ಕ್ರೈಂ ಸುದ್ದಿ:
ಹೆಂಚು ಹಾಕುವಾಗ ಕೆಳಗೆ ಬಿದ್ದು ಯುವಕ ಸಾವು – ಗುತ್ತಿಗೆದಾರ ಹಾಗೂ ಮನೆ ಮಾಲೀಕನ ವಿರುದ್ದ ದೂರು | Crime News
ಹೆಂಚು ಹಾಕುವಾಗ ಕೆಳಗೆ ಬಿದ್ದು ಯುವಕ ಸಾವು – ಗುತ್ತಿಗೆದಾರ ಹಾಗೂ ಮನೆ ಮಾಲೀಕನ ವಿರುದ್ದ ದೂರು ನ್ಯಾಮತಿ : ಇಲ್ಲಿನ ಸುರಹೊನ್ನೆ ಗ್ರಾಮದ ಮನೆಯ ಮುಂಭಾಗ ಹೆಂಚು ಹಾಕುತ್ತಿರುವಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು ಯುವಕ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಶಿವಮೊಗ್ಗ ತಾಲ್ಲೂಕಿನ ಅನುಪಿನಕಟ್ಟೆ ಗ್ರಾಮದ ಯೋಗೇಶನಾಯ್ಕ (23) ಮೃತ ಯುವಕ.ಸುರಹೊನ್ನೆ ಗ್ರಾಮದ ಪ್ರಸನ್ನಕುಮಾರ ಅವರ ಮನೆ ಮುಂಭಾಗದಲ್ಲಿ ಹೆಂಚು ಹಾಕುವಾಗ ಮೇಲಿನಿಂದ ಕೆಳಗೆ ಬಿದ್ದಿದ್ದಾರೆ. ತಲೆಗೆ, ಮೈಕೈಗೆ ಪೆಟ್ಟು ಬಿದ್ದಿದ್ದು, ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್…
ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ – ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ (VA)
ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ – ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ (VA) ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಇದೀಗ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಮಾನಸಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಹೌದು ಸಾಗರ ತಾಲೂಕಿನ ತಹಸಿಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಡೆತ್ ನೋಟ್ ಬರೆದಿಟ್ಟು ನಿದ್ದೆ ಮಾತ್ರೆ ಸೇವಿಸಿಗ್ರಾಮ ಲೆಕ್ಕಧಿಕಾರಿ…
ಅಳತೆಯಲ್ಲಿ ಗ್ರಾಹಕರಿಗೆ ಮೋಸ – ಬಂಕ್ ಮುಟ್ಟುಗೋಲು | Bunk confiscation
ಅಳತೆಯಲ್ಲಿ ಗ್ರಾಹಕರಿಗೆ ಮೋಸ – ಬಂಕ್ ಮುಟ್ಟುಗೋಲು | Bunk confiscation SAGARA | ಅಳತೆಯಲ್ಲಿ ಗ್ರಾಹಕರಿಗೆ ವಂಚಿಸಲು ಕಾನೂನುಮಾಪನ ಇಲಾಖೆಯ ಸೀಲ್ನ್ನು ಹಾಳು ಮಾಡಿದ ಹಿನ್ನೆಲೆಯಲ್ಲಿ ನಗರದ ಆವಿನಹಳ್ಳಿ ರಸ್ತೆಯ ಗ್ಯಾಸ್ ಬಂಕ್ನ್ನು ಕಾನೂನು ಮಾಪನ ಶಾಸ್ತ್ರ ಇಲಾಖೆ ಮುಟ್ಟುಗೋಲು ಹಾಕಿಕೊಂಡಿರುವ ಘಟನೆ ನಡೆದಿದೆ. ಗೋಗ್ಯಾಸ್ ಎಲ್ಪಿಜಿ ಕಂಪೆನಿಯ ಮಾಲೀಕತ್ವದ ಸ್ಥಳೀಯ ಶಾಖಾ ಘಟಕವನ್ನು ಶಿವಮೊಗ್ಗದ ಎಂ.ಆರ್.ಮಹೇಶ್ವರಪ್ಪ ಎಂಬುವವರಿಗೆ ನಡೆಸಲು ಗುತ್ತಿಗೆ ನೀಡಲಾಗಿತ್ತು. ಘಟಕದಲ್ಲಿನ ಮದರ್ ಬೋರ್ಡ್ ಅನ್ನು ಅಳತೆಯ ನಿಖರತೆ ಕಾಪಾಡುವ ಸಲುವಾಗಿ ನಿಯಮಿತ…
Ripponpete | ಮನೆ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ,ನಗದು ಕಳ್ಳತನ
