ಕ್ರೈಂ ಸುದ್ದಿ:
ಮಟನ್ ನಲ್ಲಿ ಮೂಳೆ ಹಾಕಬೇಡ ಎಂದಿದ್ದಕ್ಕೆ ಗ್ರಾಹಕನ ಮೇಲೆ ಅಪ್ರಾಪ್ತ ಯುವಕನಿಂದ ಮಾರಣಾಂತಿಕ ಹಲ್ಲೆ | Crime News
ಮಟನ್ ನಲ್ಲಿ ಮೂಳೆ ಹಾಕಬೇಡ ಎಂದಿದ್ದಕ್ಕೆ ಗ್ರಾಹಕನ ಮೇಲೆ ಅಪ್ರಾಪ್ತ ಯುವಕನಿಂದ ಮಾರಣಾಂತಿಕ ಹಲ್ಲೆ | Crime News ಶಿವಮೊಗ್ಗ : ಮೂಳೆ ಬದಲು ಮಟನ್ ಹೆಚ್ಚಿಗೆ ಹಾಕುವಂತೆ ಕೇಳಿದ್ದಕ್ಕೆ ಅಪ್ರಾಪ್ತ ಯುವಕ ಗ್ರಾಹಕನ ಮೇಲೆ ಮಾರಣಾಂತಿಕವಾಗಿ ದಾಳಿ ನಡೆಸಿರುವ ಘಟನೆ ನಗರದಲ್ಲಿ ಸಂಭವಿಸಿದೆ. ಗಾಡಿಕೊಪ್ಪ ನಿವಾಸಿ ಮಲ್ಲೇಶ್ (40) ಗಂಭೀರವಾಗಿ ಗಾಯಗೊಂಡಿದ್ದಾರೆ. ಮಲ್ಲೇಶಪ್ಪ ಮಟನ್ ಖರೀಸಿದ್ದು ಮೂಳೆಯನ್ನು ಹೆಚ್ಚಾಗಿ ಹಾಕಲಾಗಿತ್ತು. ಹಾಗಾಗಿ ಅಪ್ರಾಪ್ತನ ತಂದೆಯನ್ನು ಕರೆದು ಮಲ್ಲೇಶಪ್ಪ ದೂರಿದ್ದರು. ಆಗ ಅಪ್ರಾಪ್ತನು ಮಲ್ಲೇಶಪ್ಪನ ಮೇಲೆ ಹರಿತವಾದ…
ಅನೈತಿಕ ಸಂಬಂಧ | ವಿವಾಹಿತ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ | Crime News
ಅನೈತಿಕ ಸಂಬಂಧ | ವಿವಾಹಿತ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ಮಹಿಳೆಯೊಬ್ಬರನ್ನು ವ್ಯಕ್ತಿಯೊಬ್ಬ ಆಯುಧದಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ವರದಿಯಾಗಿದ್ದು ಈ ಬಗ್ಗೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸವಿತ(35) ಎಂಬ ವಿವಾಹಿತ ಮಹಿಳೆಯ ಮೇಲೆ ಶಿವನಾಯ್ಕ್(35) ಎಂಬ ವ್ಯಕ್ತಿ ವಡ್ಡಿನಕೊಪ್ಪದಲ್ಲಿ ಮನೆಗೆ ನುಗ್ಗಿ ಕುತ್ತಿಗೆಯನ್ನ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ಅನೈತಿಕ ಸಂಬಂದವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಆರೋಪಿ ಶಿವನಾಯ್ಕ್ ಮತ್ತು ಗಾಯಾಳು ಮಹಿಳೆ ಸವಿತಾ ರನ್ನು ಮೆಗ್ಗಾನ್ ಗೆ…
ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಮನೆ ಕಳ್ಳತನ ಮಾಡಿದ್ದ ಆರೋಪಿಗಳನ್ನು 24 ಗಂಟೆಯೊಳಗೆ ಮಾಲು ಸಮೇತ ಬಂಧಿಸಿದ ಪೊಲೀಸ್
ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಮನೆ ಕಳ್ಳತನ ಮಾಡಿದ್ದ ಆರೋಪಿಗಳನ್ನು 24 ಗಂಟೆಯೊಳಗೆ ಮಾಲು ಸಮೇತ ಬಂಧಿಸಿದ ಪೊಲೀಸ್ ಮನೆ ಕಳ್ಳತನವೆಸಗಿದ್ದ ಆರೋಪಿಗಳನ್ನು 24 ಗಂಟೆಯಲ್ಲಿ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆಗುಂಬೆ ಸಮೀಪದ ಶೆಟ್ಟಿಗಳಕೊಪ್ಪ ಗ್ರಾಮದ ಶಿವಪ್ಪ ಹೆಗಡೆ ಎಂಬುವವರ ಮನೆಯ ಕಿಟಕಿಯನ್ನು ಮುರಿದು ಪೆಟ್ಟಿಗೆಯಲ್ಲಿದ್ದ ಬೆಳ್ಳಿ ಮತ್ತು ಬಂಗಾರದ ಆಭರಣಗಳು ಮತ್ತು ನಗದು ಹಣವನ್ನು ಕಳ್ಳತನವೆಸಗಿದ್ದ ಪ್ರಕರಣವನ್ನು ಪೊಲೀಸರು ಭೇಧಿಸಿ ಇಬ್ಬರು ಆರೋಪಿಗಳನ್ನು ಮಾಲು ಸಮೇತ ವಶಕ್ಕೆ ಪಡೆದಿದ್ದಾರೆ. ಆರೋಪಿಗಳಾದ ತೀರ್ಥಹಳ್ಳಿಯ ಕೈಮರದ ನಿವಾಸಿ,…
Sudooru | ಕಬ್ಬಿನ ಜ್ಯೂಸ್ ಅಂಗಡಿಯವನ ಮೇಲೆ ಮುಸಿಯಾ ದಾಳಿ – ಮೆಗ್ಗಾನ್ ಗೆ ದಾಖಲು
Sudooru | ಕಬ್ಬಿನ ಜ್ಯೂಸ್ ಅಂಗಡಿಯವನ ಮೇಲೆ ಮುಸಿಯಾ ದಾಳಿ – ಮೆಗ್ಗಾನ್ ಗೆ ದಾಖಲು ಮುಸಿಯಾ ದಾಳಿಯಿಂದ ವ್ಯಕ್ತಿಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೂಡೂರು ಸಮೀಪದ ಐದನೇ ಮೈಲಿಕಲ್ಲು ಬಳಿಯಲ್ಲಿ ನಡೆದಿದೆ. ಲೋಕೇಶ್ ಹೊಸಕೊಪ್ಪ ಎಂಬುವವರಿಗೆ ಗಾಯಗಳಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹನುಮಾನ್ ಲಂಗೂರ್ ಎಂದು ಕರೆಯಲ್ಪಡುವ ಮುಸಿಯಾಗಳು ಈ ಭಾಗದಲ್ಲಿ ಹೆಚ್ಚು ತೊಂದರೆ ಕೊಡುತ್ತಿದೆ ಎಂದು ಸ್ಥಳೀಯರು ಆರೋಪಿಸುತಿದ್ದಾರೆ. ನಡೆದಿದ್ದೇನು..??? ಐದನೇ ಮೈಲಿಕಲ್ಲು ಬಸ್ ನಿಲ್ದಾಣದ ಬಳಿಯಲ್ಲಿ ಕಬ್ಬಿನ…
Train Accident | ರೈಲಿಗೆ ಸಿಲುಕಿ ವ್ಯಕ್ತಿ ಸಾವು
Accident | ರೈಲಿಗೆ ಸಿಲುಕಿ ವ್ಯಕ್ತಿ ಸಾವು ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ವಿದ್ಯಾನಗರ ರೈಲ್ವೆ ಸ್ಟೇಷನ್ ಬಳಿ ನಡೆದಿದೆ. ಗುರುಪುರದ ನಿವಾಸಿ ರುದ್ರಪ್ಪ (68) ಮೃತ ವ್ಯಕ್ತಿಯಾಗಿದ್ದಾನೆ. ಮೈಸೂರು ಕಡೆಯಿಂದ ತಾಳಗುಪ್ಪ ಕಡೆ ಹೊರಟಿದ ರೈಲು ಶಿವಮೊಗ್ಗ ವಿದ್ಯಾನಗರದ ರೈಲ್ವೆ ನಿಲ್ದಾಣದಲ್ಲಿ ಸೌದೆ ಆರಿಸಲು ಬಂದಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ ಗುರುಪುರದ ನಿವಾಸಿ ರುದ್ರಪ್ಪ, ಪ್ರತಿ ದಿನ ವಿದ್ಯಾನಗರ ರೈಲ್ವೆ ನಿಲ್ದಾಣದ ಬಳಿ ಸೌದೆ ಕಟ್ಟಲು ಬರುತ್ತಿದ್ದರು. ಅರ್ಧ ಕಿವುಡು, ಅರ್ಧ…
