ಕ್ರೈಂ ಸುದ್ದಿ:
ರೌಡಿ ಶೀಟರ್ ಕಾಲಿಗೆ ಪೊಲೀಸರ ಗುಂಡೇಟು
ಶಿವಮೊಗ್ಗದ ಜಯನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯ ರೌಡಿಶೀಟರ್ ಭವಿತ್ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ವಿನೋಬನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಭವಿತ್ ಏಳು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದು ಈತನೊಬ್ಬ ರೌಡಿಶೀಟರ್ ಆಗಿದ್ದು ನಿರಂತರವಾಗಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತನ ವಿರುದ್ಧ ಕೊಲೆ, ಕೊಲೆ ಯತ್ನ, ದರೋಡೆ ಪ್ರಕರಣಗಳು ದಾಖಲಾಗಿದ್ದು ನಿನ್ನೆ ರಾತ್ರಿ ಅಮಾಯಕರನ್ನು ತಡೆಗಟ್ಟಿ ಹಲ್ಲೆಗೆ ಯತ್ನಿಸಿದ್ದಲ್ಲದೆ ಈತನ ಜೊತೆ ಇನ್ನಿಬ್ಬರು ಸಹಚರರು ಸೇರಿಕೊಂಡಿದ್ದರು. ಇಂದು ಈತನ ಹುಡುಕಾಟದಲ್ಲಿದ್ದ ಪೊಲೀಸರಿಗೆ ವಿನೋಬನಗರ…
ಸಾರ್ವಜನಿಕ ಹಬ್ಬಗಳ ಹಿನ್ನಲೆ ರೌಡಿಗಳ ಪರೇಡ್ | 110 ರೌಡಿಗಳಿಗೆ ಎಸ್ ಪಿ ವಾರ್ನಿಂಗ್
ಸಾರ್ವಜನಿಕ ಹಬ್ಬಗಳ ಹಿನ್ನಲೆ ರೌಡಿಗಳ ಪರೇಡ್ | 110 ರೌಡಿಗಳಿಗೆ ಎಸ್ ಪಿ ವಾರ್ನಿಂಗ್ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸರು ರೌಡಿಗಳ ಪರೇಡ್ ನಡೆಸಿ ಖಡಕ್ ವಾರ್ನಿಂಗ್ ನೀಡಿದ್ದಾರೆ. ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಮುಂಜಾಗ್ರತಾ ಕ್ರಮವಾಗಿ ದಿನಾಂಕಃ 09-08-2024 ರಂದು ಸಂಜೆ ಶಿವಮೊಗ್ಗ ನಗರದ ಡಿಎಆರ್ ಸಭಾಂಗಣದ ಆವರಣದಲ್ಲಿ ಒಟ್ಟು 110 ಜನ ರೌಡಿಗಳನ್ನ ಪರೆಡ್ಗೆ ಪೊಲೀಸರು ಹಾಜರುಪಡಿಸಿದ್ದರು. ಈ ವೇಳೆ ಅವರುಗಳ ವೈಯಕ್ತಿಕ ವಿವರ ಜೊತೆಗೆ ಆದಾಯದ ಮೂಲಗಳನ್ನು…
ಎರಡು ಮಕ್ಕಳೊಂದಿಗೆ ಬಾವಿಗೆ ಹಾರಿದ ತಾಯಿ – ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಎರಡು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – ಸಿಸಿಟಿವಿಯಲ್ಲಿ ದೃಶ್ಯ ಸೆರೆ ಹೊಸನಗರ ತಾಲೂಕಿನ ಮತ್ತಿಕೈ ಗ್ರಾಪಂ ವ್ಯಾಪ್ತಿಯ ಚಂಪಕಾಪುರ ಗ್ರಾಮದಲ್ಲಿ ಮಕ್ಕಳನ್ನು ಬಾವಿಗೆ ದೂಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯ ಲಭಿಸಿದೆ. ಎರಡು ಪುಟ್ಟ ಮಕ್ಕಳನ್ನು ಬಾವಿಗೆ ದೂಡಿ ತಾನು ಕೂಡ ಬಾವಿಗೆ ಹಾರಿ ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ತಾಲೂಕಿನ ಮತ್ತಿಕೈ ವ್ಯಾಪ್ತಿಯಲ್ಲಿ ಬುಧವಾರ( ಆ.7) ನಡೆದಿತ್ತು.ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿ ವಾಣಿ(32), ಮಕ್ಕಳಾದ ಸಮರ್ಥ(12),…
ಗಾಂಜಾ ಮಾರಾಟ ಮಾಡುತಿದ್ದವರ ಸುಳಿವು ನೀಡಿದ್ದಕ್ಕೆ ಕೊಲೆ – ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಗಾಂಜಾ ಮಾರಾಟ ಮಾಡುತಿದ್ದವರ ಸುಳಿವು ನೀಡಿದ್ದಕ್ಕೆ ಕೊಲೆ – ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಗಾಂಜಾ ಮಾರಾಟ ಮಾಡುತ್ತಿದ್ದರುವುದರ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದಾನೆಂದು ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ 8 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (Court) ಜೀವಾವಧಿ ಶಿಕ್ಷೆ (Life Imprisonment) ನೀಡಿ ತೀರ್ಪು ಪ್ರಕಟಿಸಿದೆ. ಅಪರಾಧಿಗಳನ್ನು ಲತೀಫ್, ಪರ್ವೇಜ್, ಸೈಯದ್ ಜಿಲಾನ್, ಜಾಫರ್ ಸಾದಿಕ್, ಸೈಯದ್ ರಾಜೀಕ್, ಮಹಮ್ಮದ್ ಶಾಬಾಜ್, ಸಾಬಿರ್ ಮತ್ತು ಮಹಮ್ಮದ್ ಯೂಸುಫ್ ಎಂದು ಗುರುತಿಸಲಾಗಿದೆ….
10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – 73 ವರ್ಷದ ವೃದ್ದನಿಗೆ ಜೀವಾವಧಿ ಶಿಕ್ಷೆ
10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – 73 ವರ್ಷದ ವೃದ್ದನಿಗೆ ಜೀವಾವಧಿ ಶಿಕ್ಷೆ ಹತ್ತು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 73 ವರ್ಷದ ಕೂಡ್ಲಿಯ ನಾಗಪ್ಪ ಎಂಬಾತನಿಗೆ ಜೀವಾವ ಧಿ ಶಿಕ್ಷೆ ಮತ್ತು 2.50 ಲಕ್ಷ ರೂ. ದಂಡ ವಿಧಿಸಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ನೀಡಿದೆ. ದಂಡ ಕಟ್ಟಲು ವಿಫಲನಾದಲ್ಲಿ 1 ವರ್ಷ ಸಾದಾ ಕಾರಾಗೃಹವಾಸ ಶಿಕ್ಷೆ ಅನುಭವಿಸಬೇಕಾಗಿದೆ. ದಂಡದ ಮೊತ್ತದಲ್ಲಿ 2 ಲಕ್ಷ ರೂ. ಮತ್ತು ಸರಕಾರದಿಂದ…
ಹಾವು ಕಚ್ಚಿ ಬಾಣಂತಿ ಸಾವು | ಅನಾಥವಾದ ಇಬ್ಬರು ಪುಟ್ಟ ಕಂದಮ್ಮಗಳು
ಹಾವು ಕಚ್ಚಿ ಬಾಣಂತಿ ಸಾವು | ಅನಾಥವಾದ ಇಬ್ಬರು ಪುಟ್ಟ ಕಂದಮ್ಮಗಳು ನಾಗರ ಪಂಚಮಿಯ ದಿನವೇ ಹಾವು(cobra) ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆಸಾಗರ (Sagara) ತಾಲ್ಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ನಡೆದಿದೆ. ಹುತ್ತಾದಿಂಬ ಗ್ರಾಮದ 22 ವರ್ಷದ ರಂಚಿತಾ ಎಂಬ ಮಹಿಳೆ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಶಿವಮೊಗ್ಗ(Shivamogga) ಜಿಲ್ಲೆಯ ಸಾಗರ ತಾಲ್ಲೂಕಿನ ಹುತ್ತದಿಂಬ ಗ್ರಾಮದ 22 ವರ್ಷದ ರಂಜಿತಾ ಅವರು ಇಂದು ಹಸುವಿಗೆ ಮೇವು ತರಲೆಂದು ಗದ್ದೆಗೆ ತೆರಳಿದ್ದರು. ಈ ವೇಳೆ ಅವರಿಗೆ ಹಾವು ಕಚ್ಚಿ(snake bite) ಗದ್ದೆಯಲ್ಲಿಯೇ ಕುಸಿದು…
ಮನೆಯಲ್ಲಿ ಬೆಕ್ಕು ಸಾಕುವವರಿಗೆ ಶಾಕಿಂಗ್ ಸುದ್ದಿ.! | ಬೆಕ್ಕು ಕಚ್ಚಿ ಶಿವಮೊಗ್ಗದ ಮಹಿಳೆ ಸಾವು
ಮನೆಯಲ್ಲಿ ಬೆಕ್ಕು ಸಾಕುವವರಿಗೆ ಶಾಕಿಂಗ್ ಸುದ್ದಿ.! | ಬೆಕ್ಕು ಕಚ್ಚಿ ಶಿವಮೊಗ್ಗದ ಮಹಿಳೆ ಸಾವು ಮನೆಯಲ್ಲಿ ಸಾಕಿದ ಬೆಕ್ಕೊಂದು ಮನೆಯ ಮಹಿಳೆಯನ್ನು ಬಲಿ ಪಡೆದುಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟದಲ್ಲಿ ನಡೆದಿದೆ. ಗಂಗೀಬಾಯಿ (50) ಮನೆಯ ಸಾಕು ಬೆಕ್ಕು ಕಚ್ಚಿ ಸಾವನ್ನಪ್ಪಿದ ಮಹಿಳೆ ಎಂದು ಗುರುತಿಸಲಾಗಿದೆ. ತರಲಘಟ್ಟದ ಗಂಗೀಬಾಯಿ ಎನ್ನುವವರಿಗೆ ಎರಡು ತಿಂಗಳ ಹಿಂದೆ ಮನೆಯಲ್ಲೇ ಮುದ್ದಾಗಿ ಸಾಕಿದ್ದ ಬೆಕ್ಕು ಕಚ್ಚಿತ್ತು ಎನ್ನಲಾಗಿದೆ. ಈ ಬೆಕ್ಕು ಮೊದಲು ತರಲಘಟ್ಟದ ಕ್ಯಾಂಪ್ನಲ್ಲಿರುವ ಯುವಕನ ಮೇಲೆ ದಾಳಿ…
ಕೆಂಚನಾಲ ಗ್ರಾಪಂ ಉಪಾಧ್ಯಕ್ಷರಾಗಿ ಹೂವಮ್ಮ ರಾಮಪ್ಪ ಅವಿರೋಧ ಆಯ್ಕೆ
ರಿಪ್ಪನ್ಪೇಟೆ : ಕೆಂಚನಾಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ ಹೂವಮ್ಮ ರಾಮಪ್ಪ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿದ್ದ ರಮ್ಯ ಶಶಿಕುಮಾರ್ ರಾಜೀನಾಮೆ ಹಿನ್ನಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣಾಧಿಕಾರಿ ಶಿವಪ್ರಸಾದ್ ಸಮ್ಮುಖದಲ್ಲಿ ಆಯ್ಕೆ ಪ್ರಕ್ರಿಯೆ ಹಮ್ಮಿಕೊಳ್ಳಲಾಗಿತ್ತು. ಸ್ಥಾನಕ್ಕೆ ಹೂವಮ್ಮ ರಾಮಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ್ದ ಹಿನ್ನಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂಧರ್ಭದಲ್ಲಿ ಕೆಂಚನಾಲ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್ , ಗ್ರಾಪಂ ಸದಸ್ಯರಾದ ಮಹಮ್ಮದ್ ಷರೀಫ್ , ಕೃಷ್ಣೋಜಿರಾವ್ , ಪುಟ್ಟಮ್ಮ , ರಮ್ಯ ಪಿಡಿಓ ರವಿಕುಮಾರ್ ,…
Ripponpete | ಹೃದಯಾಘಾತದಿಂದ ಸಚಿನ್ ಶೆಟ್ಟಿ ಸಾವು
Ripponpete | ಹೃದಯಾಘಾತದಿಂದ ಸಚಿನ್ ಶೆಟ್ಟಿ ಸಾವು ರಿಪ್ಪನ್ಪೇಟೆ : ಪಟ್ಟಣದ ಶಬರೀಶನಗರದ ಯುವಕನೊಬ್ಬ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಶಬರೀಶ ನಗರದ ಸಚಿನ್ ಶೆಟ್ಟಿ(30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಶಬರೀಶ ನಗರದ ನಿವಾಸಿ ವಾಸು ಶೆಟ್ಟಿ ಎಂಬುವವರ ಪುತ್ರನಾದ ಸಚಿನ್ ಶೆಟ್ಟಿ ಕಳೆದ ನಾಲ್ಕೈದು ವರ್ಷಗಳಿಂದ ಬೆಂಗಳೂರಿನಲ್ಲಿ ಚಾಲಕ ವೃತ್ತಿ ಮಾಡಿಕೊಂಡಿದ್ದನು. ಇಂದು ಬೆಳಿಗ್ಗೆ ಕೆಲಸಕ್ಕೆ ಹೊರಡುವಾಗ ಏಕಾಏಕಿ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಅಷ್ಟರಲ್ಲಾಗಲೇ ಸಚಿನ್ ಮೃತಪಟ್ಟಿದ್ದಾನೆ….
ಎರಡು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ | ಹೊಸನಗರ ತಾಲೂಕಿನಲ್ಲೊಂದು ಹೃದಯವಿದ್ರಾವಕ ಘಟನೆ
ಎರಡು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ | ಹೊಸನಗರ ತಾಲೂಕಿನಲ್ಲೊಂದು ಹೃದಯವಿದ್ರಾವಕ ಘಟನೆ ಎರಡು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು ತಾನು ಕೂಡ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ವ್ಯಾಪ್ತಿಯಲ್ಲಿ ನಡೆದಿದೆ. ಮತ್ತಿಕೈ ಸಮೀಪದ ಚಂಪಕಾಪುರ ಗ್ರಾಮದ ವಾಣಿ(32), ಮಕ್ಕಳಾದ ಸಮರ್ಥ(12), ಸಂಪದ (6) ಮೃತ ದುರ್ಧೈವಿಗಳು. ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿ ವಾಣಿ ಎಂಬುವವರು ತಮ್ಮ ಎರಡು ಮಕ್ಕಳನ್ನು ಬಾವಿಗೆ ಎಸೆದು…