Ripponpete | ಮನೆ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ,ನಗದು ಕಳ್ಳತನ ರಿಪ್ಪನ್ಪೇಟೆ : ನೆವಟೂರು ಗ್ರಾಮದ ಮನೆಯೊಂದರಲ್ಲಿ ರಾತ್ರಿ ವೇಳೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿರುವ ಘಟನೆ ನಡೆದಿದೆ. ನೆವಟೂರು ಗ್ರಾಮದ ನಾಗರಾಜ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದ್ದು ನಾಗರಾಜ್ ಕುಟುಂಬದವರು ಸೋಮವಾರ ಸಂಜೆ ತಮ್ಮ ಸಂಬಂಧಿಕರೊಬ್ಬರ ಅನಾರೋಗ್ಯದ ಹಿನ್ನಲೆಯಲ್ಲಿ ತೀರ್ಥಹಳ್ಳಿಗೆ ತೆರಳಿದ್ದರು. ಇಂದು ಮಧ್ಯಾಹ್ನ…
ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ , ಬಸ್ ಮೇಲೆ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರಿ ಅನಾಹುತ | accident
ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ , ಬಸ್ ಮೇಲೆ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರಿ ಅನಾಹುತ | accident ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಸೋಮವಾರ ರಾತ್ರಿ ಪಿಳ್ಳಂಗೆರೆಯಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಿಳ್ಳಂಗೆರೆ ಬಳಿ ತಿರುವಿನಲ್ಲಿ ಅಪಘಾತಕ್ಕೀಡಾಗಿದೆ. ವಿದ್ಯುತ್ ಕಂಬ ಮತ್ತು ಓಮ್ನಿ ಕಾರಿಗೆ ಡಿಕ್ಕಿಯಾಗಿದೆ. ಬಸ್ ಚಾಲಕನಿಗೆ ಗಂಭೀರ ಸ್ವರೂಪದ ಗಾಯವಾಗಿದೆ ಎಂದು…
ಆಯನೂರು ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು – ನಾಲ್ವರಿಗೆ ಗಾಯ! | accident
ಆಯನೂರು ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು – ನಾಲ್ವರಿಗೆ ಗಾಯ! | accident ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹಳ್ಳಕ್ಕೆ ಬಿದ್ದ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಬಳಿ ನಡೆದಿದೆ. ಘಟನೆಯಿಂದ ಕಾರಿನಲ್ಲಿದ್ದ ಮೂವರು ಮಹಿಳೆಯರು ಮತ್ತು ಓರ್ವ ಬಾಲಕನಿಗೆ ಗಾಯವಾಗಿದ್ದು ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾರಿನಲ್ಲಿದ್ದವರು ಚಿತ್ರದುರ್ಗದಿಂದ ಸಾಗರಕ್ಕೆ ತೆರಳುತ್ತಿದ್ದರು ಎನ್ನಲಾಗಿದ್ದು ಆಯನೂರು ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್…
ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿಗೆ ಚೂರು ಇರಿತ – ರೌಡಿ ಕಾಲಿಗೆ ಗುಂಡೇಟು | Shivamogga
ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿಗೆ ಚೂರು ಇರಿತ – ರೌಡಿ ಕಾಲಿಗೆ ಗುಂಡೇಟು | Shivamogga ಶಿವಮೊಗ್ಗ : ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಇರಿದು ಪರಾರಿಯಾಗಲು ಮುಂದಾದ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ತ್ಯಾಜ್ಯವಳ್ಳಿ ಅರಣ್ಯ ಪ್ರದೇಶದಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದೆ. ರಝಾಕ್ ಬಂಧಿತ ಆರೋಪಿಯಾಗಿದ್ದು ಗುಂಡೇಟಿನಿಂದ ಗಾಯಗೊಂಡಿರುವ ಆತನನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು…
