ಪ್ರವೀಣ್ ಹಾಗೂ ಮೆಸ್ಕಾಂ ಸಿಬ್ಬಂದಿಗಳು…
SHIVAMOGGA | ಹುಕ್ಕಾಬಾರ್ ಮೇಲೆ ದಾಳಿ
SHIVAMOGGA | ಹುಕ್ಕಾಬಾರ್ ಮೇಲೆ ದಾಳಿ ಶಿವಮೊಗ್ಗದ ಗೋಪಾಳದಲ್ಲಿರುವ ಹುಕ್ಕಾಬಾರ್ ಮೇಲೆ ದಾಳಿ ನಡೆಸಿ ತೆರವುಗೊಳಿಸಿದ ಘಟನೆ ನಡೆದಿದೆ. ಕರ್ನಾಟಕ ಸರ್ಕಾರದ ಆದೇಶ ಹಾಗೂ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಗೋಪಾಳದಲ್ಲಿ ನಡೆಸಲಾಗುತ್ತಿದ್ದ ಹುಕ್ಕಾಬಾರ್ ಮೇಲೆ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ದಾಳಿ ನಡೆಸಿ ತೆರವುಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಉಪ ಪೋಲಿಸ್ ನಿರೀಕ್ಷಕರಾದ ರಘುನಾಥ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಹೇಮಂತ್ ರಾಜ್ ಅರಸ್, ಮಹಾನಗರ ಪಾಲಿಕೆ ಅಧಿಕಾರಗಳು ಹಾಗೂ…
RIPPONPETE | ಕೆಂಚನಾಲದಲ್ಲಿ ಹಸುವಿನ ಕತ್ತರಿಸಿದ ತಲೆ ಪತ್ತೆ – ಪ್ರಕರಣ ದಾಖಲು
RIPPONPETE | ಕೆಂಚನಾಲದಲ್ಲಿ ಹಸುವಿನ ಕತ್ತರಿಸಿದ ತಲೆ ಪತ್ತೆ – ಪ್ರಕರಣ ದಾಖಲು ರಿಪ್ಪನ್ಪೇಟೆ : ಶುಕ್ರವಾರದಂದು ಬೆಳಕಿಗೆ ಬಂದ ಆಘಾತಕಾರಿ ಘಟನೆಯೊಂದರಲ್ಲಿ ಅಪರಿಚಿತ ದುಷ್ಕರ್ಮಿಗಳು ಹಸುವಿನ ತಲೆಯನ್ನು ಕೆರೆಯ ಬಳಿಯಲ್ಲಿ ಎಸೆದು ಹೋಗಿರುವ ಘಟನೆ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ಕೆಂಚನಾಲ ಗ್ರಾಮದಲ್ಲಿ ಪೊಲೀಸರು ಗಸ್ತು ತಿರುಗುತಿದ್ದ ಸಂಧರ್ಭದಲ್ಲಿ ಗಸ್ತು ತಿರುಗುತಿದ್ದಾಗ ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದಾಗ ಯಾರೋ ಅಪರಿಚಿತರು ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಹಸುವನ್ನು ಕಡಿದು ಕೆರೆಯ…
ಸಾಲಬಾಧೆಗೆ ತತ್ತರಿಸಿದ ಯುವಕ ನದಿಗೆ ಧುಮುಕಿದ್ನ.!?? ಯುವಕನ ವಾಟ್ಸಾಪ್ ಸ್ಟೇಟಸ್ ನಲ್ಲಿ ಏನೇನಿತ್ತು..!?