ಗ್ರಾಹಕರ ಸೋಗಿನಲ್ಲಿ ಚಿನ್ನದಂಗಡಿಗೆ ಬಂದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು |Theft
ಗ್ರಾಹಕರ ಸೋಗಿನಲ್ಲಿ ಚಿನ್ನದಂಗಡಿಗೆ ಬಂದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ಬಂದು ₹3.51 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಶಿವಮೊಗ್ಗ ನಗರದ ಗಾಂಧಿಬಜಾರ್ನ ತಿರುಪಳಯ್ಯನ ಕೇರಿಯ ಸಂಪತ್ ಜ್ಯುವೆಲರಿ ಶಾಪ್ನಲ್ಲಿ ನಡೆದಿದೆ. ಉಂಗುರ ಹಾಗೂ ಬೆಳ್ಳಿ ದೀಪ ಖರೀದಿಯ ನೆಪದಲ್ಲಿ ಜ್ಯುವೆಲ್ಲರಿ ಶಾಪ್ಗೆ ಬಂದಿದ್ದ ಮೂವರು ಮಹಿಳೆಯರು ಹಾಗೂ ಒಬ್ಬ ಪುರುಷ ಅಂಗಡಿಯವರ ಕಣ್ತಪ್ಪಿಸಿ ಒಡವೆಗಳ ಬಾಕ್ಸ್ ದೋಚಿದ್ದಾರೆ. ಅಂಗಡಿಗೆ ಬಂದವರಲ್ಲಿ ಇಬ್ಬರು ಯುವತಿಯರು ಮದುವೆಗೆ ಉಡುಗೊರೆ ಕೊಡಲು…
ಸಾಗರ – ಆನಂದಪುರ ಹೆದ್ದಾರಿಯಲ್ಲಿ ಅಪಘಾತ : ಮಾನವೀಯತೆ ಮೆರೆದ ಶಾಸಕ ಬೇಳೂರು ಗೋಪಾಲಕೃಷ್ಣ | accident
ಸಾಗರ – ಆನಂದಪುರ ಹೆದ್ದಾರಿಯಲ್ಲಿ ಅಪಘಾತ : ಮಾನವೀಯತೆ ಮೆರೆದ ಶಾಸಕ ಬೇಳೂರು ಗೋಪಾಲಕೃಷ್ಣ | accident ಸಾಗರ – ಆನಂದಪುರ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ತೀವ್ರ ರಕ್ತಸ್ರಾವದಲ್ಲಿದ್ದ ದಂಪತಿಗಳನ್ನು ತಮ್ಮ ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿಕೊಡುವ ಮೂಲಕ ಸಾಗರ ಕ್ಷೇತ್ರದ ಶಾಸಕರು ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಮಾನವೀಯತೆ ಮೆರೆದಿದ್ದಾರೆ. ವೀಡಿಯೋ ಇಲ್ಲಿ ವೀಕ್ಷಿಸಿ👇 ಪರಿಷತ್ ಚುನಾವಣೆ ಪ್ರಚಾರಕ್ಕಾಗಿ ಸಾಗರದಿಂದ ಆನಂದಪುರ ಕಡೆಗೆ ಬರುತ್ತಿರುವಾಗ ಮಾರ್ಗ ಮಧ್ಯದಲ್ಲಿ ಬೈಕ್ ಅಪಘಾತದಲ್ಲಿ…
ಶಿವಮೊಗ್ಗದ ಹೊಸಮನೆಯಲ್ಲಿ ಝಳಪಿಸಿದ ಲಾಂಗು, ಮಚ್ಚು – ಕಾರು , ಆಟೋ ,ಬೈಕ್ ಧ್ವಂಸ : ಸ್ಥಳಕ್ಕೆ ಎಸ್ ಪಿ ಮಿಥುನ್ ಕುಮಾರ್ ಭೇಟಿ | Crime news
ಶಿವಮೊಗ್ಗದ ಹೊಸಮನೆಯಲ್ಲಿ ಝಳಪಿಸಿದ ಲಾಂಗು, ಮಚ್ಚು – ಕಾರು , ಆಟೋ ,ಬೈಕ್ ಧ್ವಂಸ : ಸ್ಥಳಕ್ಕೆ ಎಸ್ ಪಿ ಮಿಥುನ್ ಕುಮಾರ್ ಭೇಟಿ ಶಿವಮೊಗ್ಗದ ಹೊಸಮನೆ ಬಡಾವಣೆಯಲ್ಲಿ ಕಿಡಿಗೇಡಿಗಳ ಹಾವಳಿ ಹೆಚ್ಚಾಗಿದೆ. ಮುನೆ ಮುಂದೆ ನಿಲ್ಲಿಸಿದ್ದ ಕಾರು, ಆಟೋ ಹಾಗೂ ಬೈಕ್ಗಳನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಗಾಂಜಾ ನಶೆಯಲ್ಲಿ ವಾಹನಗಳನ್ನು ಜಖಂ ಮಾಡಿದ್ದಾರೆ ಎನ್ನಲಾಗಿದೆ. ಮನೆಯ ಮುಂದೆ ನಿಲ್ಲಿಸಿದ್ದ ನಾಲ್ಕು ಕಾರು, ನಾಲ್ಕು ದ್ವಿಚಕ್ರ ವಾಹನ ಹಾಗೂ ಎರಡು ಆಟೋಗಳನ್ನು ರಾತ್ರೋ ರಾತ್ರಿ ಹಾನಿ ಮಾಡಿದ್ದಾರೆ. ಕಾರಗಳ…
Ripponpete | ರಾತ್ರೋರಾತ್ರಿ ತೋಟಕ್ಕೆ ನುಗ್ಗಿ ಹತ್ತಾರು ತೆಂಗಿನ ಗಿಡಗಳನ್ನು ಕಡಿದ ಕಿಡಿಗೇಡಿಗಳು – ದೂರು ದಾಖಲು
Ripponpete | ರಾತ್ರೋರಾತ್ರಿ ತೋಟಕ್ಕೆ ನುಗ್ಗಿ ಹತ್ತಾರು ತೆಂಗಿನ ಗಿಡಗಳನ್ನು ಕಡಿದ ಕಿಡಿಗೇಡಿಗಳು – ದೂರು ದಾಖಲು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ವಡಾಹೊಸಹಳ್ಳಿ ಗ್ರಾಮದ ಲಕ್ಷ್ಮಮ್ಮ ಎಂಬುವರ ತೋಟದಲ್ಲಿ 10ಕ್ಕೂ ಹೆಚ್ಚು ತೆಂಗಿನ ಗಿಡಗಳನ್ನು ಕಿಡಿಗೇಡಿಗಳು ಕಡಿದು ಹಾಕಿ ದುಷ್ಖೃತ್ಯ ಮೆರೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತೋಟದ ಮಾಲೀಕರು ರಿಪ್ಪನ್ಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ ವಡಾಹೊಸಹಳ್ಳಿ ಗ್ರಾಮದಲ್ಲಿರುವ ಲಕ್ಷ್ಮಮ್ಮ ಕೋಂ ಗೋಪಾಲ ರವರ ತೋಟದ ಮಧ್ಯ ಮತ್ತು ಅಂಚುಗಳಲ್ಲಿ ತೆಂಗಿನ ಮರಗಳನ್ನು…
Anandapura | ಅಡಿಕೆ ಕಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಅಡಿಕೆ ವಶಕ್ಕೆ
Anandapura | ಅಡಿಕೆ ಕಳ್ಳರ ಬಂಧನ – ಲಕ್ಷಾಂತರ ರೂ ಮೌಲ್ಯದ ಅಡಿಕೆ ವಶಕ್ಕೆ ಅಡಿಕೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ 8 ಪ್ರಕರಣಗಳನ್ನು ಪತ್ತೆ ಮಾಡಿ 5 ಆರೋಪಿಗಳನ್ನು ಬಂಧಿಸಿ ಅವರಿಂದ ₹ 15.19 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಹೇಳಿದರು. ಶಿಕಾರಿಪುರ ತಾಲ್ಲೂಕಿನ ಹರಗುವಳ್ಳಿ ಗ್ರಾಮದ ತುಕ್ರಾಜ್ (24), ಹಣಮಂತ (24), ರಾಕೇಶ್ (20), ಅಭಿಷೇಕ್ (20), ಶಿವಕುಮಾರ್ (23) ಬಂಧಿತರು. ಸಾಗರ ಗ್ರಾಮಾಂತರ, ಆನಂದಪುರ, ಕಾರ್ಗಲ್ ಮತ್ತು ಸೊರಬ…