Thirthahalli | ಜಮೀನಿನಲ್ಲಿ ನೀರು ಹೋಗುವ ವಿಚಾರದಲ್ಲಿ ಗಲಾಟೆ – ಇಬ್ಬರು ಆತ್ಮಹತ್ಯೆಗೆ ಯತ್ನ – ಮಣಿಪಾಲ್ ಗೆ ರವಾನೆ
ಜಮೀನಿನಲ್ಲಿ ನೀರು ಹೋಗುವ ವಿಚಾರದಲ್ಲಿ ಗಲಾಟೆ – ಇಬ್ಬರು ಆತ್ಮಹತ್ಯೆಗೆ ಯತ್ನ! ತೀರ್ಥಹಳ್ಳಿ : ರಾಜ ಕಾಲುವೆಯ ನೀರು ತಮ್ಮ ಜಮೀನಿನ ಮೂಲಕ ಹೋಗುವ ವಿಚಾರದಲ್ಲಿ ತಾಲೂಕು ಆಡಳಿತ ಸೂಕ್ತ ಕ್ರಮ ಕೈಗೊಳ್ಳಲು ಮುಂದಾದ ಸಂದರ್ಭದಲ್ಲಿ ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಸಂಜೆ ನಡೆದಿದೆ. ತಾಲೂಕಿನ ಅರಳಸುರುಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಹುಲಿಸರ ಎಂಬ ಗ್ರಾಮದಲ್ಲಿ ದಿನೇಶ್ (45 ವರ್ಷ ) ಹಾಗೂ ಸತೀಶ್ (49 ವರ್ಷ ) ಎಂಬುವರು ಕಳೆನಾಶಕ ಸೇವಿಸಿ…
ಸಿನಿಮೀಯ ಶೈಲಿಯಲ್ಲಿದೆ ಆಗುಂಬೆ ಮರ್ಡರ್ ಮಿಸ್ಟರಿ – ಸ್ನೇಹಿತನಿಂದಲೇ ಕೊಲೆಯಾದಳ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ..!!!
ಸಿನಿಮೀಯ ಶೈಲಿಯಲ್ಲಿದೆ ಆಗುಂಬೆ ಮರ್ಡರ್ ಮಿಸ್ಟರಿ – ಸ್ನೇಹಿತನಿಂದಲೇ ಕೊಲೆಯಾದಳ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ..!!!ಪೊಲೀಸರು ರಣರೋಚಕ ಕೇಸ್ ಪತ್ತೆಹಚ್ಚಿದ್ದು ಹೇಗೆ!? ತೀರ್ಥಹಳ್ಳಿ : ಅವರಿಬ್ಬರು ಪರಸ್ಪರ ಪರಿಚಯಸ್ಥರು ಮಾತ್ರವಲ್ಲದೆ ಸಂಬಂಧಿಕರು ಕೂಡ ಆಗಿದ್ದರು. ಅವರ ನಡುವೆ ಸಹಜವಾದ ಸಲಿಗೆ ಕೂಡ ಇತ್ತು. ಇತ್ತೀಚಿಗೆ ನಡೆದ ಕೆಲವು ಘಟನೆಗಳು ಅವರಿಬ್ಬರ ನಡುವೆ ಕಂದಕವನ್ನು ಸೃಷ್ಟಿ ಮಾಡಿದ್ದಲ್ಲದೆ ಈ ಕಂದಕವೇ ಇದೀಗ ಒಬ್ಬರ ಜೀವ ತೆಗೆಯುವಂತೆ ಮಾಡಿದೆ. ಇನ್ನು ಪೊಲೀಸರ ಅತಿಥಿ ಆಗಿರುವ ಆತ ಸಾಮಾನ್ಯ ಆಸಾಮಿಯನಲ್ಲ, ಕೊಲೆ…
ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ – ಕೊಲೆ ಆರೋಪಿಯ ಬಂಧನ ..!! | Arrested
ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ – ಕೊಲೆ ಆರೋಪಿಯ ಬಂಧನ ..!! ತೀರ್ಥಹಳ್ಳಿ : ಮನೆಯಿಂದ ಕೆಲಸಕ್ಕೆಂದು ಹೊರಗೆ ಹೋಗಿ ನಾಪತ್ತೆಯಾಗಿದ್ದ ಯುವತಿಯು ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಾಲ್ಲೂಕಿನ ನಾಲೂರು-ಕೊಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಮನೆ ಎಂಬ ಗ್ರಾಮದ ಕಾಡಿನಲ್ಲಿ ಯುವತಿಯ ಶವ ಶನಿವಾರ ರಾತ್ರಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿಯನ್ನು ಧರ್ಮಸ್ಥಳ ಸಂಘದ ಪ್ರತಿನಿಧಿಯಾಗಿದ್ದ ಪೂಜಾ ಎ.ಕೆ. (24) ಎಂದು ಗುರುತಿಸಲಾಗಿದೆ. ಜೂನ್ 30 ರಂದು ಯುವತಿ ಕೆಲಸಕ್ಕೆಂದು ಹೋದವಳು…