ಸಾಲಬಾಧೆಗೆ ತತ್ತರಿಸಿದ ಯುವಕ ನದಿಗೆ ಧುಮುಕಿದ್ನ..!!?? ಯುವಕನ ವಾಟ್ಸಾಪ್ ಸ್ಟೇಟಸ್ ನಲ್ಲಿ ಏನೇನಿತ್ತು..!? ತೀರ್ಥಹಳ್ಳಿ : ಡಿಗ್ರಿಯಲ್ಲಿ ಚೆನ್ನಾಗಿ ಓದುತ್ತಿದ್ದ ರ್ಯಾಂಕ್ ತೆಗೆದುಕೊಳ್ಳುವಂತ ಯುವಕ ಜೀವನದಲ್ಲಿ ಜಿಗುಪ್ಸೆಗೊಂಡ ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಕೆಲವೊಂದು ಮಾಹಿತಿ ಹಂಚಿಕೊಂಡು ಆತ್ಮಹತ್ಯೆ ಗೆ ಶರಣಾಗಿದ್ದಾನಾ? ಎಂಬ ಅನುಮಾನ ಶುರುವಾಗಿದೆ. ಹೌದು ತೀರ್ಥಹಳ್ಳಿ ಸಮೀಪದ ಇಂದಾವರ ಗ್ರಾಮದ ಜಯದೀಪ್ ( 24 ವರ್ಷ ) ದ ಯುವಕ ತುಂಗಾ ನದಿಗೆ ಹಾರಿ ತನ್ನ ಜೀವವನ್ನು ಕಳೆದುಕೊಂಡನೇ ಎಂಬ ಅನುಮಾನ ಶುರುವಾಗಿದೆ. ಅದಕ್ಕೆ…
ಸಾಲಬಾಧೆಗೆ ಕೀಟನಾಶಕ ಸೇವಿಸಿ ರೈತ ಆತ್ಮಹತ್ಯೆ
ಸಾಲಬಾಧೆಗೆ ಕೀಟನಾಶಕ ಸೇವಿಸಿ ರೈತ ಆತ್ಮಹತ್ಯೆ ಹೊಸನಗರ: ಸಾಲಬಾಧೆಗೆ ತುತ್ತಾಗಿ ತಾಲೂಕಿನ ನಗರ ಹೋಬಳಿ ಮುಂಡಳ್ಳಿ ಸಮೀಪದ ನರ್ತಿಗೆ ಗ್ರಾಮದ ವಾಸಿ ರೈತ ಎನ್.ಟಿ. ತಿಮ್ಮಪ್ಪ(52) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ಸಂಭವಿಸಿದೆ.ತನ್ನ ತೋಟದಲ್ಲಿ ಕೆಲಸಕ್ಕೆಂದು ತೆರಳಿದ್ದ ವೇಳೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ವಾಂತಿ ಮಾಡಿಕೊಳ್ಳುತ್ತಿದ್ದ ಸಮಯದಲ್ಲಿ ಮನೆಯವರು ವಿಚಾರಿಸಲು ವಿಷದ ವಾಸನೆ ಬಂದಿದ್ದು, ತತಕ್ಷಣ ಚಿಕಿತ್ಸೆ ಕೊಡಿಸಲು ಮುಂದಾದರೂ ಪ್ರಯೋಜನವಾಗದ ಅಸುನೀಗಿದ್ದಾರೆ. ಮೃತನಿಗೆ 1.25 ಎಕರೆ ತರಿ, 2 ಎಕರೆ ಬಾಗಾಯ್ತು…
ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ
ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಗಂಭೀರ ರಿಪ್ಪನ್ಪೇಟೆ : ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ತೀರ್ಥಹಳ್ಳಿ ರಸ್ತೆಯ ಮಳವಳ್ಳಿ ಕ್ರಾಸ್ ಬಳಿಯಲ್ಲಿ ನಡೆದಿದೆ. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜೆಡ್ಡು ಗ್ರಾಮದ ಆದಿತ್ಯ (19) ಮತ್ತು ಯಶವಂತ್ (20) ಗಂಭೀರ ಗಾಯಗೊಂಡಿದ್ದಾರೆ. ನಡೆದಿದ್ದೇನು..!? ತೀರ್ಥಹಳ್ಳಿ ರಸ್ತೆಯ ಮಳವಳ್ಳಿ ಕ್ರಾಸ್ ನಲ್ಲಿ ಬೈಕ್ ಹಾಗೂ ಮಾರುತಿ ಓಮಿನಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಬೈಕ್ ನಲ್ಲಿದ್ದ…
