ಜಿಲ್ಲಾ ಸುದ್ದಿ:
ರಿಪ್ಪನ್ಪೇಟೆ – NREG ಯೋಜನೆಯಡಿ ಕ್ರೀಯಾ ಯೋಜನೆಯ ವಿಶೇಷ ಗ್ರಾಮಸಭೆ
ರಿಪ್ಪನ್ಪೇಟೆ : 2025-26ನೇ ಸಾಲಿನ ಎನ್.ಆರ್.ಈ.ಜಿ ಯೋಜನೆಯಡಿ ಇಂದು ಗ್ರಾಮ ಪಂಚಾಯ್ತಿ ಗ್ರಾಮ ಕ್ರಿಯಾ ಯೋಜನೆಯನ್ನು ತಯಾರಿಸುವ ವಿಶೇಷ ಗ್ರಾಮ ಸಭೆಯು ಗ್ರಾಮಾಧ್ಯಕ್ಷೆ ಧನಲಕ್ಷ್ಮಿ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯ ನೋಡಲ್ ಆಧಿಕಾರಿಯಾಗಿ ಹೊಸನಗರ ತಾಲ್ಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಶೇಷಾಚಲ ಭಾಗವಹಿಸಿ ಸರ್ಕಾರದ ಯೋಜನೆಯ ಕುರಿತು ನಾಗರೀಕರಿಗೆ ಜಾಗೃತಿ ಮೂಡಿಸಿ ಸೌಲಭ್ಯದ ಸದ್ಬಳಕೆಗೆ ಕರೆ ನೀಡಿದರು. ಈ ಸಂಧರ್ಭದಲ್ಲಿ ರಿಪ್ಪನ್ಪೇಟೆ ಪೊಲೀಸ್ ವಸತಿ ಗೃಹಕ್ಕೆ ರಸ್ತೆ ನಿರ್ಮಾಣ ಮಾಡುವ ವಿಚಾರದಲ್ಲಿ ಸಾಮಾಜಿಕ ಹೋರಾಟಗಾರ ಟಿ…
ರಿಪ್ಪನ್ಪೇಟೆ | ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಮೆರವಣಿಗೆಗೆ ಮೆರುಗು ನೀಡಿದ ಚಂಡೆ ನೃತ್ಯ
ರಿಪ್ಪನ್ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಮೆರವಣಿಗೆಗೆ ಮೆರುಗು ನೀಡಿದ ಚಂಡೆ ನೃತ್ಯ ರಿಪ್ಪನ್ಪೇಟೆ: ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘ ಗುರುವಾರ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವದ ಅದ್ಧೂರಿ ಕನ್ನಡ ಸಂಭ್ರಮದಲ್ಲಿ ಚಂಡೆ ನೃತ್ಯ,ವಿದ್ಯಾರ್ಥಿಗಳ ವಾದ್ಯ ಘೋಷ್ ಮೆರವಣಿಗೆಗೆ ಮೆರಗು ನೀಡಿತ್ತು. ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾದ ರವೀಂದ್ರ ಕೆರೆಹಳ್ಳಿ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬೆಳಿಗ್ಗೆ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರೆಗೆ ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಫ಼್ರೋಜ್ ಚಾಲನೆ…
ಜಮೀನಿಗೆ ತೆರಳುವ ದಾರಿ ವಿಚಾರದಲ್ಲಿ ಗಲಾಟೆ – ಯುವಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ
ಜಮೀನಿಗೆ ತೆರಳುವ ವಿಚಾರದಲ್ಲಿ ಗಲಾಟೆ – ಯುವಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಜಮೀನಿಗೆ ತೆರಳುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಯುವಕನೋರ್ವನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಯತ್ನ (Murder Attempt) ನಡೆಸಿರುವ ಘಟನೆ ರಿಪ್ಪನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗುಬ್ಬಿಗ (ಅಡ್ಡೆರಿ ) ಗ್ರಾಮದಲ್ಲಿ ನಡೆದಿದೆ. ಅಡ್ಡೇರಿ ಗ್ರಾಮದ ಆದರ್ಶ(22) ಎಂಬ ಯುವಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ.ಈ ಗಲಾಟೆಯಲ್ಲಿ ಗಾಯಾಳು ಯುವಕನ ತಂದೆ…
ಈಡೇರಿದ ವಂದಗದ್ದೇ ನಿವಾಸಿಗಳ ಬಹುದಿನಗಳ ಬೇಡಿಕೆ | ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬೇಳೂರು
ಈಡೇರಿದ ವಂದಗದ್ದೇ ನಿವಾಸಿಗಳ ಬಹುದಿನಗಳ ಬೇಡಿಕೆ | ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬೇಳೂರು ಮಾರುತಿಪುರ : ನಿರೇರೀ ಹಾಗೂ ವಂದಗದ್ದೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಶಾಲಾ ಕಾಲುಸಂಕ ಕಾಮಗಾರಿಗೆ ಶಾಸಕರು ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಶಂಕುಸ್ಥಾಪನೆ ನೆರವೇರಿಸಿದರು. ಮಂಗಳವಾರ ವಂದಗದ್ದೆ – ನೀರೇರಿ ಗ್ರಾಮಗಳ ಸಂಪರ್ಕ ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಆದಷ್ಟೂ ಬೇಗ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಇಂಜಿನೀಯರ್ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು. ಈ ಸಂಧರ್ಭದಲ್ಲಿ ಮಾರುತಿಪುರ ಗ್ರಾಪಂ…
ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸಮುದಾಯದ ಪಾಲ್ಗೊಳ್ಳುವಿಕೆ ಅಗತ್ಯ – ಶಾಸಕ ಬೇಳೂರು
ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸಮುದಾಯದ ಪಾಲ್ಗೊಳ್ಳುವಿಕೆ ಅಗತ್ಯ – ಶಾಸಕ ಬೇಳೂರು ಹೊಸನಗರ : ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಮುದಾಯದ ಪಾಲ್ಗೊಳ್ಳುವಿಕೆ ಬಹಳ ಮುಖ್ಯ ಎಂದು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅಭಿಪ್ರಾಯಪಟ್ಟರು. ಮಾರುತಿಪುರ ಗ್ರಾಪಂ ವ್ಯಾಪ್ತಿಯ ನಿರೇರಿ ಸರ್ಕಾರಿ ಶಾಲೆಯಲ್ಲಿ ನೂತನ ಶಾಲಾ ಕೊಠಡಿ,ಮೈದಾನ ಕಾಮಗಾರಿಗೆ ಶಂಕುಸ್ಥಾಪನೆ ಹಾಗೂ ಧ್ಯಜಕಟ್ಟೆ ಉದ್ಘ್ತಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಸರ್ಕಾರದ ಕೆಲಸವಷ್ಟೇ ಎಂಬ…
RIPPONPETE | ನ. 28, 29 ರಂದು ಅದ್ದೂರಿ ಕನ್ನಡ ರಾಜ್ಯೋತ್ಸವಕ್ಕೆ ಸಕಲ ಸಿದ್ದತೆ
RIPPONPETE | ನ. 28, 29 ರಂದು ಅದ್ದೂರಿ ಕನ್ನಡ ರಾಜ್ಯೋತ್ಸವಕ್ಕೆ ಸಕಲ ಸಿದ್ದತೆ ರಿಪ್ಪನ್ಪೇಟೆ: ಪಟ್ಟಣದಲ್ಲಿ ಕಲಾಕೌಸ್ತುಭ ಕನ್ನಡ ಸಂಘದ 39 ನೇ ವರ್ಷದ ವಾರ್ಷಿಕೋತ್ಸವ ಮತ್ತು 69 ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ನವಂಬರ್ 28 ಮತ್ತು 29 ರಂದು ಎರಡು ದಿನಗಳ ಕಾಲ ಏರ್ಪಡಿಸಲಾಗಿದೆ ಎಂದು ಕಲಾಕೌಸ್ತುಭ ಕನ್ನಡ ಸಂಘದ ಅಧ್ಯಕ್ಷ ರವೀಂದ್ರ ಕೆರೆಹಳ್ಳಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನ. 28 ರಂದು ಗುರುವಾರ ಬೆಳಗ್ಗೆ 9 ಗಂಟೆಗೆ ಕನ್ನಡ ಭುವನೇಶ್ವರ…
ಗ್ರಾಪಂ ಅಧ್ಯಕ್ಷೆಯ ಅವಾಚ್ಯ ಪದಬಳಕೆಯ ಆಡೀಯೋ ವೈರಲ್ ಪ್ರಕರಣ ಉನ್ನತ ಮಟ್ಟದ ತನಿಖೆಯಾಗಲಿ – ಹರತಾಳು ಹಾಲಪ್ಪ
ಗ್ರಾಪಂ ಅಧ್ಯಕ್ಷೆಯ ಅವಾಚ್ಯ ಪದಬಳಕೆಯ ಆಡೀಯೋ ವೈರಲ್ ಪ್ರಕರಣ ಉನ್ನತ ಮಟ್ಟದ ತನಿಖೆಯಾಗಲಿ – ಹರತಾಳು ಹಾಲಪ್ಪ ರಿಪ್ಪನ್ಪೇಟೆ : ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮತ್ತು ಸದಸ್ಯರೊಬ್ಬರು ನಡೆಸಿದ್ದಾರೆನ್ನಲಾದ ವೀಡಿಯೋ ಹಾಗೂ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಹಾಗೂ ಪೊಲೀಸ್ ಇಲಾಖೆಯವರು ಸುಮೋಟ್ ಅಡಿ (ಸ್ವಯಂ ಪ್ರೇರಿತ) ದೂರು ದಾಖಲಿಸಿಕೊಂಡು ಬ್ಲಾಕ್ಮೇಲ್ ಮಾಡುವವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ಜರುಗಿಸುವಂತೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ …
ಅಭಿವೃದ್ಧಿ ಸಹಿಸದೇ ಬಿಜೆಪಿ ಪಕ್ಷದಿಂದ ಜನರ ದಿಕ್ಕು ತಪ್ಪಿಸಲು ಪ್ರತಿಭಟನೆ – ಬಿ ಪಿ ರಾಮಚಂದ್ರ
ಅಭಿವೃದ್ಧಿ ಸಹಿಸದೇ ಬಿಜೆಪಿ ಪಕ್ಷದಿಂದ ಜನರ ದಿಕ್ಕು ತಪ್ಪಿಸಲು ಪ್ರತಿಭಟನೆ – ಬಿ ಪಿ ರಾಮಚಂದ್ರ ರಿಪ್ಪನ್ಪೇಟೆ : ಪಟ್ಟಣದ ಅಭಿವೃದ್ಧಿಯನ್ನು ಸಹಿಸದೇ ಗ್ರಾಮ ಪಂಚಾಯತಿ ಅಧ್ಯಕ್ಷರ ವಿರುದ್ಧ ಆಧಾರ ರಹಿತವಾದ ಆರೋಪವನ್ನು ಮಾಡಿ ರಾಜಕೀಯ ಪ್ರೇರಿತವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾದರೆ ಅವರ ವಿರುದ್ದ ನಾವು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ ಹೇಳಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಧನಲಕ್ಷಿ ಗ್ರಾಮ ಪಂಚಾಯತಿಯ ಅಧ್ಯಕ್ಷೆಯಾದ ನಂತರ…
RIPPONPETE | ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಜಯಭೇರಿ – ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ
RIPPONPETE | ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಜಯಭೇರಿ – ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ ರಿಪ್ಪನ್ಪೇಟೆ : ರಾಜ್ಯದಲ್ಲಿ ಮೂರು ವಿಧಾನಸಭೆಯ ಉಪಚುನಾವಣೆಗೆ ಮತದಾನ ನಡೆದು ಇಂದು ಮತಎಣಿಕೆ ಮೂಲಕ ಫಲಿತಾಂಶ ಹೊರಬೀಳುತ್ತಿದ್ದಂತೆ ಪಟ್ಟಣದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿನಲ್ಲಿ ಕಾಂಗ್ರೆಸ್ ವರ್ಸಸ್ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ನಡುವೆ ತೀವ್ರ ಹಣಾಹಣಿಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಗೆಲುವಿನ ಘೋಷಣೆಯಾಗುತಿದ್ದಂತೆ ಪಟ್ಟಣದ ವಿನಾಯಕ ಸರ್ಕಲ್ ನಲ್ಲಿ ಕಾಂಗ್ರೆಸ್…
ರಿಪ್ಪನ್ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆಗೆ ಸಿದ್ದತೆ
ರಿಪ್ಪನ್ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆಗೆ ಸಿದ್ದತೆ ರಿಪ್ಪನ್ಪೇಟೆ : ಪಟ್ಟಣದ ಗ್ರಾಪಂ ಅಧ್ಯಕ್ಷೆ ಭ್ರಷ್ಟಾಚಾರ ನಡೆಸಿದ್ದಾರೆನ್ನಲಾದ ವೀಡಿಯೋ ಹಾಗೂ ಅವಾಚ್ಯವಾಗಿ ನಿಂದಿಸಿದ್ದಾರೆ ಎನ್ನುವ ಆಡಿಯೋ ವೈರಲ್ ಆಗುತಿದ್ದು ಈ ಹಿನ್ನಲೆಯಲ್ಲಿ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಾಜೀನಾಮೆಗೆ ಒತ್ತಾಯಿಸಿ ಸೋಮವಾರದಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮಹಾಶಕ್ತಿ ಕೇಂದ್ರದ ಎನ್ ಸತೀಶ್ ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಇಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ರಿಪ್ಪನ್ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ…