ಕ್ರೈಂ ಸುದ್ದಿ:
ಬೈಕ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ – ಯುವಕ ಸಾವು
Fatal accident between bike and tipper – youth dies ಬೈಕ್ ಹಾಗೂ ಟಿಪ್ಪರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಪಿಯುಸಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಆವಿನಹಳ್ಳಿ ಸಮೀಪದಲ್ಲಿ ನಡೆದಿದೆ. ಕಟ್ಟಿನಕಾರು ಗ್ರಾಮದ ನಿವಾಸಿ ಸಚಿನ್ (18) ಮೃತ ದುರ್ಧೈವಿಯಾಗಿದ್ದಾರೆ. ಸಾಗರ ಪಟ್ಟಣಕ್ಕೆ ಹಾಸ್ಟೆಲ್ ಗೆ ಅರ್ಜಿ ಸಲ್ಲಿಸಲು ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಈ ಅಪಘಾತದಲ್ಲಿ ಬೈಕ್ ನಲ್ಲಿದ್ದ ಹಿಂಬದಿಯಲ್ಲಿದ್ದವನಿಗೂ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗುತ್ತಿದೆ. Fatal…
ಶ್ರೀಗಂಧ ಚೋರರ ಬಂಧನ
Shivamogga | ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಉಂಬ್ಳೆ ಬೈಲು ರಸ್ತೆಯಲ್ಲಿರುವ ದರ್ಗಾದ ಹತ್ತಿರ ಆಲ್ಟೋ ಕಾರಿನಲ್ಲಿ ಶ್ರೀಗಂಧದ ತುಂಡುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ತುಂಗ ನಗರ ಪೊಲೀಸರ ದಾಳಿ ನಡೆದಿದೆ. ದಾಳಿಯಲ್ಲಿ ಮೂವರನ್ನ ಬಂಧಿಸಲಾಗಿದ್ದು ಕೃತ್ಯಕ್ಕೆ ಬಳಸಿದ್ದ ವಾಹನ ಮತ್ತು 14.5 ಕೆ.ಜಿ ಗಂಧವನ್ನ ವಶಕ್ಕೆ ಪಡೆಯಲಾಗಿದೆ. ತುಂಗ ನಗರ ಠಾಣೆಯ ಪಿಐ ಮಂಜುನಾಥ್ ರವರ ಮೇಲ್ವಿಚಾರಣೆಯಲ್ಲಿ ನಡೆದ ದಾಳಿಯಲ್ಲಿ ಠಾಣೆಯ ಪಿಎಸ್ಐ ಶಿವಪ್ರಸಾದ್, ಸಿದ್ದಪ್ಪ ಹಾಗೂ ಸಿಬ್ಬಂಧಿಗಳಾದ …
ಅಕ್ರಮ ಮರಳು ಸಾಗಾಣಿಕೆ – ಟಿಪ್ಪರ್ ಲಾರಿ ವಶಕ್ಕೆ
Ripponpete | ಅಕ್ರಮವಾಗಿ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ಭೂ ಮತ್ತು ಗಣಿ ವಿಜ್ಞಾನ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೋಡೂರು ಸಮೀಪದಲ್ಲಿ ಟಿಪ್ಪರ್ ನಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದಾಗ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಗಸ್ತು ತಿರುಗುತಿದ್ದಾಗ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮ ಮರಳು ಸಾಗಾಣಿಕೆ ಪ್ರಕರಣದಲ್ಲಿ ಲಾರಿಯನ್ನು ವಶಕ್ಕೆ ಪಡೆದ ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಪ್ರಿಯಾರವರು ಪ್ರಕರಣ ದಾಖಲಿಸಿಕೊಂಡು ರಿಪ್ಪನ್ಪೇಟೆ ಪೊಲೀಸ್ ಠಾಣೆ…
ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ – ಬಿಜೆಪಿ ಮುಖಂಡ ಶರತ್ ಕಲ್ಯಾಣಿ ಅರೆಸ್ಟ್
ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ ಆಕೆಯಿಂದಲೇ ಲಕ್ಷ ಲಕ್ಷ ಹಣ ಪಡೆದು ವಂಚಿಸಿ ತಲೆಮರೆಸಿಕೊಂಡಿದ್ದ ಬಿಜೆಪಿ ಮಾಧ್ಯಮ ಪ್ರಮುಖನೋರ್ವನನ್ನು ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ಶಿವಮೊಗ್ಗ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಮಾಜಿ ಸಂಚಾಲಕ ಕಲ್ಯಾಣಿ ಶರತ್ ಎಸ್ ವಿ ಎಂದು ಗುರುತಿಸಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಶರತ್ ಕಲ್ಯಾಣಿಯನ್ನು ಮಹಿಳಾ ಠಾಣೆ ಇನ್ಸ್ ಪೆಕ್ಟರ್ ನೇತೃತ್ವದ ಮೂರು ಜನರ ತಂಡ ಕಾರ್ಯಾಚರಣೆ ನಡೆಸಿ ಬಿಜಾಪುರ ತಾಲೂಕಿನಲ್ಲಿ ವಶಕ್ಕೆ ಪಡೆದು ಠಾಣೆಗೆ ಕರೆತಂದು…
ಕಾಡು ಪ್ರಾಣಿಗಳನ್ನು ಬೇಟೆಯಾಡುತಿದ್ದ ಆರೋಪಿಯ ಬಂಧನ – ಜಿಂಕೆ ಚರ್ಮ ಸಹಿತ ಬಂದೂಕು ವಶಕ್ಕೆ.!
ನ್ಯಾಮತಿ ತಾಲೂಕಿನ ಸಂರಕ್ಷಿತ ಅರಣ್ಯದಲ್ಲಿ ಅಕ್ರಮವಾಗಿ ಪ್ರವೇಶಿಸಿ ಕಾಡುಪ್ರಾಣಿಗಳನ್ನು ಬೇಟೆಯಾಡಿದ ಆರೋಪದ ಮೇಲೆ ಹೊನ್ನಾಳಿ ವಲಯ ಅರಣ್ಯಾಧಿಕಾರಿಗಳು ಒಬ್ಬನನ್ನು ಬಂಧಿಸಿದ್ದು, ತಪ್ಪಿಸಿಕೊಂಡ ಮೂವರ ಸೆರೆಗೆ ಕಾರ್ಯಾಚರಣೆ ಮುಂದುವರಿಸಿದೆ. ಚಿನ್ನಿಕಟ್ಟೆ ಗ್ರಾಮದ ಮೋಹನ್ ಬಂಧಿತ ಆರೋಪಿ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ 12 ದಿನದ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದ್ದು, ತಪ್ಪಿಸಿಕೊಂಡಿರುವ ಆರೋಪಿಗಳಾದ ಚಿನ್ನಿಕಟ್ಟೆ ಗ್ರಾಮದ ಶಿವಕುಮಾರ, ದಿನೇಶ, ವಡವೇಲು ಬಂಧನಕ್ಕೆ ಬಂಧಿಸಲು ಕಾರ್ಯಾಚರಣೆ ಮುಂದುವರಿದಿದೆ ಎಂದು ಹೊನ್ನಾಳಿ ವಲಯ ಅರಣಾಧಿಕಾರಿ ಕಿಶೋರ್ನಾಯ್ಕ ತಿಳಿಸಿದ್ದಾರೆ. ಹೊನ್ನಾಳಿ ಪ್ರಾದೇಶಿಕ ಅರಣ್ಯ ವಲಯದ…
ಒಂಟಿ ಮನೆಯಲ್ಲಿದ್ದ ಅಜ್ಜಿಯ ಭೀಕರ ಕೊಲೆ | Crime news
ಒಂಟಿ ಮನೆಯಲ್ಲಿದ್ದ ಅಜ್ಜಿಯ ಭೀಕರ ಕೊಲೆ | Crime news ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಂಜರಿಕೊಪ್ಪ ಗ್ರಾಮದಲ್ಲಿ ನಿನ್ನೆ(ಶನಿವಾರ) ಬೆಳಗ್ಗೆ ಸುಮಾರು 10. 30 ಘಂಟೆಗೆ ದರೋಡೆಕೋರರು ಒಂಟಿ ಮನೆಗೆ ನುಗ್ಗಿದ್ದಾರೆ. ಮೃತ ಸಾವಿತ್ರಮ್ಮ (60) ಅಜ್ಜಿಯು ಬ್ಯಾಂಕ್ಗೆ ಹೋಗಿ ಒಂದಿಷ್ಟು ಹಣ ತೆಗೆದುಕೊಂಡು ಬಂದು ಮನೆಯಲ್ಲಿ ಇಟ್ಟಿರುವುದನ್ನು ಕಳ್ಳರು ಗಮನಿಸಿದ್ದರು. ಹೀಗೆ ಅಜ್ಜಿ ಒಬ್ಬಳೇ ಇರುವುದನ್ನು ಅರಿತಿದ್ದ ಖದೀಮರು ಮನೆಗೆ ಎಂಟ್ರಿಕೊಟ್ಟು ಅಜ್ಜಿ ಬಳಿ ಇದ್ದ ನಗದು ಕಿತ್ತುಕೊಂಡಿದ್ದಾರೆ. ಈ ವೇಳೆ ಅಜ್ಜಿ ದರೋಡೆಗೆ…
Ripponpete | ಖಾಸಗಿ ಲಾಡ್ಜ್ ನಲ್ಲಿ ವಿಷ ಸೇವಿಸಿದ ಯುವಕ – ಸ್ಥಿತಿ ಗಂಭೀರ
Ripponpete | ಖಾಸಗಿ ಲಾಡ್ಜ್ ನಲ್ಲಿ ವಿಷ ಸೇವಿಸಿದ ಯುವಕ – ಸ್ಥಿತಿ ಗಂಭೀರ ರಿಪ್ಪನ್ಪೇಟೆ : ಹೊಸನಗರ ರಸ್ತೆಯ ಖಾಸಗಿ ಲಾಡ್ಜ್ ವೊಂದರಲ್ಲಿ ಯುವಕನೊಬ್ಬ ವಿಷ ಸೇವಿಸಿರುವ ಘಟನೆ ನಡೆದಿದೆ. ಬಿದನೂರು ನಗರ ಸಮೀಪದ ಹೆಂಡೆಗದ್ದೆ ನಿವಾಸಿ ರಾಕೇಶ್ ( 22) ವಿಷ ಸೇವಿಸಿರುವ ಯುವಕನಾಗಿದ್ದಾನೆ. ನಡೆದಿದ್ದೇನು..!?? ಇಂದು ಬೆಳಿಗ್ಗೆ ನಗರ ಮೂಲದ ಯುವಕ ರಾಕೇಶ್ ಖಾಸಗಿ ಲಾಡ್ಜ್ ನಲ್ಲಿ ರೂಮ್ ಮಾಡಿಕೊಂಡಿದ್ದು ಮಧ್ಯಾಹ್ನದ ಸಮಯದಲ್ಲಿ ವಿಷ ಸೇವಿಸಿದ್ದಾನೆ ಸ್ವಲ್ಪ ಸಮಯದಲ್ಲಿ ಯುವಕನು ನರಳಾಡುತಿದ್ದದ್ದು ಲಾಡ್ಜ್…
ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ – ಬಿಜೆಪಿ ಮಾಧ್ಯಮ ಪ್ರಮುಖ್ ಶರತ್ ವಿರುದ್ಧ ಪ್ರಕರಣ ದಾಖಲು | Shivamogga
ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ – ಬಿಜೆಪಿ ಮಾಧ್ಯಮ ಪ್ರಮುಖ್ ಶರತ್ ವಿರುದ್ಧ ಪ್ರಕರಣ ದಾಖಲು | Shivamogga ಶಿವಮೊಗ್ಗ : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ ಸಂತ್ರಸ್ತೆಯಿಂದಲೇ ನಾಲ್ಕು ಲಕ್ಷ ರೂ. ಪಡೆದು ವಂಚಿಸಿದ ಆರೋಪದಲ್ಲಿ ಬಿಜೆಪಿ ಮಾಧ್ಯಮ ಪ್ರಮುಖ ಶರತ್ ಕಲ್ಯಾಣಿ ಎಂಬಾತನ ವಿರುದ್ಧ ಅತ್ಯಾಚಾರ ಹಾಗೂ ವಂಚನೆ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದೆ. ಶರತ್ ಕಲ್ಯಾಣಿಯು ತನಗೆ ಮದುವೆಯಾಗಿರುವ ಮಾಹಿತಿ ಮುಚ್ಚಿಟ್ಟು ‘ನಾನಿನ್ನು ಅವಿವಾಹಿತ. ನಿನ್ನನ್ನು ಪ್ರೀತಿಸುತ್ತೇನೆ, ಮದುವೆಯಾಗಿ ನಿನಗೆ ಬಾಳು ಕೊಡುತ್ತೇನೆ…
ಅನಾರೋಗ್ಯದಿಂದ ಯುವಕ ಸಾವು – ಕುಟುಂಬಸ್ಥರಿಂದ ವಾಮಚಾರದ ಶಂಕೆ | ದೂರು ದಾಖಲು | Crime News
ಅನಾರೋಗ್ಯದಿಂದ ಯುವಕ ಸಾವು – ಕುಟುಂಬಸ್ಥರಿಂದ ವಾಮಚಾರದ ಶಂಕೆ | ದೂರು ದಾಖಲು ರಿಪ್ಪನ್ಪೇಟೆ : ಯುವಕನೊಬ್ಬ ಅನಾರೋಗ್ಯದಿಂದ ಮೃತಪಟ್ಟಿದ್ದು ಕುಟುಂಬಸ್ಥರು ಇತ್ತೀಚಿಗೆ ಜಮೀನಿನ ವಿಚಾರದಲ್ಲಿ ನಡೆದ ಗಲಾಟೆ ಹಿನ್ನಲೆಯಲ್ಲಿ ವಾಮಚಾರದ ಶಂಕೆ ವ್ಯಕ್ತಪಡಿಸಿ ದೂರು ಸಲ್ಲಿಸಿರುವ ಘಟನೆ ನಡೆದಿದೆ. ಕೋಡೂರು ಸಮೀಪದ ಹೊಸಳ್ಳಿಯ ನರೇಂದ್ರ (20) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ನಡೆದಿದ್ದೇನು..!? ಹೊಸಳ್ಳಿ ಗ್ರಾಮದ ಟ್ರ್ಯಾಕ್ಟರ್ ಚಾಲಕನಾಗಿದ್ದ ನರೇಂದ್ರನಿಗೆ ಕಳೆದ ಒಂದು ತಿಂಗಳಿನಿಂದ ತೀವ್ರ ಜ್ವರ ಕಾಣಿಸಿಕೊಂಡಿತ್ತು ಈ ಹಿನ್ನಲೆಯಲ್ಲಿ ಹೊಸನಗರ ಹಾಗೂ ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ…
ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ – ಓರ್ವ ಸಾವು , ಇನ್ನೋರ್ವ ಗಂಭೀರ | accident
ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ – ಓರ್ವ ಸಾವು , ಇನ್ನೋರ್ವ ಗಂಭೀರ | accident ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಣೆಹೊಸೂರಿನಲ್ಲಿ ಬೈಕ್ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿ ಇನ್ನೋರ್ವ ಗಂಭೀರವಾಗಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದ ನಿವಾಸಿ ಗುಡ್ಡೇನಹಳ್ಳಿಯ ನಿವಾಸಿ ಮಂಜನಾಯ್ಕ ಎಂಬಾತ ಮೃತಪಟ್ಟಿದ್ದು ಬೈಕ್ ನ ಹಿಂಬದಿ ಸವಾರ ರಘು ಎಂಬಾತನಿಗೆ ಗಂಭೀರ ಗಾಯಗಳಾಗಿದೆ. ಬೈಕ್ ನಲ್ಲಿ ಶಿವಮೊಗ್ಗ ಕಡೆ ಬರುತ್ತಿದ್ದ…