ಅಕ್ರಮವಾಗಿ ಜಾನುವಾರು ವಧೆ, ಸಾಗಾಟ ಮಾಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕ್ಕೆ ಮನವಿ
ಜಾನುವಾರು ವಧೆ, ಅಕ್ರಮ ಸಾಗಾಟ ಮಾಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕ್ಕೆ ಮನವಿ ರಿಪ್ಪನ್ಪೇಟೆ : ಜಾನುವಾರುಗಳನ್ನು ಅಕ್ರಮವಾಗಿ ವಧೆ ಮಾಡಿ ಮಾಂಸ ಮಾರಾಟ ಮಾಡುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಗರ್ತಿಕೆರೆಯ ಮಸ್ಜೀದ್ ಎ ಖುಬಾ ಮಸೀದಿ ಸಮಿತಿಯವರು ಪಟ್ಟಣದ ಪಿಎಸ್ಐ ಪ್ರವೀಣ್ ಎಸ್ ಪಿ ರವರಿಗೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿ ನಂತರ ಮಾತನಾಡಿದ ಗರ್ತಿಕೆರೆ ಮಸ್ಜಿದ್ ಎ ಖುಬಾ ಮಸೀದಿಯ ಅಧ್ಯಕ್ಷರಾದ ಬಶೀರ್ ಅಹಮದ್ ಗರ್ತಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇತ್ತಿಚೆಗೆ ಅನಧಿಕೃತವಾಗಿ ಜಾನುವಾರುಗಳ…
ಕಾಲೇಜು ಹಿಂಭಾಗದ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತಿದ್ದ ಇಬ್ಬರು ಯುವಕರು ಅರೆಸ್ಟ್
ಕಾಲೇಜು ಹಿಂಭಾಗದ ರಸ್ತೆಯಲ್ಲಿ ಗಾಂಜಾ ಮಾರಾಟ – ಇಬ್ಬರು ಅರೆಸ್ಟ್ ಪಿಯು ಕಾಲೇಜಿನ ಹಿಂಭಾಗದ ಹಾಸ್ಟೆಲ್ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿ 350 ಗ್ರಾಂ ಗಾಂಜಾ ವಶಪಡಿಸಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರಿನಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಎರಡು ಗಂಟೆ ಸಮಯದಲ್ಲಿ ಆಯನೂರು ಗ್ರಾಮದ ಪಿಯು ಕಾಲೇಜ್ ಕಾಂಪೌಂಡ್ ಹಿಂಭಾಗದ ಹಾಸ್ಟೆಲ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿ…
ಅಕ್ರಮ ಮರ ಕಡಿತಲೆ – ನಾಲ್ವರ ಬಂಧನ
ಅಕ್ರಮ ಮರ ಕಡಿತಲೆ – ನಾಲ್ವರ ಬಂಧನ ಅಕ್ರಮವಾಗಿ ಮರ ಕಡಿತಲೆ ಮಾಡಿ ಸಾಗುವನಿ ಮರಗಳನ್ನು ಸಾಗಾಣಿಕೆ ಮಾಡುವ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸಾಲಿಗೆರೆ ಗ್ರಾಮದ ಮಧುಸೂದನ್, ಉಂಬ್ಳೇಬೈಲು ಗ್ರಾಮದ ಕುಮಾರ್, ಕೃಷ್ಣ ಹಾಗೂ ಗಾಜನೂರು ಗ್ರಾಮದ ಮೈಲಾರಿ ಎಂದು ಗುರುತಿಸಲಾಗಿದೆ. ಬೆಲೆಬಾಳುವ ಮರಗಳನ್ನು ಅಕ್ರಮವಾಗಿ ಮರಕಡಿತಲೆ ಮಾಡಿ ಟಾಟಾ ಏಸ್ನಲ್ಲಿ 6 ಮರಗಳನ್ನು ಸಾಲಿಗೆರೆಯಿಂದ ಗಾಜನೂರಿಗೆ ಸಾಗಿಸುವ ವೇಳೆ ಅಧಿಕಾರಿಗಳು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ….